Homeಮುಖಪುಟ‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ' - ಬಾಂಬ್ ಸಿಡಿಸಿದ ಬಿಜೆಪಿ ನಾಯಕ

‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ’ – ಬಾಂಬ್ ಸಿಡಿಸಿದ ಬಿಜೆಪಿ ನಾಯಕ

- Advertisement -
- Advertisement -

‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ’ – ಮೋದಿಗೆ ಪತ್ರ ಬರೆದ ಬಿಜೆಪಿ ನಾಯಕ

‘ಮೋದಿ ಸಾಬ್, ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆದರೆ, ಈ ಸಲ ಬಿಜೆಪಿಗೆ 40 ಸೀಟೂ ಬರಲ್ಲ’ ಎಂದು ಬಿಜೆಪಿಯ ನಾಯಕರೂ ಆಗಿರುವ ಸುಪ್ರಿಂಕೋರ್ಟಿನ ವಕೀಲರೊಬ್ಬರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ, ಬಿಜೆಪಿ ಹೇಗೆ ವಿಷಯಗಳನ್ನು ತಿರುಚಿ ಲಾಭ ಮಾಡಿಕೊಳ್ಳುತ್ತದೆ ಮತ್ತು ಇಂತಹ ಕೆಲಸದಲ್ಲಿ ಮೋದಿ ನಿರ್ಲಜ್ಜರು ಎಂಬುದರ ಮೇಲೂ ಅವರು ಬೆಳಕು ಚೆಲ್ಲಿದ್ದಾರೆ…

ಅಜಿತ್ ಅಗರ್ ವಾಲ್

ಸುಪ್ರಿಂಕೋರ್ಟಿನ ವಕೀಲರೂ ಆಗಿರುವ ಬಿಜೆಪಿ ನಾಯಕ ಅಜಯ್ ಅಗರವಾಲ್ ಅವರು ಬಿಜೆಪಿ ನಾಯಕತ್ವದ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಲೇ, ಗೆಲ್ಲಲು ಬಿಜೆಪಿ ಎಂತೆಂತಹ ಕೀಳು ಪ್ರಯೋಗಗಳನ್ನು ಮಾಡುತ್ತದೆ ಎಂಬುದನ್ನು ದೃಡಪಡಿಸಿದ್ದಾರೆ. 2014ರ ಚುನಾವಣೆಯಲ್ಲಿ ಅಗರವಾಲ್ ರಾಯ್‍ಬರೇಲಿಯಲ್ಲಿ ಸೋನಿಯಾ ವಿರುದ್ಧ ಸ್ಪರ್ಧಿಸಿ ಸೋತವರು. ಇಲ್ಲಿವರೆಗೆ ರಾಯ್‍ಬರೇಲಿಯಲ್ಲಿ ಬಿಜೆಪಿ ಅತಿ ಹೆಚ್ಚು ಮತ ಗಳಿಸಿದ್ದು ಆಗಲೇ. ಈ ಸಲ ಅವರಿಗೆ ಅಲ್ಲಿ ಬಿಜೆಪಿಯಿಂದ ಟಿಕೆಟ್ ನಿರಾಕರಿಸಲಾಗಿದೆ.

‘ಮೋದಿ ಒಬ್ಬ ಕೃತಘ್ನ’ ಎನ್ನುವ ಅಗರವಾಲ್, ‘ಗುಜಾರಾತಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ನನ್ನ ಪಾತ್ರವೂ ಇದೆ. ಮಣಶಂಕರ್ ಅಯ್ಯರ್ ಮನೆಯಲ್ಲಿ ಮನಮೋಹನಸಿಂಗ್, ಮಾಜಿ ರಾಷ್ಟ್ರಪತಿ ಹಮೀದ್ ಅನ್ಸಾರಿ, ಮಣಿಶಂಕರ್ ಅಯ್ಯರ್ ಅವರು ಪಾಕ್ ರಾಯಭಾರಿಯೊಂದಿಗೆ ಮಾತುಕತೆ ನಡೆಸಿದ್ದಾರೆ ಎಂಬ ವಿಷಯವನ್ನು ನಾನು ಮೀಟಿಂಗ್‍ವೊಂದರಲ್ಲಿ ಮೋದಿ ಗಮನಕ್ಕೆ ತಂದೆ. ಮರುದಿನವೇ ಮೋದಿಯವರು, ‘ನನ್ನ ಸೋಲಿಸಲು ಪಾಕ್ ಮತ್ತು ಕಾಂಗ್ರೆಸ್ ಕೈಜೋಡಿಸುವೆ’ ಎಂದೆಲ್ಲ ಆಧಾರರಹಿತ ಆರೋಪ ಮಾಡಿ, ಬಿಜೆಪಿಗೆ ಅಲ್ಪ ಬಹುಮತ ತಂದು ಕೊಟ್ಟರು ಎನ್ನುವ ಅಗರವಾಲ್, ಗೆಲುವಿಗಾಗಿ ಮೋದಿ ಎಂತಹ ಕೀಳುಮಟ್ಟಕ್ಕೂ ಇಳಿಯಬಲ್ಲರು ಎಂದು ಆರೋಪಿಸಿದ್ದಾರೆ.
ಗುಜರಾತ್ ಗೆಲುವಿಗೆ ನನ್ನ ಕೊಡುಗೆಯಿದೆ ಎಂದು ಸಂಘ ಪರಿವಾರದ ಹಿರಿಯ ನಾಯಕರೂ ಒಪ್ಪಿಕೊಂಡಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಅವರು ಸಂಘದ ದತ್ತಾತ್ರೇಯ ಹೊಸಬಾಳೆ ಜೊತೆ ಫೋನಿನಲ್ಲಿ ನಡೆಸಿದ ಮಾತುಕತೆಯ ಆಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ.

ಸದ್ಯ ಮೋದಿಗೊಂದು ಪತ್ರ ಬರೆದಿರುವ ಅವರು, ‘300-400 ಸೀಟು ಗೆಲ್ಲುವ ಮಾತು ಬಿಡಿ, ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ ಎಂದು ಕಿಡಿ ಕಾರಿದ್ದಾರೆ. ಮೋದಿಯೊಂದಿಗೆ ನನಗೆ 28 ವರ್ಷಗಳ ಒಡನಾಟವಿದೆ, ಕಳೆದ ಸಲ ರಾಯ್‍ಬರೇಲಿಯಲ್ಲಿ ನಾನು ಒಳ್ಳೆ ಫೈಟ್ ಕೊಟ್ಟರೂ ಮೋದಿ ನನ್ನನ್ನು ಬೇಕೆಂತಲೇ ನಿರ್ಲಕ್ಷಿಸಿದ್ದಾರೆ ಎಂದೂ ಅವರು ಅಪಾದಿಸಿದ್ದಾರೆ.
ಗುಜರಾತ್ ಅಸೆಂಬ್ಲಿ ಗೆಲುವಿಗಾಗಿ ಅದ್ವಾನಿಯವರ ರಾಜಕೀಯವನ್ನೂ ಬಲಿ ಹಾಕಲಾಗಿದೆ. ಅದ್ವಾನಿಯವರನ್ನು ರಾಷ್ಟ್ರಪತಿ ಮಾಡಲು ಪಕ್ಷ ಯೋಚಿಸಿತ್ತು. ಆದರೆ ಗುಜರಾತಿನಲ್ಲಿ ಕೋಲಿ ಸಮುದಾಯದ ಮತಗಳನ್ನು ಪಡೆಯಲು ರಾಮನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಮಾಡಲಾಗಿತು. ಮೋದಿ ತಮ್ಮ ಹಿತಾಸಕ್ತಿ ಕಾಪಾಡಿಕೊಳ್ಳಲು ಹೀಗೆಲ್ಲ ಮಾಡಿದರಷ್ಟೇ ಎಂದೂ ಅಗರ್‍ವಾಲ್ ಹೇಳಿದ್ದಾರೆ.

ನೋಟು ಅಮಾನ್ಯೀಕರಣ ಮೂರ್ಖತನದ್ದು

ಪತ್ರದಲ್ಲಿ ನೋಟ್ ಬ್ಯಾನ್ ಬಗ್ಗೆ ಪ್ರಶ್ನಿಸಿರುವ ಅಗರವಾಲ್, ‘ಪಾರ್ಟಿಯಲ್ಲಿ ನೀವೇ ಬಹಳ ಬುದ್ಧಿವಂತರು. ಹೀಗಾಗಿ ಯಾರನ್ನೂ ಕೇಳದೇ ನೋಟ್‍ಬ್ಯಾನ್ ಮಾಡಿ ಬಡವರ ಬದುಕನ್ನು ಇನ್ನಷ್ಟು ಬವಣೆಗೆ ದೂಕಿಬಿಟ್ಟಿರಿ. ಇದೊಂದು ಮುರ್ಖತನದ ನಿರ್ಧಾರವಾಗಿತ್ತು’ ಎಂದು ಕಠೋರ ಶಬ್ದಗಳಲ್ಲಿ ಮೋದಿಯನ್ನು ಕುಟುಕಿದ್ದಾರೆ.
(ಆಧಾರ: ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....