Homeಮುಖಪುಟ‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ' - ಬಾಂಬ್ ಸಿಡಿಸಿದ ಬಿಜೆಪಿ ನಾಯಕ

‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ’ – ಬಾಂಬ್ ಸಿಡಿಸಿದ ಬಿಜೆಪಿ ನಾಯಕ

- Advertisement -
- Advertisement -

‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ’ – ಮೋದಿಗೆ ಪತ್ರ ಬರೆದ ಬಿಜೆಪಿ ನಾಯಕ

‘ಮೋದಿ ಸಾಬ್, ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆದರೆ, ಈ ಸಲ ಬಿಜೆಪಿಗೆ 40 ಸೀಟೂ ಬರಲ್ಲ’ ಎಂದು ಬಿಜೆಪಿಯ ನಾಯಕರೂ ಆಗಿರುವ ಸುಪ್ರಿಂಕೋರ್ಟಿನ ವಕೀಲರೊಬ್ಬರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ, ಬಿಜೆಪಿ ಹೇಗೆ ವಿಷಯಗಳನ್ನು ತಿರುಚಿ ಲಾಭ ಮಾಡಿಕೊಳ್ಳುತ್ತದೆ ಮತ್ತು ಇಂತಹ ಕೆಲಸದಲ್ಲಿ ಮೋದಿ ನಿರ್ಲಜ್ಜರು ಎಂಬುದರ ಮೇಲೂ ಅವರು ಬೆಳಕು ಚೆಲ್ಲಿದ್ದಾರೆ…

ಅಜಿತ್ ಅಗರ್ ವಾಲ್

ಸುಪ್ರಿಂಕೋರ್ಟಿನ ವಕೀಲರೂ ಆಗಿರುವ ಬಿಜೆಪಿ ನಾಯಕ ಅಜಯ್ ಅಗರವಾಲ್ ಅವರು ಬಿಜೆಪಿ ನಾಯಕತ್ವದ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಲೇ, ಗೆಲ್ಲಲು ಬಿಜೆಪಿ ಎಂತೆಂತಹ ಕೀಳು ಪ್ರಯೋಗಗಳನ್ನು ಮಾಡುತ್ತದೆ ಎಂಬುದನ್ನು ದೃಡಪಡಿಸಿದ್ದಾರೆ. 2014ರ ಚುನಾವಣೆಯಲ್ಲಿ ಅಗರವಾಲ್ ರಾಯ್‍ಬರೇಲಿಯಲ್ಲಿ ಸೋನಿಯಾ ವಿರುದ್ಧ ಸ್ಪರ್ಧಿಸಿ ಸೋತವರು. ಇಲ್ಲಿವರೆಗೆ ರಾಯ್‍ಬರೇಲಿಯಲ್ಲಿ ಬಿಜೆಪಿ ಅತಿ ಹೆಚ್ಚು ಮತ ಗಳಿಸಿದ್ದು ಆಗಲೇ. ಈ ಸಲ ಅವರಿಗೆ ಅಲ್ಲಿ ಬಿಜೆಪಿಯಿಂದ ಟಿಕೆಟ್ ನಿರಾಕರಿಸಲಾಗಿದೆ.

‘ಮೋದಿ ಒಬ್ಬ ಕೃತಘ್ನ’ ಎನ್ನುವ ಅಗರವಾಲ್, ‘ಗುಜಾರಾತಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ನನ್ನ ಪಾತ್ರವೂ ಇದೆ. ಮಣಶಂಕರ್ ಅಯ್ಯರ್ ಮನೆಯಲ್ಲಿ ಮನಮೋಹನಸಿಂಗ್, ಮಾಜಿ ರಾಷ್ಟ್ರಪತಿ ಹಮೀದ್ ಅನ್ಸಾರಿ, ಮಣಿಶಂಕರ್ ಅಯ್ಯರ್ ಅವರು ಪಾಕ್ ರಾಯಭಾರಿಯೊಂದಿಗೆ ಮಾತುಕತೆ ನಡೆಸಿದ್ದಾರೆ ಎಂಬ ವಿಷಯವನ್ನು ನಾನು ಮೀಟಿಂಗ್‍ವೊಂದರಲ್ಲಿ ಮೋದಿ ಗಮನಕ್ಕೆ ತಂದೆ. ಮರುದಿನವೇ ಮೋದಿಯವರು, ‘ನನ್ನ ಸೋಲಿಸಲು ಪಾಕ್ ಮತ್ತು ಕಾಂಗ್ರೆಸ್ ಕೈಜೋಡಿಸುವೆ’ ಎಂದೆಲ್ಲ ಆಧಾರರಹಿತ ಆರೋಪ ಮಾಡಿ, ಬಿಜೆಪಿಗೆ ಅಲ್ಪ ಬಹುಮತ ತಂದು ಕೊಟ್ಟರು ಎನ್ನುವ ಅಗರವಾಲ್, ಗೆಲುವಿಗಾಗಿ ಮೋದಿ ಎಂತಹ ಕೀಳುಮಟ್ಟಕ್ಕೂ ಇಳಿಯಬಲ್ಲರು ಎಂದು ಆರೋಪಿಸಿದ್ದಾರೆ.
ಗುಜರಾತ್ ಗೆಲುವಿಗೆ ನನ್ನ ಕೊಡುಗೆಯಿದೆ ಎಂದು ಸಂಘ ಪರಿವಾರದ ಹಿರಿಯ ನಾಯಕರೂ ಒಪ್ಪಿಕೊಂಡಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಅವರು ಸಂಘದ ದತ್ತಾತ್ರೇಯ ಹೊಸಬಾಳೆ ಜೊತೆ ಫೋನಿನಲ್ಲಿ ನಡೆಸಿದ ಮಾತುಕತೆಯ ಆಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ.

ಸದ್ಯ ಮೋದಿಗೊಂದು ಪತ್ರ ಬರೆದಿರುವ ಅವರು, ‘300-400 ಸೀಟು ಗೆಲ್ಲುವ ಮಾತು ಬಿಡಿ, ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ ಎಂದು ಕಿಡಿ ಕಾರಿದ್ದಾರೆ. ಮೋದಿಯೊಂದಿಗೆ ನನಗೆ 28 ವರ್ಷಗಳ ಒಡನಾಟವಿದೆ, ಕಳೆದ ಸಲ ರಾಯ್‍ಬರೇಲಿಯಲ್ಲಿ ನಾನು ಒಳ್ಳೆ ಫೈಟ್ ಕೊಟ್ಟರೂ ಮೋದಿ ನನ್ನನ್ನು ಬೇಕೆಂತಲೇ ನಿರ್ಲಕ್ಷಿಸಿದ್ದಾರೆ ಎಂದೂ ಅವರು ಅಪಾದಿಸಿದ್ದಾರೆ.
ಗುಜರಾತ್ ಅಸೆಂಬ್ಲಿ ಗೆಲುವಿಗಾಗಿ ಅದ್ವಾನಿಯವರ ರಾಜಕೀಯವನ್ನೂ ಬಲಿ ಹಾಕಲಾಗಿದೆ. ಅದ್ವಾನಿಯವರನ್ನು ರಾಷ್ಟ್ರಪತಿ ಮಾಡಲು ಪಕ್ಷ ಯೋಚಿಸಿತ್ತು. ಆದರೆ ಗುಜರಾತಿನಲ್ಲಿ ಕೋಲಿ ಸಮುದಾಯದ ಮತಗಳನ್ನು ಪಡೆಯಲು ರಾಮನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಮಾಡಲಾಗಿತು. ಮೋದಿ ತಮ್ಮ ಹಿತಾಸಕ್ತಿ ಕಾಪಾಡಿಕೊಳ್ಳಲು ಹೀಗೆಲ್ಲ ಮಾಡಿದರಷ್ಟೇ ಎಂದೂ ಅಗರ್‍ವಾಲ್ ಹೇಳಿದ್ದಾರೆ.

ನೋಟು ಅಮಾನ್ಯೀಕರಣ ಮೂರ್ಖತನದ್ದು

ಪತ್ರದಲ್ಲಿ ನೋಟ್ ಬ್ಯಾನ್ ಬಗ್ಗೆ ಪ್ರಶ್ನಿಸಿರುವ ಅಗರವಾಲ್, ‘ಪಾರ್ಟಿಯಲ್ಲಿ ನೀವೇ ಬಹಳ ಬುದ್ಧಿವಂತರು. ಹೀಗಾಗಿ ಯಾರನ್ನೂ ಕೇಳದೇ ನೋಟ್‍ಬ್ಯಾನ್ ಮಾಡಿ ಬಡವರ ಬದುಕನ್ನು ಇನ್ನಷ್ಟು ಬವಣೆಗೆ ದೂಕಿಬಿಟ್ಟಿರಿ. ಇದೊಂದು ಮುರ್ಖತನದ ನಿರ್ಧಾರವಾಗಿತ್ತು’ ಎಂದು ಕಠೋರ ಶಬ್ದಗಳಲ್ಲಿ ಮೋದಿಯನ್ನು ಕುಟುಕಿದ್ದಾರೆ.
(ಆಧಾರ: ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...