Homeಮುಖಪುಟ‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ' - ಬಾಂಬ್ ಸಿಡಿಸಿದ ಬಿಜೆಪಿ ನಾಯಕ

‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ’ – ಬಾಂಬ್ ಸಿಡಿಸಿದ ಬಿಜೆಪಿ ನಾಯಕ

- Advertisement -
- Advertisement -

‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ’ – ಮೋದಿಗೆ ಪತ್ರ ಬರೆದ ಬಿಜೆಪಿ ನಾಯಕ

‘ಮೋದಿ ಸಾಬ್, ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆದರೆ, ಈ ಸಲ ಬಿಜೆಪಿಗೆ 40 ಸೀಟೂ ಬರಲ್ಲ’ ಎಂದು ಬಿಜೆಪಿಯ ನಾಯಕರೂ ಆಗಿರುವ ಸುಪ್ರಿಂಕೋರ್ಟಿನ ವಕೀಲರೊಬ್ಬರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ, ಬಿಜೆಪಿ ಹೇಗೆ ವಿಷಯಗಳನ್ನು ತಿರುಚಿ ಲಾಭ ಮಾಡಿಕೊಳ್ಳುತ್ತದೆ ಮತ್ತು ಇಂತಹ ಕೆಲಸದಲ್ಲಿ ಮೋದಿ ನಿರ್ಲಜ್ಜರು ಎಂಬುದರ ಮೇಲೂ ಅವರು ಬೆಳಕು ಚೆಲ್ಲಿದ್ದಾರೆ…

ಅಜಿತ್ ಅಗರ್ ವಾಲ್

ಸುಪ್ರಿಂಕೋರ್ಟಿನ ವಕೀಲರೂ ಆಗಿರುವ ಬಿಜೆಪಿ ನಾಯಕ ಅಜಯ್ ಅಗರವಾಲ್ ಅವರು ಬಿಜೆಪಿ ನಾಯಕತ್ವದ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಲೇ, ಗೆಲ್ಲಲು ಬಿಜೆಪಿ ಎಂತೆಂತಹ ಕೀಳು ಪ್ರಯೋಗಗಳನ್ನು ಮಾಡುತ್ತದೆ ಎಂಬುದನ್ನು ದೃಡಪಡಿಸಿದ್ದಾರೆ. 2014ರ ಚುನಾವಣೆಯಲ್ಲಿ ಅಗರವಾಲ್ ರಾಯ್‍ಬರೇಲಿಯಲ್ಲಿ ಸೋನಿಯಾ ವಿರುದ್ಧ ಸ್ಪರ್ಧಿಸಿ ಸೋತವರು. ಇಲ್ಲಿವರೆಗೆ ರಾಯ್‍ಬರೇಲಿಯಲ್ಲಿ ಬಿಜೆಪಿ ಅತಿ ಹೆಚ್ಚು ಮತ ಗಳಿಸಿದ್ದು ಆಗಲೇ. ಈ ಸಲ ಅವರಿಗೆ ಅಲ್ಲಿ ಬಿಜೆಪಿಯಿಂದ ಟಿಕೆಟ್ ನಿರಾಕರಿಸಲಾಗಿದೆ.

‘ಮೋದಿ ಒಬ್ಬ ಕೃತಘ್ನ’ ಎನ್ನುವ ಅಗರವಾಲ್, ‘ಗುಜಾರಾತಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ನನ್ನ ಪಾತ್ರವೂ ಇದೆ. ಮಣಶಂಕರ್ ಅಯ್ಯರ್ ಮನೆಯಲ್ಲಿ ಮನಮೋಹನಸಿಂಗ್, ಮಾಜಿ ರಾಷ್ಟ್ರಪತಿ ಹಮೀದ್ ಅನ್ಸಾರಿ, ಮಣಿಶಂಕರ್ ಅಯ್ಯರ್ ಅವರು ಪಾಕ್ ರಾಯಭಾರಿಯೊಂದಿಗೆ ಮಾತುಕತೆ ನಡೆಸಿದ್ದಾರೆ ಎಂಬ ವಿಷಯವನ್ನು ನಾನು ಮೀಟಿಂಗ್‍ವೊಂದರಲ್ಲಿ ಮೋದಿ ಗಮನಕ್ಕೆ ತಂದೆ. ಮರುದಿನವೇ ಮೋದಿಯವರು, ‘ನನ್ನ ಸೋಲಿಸಲು ಪಾಕ್ ಮತ್ತು ಕಾಂಗ್ರೆಸ್ ಕೈಜೋಡಿಸುವೆ’ ಎಂದೆಲ್ಲ ಆಧಾರರಹಿತ ಆರೋಪ ಮಾಡಿ, ಬಿಜೆಪಿಗೆ ಅಲ್ಪ ಬಹುಮತ ತಂದು ಕೊಟ್ಟರು ಎನ್ನುವ ಅಗರವಾಲ್, ಗೆಲುವಿಗಾಗಿ ಮೋದಿ ಎಂತಹ ಕೀಳುಮಟ್ಟಕ್ಕೂ ಇಳಿಯಬಲ್ಲರು ಎಂದು ಆರೋಪಿಸಿದ್ದಾರೆ.
ಗುಜರಾತ್ ಗೆಲುವಿಗೆ ನನ್ನ ಕೊಡುಗೆಯಿದೆ ಎಂದು ಸಂಘ ಪರಿವಾರದ ಹಿರಿಯ ನಾಯಕರೂ ಒಪ್ಪಿಕೊಂಡಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಅವರು ಸಂಘದ ದತ್ತಾತ್ರೇಯ ಹೊಸಬಾಳೆ ಜೊತೆ ಫೋನಿನಲ್ಲಿ ನಡೆಸಿದ ಮಾತುಕತೆಯ ಆಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ.

ಸದ್ಯ ಮೋದಿಗೊಂದು ಪತ್ರ ಬರೆದಿರುವ ಅವರು, ‘300-400 ಸೀಟು ಗೆಲ್ಲುವ ಮಾತು ಬಿಡಿ, ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ ಎಂದು ಕಿಡಿ ಕಾರಿದ್ದಾರೆ. ಮೋದಿಯೊಂದಿಗೆ ನನಗೆ 28 ವರ್ಷಗಳ ಒಡನಾಟವಿದೆ, ಕಳೆದ ಸಲ ರಾಯ್‍ಬರೇಲಿಯಲ್ಲಿ ನಾನು ಒಳ್ಳೆ ಫೈಟ್ ಕೊಟ್ಟರೂ ಮೋದಿ ನನ್ನನ್ನು ಬೇಕೆಂತಲೇ ನಿರ್ಲಕ್ಷಿಸಿದ್ದಾರೆ ಎಂದೂ ಅವರು ಅಪಾದಿಸಿದ್ದಾರೆ.
ಗುಜರಾತ್ ಅಸೆಂಬ್ಲಿ ಗೆಲುವಿಗಾಗಿ ಅದ್ವಾನಿಯವರ ರಾಜಕೀಯವನ್ನೂ ಬಲಿ ಹಾಕಲಾಗಿದೆ. ಅದ್ವಾನಿಯವರನ್ನು ರಾಷ್ಟ್ರಪತಿ ಮಾಡಲು ಪಕ್ಷ ಯೋಚಿಸಿತ್ತು. ಆದರೆ ಗುಜರಾತಿನಲ್ಲಿ ಕೋಲಿ ಸಮುದಾಯದ ಮತಗಳನ್ನು ಪಡೆಯಲು ರಾಮನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಮಾಡಲಾಗಿತು. ಮೋದಿ ತಮ್ಮ ಹಿತಾಸಕ್ತಿ ಕಾಪಾಡಿಕೊಳ್ಳಲು ಹೀಗೆಲ್ಲ ಮಾಡಿದರಷ್ಟೇ ಎಂದೂ ಅಗರ್‍ವಾಲ್ ಹೇಳಿದ್ದಾರೆ.

ನೋಟು ಅಮಾನ್ಯೀಕರಣ ಮೂರ್ಖತನದ್ದು

ಪತ್ರದಲ್ಲಿ ನೋಟ್ ಬ್ಯಾನ್ ಬಗ್ಗೆ ಪ್ರಶ್ನಿಸಿರುವ ಅಗರವಾಲ್, ‘ಪಾರ್ಟಿಯಲ್ಲಿ ನೀವೇ ಬಹಳ ಬುದ್ಧಿವಂತರು. ಹೀಗಾಗಿ ಯಾರನ್ನೂ ಕೇಳದೇ ನೋಟ್‍ಬ್ಯಾನ್ ಮಾಡಿ ಬಡವರ ಬದುಕನ್ನು ಇನ್ನಷ್ಟು ಬವಣೆಗೆ ದೂಕಿಬಿಟ್ಟಿರಿ. ಇದೊಂದು ಮುರ್ಖತನದ ನಿರ್ಧಾರವಾಗಿತ್ತು’ ಎಂದು ಕಠೋರ ಶಬ್ದಗಳಲ್ಲಿ ಮೋದಿಯನ್ನು ಕುಟುಕಿದ್ದಾರೆ.
(ಆಧಾರ: ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...