Homeಮುಖಪುಟ‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ' - ಬಾಂಬ್ ಸಿಡಿಸಿದ ಬಿಜೆಪಿ ನಾಯಕ

‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ’ – ಬಾಂಬ್ ಸಿಡಿಸಿದ ಬಿಜೆಪಿ ನಾಯಕ

- Advertisement -
- Advertisement -

‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ’ – ಮೋದಿಗೆ ಪತ್ರ ಬರೆದ ಬಿಜೆಪಿ ನಾಯಕ

‘ಮೋದಿ ಸಾಬ್, ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆದರೆ, ಈ ಸಲ ಬಿಜೆಪಿಗೆ 40 ಸೀಟೂ ಬರಲ್ಲ’ ಎಂದು ಬಿಜೆಪಿಯ ನಾಯಕರೂ ಆಗಿರುವ ಸುಪ್ರಿಂಕೋರ್ಟಿನ ವಕೀಲರೊಬ್ಬರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ, ಬಿಜೆಪಿ ಹೇಗೆ ವಿಷಯಗಳನ್ನು ತಿರುಚಿ ಲಾಭ ಮಾಡಿಕೊಳ್ಳುತ್ತದೆ ಮತ್ತು ಇಂತಹ ಕೆಲಸದಲ್ಲಿ ಮೋದಿ ನಿರ್ಲಜ್ಜರು ಎಂಬುದರ ಮೇಲೂ ಅವರು ಬೆಳಕು ಚೆಲ್ಲಿದ್ದಾರೆ…

ಅಜಿತ್ ಅಗರ್ ವಾಲ್

ಸುಪ್ರಿಂಕೋರ್ಟಿನ ವಕೀಲರೂ ಆಗಿರುವ ಬಿಜೆಪಿ ನಾಯಕ ಅಜಯ್ ಅಗರವಾಲ್ ಅವರು ಬಿಜೆಪಿ ನಾಯಕತ್ವದ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಲೇ, ಗೆಲ್ಲಲು ಬಿಜೆಪಿ ಎಂತೆಂತಹ ಕೀಳು ಪ್ರಯೋಗಗಳನ್ನು ಮಾಡುತ್ತದೆ ಎಂಬುದನ್ನು ದೃಡಪಡಿಸಿದ್ದಾರೆ. 2014ರ ಚುನಾವಣೆಯಲ್ಲಿ ಅಗರವಾಲ್ ರಾಯ್‍ಬರೇಲಿಯಲ್ಲಿ ಸೋನಿಯಾ ವಿರುದ್ಧ ಸ್ಪರ್ಧಿಸಿ ಸೋತವರು. ಇಲ್ಲಿವರೆಗೆ ರಾಯ್‍ಬರೇಲಿಯಲ್ಲಿ ಬಿಜೆಪಿ ಅತಿ ಹೆಚ್ಚು ಮತ ಗಳಿಸಿದ್ದು ಆಗಲೇ. ಈ ಸಲ ಅವರಿಗೆ ಅಲ್ಲಿ ಬಿಜೆಪಿಯಿಂದ ಟಿಕೆಟ್ ನಿರಾಕರಿಸಲಾಗಿದೆ.

‘ಮೋದಿ ಒಬ್ಬ ಕೃತಘ್ನ’ ಎನ್ನುವ ಅಗರವಾಲ್, ‘ಗುಜಾರಾತಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ನನ್ನ ಪಾತ್ರವೂ ಇದೆ. ಮಣಶಂಕರ್ ಅಯ್ಯರ್ ಮನೆಯಲ್ಲಿ ಮನಮೋಹನಸಿಂಗ್, ಮಾಜಿ ರಾಷ್ಟ್ರಪತಿ ಹಮೀದ್ ಅನ್ಸಾರಿ, ಮಣಿಶಂಕರ್ ಅಯ್ಯರ್ ಅವರು ಪಾಕ್ ರಾಯಭಾರಿಯೊಂದಿಗೆ ಮಾತುಕತೆ ನಡೆಸಿದ್ದಾರೆ ಎಂಬ ವಿಷಯವನ್ನು ನಾನು ಮೀಟಿಂಗ್‍ವೊಂದರಲ್ಲಿ ಮೋದಿ ಗಮನಕ್ಕೆ ತಂದೆ. ಮರುದಿನವೇ ಮೋದಿಯವರು, ‘ನನ್ನ ಸೋಲಿಸಲು ಪಾಕ್ ಮತ್ತು ಕಾಂಗ್ರೆಸ್ ಕೈಜೋಡಿಸುವೆ’ ಎಂದೆಲ್ಲ ಆಧಾರರಹಿತ ಆರೋಪ ಮಾಡಿ, ಬಿಜೆಪಿಗೆ ಅಲ್ಪ ಬಹುಮತ ತಂದು ಕೊಟ್ಟರು ಎನ್ನುವ ಅಗರವಾಲ್, ಗೆಲುವಿಗಾಗಿ ಮೋದಿ ಎಂತಹ ಕೀಳುಮಟ್ಟಕ್ಕೂ ಇಳಿಯಬಲ್ಲರು ಎಂದು ಆರೋಪಿಸಿದ್ದಾರೆ.
ಗುಜರಾತ್ ಗೆಲುವಿಗೆ ನನ್ನ ಕೊಡುಗೆಯಿದೆ ಎಂದು ಸಂಘ ಪರಿವಾರದ ಹಿರಿಯ ನಾಯಕರೂ ಒಪ್ಪಿಕೊಂಡಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಅವರು ಸಂಘದ ದತ್ತಾತ್ರೇಯ ಹೊಸಬಾಳೆ ಜೊತೆ ಫೋನಿನಲ್ಲಿ ನಡೆಸಿದ ಮಾತುಕತೆಯ ಆಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ.

ಸದ್ಯ ಮೋದಿಗೊಂದು ಪತ್ರ ಬರೆದಿರುವ ಅವರು, ‘300-400 ಸೀಟು ಗೆಲ್ಲುವ ಮಾತು ಬಿಡಿ, ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ ಎಂದು ಕಿಡಿ ಕಾರಿದ್ದಾರೆ. ಮೋದಿಯೊಂದಿಗೆ ನನಗೆ 28 ವರ್ಷಗಳ ಒಡನಾಟವಿದೆ, ಕಳೆದ ಸಲ ರಾಯ್‍ಬರೇಲಿಯಲ್ಲಿ ನಾನು ಒಳ್ಳೆ ಫೈಟ್ ಕೊಟ್ಟರೂ ಮೋದಿ ನನ್ನನ್ನು ಬೇಕೆಂತಲೇ ನಿರ್ಲಕ್ಷಿಸಿದ್ದಾರೆ ಎಂದೂ ಅವರು ಅಪಾದಿಸಿದ್ದಾರೆ.
ಗುಜರಾತ್ ಅಸೆಂಬ್ಲಿ ಗೆಲುವಿಗಾಗಿ ಅದ್ವಾನಿಯವರ ರಾಜಕೀಯವನ್ನೂ ಬಲಿ ಹಾಕಲಾಗಿದೆ. ಅದ್ವಾನಿಯವರನ್ನು ರಾಷ್ಟ್ರಪತಿ ಮಾಡಲು ಪಕ್ಷ ಯೋಚಿಸಿತ್ತು. ಆದರೆ ಗುಜರಾತಿನಲ್ಲಿ ಕೋಲಿ ಸಮುದಾಯದ ಮತಗಳನ್ನು ಪಡೆಯಲು ರಾಮನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಮಾಡಲಾಗಿತು. ಮೋದಿ ತಮ್ಮ ಹಿತಾಸಕ್ತಿ ಕಾಪಾಡಿಕೊಳ್ಳಲು ಹೀಗೆಲ್ಲ ಮಾಡಿದರಷ್ಟೇ ಎಂದೂ ಅಗರ್‍ವಾಲ್ ಹೇಳಿದ್ದಾರೆ.

ನೋಟು ಅಮಾನ್ಯೀಕರಣ ಮೂರ್ಖತನದ್ದು

ಪತ್ರದಲ್ಲಿ ನೋಟ್ ಬ್ಯಾನ್ ಬಗ್ಗೆ ಪ್ರಶ್ನಿಸಿರುವ ಅಗರವಾಲ್, ‘ಪಾರ್ಟಿಯಲ್ಲಿ ನೀವೇ ಬಹಳ ಬುದ್ಧಿವಂತರು. ಹೀಗಾಗಿ ಯಾರನ್ನೂ ಕೇಳದೇ ನೋಟ್‍ಬ್ಯಾನ್ ಮಾಡಿ ಬಡವರ ಬದುಕನ್ನು ಇನ್ನಷ್ಟು ಬವಣೆಗೆ ದೂಕಿಬಿಟ್ಟಿರಿ. ಇದೊಂದು ಮುರ್ಖತನದ ನಿರ್ಧಾರವಾಗಿತ್ತು’ ಎಂದು ಕಠೋರ ಶಬ್ದಗಳಲ್ಲಿ ಮೋದಿಯನ್ನು ಕುಟುಕಿದ್ದಾರೆ.
(ಆಧಾರ: ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...

ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು

ಉತ್ತರ ಗೋವಾದ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ (ಡಿಸೆಂಬರ್ 6) ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು,...

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...

ಇಂಡಿಗೋ ಹಾರಾಟದಲ್ಲಿ ಐದನೇ ದಿನವೂ ವ್ಯತ್ಯಯ: ವಿಮಾನ ದರಕ್ಕೆ ತಾತ್ಕಾಲಿಕ ಮಿತಿ ವಿಧಿಸಿದ ಕೇಂದ್ರ

ಇಂಡಿಗೋದ ದೇಶೀಯ ಕಾರ್ಯಾಚರಣೆಗಳು ಸತತ ಐದನೇ ದಿನವೂ ಅಸ್ತವ್ಯಸ್ತಗೊಂಡಿದ್ದರಿಂದ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಶನಿವಾರ (ಡಿಸೆಂಬರ್ 6) ವಿಮಾನ ಟಿಕೆಟ್ ದರಗಳ ಮೇಲೆ ತಾತ್ಕಾಲಿಕ ಮಿತಿಯನ್ನು ವಿಧಿಸಿದೆ. ನಿಗದಿತ ಮಾನದಂಡಗಳ ಯಾವುದೇ...

ಪಶ್ಚಿಮ ಬಂಗಾಳ| ಎಸ್‌ಐಆರ್‌ನಲ್ಲಿ ಹೆಸರು ನೋಂದಾಯಿಸಲು ನಿರಾಕರಿಸಿದ 79 ಬುಡಕಟ್ಟು ಜನಾಂಗಗಳು

ಪಶ್ಚಿಮ ಬಂಗಾಳದ ಬಂಕುರಾದ ಮುಚಿಕಟಾ ಮತ್ತು ವೆದುವಾಶೋಲ್ ಗ್ರಾಮಗಳ ಬುಡಕಟ್ಟು ಜನಾಂಗದವರು 'ಸಮಾಜ್ವಾದ್ ಅಂತರ-ರಾಜ್ಯ ಮಾಝಿ ಸರ್ಕಾರ್'ಗೆ ನಿಷ್ಠೆಯನ್ನು ಉಲ್ಲೇಖಿಸಿ, ಚುನಾವಣಾ ಆಯೋಗ್ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ...