Homeಮುಖಪುಟ‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ' - ಬಾಂಬ್ ಸಿಡಿಸಿದ ಬಿಜೆಪಿ ನಾಯಕ

‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ’ – ಬಾಂಬ್ ಸಿಡಿಸಿದ ಬಿಜೆಪಿ ನಾಯಕ

- Advertisement -
- Advertisement -

‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ’ – ಮೋದಿಗೆ ಪತ್ರ ಬರೆದ ಬಿಜೆಪಿ ನಾಯಕ

‘ಮೋದಿ ಸಾಬ್, ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆದರೆ, ಈ ಸಲ ಬಿಜೆಪಿಗೆ 40 ಸೀಟೂ ಬರಲ್ಲ’ ಎಂದು ಬಿಜೆಪಿಯ ನಾಯಕರೂ ಆಗಿರುವ ಸುಪ್ರಿಂಕೋರ್ಟಿನ ವಕೀಲರೊಬ್ಬರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ, ಬಿಜೆಪಿ ಹೇಗೆ ವಿಷಯಗಳನ್ನು ತಿರುಚಿ ಲಾಭ ಮಾಡಿಕೊಳ್ಳುತ್ತದೆ ಮತ್ತು ಇಂತಹ ಕೆಲಸದಲ್ಲಿ ಮೋದಿ ನಿರ್ಲಜ್ಜರು ಎಂಬುದರ ಮೇಲೂ ಅವರು ಬೆಳಕು ಚೆಲ್ಲಿದ್ದಾರೆ…

ಅಜಿತ್ ಅಗರ್ ವಾಲ್

ಸುಪ್ರಿಂಕೋರ್ಟಿನ ವಕೀಲರೂ ಆಗಿರುವ ಬಿಜೆಪಿ ನಾಯಕ ಅಜಯ್ ಅಗರವಾಲ್ ಅವರು ಬಿಜೆಪಿ ನಾಯಕತ್ವದ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಲೇ, ಗೆಲ್ಲಲು ಬಿಜೆಪಿ ಎಂತೆಂತಹ ಕೀಳು ಪ್ರಯೋಗಗಳನ್ನು ಮಾಡುತ್ತದೆ ಎಂಬುದನ್ನು ದೃಡಪಡಿಸಿದ್ದಾರೆ. 2014ರ ಚುನಾವಣೆಯಲ್ಲಿ ಅಗರವಾಲ್ ರಾಯ್‍ಬರೇಲಿಯಲ್ಲಿ ಸೋನಿಯಾ ವಿರುದ್ಧ ಸ್ಪರ್ಧಿಸಿ ಸೋತವರು. ಇಲ್ಲಿವರೆಗೆ ರಾಯ್‍ಬರೇಲಿಯಲ್ಲಿ ಬಿಜೆಪಿ ಅತಿ ಹೆಚ್ಚು ಮತ ಗಳಿಸಿದ್ದು ಆಗಲೇ. ಈ ಸಲ ಅವರಿಗೆ ಅಲ್ಲಿ ಬಿಜೆಪಿಯಿಂದ ಟಿಕೆಟ್ ನಿರಾಕರಿಸಲಾಗಿದೆ.

‘ಮೋದಿ ಒಬ್ಬ ಕೃತಘ್ನ’ ಎನ್ನುವ ಅಗರವಾಲ್, ‘ಗುಜಾರಾತಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ನನ್ನ ಪಾತ್ರವೂ ಇದೆ. ಮಣಶಂಕರ್ ಅಯ್ಯರ್ ಮನೆಯಲ್ಲಿ ಮನಮೋಹನಸಿಂಗ್, ಮಾಜಿ ರಾಷ್ಟ್ರಪತಿ ಹಮೀದ್ ಅನ್ಸಾರಿ, ಮಣಿಶಂಕರ್ ಅಯ್ಯರ್ ಅವರು ಪಾಕ್ ರಾಯಭಾರಿಯೊಂದಿಗೆ ಮಾತುಕತೆ ನಡೆಸಿದ್ದಾರೆ ಎಂಬ ವಿಷಯವನ್ನು ನಾನು ಮೀಟಿಂಗ್‍ವೊಂದರಲ್ಲಿ ಮೋದಿ ಗಮನಕ್ಕೆ ತಂದೆ. ಮರುದಿನವೇ ಮೋದಿಯವರು, ‘ನನ್ನ ಸೋಲಿಸಲು ಪಾಕ್ ಮತ್ತು ಕಾಂಗ್ರೆಸ್ ಕೈಜೋಡಿಸುವೆ’ ಎಂದೆಲ್ಲ ಆಧಾರರಹಿತ ಆರೋಪ ಮಾಡಿ, ಬಿಜೆಪಿಗೆ ಅಲ್ಪ ಬಹುಮತ ತಂದು ಕೊಟ್ಟರು ಎನ್ನುವ ಅಗರವಾಲ್, ಗೆಲುವಿಗಾಗಿ ಮೋದಿ ಎಂತಹ ಕೀಳುಮಟ್ಟಕ್ಕೂ ಇಳಿಯಬಲ್ಲರು ಎಂದು ಆರೋಪಿಸಿದ್ದಾರೆ.
ಗುಜರಾತ್ ಗೆಲುವಿಗೆ ನನ್ನ ಕೊಡುಗೆಯಿದೆ ಎಂದು ಸಂಘ ಪರಿವಾರದ ಹಿರಿಯ ನಾಯಕರೂ ಒಪ್ಪಿಕೊಂಡಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಅವರು ಸಂಘದ ದತ್ತಾತ್ರೇಯ ಹೊಸಬಾಳೆ ಜೊತೆ ಫೋನಿನಲ್ಲಿ ನಡೆಸಿದ ಮಾತುಕತೆಯ ಆಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ.

ಸದ್ಯ ಮೋದಿಗೊಂದು ಪತ್ರ ಬರೆದಿರುವ ಅವರು, ‘300-400 ಸೀಟು ಗೆಲ್ಲುವ ಮಾತು ಬಿಡಿ, ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ ಎಂದು ಕಿಡಿ ಕಾರಿದ್ದಾರೆ. ಮೋದಿಯೊಂದಿಗೆ ನನಗೆ 28 ವರ್ಷಗಳ ಒಡನಾಟವಿದೆ, ಕಳೆದ ಸಲ ರಾಯ್‍ಬರೇಲಿಯಲ್ಲಿ ನಾನು ಒಳ್ಳೆ ಫೈಟ್ ಕೊಟ್ಟರೂ ಮೋದಿ ನನ್ನನ್ನು ಬೇಕೆಂತಲೇ ನಿರ್ಲಕ್ಷಿಸಿದ್ದಾರೆ ಎಂದೂ ಅವರು ಅಪಾದಿಸಿದ್ದಾರೆ.
ಗುಜರಾತ್ ಅಸೆಂಬ್ಲಿ ಗೆಲುವಿಗಾಗಿ ಅದ್ವಾನಿಯವರ ರಾಜಕೀಯವನ್ನೂ ಬಲಿ ಹಾಕಲಾಗಿದೆ. ಅದ್ವಾನಿಯವರನ್ನು ರಾಷ್ಟ್ರಪತಿ ಮಾಡಲು ಪಕ್ಷ ಯೋಚಿಸಿತ್ತು. ಆದರೆ ಗುಜರಾತಿನಲ್ಲಿ ಕೋಲಿ ಸಮುದಾಯದ ಮತಗಳನ್ನು ಪಡೆಯಲು ರಾಮನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಮಾಡಲಾಗಿತು. ಮೋದಿ ತಮ್ಮ ಹಿತಾಸಕ್ತಿ ಕಾಪಾಡಿಕೊಳ್ಳಲು ಹೀಗೆಲ್ಲ ಮಾಡಿದರಷ್ಟೇ ಎಂದೂ ಅಗರ್‍ವಾಲ್ ಹೇಳಿದ್ದಾರೆ.

ನೋಟು ಅಮಾನ್ಯೀಕರಣ ಮೂರ್ಖತನದ್ದು

ಪತ್ರದಲ್ಲಿ ನೋಟ್ ಬ್ಯಾನ್ ಬಗ್ಗೆ ಪ್ರಶ್ನಿಸಿರುವ ಅಗರವಾಲ್, ‘ಪಾರ್ಟಿಯಲ್ಲಿ ನೀವೇ ಬಹಳ ಬುದ್ಧಿವಂತರು. ಹೀಗಾಗಿ ಯಾರನ್ನೂ ಕೇಳದೇ ನೋಟ್‍ಬ್ಯಾನ್ ಮಾಡಿ ಬಡವರ ಬದುಕನ್ನು ಇನ್ನಷ್ಟು ಬವಣೆಗೆ ದೂಕಿಬಿಟ್ಟಿರಿ. ಇದೊಂದು ಮುರ್ಖತನದ ನಿರ್ಧಾರವಾಗಿತ್ತು’ ಎಂದು ಕಠೋರ ಶಬ್ದಗಳಲ್ಲಿ ಮೋದಿಯನ್ನು ಕುಟುಕಿದ್ದಾರೆ.
(ಆಧಾರ: ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...