Homeಮುಖಪುಟಮೋದಿಯನ್ನು ಟೀಕಿಸಿದ್ದಕ್ಕೆ ಸ್ವಪಕ್ಷದ ನಾಯಕನ ಬಂಧನ: ಮೌನಕ್ಕೆ ಶರಣಾದ ಬಿಜೆಪಿ ಅಲ್ಪಸಂಖ್ಯಾತ ಘಟಕದ ನಾಯಕರು

ಮೋದಿಯನ್ನು ಟೀಕಿಸಿದ್ದಕ್ಕೆ ಸ್ವಪಕ್ಷದ ನಾಯಕನ ಬಂಧನ: ಮೌನಕ್ಕೆ ಶರಣಾದ ಬಿಜೆಪಿ ಅಲ್ಪಸಂಖ್ಯಾತ ಘಟಕದ ನಾಯಕರು

- Advertisement -
- Advertisement -

ರಾಜಸ್ಥಾನದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಉಸ್ಮಾನ್‌ ಘನಿ ಬಂಧನದ ಬಗ್ಗೆ ಮಾತನಾಡಲು ಸ್ವಪಕ್ಷದ ಅಲ್ಪಸಂಖ್ಯಾತ ಘಟಕದ ನಾಯಕರು ಮುಂದೆ ಬರುತ್ತಿಲ್ಲ. ‘ಪ್ರಜಾಪ್ರಭುತ್ವ’ ದೇಶದಲ್ಲಿ ಅಭಿಪ್ರಾಯ ವ್ಯಕ್ತಪಡಿಸುವುದು ಅಪರಾಧವಲ್ಲ ಎಂದು ತಿಳಿದಿದ್ದರೂ ಈ ‘ಅನ್ಯಾಯದ ಬಂಧನ’ದ ಬಗ್ಗೆ ಬಿಜೆಪಿಯಲ್ಲಿರುವ ಅಲ್ಪಸಂಖ್ಯಾತ ಘಟಕದ ನಾಯಕರು ಮುಂದೆ ಬರುತ್ತಿಲ್ಲ, ಒಂದು ವೇಳೆ ಮಾತನಾಡಿದರೂ ಅವರು ತಮ್ಮ ಗುರತನ್ನು ಮರೆ ಮಾಚುವಂತೆ ಆಗ್ರಹಿಸುತ್ತಿದ್ದು, ಅವರಿಗೆ ಮಾತನಾಡಿದರೆ ಪಕ್ಷದಿಂದ ಉಚ್ಛಾಟನೆ ಮತ್ತು ಬಂಧನದ ಭೀತಿ ಕಾಡುತ್ತಿದೆಯಾ ಎಂಬ ಪ್ರಶ್ನೆ ಮೂಡಿದೆ.

ಪ್ರಧಾನಿ ನರೇಂದ್ರ ಮೋದಿ ಭಾರತದ ಮುಸ್ಲಿಮರನ್ನು ಅವಮಾನಿಸಬಾರದು. ದೇಶದ ಅಭಿವೃದ್ಧಿಯತ್ತ ಗಮನ ಹರಿಸಬೇಕು. ಈ ಬಗ್ಗೆ ಪ್ರಧಾನಿಯವರಿಗೆ ಪತ್ರ ಬರೆಯುವ ಬಗ್ಗೆ ಕೂಡ ಯೋಚನೆ ಮಾಡುತ್ತಿದ್ದೇನೆ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದ ಕಾರಣಕ್ಕೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಉಸ್ಮಾನ್‌ ಘನಿ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಿ ಬಳಿಕ ಬಂಧಿಸಲಾಗಿತ್ತು. ‘ಶಾಂತಿ ಭಂಗ’ ಆರೋಪದ ಮೇಲೆ ರಾಜಸ್ಥಾನ ಪೊಲೀಸರು ಉಸ್ಮಾನ್ ಘನಿ ಅವರನ್ನು ಬಂಧಿಸಿದ್ದಾರೆ. ಇದು ಅಭಿಪ್ರಾಯವನ್ನು ವ್ಯಕ್ತಪಡಿಸಿದ ಕಾರಣಕ್ಕೆ ನಡೆದ ಬಂಧನವಾಗಿದ್ದು, ಸರ್ವಾಧಿಕಾರ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಈ ಬಂಧನದ ಬಗ್ಗೆ ಬಿಜೆಪಿ ಅಲ್ಪಸಂಖ್ಯಾತರ ಸೆಲ್‌ನ ಯಾವ ನಾಯಕರು ಕೂಡ ತುಟಿ ಬಿಚ್ಚುತ್ತಿಲ್ಲ, ಅವರಿಗೂ ಮಾತನಾಡಿದರೆ ತಮ್ಮನ್ನು ಉಚ್ಛಾಟಿಸುವ, ಬಂಧಿಸುವ ಭೀತಿ ಕಾಡುತ್ತಿದೆ ಎಂದು ಹೇಳಲಾಗಿದೆ.

ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತರ ಸೆಲ್‌ನ ಓರ್ವ ನಾಯಕ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಾನು ಘನಿ ಅವರ ಕಠಿಣ ಪರಿಶ್ರಮ ನೋಡಿ ಬಿಜೆಪಿ ಪಕ್ಷಕ್ಕೆ ಸ್ಪೂರ್ತಿಯಿಂದ ಸೇರಿಕೊಂಡಿದ್ದೇನೆ. ನಾನು ಈಗಾಗಲೇ ಬಿಜೆಪಿಯಿಂದ ಪ್ರಭಾವಿತನಾಗಿದ್ದೆ. ಅಲ್ಪಸಂಖ್ಯಾತರ ಸೆಲ್‌ನಲ್ಲಿ ಅನೇಕ ನಾಯಕರಿದ್ದಾರೆ, ಆದರೆ ಘನಿಯಂತೆ ಪಕ್ಷಕ್ಕಾಗಿ  ಶ್ರಮಿಸಿದವರು ಇಲ್ಲಿ ಯಾರೂ ಇಲ್ಲ. ಎಲ್ಲರೂ ಅವನನ್ನು ತಿಳಿದಿದ್ದಾರೆ. ಅವರು ಪಕ್ಷದ ಅಲ್ಪಸಂಖ್ಯಾತರ ಸೆಲ್‌ನ ಮುಖ್ಯಸ್ಥರಾಗಿದ್ದರು. ಬಿಕಾನೇರ್‌ನ ಹೊರಗಿನ ಸಭೆಗಳಿಗೂ ಹಾಜರಾಗಿದ್ದರು, ಅವರು ವಿಧಾನಸಭೆ ಚುನಾವಣೆಯಲ್ಲಿ ತಮ್ಮನ್ನು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು ಎಂದು ಹೇಳಿದ್ದಾರೆ. ಅವರು ತಮ್ಮ ಹೇಳಿಕೆ ವೇಳೆ ಹೆಸರು ಬಹಿರಂಗಪಡಿಸದಂತೆ ಮಾಧ್ಯಮಗಳಿಗೆ ಕೇಳಿಕೊಂಡಿದ್ದಾರೆ.

ಬಿಕಾನೆರ್‌ ನಿವಾಸಿಯಾಗಿರುವ ಬಿಜೆಪಿ ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ರಂಜಾನ್ ಅಲಿ, ಘನಿ ಅವರು ಬಿಜೆಪಿ, ಆರೆಸ್ಸೆಸ್‌ ಮತ್ತು ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದಿರುವುದನ್ನು ಒಪ್ಪಿಕೊಂಡಿದ್ದಾರೆ. ಗಣಿ ಏಳು-ಎಂಟು ವರ್ಷಗಳ ಕಾಲ ಪಕ್ಷದಲ್ಲಿದ್ದರು. ಅವರು ಈ ಹಿಂದೆ ಅಲ್ಪಸಂಖ್ಯಾತರ ಸೆಲ್‌ನ ಜಿಲ್ಲಾ ಉಪಾಧ್ಯಕ್ಷರಾಗಿದ್ದರು ಮತ್ತು ಕಳೆದ ಮೂರು ವರ್ಷಗಳಿಂದ ಜಿಲ್ಲಾಧ್ಯಕ್ಷರಾಗಿದ್ದರು ಎಂದು ಹೇಳಿದ್ದಾರೆ. ಘನಿ ವಿರುದ್ಧ ಬಿಜೆಪಿ ಕ್ರಮ ಕೈಗೊಂಡಿರುವುದು ಸರಿಯಾಗಿದೆ. ಅವರು ಪಕ್ಷಕ್ಕೆ ನಿಷ್ಠರಾಗಿಲ್ಲದ ಕಾರಣ ಅವರನ್ನು ಉಚ್ಚಾಟಿಸಲಾಗಿದೆ. ಪಕ್ಷದಲ್ಲಿರುವಾಗ ಪಕ್ಷದ ವಿರುದ್ಧ ಅವರು ಹೇಗೆ ಮಾತನಾಡುತ್ತಾರೆ? ನಾನು ಕಳೆದ 40 ವರ್ಷಗಳಿಂದ ಪಕ್ಷದಲ್ಲಿದ್ದೇನೆ ಮತ್ತು ನಿನ್ನೆ ಸೇರಿರುವ ಈ ಜನರು ಪಕ್ಷದ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಘನಿಯನ್ನು ಕಾಂಗ್ರೆಸ್‌ ದಾರಿ ತಪ್ಪಿಸಿದೆ ಎಂದು ಹೇಳಿದ್ದಾರೆ. ಬಿಜೆಪಿ ಅವರಿಗೆ ಗೌರವ ಮತ್ತು ಖ್ಯಾತಿಯನ್ನು ನೀಡಿದೆ ಮತ್ತು ಅವರ ಸಹೋದರನಿಗೆ ಕೌನ್ಸಿಲರ್ ಟಿಕೆಟ್ ನೀಡಿದೆ. ಪಕ್ಷದಿಂದಾಗಿ ಜನರು ಘನಿ ಅವರನ್ನು ತಿಳಿದಿದ್ದಾರೆ ಎಂದು ಹೇಳಿದ್ದು, ಘನಿ ಅವರ ಬಂಧನದ ಬಗ್ಗೆ ಕೇಳಿದಾಗ ರಂಜಾನ್ ಅಲಿ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

2014ರಲ್ಲಿ ಬಿಕಾನೇರ್‌ನಲ್ಲಿ ವಾರ್ಡ್ ನಂ.55 ರಿಂದ ಕೌನ್ಸಿಲರ್ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಘನಿ ಅವರ ಸಹೋದರ ಮೊಯಿನ್ ಖಾನ್ ಕೂಡ ಈ ಬಗ್ಗೆ ಮಾತನಾಡಲು ನಿರಾಕರಿಸಿದ್ದಾರೆ.

ಕಳೆದ ಏಪ್ರಿಲ್ 21ರಂದು ರಾಜಸ್ಥಾನದಲ್ಲಿ ಬಿಜೆಪಿ ಆಯೋಜಿಸಿದ್ದ ಸಾರ್ವಜನಿಕ ಸಮಾವೇಶದಲ್ಲಿ ಮುಸಲ್ಮಾನರ ವಿರುದ್ಧ ಖುದ್ದು ದ್ವೇಷ ಭಾಷಣಗೈದಿದ್ದ ಪ್ರಧಾನಿ ನರೇಂದ್ರ ಮೋದಿ, “ದೇಶದ ಸಂಪತ್ತನ್ನು ಒಟ್ಟುಗೂಡಿಸಿ, ಹೆಚ್ಚು ಮಕ್ಕಳಿರುವ ಮುಸ್ಲಿಮರಿಗೆ ನೀಡುವುದೇ ಕಾಂಗ್ರೆಸ್‌ನ ಪ್ರಣಾಳಿಕೆ” ಎಂದಿದ್ದರು. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುವುದರ ಜೊತೆ ದೊಡ್ಡ ವಿವಾದಕ್ಕೆ ನಾಂದಿ ಹಾಡಿತ್ತು.

ಹಿಂದಿಯ ಖಾಸಗಿ ಸುದ್ದಿ ಸಂಸ್ಥೆ 24 ನ್ಯೂಸ್ ಪತ್ರಕರ್ತ ರಾಜೀವ್ ರಂಜನ್ ಅವರು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ‘ಮಹೋಲ್ ಕ್ಯಾ ಹೇ’ ಎಂಬ ಕಾರ್ಯಕ್ರಮವನ್ನು ನಡೆಸುತ್ತಿದ್ದರು. ಈ ವೇಳೆ ಅನಿರೀಕ್ಷಿತವಾಗಿ ಬಿಕಾನೇರ್‌ನ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿದ್ದ ಉಸ್ಮಾನ್ ಘನಿ ಅವರನ್ನು ಮಾತನಾಡಿಸಿದ್ದರು.

ಪ್ರಧಾನಿಯ ದ್ವೇಷ ಭಾಷಣದ ಬಗ್ಗೆ ಪತ್ರಕರ್ತ ರಾಜೀವ್ ರಂಜನ್ ಅಭಿಪ್ರಾಯ ಕೇಳಿದಾಗ, ಪ್ರಧಾನಿ ನರೇಂದ್ರ ಮೋದಿ ಭಾರತದ ಮುಸ್ಲಿಮರನ್ನು ಅವಮಾನಿಸಬಾರದು. ದೇಶದ ಅಭಿವೃದ್ಧಿಯತ್ತ ಗಮನ ಹರಿಸಬೇಕು. ಈ ಬಗ್ಗೆ ಪ್ರಧಾನಿಯವರಿಗೆ ಪತ್ರ ಬರೆಯುವ ಬಗ್ಗೆ ಕೂಡ ಯೋಚನೆ ಮಾಡುತ್ತಿದ್ದೇನೆ ಎಂದು ಉಸ್ಮಾನ್ ಘನಿ ಹೇಳಿದ್ದರು. ಅ ಬಳಿಕ ಘನಿಯನ್ನು ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಇದರ ಬೆನ್ನಲ್ಲಿ ಶಾಂತಿ ಭಂಗದ ಆರೋಪದಲ್ಲಿ ಬಂಧನವೂ ನಡೆದಿತ್ತು.

ಇದನ್ನು ಓದಿ: ಪನ್ನೂನ್ ಹತ್ಯೆ ಸಂಚು: ಮೋದಿ ಆಪ್ತರ ಕಡೆ ಬೊಟ್ಟು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...