Homeಮುಖಪುಟಮೋದಿಯನ್ನು ಟೀಕಿಸಿದ್ದಕ್ಕೆ ಸ್ವಪಕ್ಷದ ನಾಯಕನ ಬಂಧನ: ಮೌನಕ್ಕೆ ಶರಣಾದ ಬಿಜೆಪಿ ಅಲ್ಪಸಂಖ್ಯಾತ ಘಟಕದ ನಾಯಕರು

ಮೋದಿಯನ್ನು ಟೀಕಿಸಿದ್ದಕ್ಕೆ ಸ್ವಪಕ್ಷದ ನಾಯಕನ ಬಂಧನ: ಮೌನಕ್ಕೆ ಶರಣಾದ ಬಿಜೆಪಿ ಅಲ್ಪಸಂಖ್ಯಾತ ಘಟಕದ ನಾಯಕರು

- Advertisement -
- Advertisement -

ರಾಜಸ್ಥಾನದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಉಸ್ಮಾನ್‌ ಘನಿ ಬಂಧನದ ಬಗ್ಗೆ ಮಾತನಾಡಲು ಸ್ವಪಕ್ಷದ ಅಲ್ಪಸಂಖ್ಯಾತ ಘಟಕದ ನಾಯಕರು ಮುಂದೆ ಬರುತ್ತಿಲ್ಲ. ‘ಪ್ರಜಾಪ್ರಭುತ್ವ’ ದೇಶದಲ್ಲಿ ಅಭಿಪ್ರಾಯ ವ್ಯಕ್ತಪಡಿಸುವುದು ಅಪರಾಧವಲ್ಲ ಎಂದು ತಿಳಿದಿದ್ದರೂ ಈ ‘ಅನ್ಯಾಯದ ಬಂಧನ’ದ ಬಗ್ಗೆ ಬಿಜೆಪಿಯಲ್ಲಿರುವ ಅಲ್ಪಸಂಖ್ಯಾತ ಘಟಕದ ನಾಯಕರು ಮುಂದೆ ಬರುತ್ತಿಲ್ಲ, ಒಂದು ವೇಳೆ ಮಾತನಾಡಿದರೂ ಅವರು ತಮ್ಮ ಗುರತನ್ನು ಮರೆ ಮಾಚುವಂತೆ ಆಗ್ರಹಿಸುತ್ತಿದ್ದು, ಅವರಿಗೆ ಮಾತನಾಡಿದರೆ ಪಕ್ಷದಿಂದ ಉಚ್ಛಾಟನೆ ಮತ್ತು ಬಂಧನದ ಭೀತಿ ಕಾಡುತ್ತಿದೆಯಾ ಎಂಬ ಪ್ರಶ್ನೆ ಮೂಡಿದೆ.

ಪ್ರಧಾನಿ ನರೇಂದ್ರ ಮೋದಿ ಭಾರತದ ಮುಸ್ಲಿಮರನ್ನು ಅವಮಾನಿಸಬಾರದು. ದೇಶದ ಅಭಿವೃದ್ಧಿಯತ್ತ ಗಮನ ಹರಿಸಬೇಕು. ಈ ಬಗ್ಗೆ ಪ್ರಧಾನಿಯವರಿಗೆ ಪತ್ರ ಬರೆಯುವ ಬಗ್ಗೆ ಕೂಡ ಯೋಚನೆ ಮಾಡುತ್ತಿದ್ದೇನೆ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದ ಕಾರಣಕ್ಕೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಉಸ್ಮಾನ್‌ ಘನಿ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಿ ಬಳಿಕ ಬಂಧಿಸಲಾಗಿತ್ತು. ‘ಶಾಂತಿ ಭಂಗ’ ಆರೋಪದ ಮೇಲೆ ರಾಜಸ್ಥಾನ ಪೊಲೀಸರು ಉಸ್ಮಾನ್ ಘನಿ ಅವರನ್ನು ಬಂಧಿಸಿದ್ದಾರೆ. ಇದು ಅಭಿಪ್ರಾಯವನ್ನು ವ್ಯಕ್ತಪಡಿಸಿದ ಕಾರಣಕ್ಕೆ ನಡೆದ ಬಂಧನವಾಗಿದ್ದು, ಸರ್ವಾಧಿಕಾರ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಈ ಬಂಧನದ ಬಗ್ಗೆ ಬಿಜೆಪಿ ಅಲ್ಪಸಂಖ್ಯಾತರ ಸೆಲ್‌ನ ಯಾವ ನಾಯಕರು ಕೂಡ ತುಟಿ ಬಿಚ್ಚುತ್ತಿಲ್ಲ, ಅವರಿಗೂ ಮಾತನಾಡಿದರೆ ತಮ್ಮನ್ನು ಉಚ್ಛಾಟಿಸುವ, ಬಂಧಿಸುವ ಭೀತಿ ಕಾಡುತ್ತಿದೆ ಎಂದು ಹೇಳಲಾಗಿದೆ.

ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತರ ಸೆಲ್‌ನ ಓರ್ವ ನಾಯಕ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಾನು ಘನಿ ಅವರ ಕಠಿಣ ಪರಿಶ್ರಮ ನೋಡಿ ಬಿಜೆಪಿ ಪಕ್ಷಕ್ಕೆ ಸ್ಪೂರ್ತಿಯಿಂದ ಸೇರಿಕೊಂಡಿದ್ದೇನೆ. ನಾನು ಈಗಾಗಲೇ ಬಿಜೆಪಿಯಿಂದ ಪ್ರಭಾವಿತನಾಗಿದ್ದೆ. ಅಲ್ಪಸಂಖ್ಯಾತರ ಸೆಲ್‌ನಲ್ಲಿ ಅನೇಕ ನಾಯಕರಿದ್ದಾರೆ, ಆದರೆ ಘನಿಯಂತೆ ಪಕ್ಷಕ್ಕಾಗಿ  ಶ್ರಮಿಸಿದವರು ಇಲ್ಲಿ ಯಾರೂ ಇಲ್ಲ. ಎಲ್ಲರೂ ಅವನನ್ನು ತಿಳಿದಿದ್ದಾರೆ. ಅವರು ಪಕ್ಷದ ಅಲ್ಪಸಂಖ್ಯಾತರ ಸೆಲ್‌ನ ಮುಖ್ಯಸ್ಥರಾಗಿದ್ದರು. ಬಿಕಾನೇರ್‌ನ ಹೊರಗಿನ ಸಭೆಗಳಿಗೂ ಹಾಜರಾಗಿದ್ದರು, ಅವರು ವಿಧಾನಸಭೆ ಚುನಾವಣೆಯಲ್ಲಿ ತಮ್ಮನ್ನು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು ಎಂದು ಹೇಳಿದ್ದಾರೆ. ಅವರು ತಮ್ಮ ಹೇಳಿಕೆ ವೇಳೆ ಹೆಸರು ಬಹಿರಂಗಪಡಿಸದಂತೆ ಮಾಧ್ಯಮಗಳಿಗೆ ಕೇಳಿಕೊಂಡಿದ್ದಾರೆ.

ಬಿಕಾನೆರ್‌ ನಿವಾಸಿಯಾಗಿರುವ ಬಿಜೆಪಿ ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ರಂಜಾನ್ ಅಲಿ, ಘನಿ ಅವರು ಬಿಜೆಪಿ, ಆರೆಸ್ಸೆಸ್‌ ಮತ್ತು ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದಿರುವುದನ್ನು ಒಪ್ಪಿಕೊಂಡಿದ್ದಾರೆ. ಗಣಿ ಏಳು-ಎಂಟು ವರ್ಷಗಳ ಕಾಲ ಪಕ್ಷದಲ್ಲಿದ್ದರು. ಅವರು ಈ ಹಿಂದೆ ಅಲ್ಪಸಂಖ್ಯಾತರ ಸೆಲ್‌ನ ಜಿಲ್ಲಾ ಉಪಾಧ್ಯಕ್ಷರಾಗಿದ್ದರು ಮತ್ತು ಕಳೆದ ಮೂರು ವರ್ಷಗಳಿಂದ ಜಿಲ್ಲಾಧ್ಯಕ್ಷರಾಗಿದ್ದರು ಎಂದು ಹೇಳಿದ್ದಾರೆ. ಘನಿ ವಿರುದ್ಧ ಬಿಜೆಪಿ ಕ್ರಮ ಕೈಗೊಂಡಿರುವುದು ಸರಿಯಾಗಿದೆ. ಅವರು ಪಕ್ಷಕ್ಕೆ ನಿಷ್ಠರಾಗಿಲ್ಲದ ಕಾರಣ ಅವರನ್ನು ಉಚ್ಚಾಟಿಸಲಾಗಿದೆ. ಪಕ್ಷದಲ್ಲಿರುವಾಗ ಪಕ್ಷದ ವಿರುದ್ಧ ಅವರು ಹೇಗೆ ಮಾತನಾಡುತ್ತಾರೆ? ನಾನು ಕಳೆದ 40 ವರ್ಷಗಳಿಂದ ಪಕ್ಷದಲ್ಲಿದ್ದೇನೆ ಮತ್ತು ನಿನ್ನೆ ಸೇರಿರುವ ಈ ಜನರು ಪಕ್ಷದ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಘನಿಯನ್ನು ಕಾಂಗ್ರೆಸ್‌ ದಾರಿ ತಪ್ಪಿಸಿದೆ ಎಂದು ಹೇಳಿದ್ದಾರೆ. ಬಿಜೆಪಿ ಅವರಿಗೆ ಗೌರವ ಮತ್ತು ಖ್ಯಾತಿಯನ್ನು ನೀಡಿದೆ ಮತ್ತು ಅವರ ಸಹೋದರನಿಗೆ ಕೌನ್ಸಿಲರ್ ಟಿಕೆಟ್ ನೀಡಿದೆ. ಪಕ್ಷದಿಂದಾಗಿ ಜನರು ಘನಿ ಅವರನ್ನು ತಿಳಿದಿದ್ದಾರೆ ಎಂದು ಹೇಳಿದ್ದು, ಘನಿ ಅವರ ಬಂಧನದ ಬಗ್ಗೆ ಕೇಳಿದಾಗ ರಂಜಾನ್ ಅಲಿ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

2014ರಲ್ಲಿ ಬಿಕಾನೇರ್‌ನಲ್ಲಿ ವಾರ್ಡ್ ನಂ.55 ರಿಂದ ಕೌನ್ಸಿಲರ್ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಘನಿ ಅವರ ಸಹೋದರ ಮೊಯಿನ್ ಖಾನ್ ಕೂಡ ಈ ಬಗ್ಗೆ ಮಾತನಾಡಲು ನಿರಾಕರಿಸಿದ್ದಾರೆ.

ಕಳೆದ ಏಪ್ರಿಲ್ 21ರಂದು ರಾಜಸ್ಥಾನದಲ್ಲಿ ಬಿಜೆಪಿ ಆಯೋಜಿಸಿದ್ದ ಸಾರ್ವಜನಿಕ ಸಮಾವೇಶದಲ್ಲಿ ಮುಸಲ್ಮಾನರ ವಿರುದ್ಧ ಖುದ್ದು ದ್ವೇಷ ಭಾಷಣಗೈದಿದ್ದ ಪ್ರಧಾನಿ ನರೇಂದ್ರ ಮೋದಿ, “ದೇಶದ ಸಂಪತ್ತನ್ನು ಒಟ್ಟುಗೂಡಿಸಿ, ಹೆಚ್ಚು ಮಕ್ಕಳಿರುವ ಮುಸ್ಲಿಮರಿಗೆ ನೀಡುವುದೇ ಕಾಂಗ್ರೆಸ್‌ನ ಪ್ರಣಾಳಿಕೆ” ಎಂದಿದ್ದರು. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುವುದರ ಜೊತೆ ದೊಡ್ಡ ವಿವಾದಕ್ಕೆ ನಾಂದಿ ಹಾಡಿತ್ತು.

ಹಿಂದಿಯ ಖಾಸಗಿ ಸುದ್ದಿ ಸಂಸ್ಥೆ 24 ನ್ಯೂಸ್ ಪತ್ರಕರ್ತ ರಾಜೀವ್ ರಂಜನ್ ಅವರು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ‘ಮಹೋಲ್ ಕ್ಯಾ ಹೇ’ ಎಂಬ ಕಾರ್ಯಕ್ರಮವನ್ನು ನಡೆಸುತ್ತಿದ್ದರು. ಈ ವೇಳೆ ಅನಿರೀಕ್ಷಿತವಾಗಿ ಬಿಕಾನೇರ್‌ನ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿದ್ದ ಉಸ್ಮಾನ್ ಘನಿ ಅವರನ್ನು ಮಾತನಾಡಿಸಿದ್ದರು.

ಪ್ರಧಾನಿಯ ದ್ವೇಷ ಭಾಷಣದ ಬಗ್ಗೆ ಪತ್ರಕರ್ತ ರಾಜೀವ್ ರಂಜನ್ ಅಭಿಪ್ರಾಯ ಕೇಳಿದಾಗ, ಪ್ರಧಾನಿ ನರೇಂದ್ರ ಮೋದಿ ಭಾರತದ ಮುಸ್ಲಿಮರನ್ನು ಅವಮಾನಿಸಬಾರದು. ದೇಶದ ಅಭಿವೃದ್ಧಿಯತ್ತ ಗಮನ ಹರಿಸಬೇಕು. ಈ ಬಗ್ಗೆ ಪ್ರಧಾನಿಯವರಿಗೆ ಪತ್ರ ಬರೆಯುವ ಬಗ್ಗೆ ಕೂಡ ಯೋಚನೆ ಮಾಡುತ್ತಿದ್ದೇನೆ ಎಂದು ಉಸ್ಮಾನ್ ಘನಿ ಹೇಳಿದ್ದರು. ಅ ಬಳಿಕ ಘನಿಯನ್ನು ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಇದರ ಬೆನ್ನಲ್ಲಿ ಶಾಂತಿ ಭಂಗದ ಆರೋಪದಲ್ಲಿ ಬಂಧನವೂ ನಡೆದಿತ್ತು.

ಇದನ್ನು ಓದಿ: ಪನ್ನೂನ್ ಹತ್ಯೆ ಸಂಚು: ಮೋದಿ ಆಪ್ತರ ಕಡೆ ಬೊಟ್ಟು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...