Homeಮುಖಪುಟಮೋದಿಯನ್ನು ಟೀಕಿಸಿದ್ದಕ್ಕೆ ಸ್ವಪಕ್ಷದ ನಾಯಕನ ಬಂಧನ: ಮೌನಕ್ಕೆ ಶರಣಾದ ಬಿಜೆಪಿ ಅಲ್ಪಸಂಖ್ಯಾತ ಘಟಕದ ನಾಯಕರು

ಮೋದಿಯನ್ನು ಟೀಕಿಸಿದ್ದಕ್ಕೆ ಸ್ವಪಕ್ಷದ ನಾಯಕನ ಬಂಧನ: ಮೌನಕ್ಕೆ ಶರಣಾದ ಬಿಜೆಪಿ ಅಲ್ಪಸಂಖ್ಯಾತ ಘಟಕದ ನಾಯಕರು

- Advertisement -
- Advertisement -

ರಾಜಸ್ಥಾನದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಉಸ್ಮಾನ್‌ ಘನಿ ಬಂಧನದ ಬಗ್ಗೆ ಮಾತನಾಡಲು ಸ್ವಪಕ್ಷದ ಅಲ್ಪಸಂಖ್ಯಾತ ಘಟಕದ ನಾಯಕರು ಮುಂದೆ ಬರುತ್ತಿಲ್ಲ. ‘ಪ್ರಜಾಪ್ರಭುತ್ವ’ ದೇಶದಲ್ಲಿ ಅಭಿಪ್ರಾಯ ವ್ಯಕ್ತಪಡಿಸುವುದು ಅಪರಾಧವಲ್ಲ ಎಂದು ತಿಳಿದಿದ್ದರೂ ಈ ‘ಅನ್ಯಾಯದ ಬಂಧನ’ದ ಬಗ್ಗೆ ಬಿಜೆಪಿಯಲ್ಲಿರುವ ಅಲ್ಪಸಂಖ್ಯಾತ ಘಟಕದ ನಾಯಕರು ಮುಂದೆ ಬರುತ್ತಿಲ್ಲ, ಒಂದು ವೇಳೆ ಮಾತನಾಡಿದರೂ ಅವರು ತಮ್ಮ ಗುರತನ್ನು ಮರೆ ಮಾಚುವಂತೆ ಆಗ್ರಹಿಸುತ್ತಿದ್ದು, ಅವರಿಗೆ ಮಾತನಾಡಿದರೆ ಪಕ್ಷದಿಂದ ಉಚ್ಛಾಟನೆ ಮತ್ತು ಬಂಧನದ ಭೀತಿ ಕಾಡುತ್ತಿದೆಯಾ ಎಂಬ ಪ್ರಶ್ನೆ ಮೂಡಿದೆ.

ಪ್ರಧಾನಿ ನರೇಂದ್ರ ಮೋದಿ ಭಾರತದ ಮುಸ್ಲಿಮರನ್ನು ಅವಮಾನಿಸಬಾರದು. ದೇಶದ ಅಭಿವೃದ್ಧಿಯತ್ತ ಗಮನ ಹರಿಸಬೇಕು. ಈ ಬಗ್ಗೆ ಪ್ರಧಾನಿಯವರಿಗೆ ಪತ್ರ ಬರೆಯುವ ಬಗ್ಗೆ ಕೂಡ ಯೋಚನೆ ಮಾಡುತ್ತಿದ್ದೇನೆ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದ ಕಾರಣಕ್ಕೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಉಸ್ಮಾನ್‌ ಘನಿ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಿ ಬಳಿಕ ಬಂಧಿಸಲಾಗಿತ್ತು. ‘ಶಾಂತಿ ಭಂಗ’ ಆರೋಪದ ಮೇಲೆ ರಾಜಸ್ಥಾನ ಪೊಲೀಸರು ಉಸ್ಮಾನ್ ಘನಿ ಅವರನ್ನು ಬಂಧಿಸಿದ್ದಾರೆ. ಇದು ಅಭಿಪ್ರಾಯವನ್ನು ವ್ಯಕ್ತಪಡಿಸಿದ ಕಾರಣಕ್ಕೆ ನಡೆದ ಬಂಧನವಾಗಿದ್ದು, ಸರ್ವಾಧಿಕಾರ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಈ ಬಂಧನದ ಬಗ್ಗೆ ಬಿಜೆಪಿ ಅಲ್ಪಸಂಖ್ಯಾತರ ಸೆಲ್‌ನ ಯಾವ ನಾಯಕರು ಕೂಡ ತುಟಿ ಬಿಚ್ಚುತ್ತಿಲ್ಲ, ಅವರಿಗೂ ಮಾತನಾಡಿದರೆ ತಮ್ಮನ್ನು ಉಚ್ಛಾಟಿಸುವ, ಬಂಧಿಸುವ ಭೀತಿ ಕಾಡುತ್ತಿದೆ ಎಂದು ಹೇಳಲಾಗಿದೆ.

ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತರ ಸೆಲ್‌ನ ಓರ್ವ ನಾಯಕ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಾನು ಘನಿ ಅವರ ಕಠಿಣ ಪರಿಶ್ರಮ ನೋಡಿ ಬಿಜೆಪಿ ಪಕ್ಷಕ್ಕೆ ಸ್ಪೂರ್ತಿಯಿಂದ ಸೇರಿಕೊಂಡಿದ್ದೇನೆ. ನಾನು ಈಗಾಗಲೇ ಬಿಜೆಪಿಯಿಂದ ಪ್ರಭಾವಿತನಾಗಿದ್ದೆ. ಅಲ್ಪಸಂಖ್ಯಾತರ ಸೆಲ್‌ನಲ್ಲಿ ಅನೇಕ ನಾಯಕರಿದ್ದಾರೆ, ಆದರೆ ಘನಿಯಂತೆ ಪಕ್ಷಕ್ಕಾಗಿ  ಶ್ರಮಿಸಿದವರು ಇಲ್ಲಿ ಯಾರೂ ಇಲ್ಲ. ಎಲ್ಲರೂ ಅವನನ್ನು ತಿಳಿದಿದ್ದಾರೆ. ಅವರು ಪಕ್ಷದ ಅಲ್ಪಸಂಖ್ಯಾತರ ಸೆಲ್‌ನ ಮುಖ್ಯಸ್ಥರಾಗಿದ್ದರು. ಬಿಕಾನೇರ್‌ನ ಹೊರಗಿನ ಸಭೆಗಳಿಗೂ ಹಾಜರಾಗಿದ್ದರು, ಅವರು ವಿಧಾನಸಭೆ ಚುನಾವಣೆಯಲ್ಲಿ ತಮ್ಮನ್ನು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು ಎಂದು ಹೇಳಿದ್ದಾರೆ. ಅವರು ತಮ್ಮ ಹೇಳಿಕೆ ವೇಳೆ ಹೆಸರು ಬಹಿರಂಗಪಡಿಸದಂತೆ ಮಾಧ್ಯಮಗಳಿಗೆ ಕೇಳಿಕೊಂಡಿದ್ದಾರೆ.

ಬಿಕಾನೆರ್‌ ನಿವಾಸಿಯಾಗಿರುವ ಬಿಜೆಪಿ ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ರಂಜಾನ್ ಅಲಿ, ಘನಿ ಅವರು ಬಿಜೆಪಿ, ಆರೆಸ್ಸೆಸ್‌ ಮತ್ತು ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದಿರುವುದನ್ನು ಒಪ್ಪಿಕೊಂಡಿದ್ದಾರೆ. ಗಣಿ ಏಳು-ಎಂಟು ವರ್ಷಗಳ ಕಾಲ ಪಕ್ಷದಲ್ಲಿದ್ದರು. ಅವರು ಈ ಹಿಂದೆ ಅಲ್ಪಸಂಖ್ಯಾತರ ಸೆಲ್‌ನ ಜಿಲ್ಲಾ ಉಪಾಧ್ಯಕ್ಷರಾಗಿದ್ದರು ಮತ್ತು ಕಳೆದ ಮೂರು ವರ್ಷಗಳಿಂದ ಜಿಲ್ಲಾಧ್ಯಕ್ಷರಾಗಿದ್ದರು ಎಂದು ಹೇಳಿದ್ದಾರೆ. ಘನಿ ವಿರುದ್ಧ ಬಿಜೆಪಿ ಕ್ರಮ ಕೈಗೊಂಡಿರುವುದು ಸರಿಯಾಗಿದೆ. ಅವರು ಪಕ್ಷಕ್ಕೆ ನಿಷ್ಠರಾಗಿಲ್ಲದ ಕಾರಣ ಅವರನ್ನು ಉಚ್ಚಾಟಿಸಲಾಗಿದೆ. ಪಕ್ಷದಲ್ಲಿರುವಾಗ ಪಕ್ಷದ ವಿರುದ್ಧ ಅವರು ಹೇಗೆ ಮಾತನಾಡುತ್ತಾರೆ? ನಾನು ಕಳೆದ 40 ವರ್ಷಗಳಿಂದ ಪಕ್ಷದಲ್ಲಿದ್ದೇನೆ ಮತ್ತು ನಿನ್ನೆ ಸೇರಿರುವ ಈ ಜನರು ಪಕ್ಷದ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಘನಿಯನ್ನು ಕಾಂಗ್ರೆಸ್‌ ದಾರಿ ತಪ್ಪಿಸಿದೆ ಎಂದು ಹೇಳಿದ್ದಾರೆ. ಬಿಜೆಪಿ ಅವರಿಗೆ ಗೌರವ ಮತ್ತು ಖ್ಯಾತಿಯನ್ನು ನೀಡಿದೆ ಮತ್ತು ಅವರ ಸಹೋದರನಿಗೆ ಕೌನ್ಸಿಲರ್ ಟಿಕೆಟ್ ನೀಡಿದೆ. ಪಕ್ಷದಿಂದಾಗಿ ಜನರು ಘನಿ ಅವರನ್ನು ತಿಳಿದಿದ್ದಾರೆ ಎಂದು ಹೇಳಿದ್ದು, ಘನಿ ಅವರ ಬಂಧನದ ಬಗ್ಗೆ ಕೇಳಿದಾಗ ರಂಜಾನ್ ಅಲಿ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

2014ರಲ್ಲಿ ಬಿಕಾನೇರ್‌ನಲ್ಲಿ ವಾರ್ಡ್ ನಂ.55 ರಿಂದ ಕೌನ್ಸಿಲರ್ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಘನಿ ಅವರ ಸಹೋದರ ಮೊಯಿನ್ ಖಾನ್ ಕೂಡ ಈ ಬಗ್ಗೆ ಮಾತನಾಡಲು ನಿರಾಕರಿಸಿದ್ದಾರೆ.

ಕಳೆದ ಏಪ್ರಿಲ್ 21ರಂದು ರಾಜಸ್ಥಾನದಲ್ಲಿ ಬಿಜೆಪಿ ಆಯೋಜಿಸಿದ್ದ ಸಾರ್ವಜನಿಕ ಸಮಾವೇಶದಲ್ಲಿ ಮುಸಲ್ಮಾನರ ವಿರುದ್ಧ ಖುದ್ದು ದ್ವೇಷ ಭಾಷಣಗೈದಿದ್ದ ಪ್ರಧಾನಿ ನರೇಂದ್ರ ಮೋದಿ, “ದೇಶದ ಸಂಪತ್ತನ್ನು ಒಟ್ಟುಗೂಡಿಸಿ, ಹೆಚ್ಚು ಮಕ್ಕಳಿರುವ ಮುಸ್ಲಿಮರಿಗೆ ನೀಡುವುದೇ ಕಾಂಗ್ರೆಸ್‌ನ ಪ್ರಣಾಳಿಕೆ” ಎಂದಿದ್ದರು. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುವುದರ ಜೊತೆ ದೊಡ್ಡ ವಿವಾದಕ್ಕೆ ನಾಂದಿ ಹಾಡಿತ್ತು.

ಹಿಂದಿಯ ಖಾಸಗಿ ಸುದ್ದಿ ಸಂಸ್ಥೆ 24 ನ್ಯೂಸ್ ಪತ್ರಕರ್ತ ರಾಜೀವ್ ರಂಜನ್ ಅವರು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ‘ಮಹೋಲ್ ಕ್ಯಾ ಹೇ’ ಎಂಬ ಕಾರ್ಯಕ್ರಮವನ್ನು ನಡೆಸುತ್ತಿದ್ದರು. ಈ ವೇಳೆ ಅನಿರೀಕ್ಷಿತವಾಗಿ ಬಿಕಾನೇರ್‌ನ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿದ್ದ ಉಸ್ಮಾನ್ ಘನಿ ಅವರನ್ನು ಮಾತನಾಡಿಸಿದ್ದರು.

ಪ್ರಧಾನಿಯ ದ್ವೇಷ ಭಾಷಣದ ಬಗ್ಗೆ ಪತ್ರಕರ್ತ ರಾಜೀವ್ ರಂಜನ್ ಅಭಿಪ್ರಾಯ ಕೇಳಿದಾಗ, ಪ್ರಧಾನಿ ನರೇಂದ್ರ ಮೋದಿ ಭಾರತದ ಮುಸ್ಲಿಮರನ್ನು ಅವಮಾನಿಸಬಾರದು. ದೇಶದ ಅಭಿವೃದ್ಧಿಯತ್ತ ಗಮನ ಹರಿಸಬೇಕು. ಈ ಬಗ್ಗೆ ಪ್ರಧಾನಿಯವರಿಗೆ ಪತ್ರ ಬರೆಯುವ ಬಗ್ಗೆ ಕೂಡ ಯೋಚನೆ ಮಾಡುತ್ತಿದ್ದೇನೆ ಎಂದು ಉಸ್ಮಾನ್ ಘನಿ ಹೇಳಿದ್ದರು. ಅ ಬಳಿಕ ಘನಿಯನ್ನು ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಇದರ ಬೆನ್ನಲ್ಲಿ ಶಾಂತಿ ಭಂಗದ ಆರೋಪದಲ್ಲಿ ಬಂಧನವೂ ನಡೆದಿತ್ತು.

ಇದನ್ನು ಓದಿ: ಪನ್ನೂನ್ ಹತ್ಯೆ ಸಂಚು: ಮೋದಿ ಆಪ್ತರ ಕಡೆ ಬೊಟ್ಟು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...