Homeಕರ್ನಾಟಕಆಳಂದ ಮತಗಳ್ಳತನ ಪ್ರಕರಣ | ಬಂಧನ ಭೀತಿಯಲ್ಲಿ ಬಿಜೆಪಿಯ ಮಾಜಿ ಶಾಸಕ ಮತ್ತು ಅವರ ಮಗ...

ಆಳಂದ ಮತಗಳ್ಳತನ ಪ್ರಕರಣ | ಬಂಧನ ಭೀತಿಯಲ್ಲಿ ಬಿಜೆಪಿಯ ಮಾಜಿ ಶಾಸಕ ಮತ್ತು ಅವರ ಮಗ : ನಿರೀಕ್ಷಣಾ ಜಾಮೀನಿಗೆ ಅರ್ಜಿ

- Advertisement -
- Advertisement -

‘ಆಳಂದ ಮತಗಳ್ಳತನ’ ಪ್ರಕರಣ ಸಂಬಂಧ ಬಂಧನ ಭೀತಿಯಲ್ಲಿರುವ ಕ್ಷೇತ್ರದ ಮಾಜಿ ಶಾಸಕ ಹಾಗೂ ಬಿಜೆಪಿ ನಾಯಕ ಸುಭಾಷ್ ಗುತ್ತೇದಾರ್ ಮತ್ತು ಅವರ ಮಗ ಹರ್ಷಾ ಗುತ್ತೇದಾರ್ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ.

ಅಪ್ಪ-ಮಗ ಇಬ್ಬರೂ ಜಾಮೀನು ಕೋರಿ ಬುಧವಾರ (ಅ.29) ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವಿಶೇಷ ಸಾರ್ವಜನಿಕ ಅಭಿಯೋಜಕ ಅರ್ಜಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಸಮಯ ಕೋರಿದ್ದಾರೆ. ಹಾಗಾಗಿ, ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು ವಿಚಾರಣೆಯನ್ನು ಗುರುವಾರಕ್ಕೆ (ಅ.30) ಮುಂದೂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಹೇಳಿದೆ.

ನಕಲಿ ಫಾರ್ಮ್ 7ರ ಮೂಲಕ ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದ 6 ಸಾವಿರಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಪ್ರಯತ್ನಪಟ್ಟಿರುವುದು 2023ರ ವಿಧಾನಸಭಾ ಚುನಾವಣೆಗೆ ಮುನ್ನ ಬೆಳಕಿಗೆ ಬಂದಿತ್ತು.

ಈ ಸಂಬಂಧ ಆಳಂದದ ಆಗಿನ ಚುನಾವಣಾಧಿಕಾರಿ ಹಾಗೂ ಕಲಬುರಗಿಯ ಸಹಾಯಕ ಆಯುಕ್ತೆಯಾಗಿದ್ದ ಮಮತಾ ದೇವಿ ಅವರು 2023ರ ಫೆಬ್ರವರಿ 21ರಂದು ಆಳಂದ ಪೊಲೀಸರಿಗೆ ದೂರು ನೀಡಿದ್ದರು. ದೂರು ಆಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಆರಂಭದಲ್ಲಿ ಆಳಂದ ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದರು. ಬಳಿಕ ತನಿಖೆ ಸಿಐಡಿಗೆ ವರ್ಗಾವಣೆಯಾಗಿತ್ತು.

ಆರೋಪಿಗಳನ್ನು ಬಂಧಿಸಲು ಅಗತ್ಯವಾದ ನಿರ್ಣಾಯಕ ದತ್ತಾಂಶಗಳನ್ನು ಚುನಾವಣಾ ಆಯೋಗ ಸಿಐಡಿ ಜೊತೆ ಹಂಚಿಕೊಳ್ಳದ ಕಾರಣ ಪ್ರಕರಣ ಬಹುತೇಕ ಹಳ್ಳಹಿಡಿದಂತೆ ಕಾಣುತ್ತಿದೆ ಎಂದು ದಿ ಹಿಂದೂ ಪತ್ರಿಕೆ 2025ರ ಸೆಪ್ಟೆಂಬರ್ 7ರಂದು ವಿಸ್ತೃತ ವರದಿ ಪ್ರಕಟಿಸಿತ್ತು.

ಸೆಪ್ಟೆಂಬರ್ 18ರಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಳಂದ ಪ್ರಕರಣದ ದಾಖಲೆ ಬಿಡುಗಡೆ ಮಾಡಿದ್ದರು.

ಆ ಬಳಿಕ, ಆಳಂದ ಸೇರಿದಂತೆ ರಾಜ್ಯದಾದ್ಯಂತ ದಾಖಲಾಗಿರುವ ಮತ್ತು ಮುಂದೆ ದಾಖಲಾಗಲಿರುವ ಎಲ್ಲಾ ‘ಮತಗಳ್ಳತನ’ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ 2025ರ ಸೆಪ್ಟೆಂಬರ್ 20ರಂದು ರಾಜ್ಯ ಸರ್ಕಾರ ಆದೇಶಿಸಿತ್ತು.

2025ರ ಸೆಪ್ಟೆಂಬರ್ 26ರಂದು ಪ್ರಕರಣವನ್ನು ಸಿಐಡಿಯಿಂದ ಎಸ್‌ಐಟಿ ವಹಿಸಿಕೊಂಡಿದೆ. ಆ ಬಳಿಕ ಹಳ್ಳ ಹಿಡಿದಿದ್ದ ತನಿಖೆ ಚುರುಕುಗೊಂಡಿದೆ.

ಮತದಾರರ ಪಟ್ಟಿಯಿಂದ ಮತದಾರರ ಹೆಸರು ಅಳಿಸುವಂತೆ ನಕಲಿ ಫಾರ್ಮ್‌-7ರ ಮೂಲಕ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಲು ಪ್ರತಿ ಅರ್ಜಿಗೆ 80 ರೂಪಾಯಿಯನ್ನು ಡೇಟಾ ಸೆಂಟರ್ ಅಪರೇಟರ್‌ಗೆ ಪಾವತಿಸಲಾಗಿದೆ ಎಂಬುವುದು ಎಸ್‌ಐಟಿ ತನಿಖೆಯಿಂದ ಬಯಲಾಗಿದೆ.

ಡಿಸೆಂಬರ್ 2022ರಿಂದ ಫೆಬ್ರವರಿ 2023ರವರೆಗೆ ಕ್ಷೇತ್ರದ ಒಟ್ಟು 6,018 ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದು ಹಾಕಲು ನಕಲಿ ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಇದಕ್ಕಾಗಿ ಒಟ್ಟು 4.8 ಲಕ್ಷ ರೂ. ಪಾವತಿಸಲಾಗಿದೆ ಎಂದು ಎಸ್‌ಐಟಿ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಎಸ್‌ಐಟಿ, ಕಳೆದ ವಾರ 2023ರಲ್ಲಿ ಕಾಂಗ್ರೆಸ್‌ನ ಬಿ. ಆರ್ ಪಾಟೀಲ್ ವಿರುದ್ಧ ಸೋತಿದ್ದ ಬಿಜೆಪಿ ನಾಯಕ, ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿ, ಪರಿಶೀಲನೆ ಕೈಗೊಂಡಿದೆ ಎಂದು ವರದಿಯಾಗಿದೆ.

ಮತದಾರರ ಹೆಸರುಗಳನ್ನು ಪಟ್ಟಿಯಿಂದ ಅಳಿಸಲು ಕಲಬುರಗಿಯ ಕೇಂದ್ರ ಸ್ಥಾನದಲ್ಲಿರುವ ಒಂದು ಡೇಟಾ ಸೆಂಟರ್‌ನಿಂದ ನಕಲಿ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂಬುವುದನ್ನು ಎಸ್‌ಐಟಿ ಪತ್ತೆ ಮಾಡಿದೆ. ಸ್ಥಳೀಯ ನಿವಾಸಿ ಮೊಹಮ್ಮದ್ ಅಶ್ಫಾಕ್ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂಬ ಸೂಚನೆಗಳು ಎಸ್‌ಐಟಿ ತನಿಖೆಯಲ್ಲಿ ಕಂಡುಬಂದಿವೆ.

ಇದೀಗ, ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮತ್ತು ಅವರ ಮಗ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರ್ಷ ಗುತ್ತೇದಾರ್‌ಗೆ ಎಸ್‌ಐಟಿ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ. ಇದರಿಂದ ಬಂಧನ ಭೀತಿಯಲ್ಲಿರುವ ಅವರು ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ.

ಕನೇರಿ ಸ್ವಾಮಿಗೆ ಸುಪ್ರೀಂ ಛೀಮಾರಿ: “ನಿಮ್ಮನ್ನು ಗಡಿಪಾರು ಮಾಡಲೂ ಅಧಿಕಾರ ಇದೆ”.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...