Homeಮುಖಪುಟಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

- Advertisement -
- Advertisement -

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ (ಫೆ.22) ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಉಲ್ಲೇಖಿಸಿ ಜುಲ್ಲಿ ನೀಡಿರುವ ಹೇಳಿಕೆ ಪ್ರಕಾರ, ರಾಜಸ್ಥಾನದ ಟೋಂಕ್ ಜಿಲ್ಲೆಯ ನಿವಾಯ್ ತಾಲೂಕಿನ ಕರೇಡಾ ಗ್ರಾಮದಲ್ಲಿ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಮಹಿಳೆಯರಿಗೆ ಕಂಬಳಿ ವಿತರಿಸುತ್ತಿದ್ದರು. ಈ ವೇಳೆ ಕಂಬಳಿ ಪಡೆದ ಕೆಲ ಮಹಿಳೆಯ ಮುಸ್ಲಿಮರು ಎಂದು ಗೊತ್ತಾಗಿದೆ. ಹಾಗಾಗಿ, ಅವರನ್ನು ಅಮಾನಿಸಿದ ಜೌನ್‌ಪುರಿಯಾ, ಕೊಟ್ಟಿದ್ದ ಕಂಬಳಿಯನ್ನು ವಾಪಸ್ ಪಡೆದು ಸ್ಥಳದಿಂದ ತೆರಳುವಂತೆ ಸೂಚಿಸಿದ್ದಾರೆ.

ಮಾಜಿ ಸಂಸದರೊಬ್ಬರು ಬಡ ಮಹಿಳೆಗೆ ಅವರ ಧರ್ಮ ಕೇಳಿ ಕೊಟ್ಟ ಕಂಬಳಿಯನ್ನು ವಾಪಸ್ ತೆಗೆದುಕೊಂಡಿರುವುದು ಅತ್ಯಂತ ಖಂಡನೀಯ ಎಂದು ಟಿಕರಾಮ್ ಜುಲ್ಲಿ ಹೇಳಿದ್ದಾರೆ.

ಮಾಜಿ ಸಂಸದರ ವರ್ತನೆಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದಾಗ, ಅವರಿಗೆ ಬೆದರಿಕೆ ಹಾಕಿದ್ದಾರೆ. ಈ ತಾರತಮ್ಯವನ್ನು ಗ್ರಾಮಸ್ಥರು ತೀವ್ರವಾಗಿ ಆಕ್ಷೇಪಿಸಿದ್ದಾರೆ. ಸಂಸದರಂತಹ ಹುದ್ದೆಯನ್ನು ಅಲಂಕರಿಸಿದ್ದ ಸಾರ್ವಜನಿಕ ಪ್ರತಿನಿಧಿಯೊಬ್ಬರು ಈ ರೀತಿ ವರ್ತಿಸುವುದು ಖಂಡನೀಯ ಎಂದಿದ್ದಾರೆ.

ಸ್ಥಳೀಯರ ಪ್ರಕಾರ, ಭಾನುವಾರ ಮಧ್ಯಾಹ್ನ ಕಂಬಳಿ ವಿತರಣಾ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ. ಮೊದಲು ಸೇರಿದ್ದ ಎಲ್ಲಾ ಮಹಿಳೆಯರಿಗೆ ಸುಖ್‌ಬೀರ್ ಸಿಂಗ್ ಕಂಬಳಿ ವಿತರಿಸಿದ್ದರು. ನಂತರ ಅವರಲ್ಲಿ ಕೆಲವರು ಮುಸ್ಲಿಮರು ಎಂದು ತಿಳಿದು ವಾಪಸ್ ಪಡೆದಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ವೈರಲ್ ವಿಡಿಯೋದಲ್ಲಿ, “ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವವರಿಗೆ ಕಂಬಳಿ ಪಡೆಯುವ ಹಕ್ಕಿಲ್ಲ” ಎಂದು ಜೌನ್‌ಪುರಿಯಾ ಹೇಳಿರುವುದು ಕೇಳಿ ಬಂದಿದೆ.

ಇದು ಸರ್ಕಾರಿ ಯೋಜನೆಯಲ್ಲ, ಬದಲಾಗಿ ತಮ್ಮ ಸ್ವಂತ ಹಣದಿಂದ ಮಾಡುತ್ತಿರುವ ವೈಯಕ್ತಿಕ ಕಾರ್ಯಕ್ರಮ ಎಂದು ಅವರು ತಮ್ಮ ನಡೆಯನ್ನು ಜೌನ್‌ಪುರಿಯಾ ಸಮರ್ಥಿಸಿಕೊಂಡಿದ್ದಾರೆ. 

ವೈರಲ್ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ, “ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು ಟೋಂಕ್‌ನಲ್ಲಿ ಕಂಬಳಿ ಹಂಚುತ್ತಿದ್ದರು. ಈ ವೇಳೆ ಅವರು ಬಡ ಮುಸ್ಲಿಂ ಮಹಿಳೆಯರನ್ನು ಅವಮಾನಿಸಿ, ಅವರಿಂದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ. ವಾಸ್ತವವಾಗಿ, ಸಂಕುಚಿತ ಮತ್ತು ಅಸಹ್ಯಕರ ಮನಸ್ಥಿತಿಯ ಈ ಮನುಷ್ಯನೇ ಹೃದಯ ಮತ್ತು ಆಲೋಚನೆಗಳಲ್ಲಿ ನಿಜವಾದ ಬಡವನಾಗಿದ್ದಾನೆ. ಜನರು ಪ್ರತಿಭಟಿಸಿ ಸರಿಯಾದ ಕೆಲಸವನ್ನೇ ಮಾಡಿದ್ದಾರೆ; ಅವರು ಆ ಕಂಬಳಿಯನ್ನು ಅವನ ಮುಖಕ್ಕೇ ಎಸೆಯಬೇಕಿತ್ತು” ಬರೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...