Homeಮುಖಪುಟಚುನಾವಣಾ ಬಾಂಡ್‌ ಕುರಿತ ಮಾಹಿತಿ ಬಿಡುಗಡೆಗೆ SBIಗೆ ನಿರ್ದೇಶಿಸಿ: ಆಯೋಗಕ್ಕೆ ಪತ್ರ ಬರೆದ ಮಾಜಿ ಅಧಿಕಾರಿಗಳ...

ಚುನಾವಣಾ ಬಾಂಡ್‌ ಕುರಿತ ಮಾಹಿತಿ ಬಿಡುಗಡೆಗೆ SBIಗೆ ನಿರ್ದೇಶಿಸಿ: ಆಯೋಗಕ್ಕೆ ಪತ್ರ ಬರೆದ ಮಾಜಿ ಅಧಿಕಾರಿಗಳ ತಂಡ

- Advertisement -
- Advertisement -

ಚುನಾವಣಾ ಬಾಂಡ್‌ಗಳ ಕುರಿತ ವಿವರಗಳನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಭಾರತೀಯ ಸ್ಟೇಟ್ ಬ್ಯಾಂಕ್‌ಗೆ ನಿರ್ದೇಶಿಸುವಂತೆ ಸಾಂವಿಧಾನಿಕ ನಡವಳಿಕೆ ಗುಂಪಿನ (ಸಿಸಿಜಿ) 79 ಮಾಜಿ ನಾಗರಿಕ ಸೇವಾಧಿಕಾರಿಗಳು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಮಾರ್ಚ್ 4ರಂದು SBI ಚುನಾವಣಾ ಬಾಂಡ್‌ ಕುರಿತ ಡೇಟಾವನ್ನು ನೀಡಲು ಮಾರ್ಚ್ 6ರ ಗಡುವಿನ ಬದಲಿಗೆ ಜೂನ್ 30ರವರೆಗೆ ಕಾಲಾವಕಾಶವನ್ನು ವಿಸ್ತರಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಇದಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿತ್ತು.

ಪತ್ರದಲ್ಲೇನಿದೆ?

ನಮ್ಮದು ಕೇಂದ್ರ ಮತ್ತು ವಿವಿಧ ರಾಜ್ಯಗಳಲ್ಲಿ ಕೆಲಸ ಮಾಡಿದ ಅಖಿಲ ಭಾರತೀಯ ಮಾಜಿ ನಾಗರಿಕ ಸೇವಾಧಿಕಾರಿಗಳ ಗುಂಪಾಗಿದೆ. ನಾವು ಯಾವುದೇ ರಾಜಕೀಯ ಪಕ್ಷದೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ ಆದರೆ ನಿಷ್ಪಕ್ಷಪಾತ, ತಟಸ್ಥತೆ ಮತ್ತು ಭಾರತದ ಸಂವಿಧಾನಕ್ಕೆ ಬದ್ಧರಾಗಿದ್ದೇವೆ.

ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ಸಲ್ಲಿಸುವ ಸಮಯವನ್ನು ಜೂನ್ 30, 2024 ರವರೆಗೆ ವಿಸ್ತರಿಸಲು ಭಾರತೀಯ ಸ್ಟೇಟ್ ಬ್ಯಾಂಕ್ (SBI) ಸುಪ್ರೀಂ ಕೋರ್ಟ್‌ಗೆ (SCI) ಮಾಡಿದ ಅಸಾಮಾನ್ಯ ವಿನಂತಿಯನ್ನು ಉಲ್ಲೇಖಿಸಿ ನಾವು ನಿಮಗೆ ಪತ್ರ ಬರೆಯುತ್ತಿದ್ದೇವೆ. ಮಾರ್ಚ್ 6ರೊಳಗೆ ಡೇಟಾವನ್ನು ಸಾರ್ವಜನಿಕಗೊಳಿಸುವ ಸ್ಥಿತಿಯಲ್ಲಿಲ್ಲ ಎಂದು ಮಾರ್ಚ್ 4ರಂದು ನ್ಯಾಯಾಲಯಕ್ಕೆ ತಿಳಿಸಲು ಎಸ್‌ಬಿಐ 17 ದಿನಗಳನ್ನು ತೆಗೆದುಕೊಂಡಿದೆ ಎಂಬುದನ್ನು ನಾವು ನಿರಾಶೆಯಿಂದ ಗಮನಿಸುತ್ತೇವೆ. 48 ಕೋಟಿ ಖಾತೆಗಳನ್ನು ಹೊಂದಿರುವ ಮತ್ತು ಉನ್ನತ ಮಟ್ಟದ ಡಿಜಿಟಲೀಕರಣ ವ್ಯವಸ್ಥೆ ಇರುವ ಭಾರತದ ಅತಿದೊಡ್ಡ ಬ್ಯಾಂಕ್‌ಗೆ, ದಾಖಲೆಗಳನ್ನು ಚುನಾವಣಾ ಬಾಂಡ್‌ ಕುರಿತ ಮಾಹಿತಿ ನೀಡಲು ಸಮಯಾವಕಾಶ ಕೋರಿರುವುದು ಕರುಣಾಜನಕ ಸ್ಥಿತಿಯಾಗಿದೆ. ಅಖಿಲ ಭಾರತ ಬ್ಯಾಂಕಿಂಗ್ ಅಧಿಕಾರಿಗಳ ಒಕ್ಕೂಟದ ಮಾಜಿ ಪ್ರಧಾನ ಕಾರ್ಯದರ್ಶಿ ಥಾಮಸ್ ಫ್ರಾಂಕೋ, ಚುನಾವಣಾ ಬಾಂಡ್ ಯೋಜನೆಗಾಗಿ ಐಟಿ ವ್ಯವಸ್ಥೆಗಳ ಅಭಿವೃದ್ಧಿಗಾಗಿ ಎಸ್‌ಬಿಐ 2018ರ ಜೂನ್‌ನಲ್ಲಿ ಪತ್ರದ ಮೂಲಕ ಭಾರತ ಸರ್ಕಾರಕ್ಕೆ 60 ಲಕ್ಷ ರೂ.ಬೇಡಿಕೆ ಇಟ್ಟಿದೆ ಎಂಬುವುದನ್ನು ಉಲ್ಲೇಖಿಸಿದ್ದಾರೆ. ಇದಲ್ಲದೆ  ಫ್ರಾಂಕೊ ಅವರು ಕೇವಲ ಆರು ದಿನಗಳ ಅವಧಿಯಲ್ಲಿ ಆರು ವರ್ಷಗಳಲ್ಲಿ ಮಾರಾಟವಾದ ಬಾಂಡ್‌ಗಳ ವಿವರಗಳನ್ನು ನೀಡುವ ಆರ್‌ಟಿಐ ಉತ್ತರವನ್ನು ಸಹ ಪ್ರಕಟಿಸಿದ್ದಾರೆ. ಯೋಜನೆಯ ಅಂತಿಮಗೊಳಿಸುವಿಕೆಯ ಸಮಯದಲ್ಲಿ ಹಣಕಾಸು ಕಾರ್ಯದರ್ಶಿ ಸುಭಾಷ್ ಚಂದ್ರ ಗಾರ್ಗ್ ಅವರು ಸಂದರ್ಶನಗಳಲ್ಲಿ ಕೋರಿದ ಮಾಹಿತಿಯನ್ನು ಪಡೆಯಲು ಹತ್ತು ನಿಮಿಷಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳಬಾರದು ಎಂದು ಹೇಳಿದ್ದಾರೆ. ಎಸ್‌ಬಿಐಯ ಸಮಯದ ಬೇಡಿಕೆಯು ಸಂಪೂರ್ಣವಾಗಿ ನ್ಯಾಯಸಮ್ಮತವಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಅಸಂವಿಧಾನಿಕ ಎಂದು ಪತ್ರದಲ್ಲಿ ಹೇಳಲಾಗಿದ್ದು, ರಾಜಕೀಯ ಪಕ್ಷಗಳಿಗೆ ಧನಸಹಾಯ ಮಾಡುವ ಬಗ್ಗೆ ತಿಳಿದುಕೊಳ್ಳಲು ಭಾರತದ ನಾಗರಿಕರ ಮಾಹಿತಿಯ ಹಕ್ಕನ್ನು ಎಸ್‌ಸಿಐ ಉಲ್ಲೇಖಿಸಿದೆ. ಎಸ್‌ಬಿಐ ಈ ಮಾಹಿತಿಯನ್ನು ನಿರಾಕರಿಸುವುದು ಮತ್ತು ಸಾರ್ವತ್ರಿಕ ಚುನಾವಣೆಗೆ ಮೊದಲು ಸಾಧ್ಯವಿಲ್ಲ ಎಂದು ಸೂಚಿಸುವುದು, ಎಸ್‌ಬಿಐ ಅಧಿಕಾರದಲ್ಲಿರುವ ಸರ್ಕಾರವನ್ನು ರಕ್ಷಿಸುತ್ತಿದೆ ಎಂದು ಸೂಚಿಸುತ್ತದೆ. ನ್ಯೂಸ್‌ಲಾಂಡ್ರಿ ಮತ್ತು ನ್ಯೂಸ್ ಮಿನಿಟ್ ಎಂಬ ಮಾಧ್ಯಮ ಪೋರ್ಟಲ್‌ಗಳು ಈಗಾಗಲೇ ಮೂವತ್ತು ಕಾರ್ಪೊರೇಟ್‌ಗಳು  ಹಿಂದಿನ ಐದು ವರ್ಷಗಳಲ್ಲಿ ಸುಮಾರು 335 ಕೋಟಿ ರೂಪಾಯಿ ಮೌಲ್ಯದ ಬಾಂಡ್‌ಗಳ ಖರೀದಿಯನ್ನು ಮಾಡಿರುವುದರ ಕುರಿತು ಸುದ್ದಿ ಪ್ರಕಟಿಸಿದೆ. ECI ಮಾರ್ಚ್ 27ರೊಳಗೆ ಅಥವಾ ಅದಕ್ಕಿಂತ ಮುಂಚೆಯೇ ವೇಳಾಪಟ್ಟಿಯನ್ನು ಪ್ರಕಟಿಸಬಹುದು. ಚುನಾವಣೆಯ ಘೋಷಣೆಗೂ ಮುನ್ನವೇ ಎಸ್‌ಬಿಐ ಚುನಾವಣಾ ಬಾಂಡ್‌ಗಳ ಡೇಟಾವನ್ನು ನೀಡಬೇಕು. ಸಂವಿಧಾನದ 324ನೇ ವಿಧಿಯ ಅಡಿಯಲ್ಲಿ ತನ್ನ ಅಧಿಕಾರವನ್ನು ಬಳಸಿಕೊಂಡು ತನ್ನ ಖ್ಯಾತಿಯನ್ನು ಮತ್ತು ಅದರ ಸಮಗ್ರತೆಯನ್ನು ಮರಳಿ ಪಡೆಯಲು ಇಸಿಐಗೆ ಇದು ಒಂದು ಅವಕಾಶವಾಗಿದೆ. ತಕ್ಷಣವೇ ಮಾಹಿತಿಯನ್ನು ಬಿಡುಗಡೆ ಮಾಡಲು ಎಸ್‌ಬಿಐಗೆ ನಿರ್ದೇಶಿಸಬೇಕು. ಎಸ್‌ಬಿಐ ಈ ಮಾಹಿತಿಯನ್ನು ಒದಗಿಸುವವರೆಗೆ 2024ರ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸುವುದಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಬೇಕು. ECI ಮೌನವಾಗಿದ್ದರೆ, ಭಾರತೀಯ ಮತದಾರರ ಮಾಹಿತಿಯ ಹಕ್ಕನ್ನು ಗೌರವಿಸುವ ಮತ್ತು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸುವ ತನ್ನ ಸಾಂವಿಧಾನಿಕ ಬದ್ಧತೆಗೆ ಅಡ್ಡಿಯಾಗಲಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿ: ಸುಧಾಮೂರ್ತಿ ‘ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯ ಮಾಡುತ್ತಿದ್ದಾರೆ’ ಎಂದಿದ್ದ RSS ನಂಟಿನ ಮ್ಯಾಗ್‌ಝಿನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...