Homeಮುಖಪುಟಅಧಿವೇಶನದಲ್ಲಿ ಸಿರಾಜ್ ಬಿಸ್ರಳ್ಳಿಯವರ ಕವನ ಓದಿದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ.. ಬಂಧನಕ್ಕೆ ತೀವ್ರ ವಿರೋಧ

ಅಧಿವೇಶನದಲ್ಲಿ ಸಿರಾಜ್ ಬಿಸ್ರಳ್ಳಿಯವರ ಕವನ ಓದಿದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ.. ಬಂಧನಕ್ಕೆ ತೀವ್ರ ವಿರೋಧ

- Advertisement -
- Advertisement -

ಕವಿತೆ ಓದಿದ್ದಕ್ಕೆ ಸಿರಾಜ್ ಬಿಸ್ರಳ್ಳಿಯವರನ್ನು ಬಂಧಿಸಿರುವ ಕ್ರಮವನ್ನು ತೀವ್ರವಾಗಿ ಟೀಕಿಸಿದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿಯವರು ಅದೇ ಕವನವನ್ನು ವಿಧಾನಸಭಾ ಅಧಿವೇಶನದಲ್ಲಿ ಓದಿದ್ದಾರೆ.

ಈ ಕವನದಲ್ಲಿ ದೂರು ದಾಖಲಿಸುವಂತದ್ದು ಏನಿದೆ ಎಂದು ಕಿಡಿಕಾರಿದ ಅವರು ಈ ಹಿಂದೆ ನಿಸಾರ್ ಅಹಮದ್ ರವರು ಕುರಿಗಳು ಸಾರ್ ಕುರಿಗಳು ಎಂಬ ಹಾಡು ಬರೆದಿದ್ದು ನಮ್ಮಂತ ರಾಜಕಾರಣಿಗಳ ಮೇಲಲ್ಲವೇ? ಗೋಪಾಲಕೃಷ್ಣ ಅಡಿಗರು ಸರ್ಕಾರವನ್ನು ಟೀಕಿಸಿ ಬರೆದಿರಲ್ಲಿಲ್ಲವೇ? ಅವರನ್ನು ಬಂಧಿಸಲಾಗಿತ್ತೆ ಎಂದು ಪ್ರಶ್ನಿಸಿದ್ದಾರೆ.

ಸಿರಾಜ್ ರವರು ಆನೆಗೊಂದಿ ಉತ್ಸವದಲ್ಲಿ ಓದಿದ್ದ ಕವಿದೆ ಇದು.

ನಿನ್ನ ದಾಖಲೆ ಯಾವಾಗ ನೀಡುತ್ತಿ?

ಆಧಾರು, ರೇಷನ್ ಕಾರ್ಡಗಳ ಕ್ಯೂನಲ್ಲಿ
ಥಂಬಿನ, ಸರ್ವರಿನ ಮಂಗನಾಟದಲ್ಲಿ
ಬದುಕ ಕಳೆದುಕೊಳ್ಳು ತ್ತಿರುವವರ ದಾಖಲೆ
ಕೇಳುವವನೇ ನಿನ್ನ ದಾಖಲೆ ಯಾವಾಗ ನೀಡುತ್ತಿ?

ನಾಡಿನ ಸ್ವಾತಂತ್ರ್ಯಕ್ಕಾಗಿ ನಗುನಗುತ್ತಲೇ ನೇಣಿಗೇರಿದವರ ,
ಹೆಸರೂ ಬೇಡವೆಂದು ಹುತಾತ್ಮರಾದವರ
ಇತಿಹಾಸದ ಹಾಳೆಗಳ ಹರಿಯುತ್ತಿರುವವನೇ
ನಿನ್ನ ದಾಖಲೆ ಯಾವಾಗ ನೀಡುತ್ತಿ.?

ತಾಜ್ ಮಹಲ್, ಚಾರ್ ಮಿನಾರು ಗುಂಬಜಗಳಿಗೆ
ಕೆಂಪು ಕೋಟೆ ಕುತುಬ್ ಮಿನಾರುಗಳಿಗೆ ಸಾಕ್ಷಿ ಕೇಳುತ್ತಿರುವವನೇ
ನಿನ್ನ ದಾಖಲೆ ಯಾವಾಗ ನೀಡುತ್ತಿ?

ಬ್ರಿಟಿಷರ ಬೂಟು ನೆಕ್ಕಿದ ತಲೆಹಿಡುಕರ
ಧರ್ಮ ದ್ವೇಷದ ಅಮಲಿನಲ್ಲಿ ರಕ್ತ ಕುಡಿಯುತ್ತಿರುವ
ಗೊಬೆಲ್ ಸಂತತಿಯವನೇ
ನಿನ್ನ ದಾಖಲೆ ಯಾವಾಗ ನೀಡುತ್ತಿ?

ಪಕೋಡ ಮಾರಿ ಬದುಕಿದವನು
ಚಾ ಮಾರಿ ಬದುಕಿದವನು ನನ್ನೂರಿನಲ್ಲಿ
ಮನುಷ್ಯತ್ವ ಮಾರಿಕೊಂಡಿಲ್ಲ
ಸ್ವಾಭಿಮಾನ ಮಾರಿಕೊಂಡಿಲ್ಲ,
ಸುಳ್ಳಿನ ಕಂತೆಗಳ ಕತೆ ಕಟ್ಟಿಲ್ಲ
ಹೇಳು ನಿನ್ನ ದಾಖಲೆಗಳ ಯಾವಾಗ ನೀಡುತ್ತಿ ?

ಮುಳ್ಳು ಚುಚ್ಚಿ, ಹರಿದು, ಸಿಡಿದು ಹೋದ
ಟ್ಯೂಬುಗಳ, ಟೈಯರುಗಳ ತಿದ್ದಿ ತೀಡಿ ಗಾಳಿ ತುಂಬಿದ
ಪಂಚರ್ ನವನು ತನ್ನತನವನ್ನು ಮಾರಿಕೊಳ್ಳಲಿಲ್ಲ
ನೀನು ದೇಶವನ್ನೇ ಮಾರಿಬಿಟ್ಟೆಯಲ್ಲ
ಹೇಳು ನಿನ್ನ ದಾಖಲೆಗಳ ಯಾವಾಗ ನೀಡುತ್ತಿ ?

ದೇಶವನ್ನೇ ಯಾಮಾರಿಸಿದ ನಿನಗೆ
ನಕಲಿ ದಾಖಲೆಗಳು ದೊಡ್ಡದಲ್ಲ ಬಿಡು
ಕನಿಷ್ಟ ಮನುಷ್ಯತ್ವವೂ ನಿನಗಿದೆ
ಎನ್ನುವ ದಾಖಲೆ ಯಾವಾಗ ನೀಡುತ್ತಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...