Homeಮುಖಪುಟಅಧಿವೇಶನದಲ್ಲಿ ಸಿರಾಜ್ ಬಿಸ್ರಳ್ಳಿಯವರ ಕವನ ಓದಿದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ.. ಬಂಧನಕ್ಕೆ ತೀವ್ರ ವಿರೋಧ

ಅಧಿವೇಶನದಲ್ಲಿ ಸಿರಾಜ್ ಬಿಸ್ರಳ್ಳಿಯವರ ಕವನ ಓದಿದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ.. ಬಂಧನಕ್ಕೆ ತೀವ್ರ ವಿರೋಧ

- Advertisement -
- Advertisement -

ಕವಿತೆ ಓದಿದ್ದಕ್ಕೆ ಸಿರಾಜ್ ಬಿಸ್ರಳ್ಳಿಯವರನ್ನು ಬಂಧಿಸಿರುವ ಕ್ರಮವನ್ನು ತೀವ್ರವಾಗಿ ಟೀಕಿಸಿದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿಯವರು ಅದೇ ಕವನವನ್ನು ವಿಧಾನಸಭಾ ಅಧಿವೇಶನದಲ್ಲಿ ಓದಿದ್ದಾರೆ.

ಈ ಕವನದಲ್ಲಿ ದೂರು ದಾಖಲಿಸುವಂತದ್ದು ಏನಿದೆ ಎಂದು ಕಿಡಿಕಾರಿದ ಅವರು ಈ ಹಿಂದೆ ನಿಸಾರ್ ಅಹಮದ್ ರವರು ಕುರಿಗಳು ಸಾರ್ ಕುರಿಗಳು ಎಂಬ ಹಾಡು ಬರೆದಿದ್ದು ನಮ್ಮಂತ ರಾಜಕಾರಣಿಗಳ ಮೇಲಲ್ಲವೇ? ಗೋಪಾಲಕೃಷ್ಣ ಅಡಿಗರು ಸರ್ಕಾರವನ್ನು ಟೀಕಿಸಿ ಬರೆದಿರಲ್ಲಿಲ್ಲವೇ? ಅವರನ್ನು ಬಂಧಿಸಲಾಗಿತ್ತೆ ಎಂದು ಪ್ರಶ್ನಿಸಿದ್ದಾರೆ.

ಸಿರಾಜ್ ರವರು ಆನೆಗೊಂದಿ ಉತ್ಸವದಲ್ಲಿ ಓದಿದ್ದ ಕವಿದೆ ಇದು.

ನಿನ್ನ ದಾಖಲೆ ಯಾವಾಗ ನೀಡುತ್ತಿ?

ಆಧಾರು, ರೇಷನ್ ಕಾರ್ಡಗಳ ಕ್ಯೂನಲ್ಲಿ
ಥಂಬಿನ, ಸರ್ವರಿನ ಮಂಗನಾಟದಲ್ಲಿ
ಬದುಕ ಕಳೆದುಕೊಳ್ಳು ತ್ತಿರುವವರ ದಾಖಲೆ
ಕೇಳುವವನೇ ನಿನ್ನ ದಾಖಲೆ ಯಾವಾಗ ನೀಡುತ್ತಿ?

ನಾಡಿನ ಸ್ವಾತಂತ್ರ್ಯಕ್ಕಾಗಿ ನಗುನಗುತ್ತಲೇ ನೇಣಿಗೇರಿದವರ ,
ಹೆಸರೂ ಬೇಡವೆಂದು ಹುತಾತ್ಮರಾದವರ
ಇತಿಹಾಸದ ಹಾಳೆಗಳ ಹರಿಯುತ್ತಿರುವವನೇ
ನಿನ್ನ ದಾಖಲೆ ಯಾವಾಗ ನೀಡುತ್ತಿ.?

ತಾಜ್ ಮಹಲ್, ಚಾರ್ ಮಿನಾರು ಗುಂಬಜಗಳಿಗೆ
ಕೆಂಪು ಕೋಟೆ ಕುತುಬ್ ಮಿನಾರುಗಳಿಗೆ ಸಾಕ್ಷಿ ಕೇಳುತ್ತಿರುವವನೇ
ನಿನ್ನ ದಾಖಲೆ ಯಾವಾಗ ನೀಡುತ್ತಿ?

ಬ್ರಿಟಿಷರ ಬೂಟು ನೆಕ್ಕಿದ ತಲೆಹಿಡುಕರ
ಧರ್ಮ ದ್ವೇಷದ ಅಮಲಿನಲ್ಲಿ ರಕ್ತ ಕುಡಿಯುತ್ತಿರುವ
ಗೊಬೆಲ್ ಸಂತತಿಯವನೇ
ನಿನ್ನ ದಾಖಲೆ ಯಾವಾಗ ನೀಡುತ್ತಿ?

ಪಕೋಡ ಮಾರಿ ಬದುಕಿದವನು
ಚಾ ಮಾರಿ ಬದುಕಿದವನು ನನ್ನೂರಿನಲ್ಲಿ
ಮನುಷ್ಯತ್ವ ಮಾರಿಕೊಂಡಿಲ್ಲ
ಸ್ವಾಭಿಮಾನ ಮಾರಿಕೊಂಡಿಲ್ಲ,
ಸುಳ್ಳಿನ ಕಂತೆಗಳ ಕತೆ ಕಟ್ಟಿಲ್ಲ
ಹೇಳು ನಿನ್ನ ದಾಖಲೆಗಳ ಯಾವಾಗ ನೀಡುತ್ತಿ ?

ಮುಳ್ಳು ಚುಚ್ಚಿ, ಹರಿದು, ಸಿಡಿದು ಹೋದ
ಟ್ಯೂಬುಗಳ, ಟೈಯರುಗಳ ತಿದ್ದಿ ತೀಡಿ ಗಾಳಿ ತುಂಬಿದ
ಪಂಚರ್ ನವನು ತನ್ನತನವನ್ನು ಮಾರಿಕೊಳ್ಳಲಿಲ್ಲ
ನೀನು ದೇಶವನ್ನೇ ಮಾರಿಬಿಟ್ಟೆಯಲ್ಲ
ಹೇಳು ನಿನ್ನ ದಾಖಲೆಗಳ ಯಾವಾಗ ನೀಡುತ್ತಿ ?

ದೇಶವನ್ನೇ ಯಾಮಾರಿಸಿದ ನಿನಗೆ
ನಕಲಿ ದಾಖಲೆಗಳು ದೊಡ್ಡದಲ್ಲ ಬಿಡು
ಕನಿಷ್ಟ ಮನುಷ್ಯತ್ವವೂ ನಿನಗಿದೆ
ಎನ್ನುವ ದಾಖಲೆ ಯಾವಾಗ ನೀಡುತ್ತಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 294 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...