Homeಕರ್ನಾಟಕಎಚ್.ಡಿ.ಕುಮಾರಸ್ವಾಮಿ V/s ಸುಮಲತಾ: ರಾಜಕೀಯ ಕದನಕ್ಕೆ ವಿರಾಮ ನೀಡಲು ಎಚ್‌ಡಿಕೆ ನಿರ್ಧಾರ

ಎಚ್.ಡಿ.ಕುಮಾರಸ್ವಾಮಿ V/s ಸುಮಲತಾ: ರಾಜಕೀಯ ಕದನಕ್ಕೆ ವಿರಾಮ ನೀಡಲು ಎಚ್‌ಡಿಕೆ ನಿರ್ಧಾರ

- Advertisement -
- Advertisement -

ಮಂಡ್ಯದ ಕೆಆರ್‌ಎಸ್‌ ಅಣೆಕಟ್ಟೆ ಸಮೀಪದ‌ ಬೇಬಿ ಬೆಟ್ಟದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಗೆ ನಡೆಯುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಸಂಸದೆ ಸುಮಲತಾ ಅಂಬರೀಷ್‌ ನಡುವೆ ನಡೆಯುತ್ತಿದ್ದ ರಾಜಕೀಯ ಕದನಕ್ಕೆ ವಿರಾಮ ಬೀಳುವ ಕಾಲ ಬಂದಿದೆ.

ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜಕೀಯ ಕದನಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ್ದಾರೆ.

’ಕಾರ್ಯಕರ್ತ ಬಂಧುಗಳೇ, ಅಭಿಮಾನಿ ಅಣ್ಣ ತಮ್ಮಂದಿರೆ, ಅಕ್ಕ ತಂಗಿಯರೇ ನಾವು ಹೋರಾಟ ಮಾಡಬೇಕಾದ ವಿಚಾರ ಬಹಳಷ್ಟಿವೆ. ಕನ್ನಡ, ಕನ್ನಡಿಗ, ಕರ್ನಾಟಕಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಮಗೆ ಬಹುದೊಡ್ಡ ನ್ಯಾಯ ಸಿಗಬೇಕಿದೆ. ನನ್ನ ಹೋರಾಟವನ್ನು ಈಗಾಗಲೇ ಅತ್ತ ಕೇಂದ್ರೀಕರಿಸಿದ್ದೇನೆ. ನಾಡು ನುಡಿಗಾಗಿ ಹೋರಾಡೋಣ. ಬೇರೆಲ್ಲ ವಿಷಯಗಳನ್ನು ನಾವು ಉಪೇಕ್ಷಿಸೋಣ’ ಎಂದಿದ್ದಾರೆ.

ಇದನ್ನೂ ಓದಿ: ಸಿನಿಮಾ ರಂಗಕ್ಕೂ ಕಾಲಿಟ್ಟ ಸುಮಲತಾ, ಹೆಚ್‌ಡಿಕೆ ವಾಗ್ವಾದ; ಅಣೆಕಟ್ಟೆಯಲ್ಲಿ ಬಿರುಕಿಲ್ಲ ಎಂದ ಸರ್ಕಾರ!

’ಪ್ರಾದೇಶಿಕ ಪಕ್ಷವಾಗಿ ನಾವು ಮಾತಾಡುವುದಿದೆ, ಮಾತಾಡೋಣ. ಪ್ರಾದೇಶಿಕ ವಿಚಾರಗಳು ಇತ್ತೀಚೆಗೆ ಗೌಣವಾಗುತ್ತಿವೆ, ಅದರ ಬಗ್ಗೆ ಮಾತಾಡೋಣ. ಒಕ್ಕೂಟ ವ್ಯವಸ್ಥೆಯಲ್ಲಿ ನಮಗೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ನಾವು ದೊಡ್ಡದಾಗಿ ಕೂಗಿ ಹೇಳೋಣ. ಪ್ರಾದೇಶಿಕ ಅಸ್ಮಿತೆಯ ವಿಚಾರವನ್ನು ಜನರೊಂದಿಗೆ ಪ್ರಸ್ತಾಪಿಸೋಣ. ಆದರೆ, ಅನಗತ್ಯ ಮಾತು ಅನಗತ್ಯವಷ್ಟೆ’ ಎಂದಿದ್ದಾರೆ.

’ನಾವು ಸಿಡಿಯಬೇಕಾದ ಪರಿಸ್ಥಿತಿ ಇದೆ, ಸಿಡಿಯೋಣ. ಕಾವೇರಿ ಜಲದ ಯೋಜನೆಗಳಿಗೆ ತಡೆಯೊಡ್ಡುತ್ತಿರುವವರ ವಿರುದ್ಧ ಸಿಡಿಯೋಣ. ನಮ್ಮ ನೆಲದಲ್ಲಿ ನಮ್ಮ ಕನ್ನಡ ಧ್ವಜವನ್ನು ಹಾರಿಸಲು ಬಿಡಲೊಲ್ಲದ ಪಟ್ಟಭದ್ರರ ವಿರುದ್ಧ ಸಿಡಿಯೋಣ. ನಮಗೆ ನೀಡಬೇಕಾದ ಪರಿಹಾರ, ಅನುದಾನ ನೀಡದ ವ್ಯವಸ್ಥೆಯ ವಿರುದ್ಧ ಸಿಡಿಯ ಬೇಕಾಗಿದೆ ಸಿಡಿಯೋಣ. ಇದು ನಮ್ಮ ಆಯ್ಕೆಯಾಗಲಿ’ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

’ಕೋವಿಡ್‌ ಕಾಲದಲ್ಲಿ ಜೆಡಿಎಸ್‌ ರಾಜಕೀಯ ಮಾಡಲಿಲ್ಲ. ಆದರೆ, ಜನರ ಪರ ನಿಲ್ಲುವುದನ್ನು ಮರೆಯಲಿಲ್ಲ, ಸರ್ಕಾರವನ್ನು ಎಚ್ಚರಿಸದೇ ಇರಲಿಲ್ಲ. ಕರ್ನಾಟಕ, ಕನ್ನಡಿಗರಿಗೆ ಅಪಮಾನವಾದಾಗ ಸಿಡಿಯಲು ಒಂದು ಕ್ಷಣವೂ ತಡ ಮಾಡಿಲ್ಲ. ನಾವು ರಾಜಕೀಯ ಮಾಡೋಣ, ಕರ್ನಾಟಕ ಕೇಂದ್ರಿತ ರಾಜಕಾರಣ ಮಾಡೋಣ. ನಮ್ಮ ಮೇಲಿನ ಆರೋಪಗಳನ್ನು ಜನರ ತೀರ್ಮಾನಕ್ಕೆ ಬಿಡೋಣ’ ಎಂದು ಎಚ್‌ಡಿಕೆ ಕದನಕ್ಕೆ ವಿರಾಮ ಹಾಕುವ ನಿರ್ಧಾರಕ್ಕೆ ಬಂದಿದ್ದಾರೆ.

ಎಚ್‌ಡಿಕೆ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಸಂಸದೆ ಸುಮಲತಾ, ಈ ವಿಷಯವನ್ನು ಶುರು ಮಾಡಿದ್ದು ಅವರು. ಅಂತ್ಯ ಮಾಡುತ್ತೇನೆ ಅಂದರೆ ಸಂತೋಷ. ನಾನು ಯಾವತ್ತೂ ಇದನ್ನು ವಿವಾದ ಮಾಡಬೇಕು ಎಂದುಕೊಳ್ಳಲಿಲ್ಲ. ಇದರಲ್ಲಿ ಖಾಸಗಿ ವಿಷಯಗಳನ್ನು ತರಬೇಕು ಎಂಬ ಉದ್ದೇಶ ನನಗೆ ಇರಲಿಲ್ಲ’ ಎಂದಿದ್ದಾರೆ.


ಇದನ್ನೂ ಓದಿ: ಸಂಸದೆ ಸುಮಲತಾ ದಾಖಲೆ ನೀಡಿದರೆ ಅಕ್ರಮ ಗಣಿಗಾರಿಕೆಯ ತನಿಖೆ – ಮುರುಗೇಶ್ ನಿರಾಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಷ್ಟು ವರ್ಷಗಳ ಸಾರ್ವಜನಿಕ ಜೀವನದಲ್ಲಿ ಎಚ್ ಡಿಕೆ, ಟೀಕೆ ಮಾಡುವಾಗ ಭಾಷೆಯ ಬಳಕೆಯನ್ನೇ ತಿಳಿದಿಲ್ಲ ಎನ್ನುವುದು ನೋವಿನ ವಿಷಯ! ಭಾಷೆಯ ಬಳಕೆಯಲ್ಲಿ ತಾನು ಹಿಡಿತ ತಪ್ಪಿದೆ ಎಂದು ಹೇಳಿ ವಿಷಾದ ವ್ಯಕ್ತಪಡಿಸುವುದು ಅವಶ್ಯ ಮತ್ತು ರಾಜಕೀಯ ಹಿರಿತನಕ್ಕೆ ಶೋಭೆ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....