Homeಕರ್ನಾಟಕಎಚ್.ಡಿ.ಕುಮಾರಸ್ವಾಮಿ V/s ಸುಮಲತಾ: ರಾಜಕೀಯ ಕದನಕ್ಕೆ ವಿರಾಮ ನೀಡಲು ಎಚ್‌ಡಿಕೆ ನಿರ್ಧಾರ

ಎಚ್.ಡಿ.ಕುಮಾರಸ್ವಾಮಿ V/s ಸುಮಲತಾ: ರಾಜಕೀಯ ಕದನಕ್ಕೆ ವಿರಾಮ ನೀಡಲು ಎಚ್‌ಡಿಕೆ ನಿರ್ಧಾರ

- Advertisement -
- Advertisement -

ಮಂಡ್ಯದ ಕೆಆರ್‌ಎಸ್‌ ಅಣೆಕಟ್ಟೆ ಸಮೀಪದ‌ ಬೇಬಿ ಬೆಟ್ಟದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಗೆ ನಡೆಯುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಸಂಸದೆ ಸುಮಲತಾ ಅಂಬರೀಷ್‌ ನಡುವೆ ನಡೆಯುತ್ತಿದ್ದ ರಾಜಕೀಯ ಕದನಕ್ಕೆ ವಿರಾಮ ಬೀಳುವ ಕಾಲ ಬಂದಿದೆ.

ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜಕೀಯ ಕದನಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ್ದಾರೆ.

’ಕಾರ್ಯಕರ್ತ ಬಂಧುಗಳೇ, ಅಭಿಮಾನಿ ಅಣ್ಣ ತಮ್ಮಂದಿರೆ, ಅಕ್ಕ ತಂಗಿಯರೇ ನಾವು ಹೋರಾಟ ಮಾಡಬೇಕಾದ ವಿಚಾರ ಬಹಳಷ್ಟಿವೆ. ಕನ್ನಡ, ಕನ್ನಡಿಗ, ಕರ್ನಾಟಕಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಮಗೆ ಬಹುದೊಡ್ಡ ನ್ಯಾಯ ಸಿಗಬೇಕಿದೆ. ನನ್ನ ಹೋರಾಟವನ್ನು ಈಗಾಗಲೇ ಅತ್ತ ಕೇಂದ್ರೀಕರಿಸಿದ್ದೇನೆ. ನಾಡು ನುಡಿಗಾಗಿ ಹೋರಾಡೋಣ. ಬೇರೆಲ್ಲ ವಿಷಯಗಳನ್ನು ನಾವು ಉಪೇಕ್ಷಿಸೋಣ’ ಎಂದಿದ್ದಾರೆ.

ಇದನ್ನೂ ಓದಿ: ಸಿನಿಮಾ ರಂಗಕ್ಕೂ ಕಾಲಿಟ್ಟ ಸುಮಲತಾ, ಹೆಚ್‌ಡಿಕೆ ವಾಗ್ವಾದ; ಅಣೆಕಟ್ಟೆಯಲ್ಲಿ ಬಿರುಕಿಲ್ಲ ಎಂದ ಸರ್ಕಾರ!

’ಪ್ರಾದೇಶಿಕ ಪಕ್ಷವಾಗಿ ನಾವು ಮಾತಾಡುವುದಿದೆ, ಮಾತಾಡೋಣ. ಪ್ರಾದೇಶಿಕ ವಿಚಾರಗಳು ಇತ್ತೀಚೆಗೆ ಗೌಣವಾಗುತ್ತಿವೆ, ಅದರ ಬಗ್ಗೆ ಮಾತಾಡೋಣ. ಒಕ್ಕೂಟ ವ್ಯವಸ್ಥೆಯಲ್ಲಿ ನಮಗೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ನಾವು ದೊಡ್ಡದಾಗಿ ಕೂಗಿ ಹೇಳೋಣ. ಪ್ರಾದೇಶಿಕ ಅಸ್ಮಿತೆಯ ವಿಚಾರವನ್ನು ಜನರೊಂದಿಗೆ ಪ್ರಸ್ತಾಪಿಸೋಣ. ಆದರೆ, ಅನಗತ್ಯ ಮಾತು ಅನಗತ್ಯವಷ್ಟೆ’ ಎಂದಿದ್ದಾರೆ.

’ನಾವು ಸಿಡಿಯಬೇಕಾದ ಪರಿಸ್ಥಿತಿ ಇದೆ, ಸಿಡಿಯೋಣ. ಕಾವೇರಿ ಜಲದ ಯೋಜನೆಗಳಿಗೆ ತಡೆಯೊಡ್ಡುತ್ತಿರುವವರ ವಿರುದ್ಧ ಸಿಡಿಯೋಣ. ನಮ್ಮ ನೆಲದಲ್ಲಿ ನಮ್ಮ ಕನ್ನಡ ಧ್ವಜವನ್ನು ಹಾರಿಸಲು ಬಿಡಲೊಲ್ಲದ ಪಟ್ಟಭದ್ರರ ವಿರುದ್ಧ ಸಿಡಿಯೋಣ. ನಮಗೆ ನೀಡಬೇಕಾದ ಪರಿಹಾರ, ಅನುದಾನ ನೀಡದ ವ್ಯವಸ್ಥೆಯ ವಿರುದ್ಧ ಸಿಡಿಯ ಬೇಕಾಗಿದೆ ಸಿಡಿಯೋಣ. ಇದು ನಮ್ಮ ಆಯ್ಕೆಯಾಗಲಿ’ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

’ಕೋವಿಡ್‌ ಕಾಲದಲ್ಲಿ ಜೆಡಿಎಸ್‌ ರಾಜಕೀಯ ಮಾಡಲಿಲ್ಲ. ಆದರೆ, ಜನರ ಪರ ನಿಲ್ಲುವುದನ್ನು ಮರೆಯಲಿಲ್ಲ, ಸರ್ಕಾರವನ್ನು ಎಚ್ಚರಿಸದೇ ಇರಲಿಲ್ಲ. ಕರ್ನಾಟಕ, ಕನ್ನಡಿಗರಿಗೆ ಅಪಮಾನವಾದಾಗ ಸಿಡಿಯಲು ಒಂದು ಕ್ಷಣವೂ ತಡ ಮಾಡಿಲ್ಲ. ನಾವು ರಾಜಕೀಯ ಮಾಡೋಣ, ಕರ್ನಾಟಕ ಕೇಂದ್ರಿತ ರಾಜಕಾರಣ ಮಾಡೋಣ. ನಮ್ಮ ಮೇಲಿನ ಆರೋಪಗಳನ್ನು ಜನರ ತೀರ್ಮಾನಕ್ಕೆ ಬಿಡೋಣ’ ಎಂದು ಎಚ್‌ಡಿಕೆ ಕದನಕ್ಕೆ ವಿರಾಮ ಹಾಕುವ ನಿರ್ಧಾರಕ್ಕೆ ಬಂದಿದ್ದಾರೆ.

ಎಚ್‌ಡಿಕೆ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಸಂಸದೆ ಸುಮಲತಾ, ಈ ವಿಷಯವನ್ನು ಶುರು ಮಾಡಿದ್ದು ಅವರು. ಅಂತ್ಯ ಮಾಡುತ್ತೇನೆ ಅಂದರೆ ಸಂತೋಷ. ನಾನು ಯಾವತ್ತೂ ಇದನ್ನು ವಿವಾದ ಮಾಡಬೇಕು ಎಂದುಕೊಳ್ಳಲಿಲ್ಲ. ಇದರಲ್ಲಿ ಖಾಸಗಿ ವಿಷಯಗಳನ್ನು ತರಬೇಕು ಎಂಬ ಉದ್ದೇಶ ನನಗೆ ಇರಲಿಲ್ಲ’ ಎಂದಿದ್ದಾರೆ.


ಇದನ್ನೂ ಓದಿ: ಸಂಸದೆ ಸುಮಲತಾ ದಾಖಲೆ ನೀಡಿದರೆ ಅಕ್ರಮ ಗಣಿಗಾರಿಕೆಯ ತನಿಖೆ – ಮುರುಗೇಶ್ ನಿರಾಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಷ್ಟು ವರ್ಷಗಳ ಸಾರ್ವಜನಿಕ ಜೀವನದಲ್ಲಿ ಎಚ್ ಡಿಕೆ, ಟೀಕೆ ಮಾಡುವಾಗ ಭಾಷೆಯ ಬಳಕೆಯನ್ನೇ ತಿಳಿದಿಲ್ಲ ಎನ್ನುವುದು ನೋವಿನ ವಿಷಯ! ಭಾಷೆಯ ಬಳಕೆಯಲ್ಲಿ ತಾನು ಹಿಡಿತ ತಪ್ಪಿದೆ ಎಂದು ಹೇಳಿ ವಿಷಾದ ವ್ಯಕ್ತಪಡಿಸುವುದು ಅವಶ್ಯ ಮತ್ತು ರಾಜಕೀಯ ಹಿರಿತನಕ್ಕೆ ಶೋಭೆ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...