Homeಮುಖಪುಟಬೀದರ್‌ನ ಶಾಹಿನ್ ಶಾಲೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ..

ಬೀದರ್‌ನ ಶಾಹಿನ್ ಶಾಲೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ..

- Advertisement -
- Advertisement -

ಸಿಎಎ ವಿರುದ್ಧದ ನಾಟಕವಾಡಿಸಿದ ಕಾರಣಕ್ಕೆ ವಿವಾದದಲ್ಲಿರುವ ಬೀದರ್‌ನ ಶಾಹಿನ್ ಶಾಲೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ, ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸಿದ್ದಾರೆ.

ವಿದ್ಯಾರ್ಥಿಗಳು ಅಭಿನಯಿಸಿದ್ದ ಸಣ್ಣ ನಾಟಕದಿಂದಾಗಿ ರಾಜದ್ರೋಹದ ಆರೋಪ ಎದುರಿಸುತ್ತಿರುವ ಬೀದರ್‌ನ ಶಾಹಿನ್ ಶಾಲೆಗೆ ಹೋಗಿ ಅಲ್ಲಿನ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಜೊತೆ ಮಾತನಾಡಿ ಧೈರ್ಯ ತುಂಬಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ನಂತರ ಬಂಧಿತರಾಗಿರುವ ವಿದ್ಯಾರ್ಥಿನಿಯ ತಾಯಿ ನಜ್ಬುನ್ನಿಸಾ ಮತ್ತು ಶಿಕ್ಷಕಿ ಫರಿದಾ ಬೇಗಮ್ ಅವರನ್ನು ಜೈಲಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಪುಟ್ಟ‌ ಮಕ್ಕಳ ನಾಟಕದ ಮಾತುಗಳನ್ನು ಕೂಡಾ ಸಹಿಸಿಕೊಳ್ಳದೆ ಸೇಡಿಗೆ ಇಳಿದಿರುವ ಬಿಜೆಪಿ ಸೈದ್ಧಾಂತಿಕವಾಗಿ ದಿವಾಳಿಯಾಗಿರುವುದಕ್ಕೆ ಸಾಕ್ಷಿ. ಬೇಟಿ ಬಚಾವೋ‌ ಎಂದು ಕೂಗುತ್ತಾ ತಮ್ಮ ಬೆನ್ನನ್ನು ತಾವೆ ಚಪ್ಪರಿಸಿಕೊಳ್ಳುತ್ತಿರುವ ಪ್ರಧಾನಿ ಮೋದಿ‌ಯವರಿಗೆ ಬೀದರ್‌ನ‌ ಶಾಹಿನ್ ಶಾಲೆಯ ವಿದ್ಯಾರ್ಥಿನಿ ತನ್ನದಲ್ಲದ ತಪ್ಪಿಗೆ ತಾಯಿಯಿಂದ ದೂರವಾಗಿ ಮಾನಸಿಕ ಕ್ಷೋಭೆಗೊಳಗಾಗಿರುವುದು ಕಾಣ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಜನವರಿ 20ರಂದು ಈ ಶಾಲೆಯಲ್ಲಿ ಸಿಎಎ ವಿರುದ್ಧ ಪಠ್ಯೇತರ ಚಟುವಟಿಕೆಗಳ ಭಾಗವಾಗಿ ಮಕ್ಕಳಿಂದ ನಾಟಕ ಆಡಿಸಲಾಗಿತ್ತು. ಅದರಲ್ಲಿ ಯಾರಾದರೂ ದಾಖಲೆ ಕೇಳಿಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂಬ ಸಂಭಾಷಣೆ ಇದ್ದ ಕಾರಣ ದೂರು ದಾಖಲಾಗಿತ್ತು.

ನಂತರ ಪೊಲೀಸರು ಶಾಲೆಯ ಮುಖ್ಯಶಿಕ್ಷಕಿ ಫರೀದಾ ಬೇಗಂ ಮತ್ತು ಶಾಲೆಯ ಮಗುವಿನ ತಾಯಿ ನೈಜುಬುನ್ನೀಶ ಎಂಬುವವರನ್ನು ಕಳೆದ 15 ದಿನಗಳಿಂದ ಬಂಧಿಸಿ ಜೈಲಿನಟ್ಟಿದ್ದಾರೆ. ಇಂದು ಅವರ ಜಾಮೀನು ವಿಚಾರಣೆಯ ತೀರ್ಪು ಬರಬೇಕಿದೆ.

ಬಿಜೆಪಿ ಸರ್ಕಾರವು ಪೊಲೀಸ್ ಇಲಾಖೆಯನ್ನು ದುರುಪಯೋಗಿಸಿಕೊಂಡು ಪೌರತ್ವ ತಿದ್ದುಪಡಿ ಕಾಯಿದೆಯನ್ನು ವಿರೋಧಿಸಿದ ಕಾರಣಕ್ಕೆ ಶಿಕ್ಷಕರು ಮತ್ತು ಪೋಷಕರ ಮೇಲೆ ದೇಶದ್ರೋಹದ ಮೊಕದ್ದಮೆ ಹೂಡಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬೀದರ್ ಶಾಲೆಯಲ್ಲಿ ಪ್ರದರ್ಶನವಾದ ನಾಟಕವೊಂದರ ವಿಷಯವು ನರೇಂದ್ರ ಮೋದಿ ಮತ್ತು ಅವರ ನೀತಿಗಳನ್ನು ಟೀಕಿಸಿತು. ಅದು ಹೇಗೆ ದೇಶದ್ರೋಹವಾಗುತ್ತದೆ? ತಾಯಿಯನ್ನು ಬಂಧಿಸುವುದು ಅಸಂವಿಧಾನಿಕ ಮತ್ತು ಖಂಡನಾರ್ಹವಾಗಿದೆ. ತಾಯಿ ಮತ್ತು ಮಗಳನ್ನು ಬೇರ್ಪಡಿಸಿದ್ದಕ್ಕಾಗಿ ಈ ರಾಜ್ಯದ ತಾಯಂದಿರು ಬಿ ಎಸ್ ಯಡಿಯೂರಪ್ಪ ಅವರನ್ನು ಕ್ಷಮಿಸುವುದಿಲ್ಲ ಎಂದು ನಿನ್ನೆ ಸಿದ್ದರಾಮಯ್ಯ ಕಿಡಿಕಾರಿದ್ದರು.

ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ ಸಹ ಅವರ ಜೊತೆಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...