Homeಮುಖಪುಟಜಾತಿ ತಾರತಮ್ಯ ಆರೋಪ: ದೆಹಲಿ ವಿವಿ ಮುಂದೆ ಪಕೋಡ ಅಂಗಡಿ ತೆರೆದು ಪ್ರತಿಭಟಿಸುತ್ತಿರುವ ಪ್ರಾಧ್ಯಾಪಕಿ

ಜಾತಿ ತಾರತಮ್ಯ ಆರೋಪ: ದೆಹಲಿ ವಿವಿ ಮುಂದೆ ಪಕೋಡ ಅಂಗಡಿ ತೆರೆದು ಪ್ರತಿಭಟಿಸುತ್ತಿರುವ ಪ್ರಾಧ್ಯಾಪಕಿ

- Advertisement -
- Advertisement -

ದೆಹಲಿ ವಿಶ್ವ ವಿದ್ಯಾನಿಲಯದ ವಿರುದ್ಧ ಜಾತಿ ಆಧಾರಿತ ತಾರತಮ್ಯ ಮತ್ತು ಕಿರುಕುಳ ಆರೋಪ ಹೊರಿಸಿ ಪ್ರತಿಭಟನೆ ನಡೆಸುತ್ತಿರುವ ಡಾ. ರೀತು ಸಿಂಗ್ ವಿವಿ ಕ್ಯಾಂಪಸ್ ಬಳಿ ‘ಪಿಹೆಚ್‌ಡಿ ಪಕೋಡ ವಾಲಿ’ ಎಂಬ ಹೆಸರಿನ ಪಕೋಡಾ ಅಂಗಡಿ ತೆರೆದಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯದ ದೌಲತ್ ರಾಮ್ ಕಾಲೇಜಿನಲ್ಲಿ ಈ ಹಿಂದೆ ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕಿಯಾಗಿದ್ದ ಡಾ. ರೀತು ಸಿಂಗ್ ಅವರು, ಜಾತಿ ಕಾರಣಕ್ಕೆ ತನಗೆ ಕಿರುಕುಳ ನೀಡಿ 2020ರಲ್ಲಿ ಪ್ರಾಧ್ಯಾಪಕಿ ಹುದ್ದೆಯಿಂದ ವಜಾ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ವಿವಿ ವಿರುದ್ಧ ಅವರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳವನ್ನು ಇತ್ತೀಚೆಗೆ ನೆಲಸಮಗೊಳಿಸಿದ ಬಳಿಕ, ಅವರು ಕ್ಯಾಂಪಸ್ ಮುಂದೆ ಪಕೋಡ ಅಂಗಡಿ ತೆರೆದು ತನ್ನ ಹೋರಾಟ ಮುಂದುವರೆಸಿದ್ದಾರೆ.

ದಲಿತ, ಅಂಬೇಡ್ಕರ್‌ವಾದಿ ಹೋರಾಟಗಾರ್ತಿಯಾಗಿರುವ ರೀತು ಸಿಂಗ್ ಅವರು, ಶಿಕ್ಷಣ ಸಂಸ್ಥೆಗಳೊಳಗಿನ ಜಾತಿ ತಾರತಮ್ಯದ ವಿರುದ್ಧ ಧ್ವನಿಯೆತ್ತಿದ್ದ ಕಾರಣಕ್ಕೆ 2020ರಲ್ಲಿ ಪ್ರಾಧ್ಯಾಪಕಿ ಹುದ್ದೆಯಿಂದ ವಜಾಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ. ಕೆಲಸದಿಂದ ವಜಾಗೊಂಡ ಬಳಿಕ, ದೌಲತ್ ರಾಮ್ ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ ರಾಯ್ ವಿರುದ್ಧ ರೀತು ಸಿಂಗ್ ಸರಣಿ ಪ್ರತಿಭಟನೆಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಪ್ರಸ್ತುತ ಅವರ ಹೋರಾಟ ಪಕೋಡ ಅಂಗಡಿಯವರೆಗೆ ಬಂದು ನಿಂತಿದೆ.

‘ಪಿಹೆಚ್‌ಡಿ ಪಕೋಡ ವಾಲಿ’ ಕೇವಲ ಒಂದು ಆಹಾರದ ಅಂಗಡಿಯಲ್ಲ. ಇದು ಜಾತಿ ತಾರತಮ್ಯದ ವಿರುದ್ಧದ ಪ್ರತಿಭಟನೆ ಮತ್ತು ದೃಢತೆಯ ಸಂಕೇತವಾಗಿದೆ. ದೆಹಲಿ ವಿಶ್ವವಿದ್ಯಾನಿಲಯದ ಹೊರಗೆ ಅಂಗಡಿ ಹಾಕುವ ಮೂಲಕ ರಿತು ಸಿಂಗ್ ಅವರು ದಲಿತ ಶಿಕ್ಷಣ ತಜ್ಞರ ದುರವಸ್ಥೆ ಮತ್ತು ಅವರು ಎದುರಿಸುತ್ತಿರುವ ವ್ಯವಸ್ಥಿತ ಅಡೆತಡೆಗಳ ಬಗ್ಗೆ ಗಮನ ಸೆಳೆಯುವ ಗುರಿಯನ್ನು ಹೊಂದಿದ್ದಾರೆ. ಡಾ. ಸಿಂಗ್ ಅವರ ಹೋರಾಟವು ವಿದ್ಯಾರ್ಥಿಗಳು, ಹೋರಾಟಗಾರರು ಸೇರಿದಂತೆ ಬಹು ದೊಡ್ಡ ಸಮುದಾಯದಿಂದ ಬೆಂಬಲ ಗಳಿಸಿದೆ. ಪಿಹೆಚ್‌ಡಿ ಪಕೋಡ ವಾಲಿಯನ್ನು ಒಗ್ಗಟ್ಟಿನ ಮತ್ತು ಜಾಗೃತಿಯ ತಾಣವಾಗಿ ಪರಿವರ್ತಿಸಿದೆ ಎಂದು ಈ ಕುರಿತು ವರದಿ ಮಾಡಿದ bnnbreaking.com ಎಂಬ ಸುದ್ದಿ ವೆಬ್‌ಸೈಟ್ ಬಣ್ಣಿಸಿದೆ.

ಡಾ.ಸಿಂಗ್ ಅವರು ಪ್ರಾಧ್ಯಾಪಕಿ ವೃತ್ತಿ ಬಿಟ್ಟು ಬೀದಿ ಬದಿ ಪಕೋಡ ಮಾರಲು ಹೊರಟಿರುವುದು ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ತಾರತಮ್ಯದ ವಿರುದ್ಧ ದೊಡ್ಡ ಹೋರಾಟವಾಗಿದೆ. ಅವರು ದಲಿತ ಶಿಕ್ಷಣ ತಜ್ಞರು ಎದುರಿಸುತ್ತಿರುವ ಸಮಸ್ಯೆಗಳ ವಿರುದ್ಧದ ಪ್ರತಿರೋಧಕ್ಕೆ ಜೀವಂತ ಉದಾಹರಣೆಯಾಗಿದ್ದಾರೆ. ರಿತು ಸಿಂಗ್ ಅವರ ಹೋರಾಟ ಜಾತೀಯತೆ, ನಿರುದ್ಯೋಗ ಮತ್ತು ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ವ್ಯವಸ್ಥಿತ ಬದಲಾವಣೆಯ ಅಗತ್ಯತೆಯ ಬಗ್ಗೆ ಚರ್ಚೆಗಳನ್ನು ಹುಟ್ಟು ಹಾಕಿದೆ. ಪಿಹೆಚ್‌ಡಿ ಪಕೋಡ ವಾಲಿ ಪ್ರಸ್ತುತ ಒಂದು ಅಂಗಡಿಯಾಗಿ ಉಳಿದಿಲ್ಲ. ಅದು ಸಾರ್ವಜನಿಕರಿಗೆ ಶಿಕ್ಷಣ, ನ್ಯಾಯ ಮತ್ತು ಸಮಾನತೆಯ ಹೋರಾಟಕ್ಕೆ ಪ್ರರೇಪಿಸುವ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ವೆಬ್‌ಸೈಟ್‌ ಹೇಳಿದೆ.

ಏನಿದು ಪ್ರಕರಣ, ರೀತು ಸಿಂಗ್ ಯಾರು?

ದೆಹಲಿ ವಿಶ್ವವಿದ್ಯಾನಿಲಯದಿಂದ ಮನೋವಿಜ್ಞಾನದಲ್ಲಿ ಡಾಕ್ಟರೇಟ್ ಪದವಿ ಪಡೆದಿರುವ ಡಾ.ರೀತು ಸಿಂಗ್ ಅವರು ವಿವಿ ಅಧೀನದ ದೌಲತ್ ರಾಮ್ ಕಾಲೇಜಿನಲ್ಲಿ ತಾತ್ಕಾಲಿಕ ಪ್ರಧ್ಯಾಪಕಿಯಾಗಿದ್ದರು.

ಆಗಸ್ಟ್ 2019ರಲ್ಲಿ, ರೀತು ಸಿಂಗ್ ಅವರು ದೌಲತ್ ರಾಮ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ನೇಮಕಗೊಂಡಿದ್ದರು. ಪರಿಶಿಷ್ಟ ಜಾತಿ ವರ್ಗಕ್ಕೆ ಮೀಸಲಾದ ತಾತ್ಕಾಲಿಕ ಖಾಲಿ ಹುದ್ದೆಯ ಕಾರ್ಯವಿಧಾನದ ಮೂಲಕ ರೀತು ಸಿಂಗ್ ಆ ಹುದ್ದೆಗೆ ಆಯ್ಕೆಯಾಗಿದ್ದರು. ಒಂದು ವರ್ಷದ ನಂತರ (ಆಗಸ್ಟ್ 2020 ರಲ್ಲಿ) ಅವರನ್ನು ಏಕಾಏಕಿ ಹುದ್ದೆಯಿಂದ ವಜಾಗೊಳಿಸಲಾಗಿತ್ತು.

“ನಾನು ದಲಿತ ಸಮುದಾಯದವಳು ಎಂಬ ಕಾರಣಕ್ಕೆ ಕಾಲೇಜು ಪ್ರಾಂಶುಪಾಲೆ ಸವಿತಾ ರಾಯ್ ಜಾತಿ ತಾರತಮ್ಯವೆಸಗಿ ಕೆಲಸದಿಂದ ವಜಾಗೊಳಿಸಿದ್ದಾರೆ. ಕಾಲೇಜಿನಲ್ಲಿ ಜಾತಿ ಮುಂದಿಟ್ಟುಕೊಂಡು  ಪ್ರಾಂಶುಪಾಲೆ ನನಗೆ ಕಿರುಕುಳ ನೀಡಿದ್ದರು” ಎಂದು ರೀತು ಸಿಂಗ್ ಆರೋಪಿಸಿದ್ದರು.

2020ರಲ್ಲಿ ಕೆಲಸದಿಂದ ವಜಾಗೊಂಡ ಬಳಿಕ ರೀತು ಸಿಂಗ್ ಸತತ 10 ದಿನಗಳ ಕಾಲ ಕಾಲೇಜಿನ ಮುಂದೆ ಪ್ರತಿಭಟನೆ ನಡೆಸಿದ್ದರು. ಆದರೆ, ಕೋವಿಡ್ ಆವರಿಸಿಕೊಂಡ ಅವರು ತನ್ನ ಹೋರಾಟವನ್ನು ಕೊನೆಗೊಳಿಸಬೇಕಾಯಿತು. ನಂತರ ಅವರು 2023ರ ಸೆಪ್ಟೆಂಬರ್‌ನಿಂದ ಹೋರಾಟ ಮುಂದುವರೆಸಿದ್ದಾರೆ. ಈ ನಡುವೆ ಅವರು ಕಾನೂನು ಹೋರಾಟ ಕೂಡ ನಡೆಸುತ್ತಿದ್ದು, ಪ್ರಸ್ತುತ ಪ್ರಕರಣ ದೆಹಲಿ ಹೈಕೋರ್ಟ್‌ನಲ್ಲಿದೆ.

ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯ ಕಾಲೇಜು ಪ್ರಾಂಶುಪಾಲೆ ಸವಿತಾ ರಾಯ್‌ ಅವರಿಂದ ರೀತು ಸಿಂಗ್ ವಜಾದ ಕುರಿತು ಪ್ರತಿಕ್ರಿಯೆ ಕೇಳಿತ್ತು. ನ್ಯಾಯಾಲಯಕ್ಕೆ ಉತ್ತರ ಕೊಟ್ಟಿದ್ದ ಪ್ರಾಂಶುಪಾಲೆ ಸವಿತಾ ರಾಯ್, ರೀತು ಸಿಂಗ್ ಅವರ ಪಾಠದಿಂದ ವಿದ್ಯಾರ್ಥಿಗಳು ಅತೃಪ್ತರಾಗಿದ್ದರು ಎಂದು ತಿಳಿಸಿದ್ದಾರೆ. ಅಲ್ಲದೆ, ಪ್ರಾಂಶುಪಾಲರು ನ್ಯಾಯಾಲಯಕ್ಕೆ ಸಲ್ಲಿಸಿರುವ ಪತ್ರಕ್ಕೆ 35 ವಿದ್ಯಾರ್ಥಿಗಳು ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ.

ಪ್ರಾಂಶುಪಾಲೆಯ ಆರೋಪವನ್ನು ಹಾಕಿರುವ ರೀತು ಸಿಂಗ್, ಪ್ರಾಂಶುಪಾಲರ ಪತ್ರದಲ್ಲಿ ಸಹಿ ಹಾಕಿರುವ 35 ವಿದ್ಯಾರ್ಥಿಗಳಿಗೆ ನಾನು ಪಾಠವೇ ಮಾಡಿಲ್ಲ ಎಂದಿದ್ದಾರೆ. ಪ್ರಸ್ತುತ ಪ್ರಕರಣ ದೆಹಲಿ ಹೈಕೋರ್ಟ್‌ ಮತ್ತು ಪರಿಶಿಷ್ಟ ಜಾತಿ ಆಯೋಗದ ವಿಚಾರಣೆಯಲ್ಲಿದೆ.

ರೀತು ಸಿಂಗ್ ಅವರ ದೂರಿನ ಮೇರೆಗೆ ಪ್ರಾಂಶುಪಾಲೆ ಸವಿತಾ ರಾಯ್ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಹಲವು ಕಾಯ್ದೆ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದೆ. ಆದರೆ, ಸವಿತಾ ರಾಯ್ ವಿರುದ್ಧ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಬದಲಾಗಿ ಅವರನ್ನು ಪ್ರಾಂಶುಪಾಲರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಬಡ್ತಿ ನೀಡಿ ನೇಮಿಸಲಾಗಿದೆ. ಆಕೆ ಪ್ರಾಂಶುಪಾಲೆಯಾಗಿಯೂ ಮುಂದುವರೆದಿದ್ದಾರೆ.

ಇದನ್ನೂ ಓದಿ : ಚುನಾವಣಾ ಬಾಂಡ್‌ ಮಾಹಿತಿ ಒದಗಿಸಲು ಗಡುವು ವಿಸ್ತರಿಸಿ: ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...