Homeಮುಖಪುಟಜಾತಿ ತಾರತಮ್ಯ ಆರೋಪ: ದೆಹಲಿ ವಿವಿ ಮುಂದೆ ಪಕೋಡ ಅಂಗಡಿ ತೆರೆದು ಪ್ರತಿಭಟಿಸುತ್ತಿರುವ ಪ್ರಾಧ್ಯಾಪಕಿ

ಜಾತಿ ತಾರತಮ್ಯ ಆರೋಪ: ದೆಹಲಿ ವಿವಿ ಮುಂದೆ ಪಕೋಡ ಅಂಗಡಿ ತೆರೆದು ಪ್ರತಿಭಟಿಸುತ್ತಿರುವ ಪ್ರಾಧ್ಯಾಪಕಿ

- Advertisement -
- Advertisement -

ದೆಹಲಿ ವಿಶ್ವ ವಿದ್ಯಾನಿಲಯದ ವಿರುದ್ಧ ಜಾತಿ ಆಧಾರಿತ ತಾರತಮ್ಯ ಮತ್ತು ಕಿರುಕುಳ ಆರೋಪ ಹೊರಿಸಿ ಪ್ರತಿಭಟನೆ ನಡೆಸುತ್ತಿರುವ ಡಾ. ರೀತು ಸಿಂಗ್ ವಿವಿ ಕ್ಯಾಂಪಸ್ ಬಳಿ ‘ಪಿಹೆಚ್‌ಡಿ ಪಕೋಡ ವಾಲಿ’ ಎಂಬ ಹೆಸರಿನ ಪಕೋಡಾ ಅಂಗಡಿ ತೆರೆದಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯದ ದೌಲತ್ ರಾಮ್ ಕಾಲೇಜಿನಲ್ಲಿ ಈ ಹಿಂದೆ ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕಿಯಾಗಿದ್ದ ಡಾ. ರೀತು ಸಿಂಗ್ ಅವರು, ಜಾತಿ ಕಾರಣಕ್ಕೆ ತನಗೆ ಕಿರುಕುಳ ನೀಡಿ 2020ರಲ್ಲಿ ಪ್ರಾಧ್ಯಾಪಕಿ ಹುದ್ದೆಯಿಂದ ವಜಾ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ವಿವಿ ವಿರುದ್ಧ ಅವರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳವನ್ನು ಇತ್ತೀಚೆಗೆ ನೆಲಸಮಗೊಳಿಸಿದ ಬಳಿಕ, ಅವರು ಕ್ಯಾಂಪಸ್ ಮುಂದೆ ಪಕೋಡ ಅಂಗಡಿ ತೆರೆದು ತನ್ನ ಹೋರಾಟ ಮುಂದುವರೆಸಿದ್ದಾರೆ.

ದಲಿತ, ಅಂಬೇಡ್ಕರ್‌ವಾದಿ ಹೋರಾಟಗಾರ್ತಿಯಾಗಿರುವ ರೀತು ಸಿಂಗ್ ಅವರು, ಶಿಕ್ಷಣ ಸಂಸ್ಥೆಗಳೊಳಗಿನ ಜಾತಿ ತಾರತಮ್ಯದ ವಿರುದ್ಧ ಧ್ವನಿಯೆತ್ತಿದ್ದ ಕಾರಣಕ್ಕೆ 2020ರಲ್ಲಿ ಪ್ರಾಧ್ಯಾಪಕಿ ಹುದ್ದೆಯಿಂದ ವಜಾಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ. ಕೆಲಸದಿಂದ ವಜಾಗೊಂಡ ಬಳಿಕ, ದೌಲತ್ ರಾಮ್ ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ ರಾಯ್ ವಿರುದ್ಧ ರೀತು ಸಿಂಗ್ ಸರಣಿ ಪ್ರತಿಭಟನೆಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಪ್ರಸ್ತುತ ಅವರ ಹೋರಾಟ ಪಕೋಡ ಅಂಗಡಿಯವರೆಗೆ ಬಂದು ನಿಂತಿದೆ.

‘ಪಿಹೆಚ್‌ಡಿ ಪಕೋಡ ವಾಲಿ’ ಕೇವಲ ಒಂದು ಆಹಾರದ ಅಂಗಡಿಯಲ್ಲ. ಇದು ಜಾತಿ ತಾರತಮ್ಯದ ವಿರುದ್ಧದ ಪ್ರತಿಭಟನೆ ಮತ್ತು ದೃಢತೆಯ ಸಂಕೇತವಾಗಿದೆ. ದೆಹಲಿ ವಿಶ್ವವಿದ್ಯಾನಿಲಯದ ಹೊರಗೆ ಅಂಗಡಿ ಹಾಕುವ ಮೂಲಕ ರಿತು ಸಿಂಗ್ ಅವರು ದಲಿತ ಶಿಕ್ಷಣ ತಜ್ಞರ ದುರವಸ್ಥೆ ಮತ್ತು ಅವರು ಎದುರಿಸುತ್ತಿರುವ ವ್ಯವಸ್ಥಿತ ಅಡೆತಡೆಗಳ ಬಗ್ಗೆ ಗಮನ ಸೆಳೆಯುವ ಗುರಿಯನ್ನು ಹೊಂದಿದ್ದಾರೆ. ಡಾ. ಸಿಂಗ್ ಅವರ ಹೋರಾಟವು ವಿದ್ಯಾರ್ಥಿಗಳು, ಹೋರಾಟಗಾರರು ಸೇರಿದಂತೆ ಬಹು ದೊಡ್ಡ ಸಮುದಾಯದಿಂದ ಬೆಂಬಲ ಗಳಿಸಿದೆ. ಪಿಹೆಚ್‌ಡಿ ಪಕೋಡ ವಾಲಿಯನ್ನು ಒಗ್ಗಟ್ಟಿನ ಮತ್ತು ಜಾಗೃತಿಯ ತಾಣವಾಗಿ ಪರಿವರ್ತಿಸಿದೆ ಎಂದು ಈ ಕುರಿತು ವರದಿ ಮಾಡಿದ bnnbreaking.com ಎಂಬ ಸುದ್ದಿ ವೆಬ್‌ಸೈಟ್ ಬಣ್ಣಿಸಿದೆ.

ಡಾ.ಸಿಂಗ್ ಅವರು ಪ್ರಾಧ್ಯಾಪಕಿ ವೃತ್ತಿ ಬಿಟ್ಟು ಬೀದಿ ಬದಿ ಪಕೋಡ ಮಾರಲು ಹೊರಟಿರುವುದು ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ತಾರತಮ್ಯದ ವಿರುದ್ಧ ದೊಡ್ಡ ಹೋರಾಟವಾಗಿದೆ. ಅವರು ದಲಿತ ಶಿಕ್ಷಣ ತಜ್ಞರು ಎದುರಿಸುತ್ತಿರುವ ಸಮಸ್ಯೆಗಳ ವಿರುದ್ಧದ ಪ್ರತಿರೋಧಕ್ಕೆ ಜೀವಂತ ಉದಾಹರಣೆಯಾಗಿದ್ದಾರೆ. ರಿತು ಸಿಂಗ್ ಅವರ ಹೋರಾಟ ಜಾತೀಯತೆ, ನಿರುದ್ಯೋಗ ಮತ್ತು ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ವ್ಯವಸ್ಥಿತ ಬದಲಾವಣೆಯ ಅಗತ್ಯತೆಯ ಬಗ್ಗೆ ಚರ್ಚೆಗಳನ್ನು ಹುಟ್ಟು ಹಾಕಿದೆ. ಪಿಹೆಚ್‌ಡಿ ಪಕೋಡ ವಾಲಿ ಪ್ರಸ್ತುತ ಒಂದು ಅಂಗಡಿಯಾಗಿ ಉಳಿದಿಲ್ಲ. ಅದು ಸಾರ್ವಜನಿಕರಿಗೆ ಶಿಕ್ಷಣ, ನ್ಯಾಯ ಮತ್ತು ಸಮಾನತೆಯ ಹೋರಾಟಕ್ಕೆ ಪ್ರರೇಪಿಸುವ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ವೆಬ್‌ಸೈಟ್‌ ಹೇಳಿದೆ.

ಏನಿದು ಪ್ರಕರಣ, ರೀತು ಸಿಂಗ್ ಯಾರು?

ದೆಹಲಿ ವಿಶ್ವವಿದ್ಯಾನಿಲಯದಿಂದ ಮನೋವಿಜ್ಞಾನದಲ್ಲಿ ಡಾಕ್ಟರೇಟ್ ಪದವಿ ಪಡೆದಿರುವ ಡಾ.ರೀತು ಸಿಂಗ್ ಅವರು ವಿವಿ ಅಧೀನದ ದೌಲತ್ ರಾಮ್ ಕಾಲೇಜಿನಲ್ಲಿ ತಾತ್ಕಾಲಿಕ ಪ್ರಧ್ಯಾಪಕಿಯಾಗಿದ್ದರು.

ಆಗಸ್ಟ್ 2019ರಲ್ಲಿ, ರೀತು ಸಿಂಗ್ ಅವರು ದೌಲತ್ ರಾಮ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ನೇಮಕಗೊಂಡಿದ್ದರು. ಪರಿಶಿಷ್ಟ ಜಾತಿ ವರ್ಗಕ್ಕೆ ಮೀಸಲಾದ ತಾತ್ಕಾಲಿಕ ಖಾಲಿ ಹುದ್ದೆಯ ಕಾರ್ಯವಿಧಾನದ ಮೂಲಕ ರೀತು ಸಿಂಗ್ ಆ ಹುದ್ದೆಗೆ ಆಯ್ಕೆಯಾಗಿದ್ದರು. ಒಂದು ವರ್ಷದ ನಂತರ (ಆಗಸ್ಟ್ 2020 ರಲ್ಲಿ) ಅವರನ್ನು ಏಕಾಏಕಿ ಹುದ್ದೆಯಿಂದ ವಜಾಗೊಳಿಸಲಾಗಿತ್ತು.

“ನಾನು ದಲಿತ ಸಮುದಾಯದವಳು ಎಂಬ ಕಾರಣಕ್ಕೆ ಕಾಲೇಜು ಪ್ರಾಂಶುಪಾಲೆ ಸವಿತಾ ರಾಯ್ ಜಾತಿ ತಾರತಮ್ಯವೆಸಗಿ ಕೆಲಸದಿಂದ ವಜಾಗೊಳಿಸಿದ್ದಾರೆ. ಕಾಲೇಜಿನಲ್ಲಿ ಜಾತಿ ಮುಂದಿಟ್ಟುಕೊಂಡು  ಪ್ರಾಂಶುಪಾಲೆ ನನಗೆ ಕಿರುಕುಳ ನೀಡಿದ್ದರು” ಎಂದು ರೀತು ಸಿಂಗ್ ಆರೋಪಿಸಿದ್ದರು.

2020ರಲ್ಲಿ ಕೆಲಸದಿಂದ ವಜಾಗೊಂಡ ಬಳಿಕ ರೀತು ಸಿಂಗ್ ಸತತ 10 ದಿನಗಳ ಕಾಲ ಕಾಲೇಜಿನ ಮುಂದೆ ಪ್ರತಿಭಟನೆ ನಡೆಸಿದ್ದರು. ಆದರೆ, ಕೋವಿಡ್ ಆವರಿಸಿಕೊಂಡ ಅವರು ತನ್ನ ಹೋರಾಟವನ್ನು ಕೊನೆಗೊಳಿಸಬೇಕಾಯಿತು. ನಂತರ ಅವರು 2023ರ ಸೆಪ್ಟೆಂಬರ್‌ನಿಂದ ಹೋರಾಟ ಮುಂದುವರೆಸಿದ್ದಾರೆ. ಈ ನಡುವೆ ಅವರು ಕಾನೂನು ಹೋರಾಟ ಕೂಡ ನಡೆಸುತ್ತಿದ್ದು, ಪ್ರಸ್ತುತ ಪ್ರಕರಣ ದೆಹಲಿ ಹೈಕೋರ್ಟ್‌ನಲ್ಲಿದೆ.

ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯ ಕಾಲೇಜು ಪ್ರಾಂಶುಪಾಲೆ ಸವಿತಾ ರಾಯ್‌ ಅವರಿಂದ ರೀತು ಸಿಂಗ್ ವಜಾದ ಕುರಿತು ಪ್ರತಿಕ್ರಿಯೆ ಕೇಳಿತ್ತು. ನ್ಯಾಯಾಲಯಕ್ಕೆ ಉತ್ತರ ಕೊಟ್ಟಿದ್ದ ಪ್ರಾಂಶುಪಾಲೆ ಸವಿತಾ ರಾಯ್, ರೀತು ಸಿಂಗ್ ಅವರ ಪಾಠದಿಂದ ವಿದ್ಯಾರ್ಥಿಗಳು ಅತೃಪ್ತರಾಗಿದ್ದರು ಎಂದು ತಿಳಿಸಿದ್ದಾರೆ. ಅಲ್ಲದೆ, ಪ್ರಾಂಶುಪಾಲರು ನ್ಯಾಯಾಲಯಕ್ಕೆ ಸಲ್ಲಿಸಿರುವ ಪತ್ರಕ್ಕೆ 35 ವಿದ್ಯಾರ್ಥಿಗಳು ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ.

ಪ್ರಾಂಶುಪಾಲೆಯ ಆರೋಪವನ್ನು ಹಾಕಿರುವ ರೀತು ಸಿಂಗ್, ಪ್ರಾಂಶುಪಾಲರ ಪತ್ರದಲ್ಲಿ ಸಹಿ ಹಾಕಿರುವ 35 ವಿದ್ಯಾರ್ಥಿಗಳಿಗೆ ನಾನು ಪಾಠವೇ ಮಾಡಿಲ್ಲ ಎಂದಿದ್ದಾರೆ. ಪ್ರಸ್ತುತ ಪ್ರಕರಣ ದೆಹಲಿ ಹೈಕೋರ್ಟ್‌ ಮತ್ತು ಪರಿಶಿಷ್ಟ ಜಾತಿ ಆಯೋಗದ ವಿಚಾರಣೆಯಲ್ಲಿದೆ.

ರೀತು ಸಿಂಗ್ ಅವರ ದೂರಿನ ಮೇರೆಗೆ ಪ್ರಾಂಶುಪಾಲೆ ಸವಿತಾ ರಾಯ್ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಹಲವು ಕಾಯ್ದೆ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದೆ. ಆದರೆ, ಸವಿತಾ ರಾಯ್ ವಿರುದ್ಧ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಬದಲಾಗಿ ಅವರನ್ನು ಪ್ರಾಂಶುಪಾಲರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಬಡ್ತಿ ನೀಡಿ ನೇಮಿಸಲಾಗಿದೆ. ಆಕೆ ಪ್ರಾಂಶುಪಾಲೆಯಾಗಿಯೂ ಮುಂದುವರೆದಿದ್ದಾರೆ.

ಇದನ್ನೂ ಓದಿ : ಚುನಾವಣಾ ಬಾಂಡ್‌ ಮಾಹಿತಿ ಒದಗಿಸಲು ಗಡುವು ವಿಸ್ತರಿಸಿ: ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...