Homeಮುಖಪುಟಜಾತಿ ತಾರತಮ್ಯ ಆರೋಪ: ದೆಹಲಿ ವಿವಿ ಮುಂದೆ ಪಕೋಡ ಅಂಗಡಿ ತೆರೆದು ಪ್ರತಿಭಟಿಸುತ್ತಿರುವ ಪ್ರಾಧ್ಯಾಪಕಿ

ಜಾತಿ ತಾರತಮ್ಯ ಆರೋಪ: ದೆಹಲಿ ವಿವಿ ಮುಂದೆ ಪಕೋಡ ಅಂಗಡಿ ತೆರೆದು ಪ್ರತಿಭಟಿಸುತ್ತಿರುವ ಪ್ರಾಧ್ಯಾಪಕಿ

- Advertisement -
- Advertisement -

ದೆಹಲಿ ವಿಶ್ವ ವಿದ್ಯಾನಿಲಯದ ವಿರುದ್ಧ ಜಾತಿ ಆಧಾರಿತ ತಾರತಮ್ಯ ಮತ್ತು ಕಿರುಕುಳ ಆರೋಪ ಹೊರಿಸಿ ಪ್ರತಿಭಟನೆ ನಡೆಸುತ್ತಿರುವ ಡಾ. ರೀತು ಸಿಂಗ್ ವಿವಿ ಕ್ಯಾಂಪಸ್ ಬಳಿ ‘ಪಿಹೆಚ್‌ಡಿ ಪಕೋಡ ವಾಲಿ’ ಎಂಬ ಹೆಸರಿನ ಪಕೋಡಾ ಅಂಗಡಿ ತೆರೆದಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯದ ದೌಲತ್ ರಾಮ್ ಕಾಲೇಜಿನಲ್ಲಿ ಈ ಹಿಂದೆ ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕಿಯಾಗಿದ್ದ ಡಾ. ರೀತು ಸಿಂಗ್ ಅವರು, ಜಾತಿ ಕಾರಣಕ್ಕೆ ತನಗೆ ಕಿರುಕುಳ ನೀಡಿ 2020ರಲ್ಲಿ ಪ್ರಾಧ್ಯಾಪಕಿ ಹುದ್ದೆಯಿಂದ ವಜಾ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ವಿವಿ ವಿರುದ್ಧ ಅವರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳವನ್ನು ಇತ್ತೀಚೆಗೆ ನೆಲಸಮಗೊಳಿಸಿದ ಬಳಿಕ, ಅವರು ಕ್ಯಾಂಪಸ್ ಮುಂದೆ ಪಕೋಡ ಅಂಗಡಿ ತೆರೆದು ತನ್ನ ಹೋರಾಟ ಮುಂದುವರೆಸಿದ್ದಾರೆ.

ದಲಿತ, ಅಂಬೇಡ್ಕರ್‌ವಾದಿ ಹೋರಾಟಗಾರ್ತಿಯಾಗಿರುವ ರೀತು ಸಿಂಗ್ ಅವರು, ಶಿಕ್ಷಣ ಸಂಸ್ಥೆಗಳೊಳಗಿನ ಜಾತಿ ತಾರತಮ್ಯದ ವಿರುದ್ಧ ಧ್ವನಿಯೆತ್ತಿದ್ದ ಕಾರಣಕ್ಕೆ 2020ರಲ್ಲಿ ಪ್ರಾಧ್ಯಾಪಕಿ ಹುದ್ದೆಯಿಂದ ವಜಾಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ. ಕೆಲಸದಿಂದ ವಜಾಗೊಂಡ ಬಳಿಕ, ದೌಲತ್ ರಾಮ್ ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ ರಾಯ್ ವಿರುದ್ಧ ರೀತು ಸಿಂಗ್ ಸರಣಿ ಪ್ರತಿಭಟನೆಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಪ್ರಸ್ತುತ ಅವರ ಹೋರಾಟ ಪಕೋಡ ಅಂಗಡಿಯವರೆಗೆ ಬಂದು ನಿಂತಿದೆ.

‘ಪಿಹೆಚ್‌ಡಿ ಪಕೋಡ ವಾಲಿ’ ಕೇವಲ ಒಂದು ಆಹಾರದ ಅಂಗಡಿಯಲ್ಲ. ಇದು ಜಾತಿ ತಾರತಮ್ಯದ ವಿರುದ್ಧದ ಪ್ರತಿಭಟನೆ ಮತ್ತು ದೃಢತೆಯ ಸಂಕೇತವಾಗಿದೆ. ದೆಹಲಿ ವಿಶ್ವವಿದ್ಯಾನಿಲಯದ ಹೊರಗೆ ಅಂಗಡಿ ಹಾಕುವ ಮೂಲಕ ರಿತು ಸಿಂಗ್ ಅವರು ದಲಿತ ಶಿಕ್ಷಣ ತಜ್ಞರ ದುರವಸ್ಥೆ ಮತ್ತು ಅವರು ಎದುರಿಸುತ್ತಿರುವ ವ್ಯವಸ್ಥಿತ ಅಡೆತಡೆಗಳ ಬಗ್ಗೆ ಗಮನ ಸೆಳೆಯುವ ಗುರಿಯನ್ನು ಹೊಂದಿದ್ದಾರೆ. ಡಾ. ಸಿಂಗ್ ಅವರ ಹೋರಾಟವು ವಿದ್ಯಾರ್ಥಿಗಳು, ಹೋರಾಟಗಾರರು ಸೇರಿದಂತೆ ಬಹು ದೊಡ್ಡ ಸಮುದಾಯದಿಂದ ಬೆಂಬಲ ಗಳಿಸಿದೆ. ಪಿಹೆಚ್‌ಡಿ ಪಕೋಡ ವಾಲಿಯನ್ನು ಒಗ್ಗಟ್ಟಿನ ಮತ್ತು ಜಾಗೃತಿಯ ತಾಣವಾಗಿ ಪರಿವರ್ತಿಸಿದೆ ಎಂದು ಈ ಕುರಿತು ವರದಿ ಮಾಡಿದ bnnbreaking.com ಎಂಬ ಸುದ್ದಿ ವೆಬ್‌ಸೈಟ್ ಬಣ್ಣಿಸಿದೆ.

ಡಾ.ಸಿಂಗ್ ಅವರು ಪ್ರಾಧ್ಯಾಪಕಿ ವೃತ್ತಿ ಬಿಟ್ಟು ಬೀದಿ ಬದಿ ಪಕೋಡ ಮಾರಲು ಹೊರಟಿರುವುದು ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ತಾರತಮ್ಯದ ವಿರುದ್ಧ ದೊಡ್ಡ ಹೋರಾಟವಾಗಿದೆ. ಅವರು ದಲಿತ ಶಿಕ್ಷಣ ತಜ್ಞರು ಎದುರಿಸುತ್ತಿರುವ ಸಮಸ್ಯೆಗಳ ವಿರುದ್ಧದ ಪ್ರತಿರೋಧಕ್ಕೆ ಜೀವಂತ ಉದಾಹರಣೆಯಾಗಿದ್ದಾರೆ. ರಿತು ಸಿಂಗ್ ಅವರ ಹೋರಾಟ ಜಾತೀಯತೆ, ನಿರುದ್ಯೋಗ ಮತ್ತು ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ವ್ಯವಸ್ಥಿತ ಬದಲಾವಣೆಯ ಅಗತ್ಯತೆಯ ಬಗ್ಗೆ ಚರ್ಚೆಗಳನ್ನು ಹುಟ್ಟು ಹಾಕಿದೆ. ಪಿಹೆಚ್‌ಡಿ ಪಕೋಡ ವಾಲಿ ಪ್ರಸ್ತುತ ಒಂದು ಅಂಗಡಿಯಾಗಿ ಉಳಿದಿಲ್ಲ. ಅದು ಸಾರ್ವಜನಿಕರಿಗೆ ಶಿಕ್ಷಣ, ನ್ಯಾಯ ಮತ್ತು ಸಮಾನತೆಯ ಹೋರಾಟಕ್ಕೆ ಪ್ರರೇಪಿಸುವ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ವೆಬ್‌ಸೈಟ್‌ ಹೇಳಿದೆ.

ಏನಿದು ಪ್ರಕರಣ, ರೀತು ಸಿಂಗ್ ಯಾರು?

ದೆಹಲಿ ವಿಶ್ವವಿದ್ಯಾನಿಲಯದಿಂದ ಮನೋವಿಜ್ಞಾನದಲ್ಲಿ ಡಾಕ್ಟರೇಟ್ ಪದವಿ ಪಡೆದಿರುವ ಡಾ.ರೀತು ಸಿಂಗ್ ಅವರು ವಿವಿ ಅಧೀನದ ದೌಲತ್ ರಾಮ್ ಕಾಲೇಜಿನಲ್ಲಿ ತಾತ್ಕಾಲಿಕ ಪ್ರಧ್ಯಾಪಕಿಯಾಗಿದ್ದರು.

ಆಗಸ್ಟ್ 2019ರಲ್ಲಿ, ರೀತು ಸಿಂಗ್ ಅವರು ದೌಲತ್ ರಾಮ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ನೇಮಕಗೊಂಡಿದ್ದರು. ಪರಿಶಿಷ್ಟ ಜಾತಿ ವರ್ಗಕ್ಕೆ ಮೀಸಲಾದ ತಾತ್ಕಾಲಿಕ ಖಾಲಿ ಹುದ್ದೆಯ ಕಾರ್ಯವಿಧಾನದ ಮೂಲಕ ರೀತು ಸಿಂಗ್ ಆ ಹುದ್ದೆಗೆ ಆಯ್ಕೆಯಾಗಿದ್ದರು. ಒಂದು ವರ್ಷದ ನಂತರ (ಆಗಸ್ಟ್ 2020 ರಲ್ಲಿ) ಅವರನ್ನು ಏಕಾಏಕಿ ಹುದ್ದೆಯಿಂದ ವಜಾಗೊಳಿಸಲಾಗಿತ್ತು.

“ನಾನು ದಲಿತ ಸಮುದಾಯದವಳು ಎಂಬ ಕಾರಣಕ್ಕೆ ಕಾಲೇಜು ಪ್ರಾಂಶುಪಾಲೆ ಸವಿತಾ ರಾಯ್ ಜಾತಿ ತಾರತಮ್ಯವೆಸಗಿ ಕೆಲಸದಿಂದ ವಜಾಗೊಳಿಸಿದ್ದಾರೆ. ಕಾಲೇಜಿನಲ್ಲಿ ಜಾತಿ ಮುಂದಿಟ್ಟುಕೊಂಡು  ಪ್ರಾಂಶುಪಾಲೆ ನನಗೆ ಕಿರುಕುಳ ನೀಡಿದ್ದರು” ಎಂದು ರೀತು ಸಿಂಗ್ ಆರೋಪಿಸಿದ್ದರು.

2020ರಲ್ಲಿ ಕೆಲಸದಿಂದ ವಜಾಗೊಂಡ ಬಳಿಕ ರೀತು ಸಿಂಗ್ ಸತತ 10 ದಿನಗಳ ಕಾಲ ಕಾಲೇಜಿನ ಮುಂದೆ ಪ್ರತಿಭಟನೆ ನಡೆಸಿದ್ದರು. ಆದರೆ, ಕೋವಿಡ್ ಆವರಿಸಿಕೊಂಡ ಅವರು ತನ್ನ ಹೋರಾಟವನ್ನು ಕೊನೆಗೊಳಿಸಬೇಕಾಯಿತು. ನಂತರ ಅವರು 2023ರ ಸೆಪ್ಟೆಂಬರ್‌ನಿಂದ ಹೋರಾಟ ಮುಂದುವರೆಸಿದ್ದಾರೆ. ಈ ನಡುವೆ ಅವರು ಕಾನೂನು ಹೋರಾಟ ಕೂಡ ನಡೆಸುತ್ತಿದ್ದು, ಪ್ರಸ್ತುತ ಪ್ರಕರಣ ದೆಹಲಿ ಹೈಕೋರ್ಟ್‌ನಲ್ಲಿದೆ.

ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯ ಕಾಲೇಜು ಪ್ರಾಂಶುಪಾಲೆ ಸವಿತಾ ರಾಯ್‌ ಅವರಿಂದ ರೀತು ಸಿಂಗ್ ವಜಾದ ಕುರಿತು ಪ್ರತಿಕ್ರಿಯೆ ಕೇಳಿತ್ತು. ನ್ಯಾಯಾಲಯಕ್ಕೆ ಉತ್ತರ ಕೊಟ್ಟಿದ್ದ ಪ್ರಾಂಶುಪಾಲೆ ಸವಿತಾ ರಾಯ್, ರೀತು ಸಿಂಗ್ ಅವರ ಪಾಠದಿಂದ ವಿದ್ಯಾರ್ಥಿಗಳು ಅತೃಪ್ತರಾಗಿದ್ದರು ಎಂದು ತಿಳಿಸಿದ್ದಾರೆ. ಅಲ್ಲದೆ, ಪ್ರಾಂಶುಪಾಲರು ನ್ಯಾಯಾಲಯಕ್ಕೆ ಸಲ್ಲಿಸಿರುವ ಪತ್ರಕ್ಕೆ 35 ವಿದ್ಯಾರ್ಥಿಗಳು ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ.

ಪ್ರಾಂಶುಪಾಲೆಯ ಆರೋಪವನ್ನು ಹಾಕಿರುವ ರೀತು ಸಿಂಗ್, ಪ್ರಾಂಶುಪಾಲರ ಪತ್ರದಲ್ಲಿ ಸಹಿ ಹಾಕಿರುವ 35 ವಿದ್ಯಾರ್ಥಿಗಳಿಗೆ ನಾನು ಪಾಠವೇ ಮಾಡಿಲ್ಲ ಎಂದಿದ್ದಾರೆ. ಪ್ರಸ್ತುತ ಪ್ರಕರಣ ದೆಹಲಿ ಹೈಕೋರ್ಟ್‌ ಮತ್ತು ಪರಿಶಿಷ್ಟ ಜಾತಿ ಆಯೋಗದ ವಿಚಾರಣೆಯಲ್ಲಿದೆ.

ರೀತು ಸಿಂಗ್ ಅವರ ದೂರಿನ ಮೇರೆಗೆ ಪ್ರಾಂಶುಪಾಲೆ ಸವಿತಾ ರಾಯ್ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಹಲವು ಕಾಯ್ದೆ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದೆ. ಆದರೆ, ಸವಿತಾ ರಾಯ್ ವಿರುದ್ಧ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಬದಲಾಗಿ ಅವರನ್ನು ಪ್ರಾಂಶುಪಾಲರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಬಡ್ತಿ ನೀಡಿ ನೇಮಿಸಲಾಗಿದೆ. ಆಕೆ ಪ್ರಾಂಶುಪಾಲೆಯಾಗಿಯೂ ಮುಂದುವರೆದಿದ್ದಾರೆ.

ಇದನ್ನೂ ಓದಿ : ಚುನಾವಣಾ ಬಾಂಡ್‌ ಮಾಹಿತಿ ಒದಗಿಸಲು ಗಡುವು ವಿಸ್ತರಿಸಿ: ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...