Homeಮುಖಪುಟಇವಿಎಂ ತಯಾರಿಸುವ BEL ಬೋರ್ಡ್‌ಗೆ ಬಿಜೆಪಿ ನಾಯಕರ ನಾಮನಿರ್ದೇಶನ!

ಇವಿಎಂ ತಯಾರಿಸುವ BEL ಬೋರ್ಡ್‌ಗೆ ಬಿಜೆಪಿ ನಾಯಕರ ನಾಮನಿರ್ದೇಶನ!

- Advertisement -
- Advertisement -

ಭಾರತ ಸರ್ಕಾರದ ಮಾಜಿ ಕಾರ್ಯದರ್ಶಿ ಇಎಎಸ್ ಶರ್ಮಾ ಅವರು ಬಿಜೆಪಿಗೆ ಆಪ್ತರಾಗಿರುವ ನಿರ್ದೇಶಕರನ್ನು ಇವಿಎಂ ತಯಾರಿಸುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್)ನ ಬೋರ್ಡ್‌ನಿಂದ ತೆಗೆದುಹಾಕುವಂತೆ ಒತ್ತಾಯಿಸಿ ಭಾರತ ಚುನಾವಣಾ ಆಯೋಗಕ್ಕೆ (ಇಸಿಐ) ಪತ್ರ ಬರೆದಿದ್ದಾರೆ.

ಚುನಾವಣೆಯಲ್ಲಿ ಬಳಸಲಾಗುವ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು (ಇವಿಎಂಗಳು) ಚುನವಣಾ ಆಯೋಗದ ತಾಂತ್ರಿಕ ತಜ್ಞರ ಸಮಿತಿಯ ಮಾರ್ಗದರ್ಶನದಲ್ಲಿ ಬಿಇಎಲ್ ಮತ್ತು ಇಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್‌ನಿಂದ ದೇಶೀಯವಾಗಿ ತಯಾರಿಸುತ್ತದೆ. ಇವಿಎಂಗಳಿಗಾಗಿ ಸಾಫ್ಟ್‌ವೇರ್‌ನ್ನು ಅಭಿವೃದ್ಧಿಪಡಿಸುವ ಬಿಇಎಲ್‌ ಮಂಡಳಿಯ ಸ್ವತಂತ್ರ ನಿರ್ದೇಶಕರ ಹುದ್ದೆಗೆ ಕನಿಷ್ಠ ನಾಲ್ವರು ಬಿಜೆಪಿ ನಾಮನಿರ್ದೇಶಿತರನ್ನು ಹೇಗೆ ಆಯ್ಕೆ ಮಾಡಲಾಗಿದೆ ಎಂಬುದನ್ನು ಆಯೋಗದ ಗಮನಕ್ಕೆ ತಂದಿದ್ದೇನೆ ಎಂದು ಶರ್ಮಾ ಹೇಳಿದರು.

ಅವರ ಪತ್ರದಲ್ಲಿ, ಬಿಇಎಲ್‌ನ ವ್ಯವಹಾರಗಳನ್ನು ನಡೆಸುವಲ್ಲಿ ರಾಜಕೀಯ ಪಕ್ಷವಾಗಿ ಬಿಜೆಪಿ ಪ್ರಮುಖ ಪಾತ್ರವನ್ನು ಹೊಂದಿದೆ. ಇದು ಬಿಜೆಪಿ ಬಿಇಎಲ್‌ನ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುತ್ತದೆ. ಈ ಎಂಟರ್‌ಪ್ರೈಸಸ್‌ಗಳು (CPSE) ಇವಿಎಂಗಳ ತಯಾರಿಕೆ ಮತ್ತು ಪೂರೈಕೆಯಲ್ಲಿ ತೊಡಗಿಸಿಕೊಂಡಿದೆ. ಈ ಹಿಂದೆ ನಾನು ಈ ಗೊಂದಲದ ಸಂಗತಿಯನ್ನು ECIಯ ಗಮನಕ್ಕೆ ತಂದಿದ್ದರೂ, ECI ಈ ಬಗ್ಗೆ ಸರಿಯಾಗಿ ಪ್ರತಿಕ್ರಿಯಿಸಿಲ್ಲ ಎಂದು ನಾನು ಕಂಡುಕೊಂಡಿದ್ದೇನೆ. ಕಂಪನಿಯ ವ್ಯವಹಾರಗಳನ್ನು ನಿರ್ವಹಿಸುವಲ್ಲಿ ಸ್ವತಂತ್ರ ನಿರ್ದೇಶಕರು ಪ್ರಮುಖ ಪಾತ್ರ ವಹಿಸಬೇಕೆಂದು ಕಂಪನಿಗಳ ಕಾಯಿದೆ ಕಡ್ಡಾಯಗೊಳಿಸುತ್ತದೆ. ಒಟ್ಟು 7 ಸ್ವತಂತ್ರ ನಿರ್ದೇಶಕರಲ್ಲಿ ಕನಿಷ್ಠ ನಾಲ್ವರು ಅಂದರೆ ಮನ್ಸುಖ್ಭಾಯ್ ಶಮ್ಜಿಭಾಯಿ ಖಚರಿಯಾ, ಡಾ ಶಿವನಾಥ್ ಯಾದವ್, ಶ್ಯಾಮ ಸಿಂಗ್ ಮತ್ತು ಪಿವಿ ಪಾರ್ಥಸಾರಥಿ ಬಿಜೆಪಿ ಪಕ್ಷದ ಜೊತೆ ಸಂಪರ್ಕ ಹೊಂದಿದವಾರಾಗಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಖಚರಿಯಾ ಅವರು ರಾಜ್‌ಕೋಟ್ ಜಿಲ್ಲೆಯಲ್ಲಿ ಬಿಜೆಪಿ ಅಧ್ಯಕ್ಷ ಹುದ್ದೆಯನ್ನು ಹೊಂದಿದ್ದರೆ, ಶಿವನಾಥ್ ಯಾದವ್ ಅವರು ಉತ್ತರ ಪ್ರದೇಶ ಬಿಜೆಪಿಯ ಮಾಜಿ ಉಪಾಧ್ಯಕ್ಷರಾಗಿದ್ದರು. ಶ್ಯಾಮ ಸಿಂಗ್ ಬಿಹಾರದಲ್ಲಿ ಬಿಜೆಪಿಯ ಉಪಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ ಮತ್ತು ಪಿವಿ ಪಾರ್ಥಸಾರಥಿ ಬಿಜೆಪಿಯ ಒಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದಾರೆ. ಪಾರ್ಥಸಾರಥಿ ಆಂಧ್ರಪ್ರದೇಶ ಬಿಜೆಪಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ ಮತ್ತು ತಿರುಪತಿ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯ ಉಸ್ತುವಾರಿಯಾಗಿದ್ದರು. ಬಿಜೆಪಿಯ ಪ್ರಮುಖ ಪದಾಧಿಕಾರಿಯೊಬ್ಬರು ‘ಸ್ವತಂತ್ರ’ ನಿರ್ದೇಶಕರಾಗಿ ಬಿಇಎಲ್‌ನ ಮಂಡಳಿಗೆ ನಾಮನಿರ್ದೇಶನಗೊಂಡಿರುವುದು ಆಯೋಗಕ್ಕೆ ಹೆಚ್ಚು ಆಕ್ಷೇಪಾರ್ಹವಲ್ಲವೇ? ಖಂಚಾರಿಯಾ ಅವರ ಜೊತೆಗೆ BELನ ಕನಿಷ್ಠ ಮೂರು ಸ್ವತಂತ್ರ ನಿರ್ದೇಶಕರು ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದಾರೆ. ಇವಿಎಂಗಳ ವಿರುದ್ಧ ಎತ್ತಿರುವ ಪ್ರಶ್ನೆಗಳನ್ನು ಪರಿಹರಿಸಲು ಇಸಿಐ ವಿಫಲವಾಗಿದೆ. ECI ಅದನ್ನು ಮೊಂಡುತನದಿಂದ ಸಮರ್ಥಿಸಿಕೊಳ್ಳುತ್ತಿದೆ. ಅನೇಕ ದೇಶಗಳು EVM ಗಳನ್ನು ಬಳಸುವುದನ್ನು ನಿಲ್ಲಿಸಿವೆ ಎಂದು ಶರ್ಮಾ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು ಇವಿಎಂ ಯಂತ್ರಗಳನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ ಎಂದು  ಡೆಮೊವನ್ನು ತೊರಿಸಿದ್ದರು. ಅವರು ತಾಂತ್ರಿಕ ತಜ್ಞ ಅತುಲ್ ಪಟೇಲ್ ಅವರ ಸಹಾಯದಿಂದ ಇವಿಎಂಗಳನ್ನು ಹೇಗೆ ಟ್ಯಾಂಪರಿಂಗ್ ಮಾಡಬಹುದು ಎಂಬುದರ ಡೆಮೊವನ್ನು ನಡೆಸಿದ್ದಾರೆ. ಯಂತ್ರದ ಅಸಮರ್ಪಕ ಕಾರ್ಯವನ್ನು ತೋರಿಸಲು ಪಟೇಲ್ ಒಂದು ಕಲ್ಲಂಗಡಿ ಚಿಹ್ನೆಗೆ ಎರಡು ಮತಗಳನ್ನು ಹಾಕಿದರು. ಯಂತ್ರದಲ್ಲಿ ಕಲ್ಲಂಗಡಿ ಗುಂಡಿಯನ್ನು ಒತ್ತಿದರೂ, VVPAT ಸ್ಲಿಪ್ ಸೇಬಿನ ಚಿಹ್ನೆಯನ್ನು ಹೊಂದಿತ್ತು. ECI ಈ ಆರೋಪಗಳನ್ನು ತಳ್ಳಿಹಾಕಿದೆ ಮತ್ತು EVMನ್ನು ಕಂಪ್ಯೂಟರ್‌ನಿಂದ ನಿಯಂತ್ರಿಸಲಾಗುವುದಿಲ್ಲ ಮತ್ತು ಬೇರೆ ಯಾವುದೇ ನೆಟ್‌ವರ್ಕ್‌ಗೆ ಸಂಪರ್ಕ ಹೊಂದಿಲ್ಲ, ಅದು ಹ್ಯಾಕ್ ಆಗುವುದನ್ನು ತಡೆಯುತ್ತದೆ ಎಂದು ಹೇಳಿಕೊಂಡಿದೆ.

ಇದನ್ನು ಓದಿ: ‘ದಲಿತರು’ ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ ‘ಹೊಸ ವಿಗ್ರಹ’ ಪ್ರತಿಷ್ಠಾಪನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....