Homeಮುಖಪುಟಇವಿಎಂ ತಯಾರಿಸುವ BEL ಬೋರ್ಡ್‌ಗೆ ಬಿಜೆಪಿ ನಾಯಕರ ನಾಮನಿರ್ದೇಶನ!

ಇವಿಎಂ ತಯಾರಿಸುವ BEL ಬೋರ್ಡ್‌ಗೆ ಬಿಜೆಪಿ ನಾಯಕರ ನಾಮನಿರ್ದೇಶನ!

- Advertisement -
- Advertisement -

ಭಾರತ ಸರ್ಕಾರದ ಮಾಜಿ ಕಾರ್ಯದರ್ಶಿ ಇಎಎಸ್ ಶರ್ಮಾ ಅವರು ಬಿಜೆಪಿಗೆ ಆಪ್ತರಾಗಿರುವ ನಿರ್ದೇಶಕರನ್ನು ಇವಿಎಂ ತಯಾರಿಸುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್)ನ ಬೋರ್ಡ್‌ನಿಂದ ತೆಗೆದುಹಾಕುವಂತೆ ಒತ್ತಾಯಿಸಿ ಭಾರತ ಚುನಾವಣಾ ಆಯೋಗಕ್ಕೆ (ಇಸಿಐ) ಪತ್ರ ಬರೆದಿದ್ದಾರೆ.

ಚುನಾವಣೆಯಲ್ಲಿ ಬಳಸಲಾಗುವ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು (ಇವಿಎಂಗಳು) ಚುನವಣಾ ಆಯೋಗದ ತಾಂತ್ರಿಕ ತಜ್ಞರ ಸಮಿತಿಯ ಮಾರ್ಗದರ್ಶನದಲ್ಲಿ ಬಿಇಎಲ್ ಮತ್ತು ಇಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್‌ನಿಂದ ದೇಶೀಯವಾಗಿ ತಯಾರಿಸುತ್ತದೆ. ಇವಿಎಂಗಳಿಗಾಗಿ ಸಾಫ್ಟ್‌ವೇರ್‌ನ್ನು ಅಭಿವೃದ್ಧಿಪಡಿಸುವ ಬಿಇಎಲ್‌ ಮಂಡಳಿಯ ಸ್ವತಂತ್ರ ನಿರ್ದೇಶಕರ ಹುದ್ದೆಗೆ ಕನಿಷ್ಠ ನಾಲ್ವರು ಬಿಜೆಪಿ ನಾಮನಿರ್ದೇಶಿತರನ್ನು ಹೇಗೆ ಆಯ್ಕೆ ಮಾಡಲಾಗಿದೆ ಎಂಬುದನ್ನು ಆಯೋಗದ ಗಮನಕ್ಕೆ ತಂದಿದ್ದೇನೆ ಎಂದು ಶರ್ಮಾ ಹೇಳಿದರು.

ಅವರ ಪತ್ರದಲ್ಲಿ, ಬಿಇಎಲ್‌ನ ವ್ಯವಹಾರಗಳನ್ನು ನಡೆಸುವಲ್ಲಿ ರಾಜಕೀಯ ಪಕ್ಷವಾಗಿ ಬಿಜೆಪಿ ಪ್ರಮುಖ ಪಾತ್ರವನ್ನು ಹೊಂದಿದೆ. ಇದು ಬಿಜೆಪಿ ಬಿಇಎಲ್‌ನ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುತ್ತದೆ. ಈ ಎಂಟರ್‌ಪ್ರೈಸಸ್‌ಗಳು (CPSE) ಇವಿಎಂಗಳ ತಯಾರಿಕೆ ಮತ್ತು ಪೂರೈಕೆಯಲ್ಲಿ ತೊಡಗಿಸಿಕೊಂಡಿದೆ. ಈ ಹಿಂದೆ ನಾನು ಈ ಗೊಂದಲದ ಸಂಗತಿಯನ್ನು ECIಯ ಗಮನಕ್ಕೆ ತಂದಿದ್ದರೂ, ECI ಈ ಬಗ್ಗೆ ಸರಿಯಾಗಿ ಪ್ರತಿಕ್ರಿಯಿಸಿಲ್ಲ ಎಂದು ನಾನು ಕಂಡುಕೊಂಡಿದ್ದೇನೆ. ಕಂಪನಿಯ ವ್ಯವಹಾರಗಳನ್ನು ನಿರ್ವಹಿಸುವಲ್ಲಿ ಸ್ವತಂತ್ರ ನಿರ್ದೇಶಕರು ಪ್ರಮುಖ ಪಾತ್ರ ವಹಿಸಬೇಕೆಂದು ಕಂಪನಿಗಳ ಕಾಯಿದೆ ಕಡ್ಡಾಯಗೊಳಿಸುತ್ತದೆ. ಒಟ್ಟು 7 ಸ್ವತಂತ್ರ ನಿರ್ದೇಶಕರಲ್ಲಿ ಕನಿಷ್ಠ ನಾಲ್ವರು ಅಂದರೆ ಮನ್ಸುಖ್ಭಾಯ್ ಶಮ್ಜಿಭಾಯಿ ಖಚರಿಯಾ, ಡಾ ಶಿವನಾಥ್ ಯಾದವ್, ಶ್ಯಾಮ ಸಿಂಗ್ ಮತ್ತು ಪಿವಿ ಪಾರ್ಥಸಾರಥಿ ಬಿಜೆಪಿ ಪಕ್ಷದ ಜೊತೆ ಸಂಪರ್ಕ ಹೊಂದಿದವಾರಾಗಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಖಚರಿಯಾ ಅವರು ರಾಜ್‌ಕೋಟ್ ಜಿಲ್ಲೆಯಲ್ಲಿ ಬಿಜೆಪಿ ಅಧ್ಯಕ್ಷ ಹುದ್ದೆಯನ್ನು ಹೊಂದಿದ್ದರೆ, ಶಿವನಾಥ್ ಯಾದವ್ ಅವರು ಉತ್ತರ ಪ್ರದೇಶ ಬಿಜೆಪಿಯ ಮಾಜಿ ಉಪಾಧ್ಯಕ್ಷರಾಗಿದ್ದರು. ಶ್ಯಾಮ ಸಿಂಗ್ ಬಿಹಾರದಲ್ಲಿ ಬಿಜೆಪಿಯ ಉಪಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ ಮತ್ತು ಪಿವಿ ಪಾರ್ಥಸಾರಥಿ ಬಿಜೆಪಿಯ ಒಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದಾರೆ. ಪಾರ್ಥಸಾರಥಿ ಆಂಧ್ರಪ್ರದೇಶ ಬಿಜೆಪಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ ಮತ್ತು ತಿರುಪತಿ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯ ಉಸ್ತುವಾರಿಯಾಗಿದ್ದರು. ಬಿಜೆಪಿಯ ಪ್ರಮುಖ ಪದಾಧಿಕಾರಿಯೊಬ್ಬರು ‘ಸ್ವತಂತ್ರ’ ನಿರ್ದೇಶಕರಾಗಿ ಬಿಇಎಲ್‌ನ ಮಂಡಳಿಗೆ ನಾಮನಿರ್ದೇಶನಗೊಂಡಿರುವುದು ಆಯೋಗಕ್ಕೆ ಹೆಚ್ಚು ಆಕ್ಷೇಪಾರ್ಹವಲ್ಲವೇ? ಖಂಚಾರಿಯಾ ಅವರ ಜೊತೆಗೆ BELನ ಕನಿಷ್ಠ ಮೂರು ಸ್ವತಂತ್ರ ನಿರ್ದೇಶಕರು ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದಾರೆ. ಇವಿಎಂಗಳ ವಿರುದ್ಧ ಎತ್ತಿರುವ ಪ್ರಶ್ನೆಗಳನ್ನು ಪರಿಹರಿಸಲು ಇಸಿಐ ವಿಫಲವಾಗಿದೆ. ECI ಅದನ್ನು ಮೊಂಡುತನದಿಂದ ಸಮರ್ಥಿಸಿಕೊಳ್ಳುತ್ತಿದೆ. ಅನೇಕ ದೇಶಗಳು EVM ಗಳನ್ನು ಬಳಸುವುದನ್ನು ನಿಲ್ಲಿಸಿವೆ ಎಂದು ಶರ್ಮಾ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು ಇವಿಎಂ ಯಂತ್ರಗಳನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ ಎಂದು  ಡೆಮೊವನ್ನು ತೊರಿಸಿದ್ದರು. ಅವರು ತಾಂತ್ರಿಕ ತಜ್ಞ ಅತುಲ್ ಪಟೇಲ್ ಅವರ ಸಹಾಯದಿಂದ ಇವಿಎಂಗಳನ್ನು ಹೇಗೆ ಟ್ಯಾಂಪರಿಂಗ್ ಮಾಡಬಹುದು ಎಂಬುದರ ಡೆಮೊವನ್ನು ನಡೆಸಿದ್ದಾರೆ. ಯಂತ್ರದ ಅಸಮರ್ಪಕ ಕಾರ್ಯವನ್ನು ತೋರಿಸಲು ಪಟೇಲ್ ಒಂದು ಕಲ್ಲಂಗಡಿ ಚಿಹ್ನೆಗೆ ಎರಡು ಮತಗಳನ್ನು ಹಾಕಿದರು. ಯಂತ್ರದಲ್ಲಿ ಕಲ್ಲಂಗಡಿ ಗುಂಡಿಯನ್ನು ಒತ್ತಿದರೂ, VVPAT ಸ್ಲಿಪ್ ಸೇಬಿನ ಚಿಹ್ನೆಯನ್ನು ಹೊಂದಿತ್ತು. ECI ಈ ಆರೋಪಗಳನ್ನು ತಳ್ಳಿಹಾಕಿದೆ ಮತ್ತು EVMನ್ನು ಕಂಪ್ಯೂಟರ್‌ನಿಂದ ನಿಯಂತ್ರಿಸಲಾಗುವುದಿಲ್ಲ ಮತ್ತು ಬೇರೆ ಯಾವುದೇ ನೆಟ್‌ವರ್ಕ್‌ಗೆ ಸಂಪರ್ಕ ಹೊಂದಿಲ್ಲ, ಅದು ಹ್ಯಾಕ್ ಆಗುವುದನ್ನು ತಡೆಯುತ್ತದೆ ಎಂದು ಹೇಳಿಕೊಂಡಿದೆ.

ಇದನ್ನು ಓದಿ: ‘ದಲಿತರು’ ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ ‘ಹೊಸ ವಿಗ್ರಹ’ ಪ್ರತಿಷ್ಠಾಪನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...