Homeಮುಖಪುಟಚುನಾವಣಾ ಬಾಂಡ್ ಖರೀದಿಸಲು ಆರೆಸ್ಸೆಸ್‌ನವರು ಎನ್ನಲಾದ ವ್ಯಕ್ತಿಗಳಿಗೆ ರೂ. 2.5 ಕೋಟಿ ನೀಡಿದ್ದ ಮಾಜಿ ನ್ಯಾಯಾಧೀಶರಿಗೆ...

ಚುನಾವಣಾ ಬಾಂಡ್ ಖರೀದಿಸಲು ಆರೆಸ್ಸೆಸ್‌ನವರು ಎನ್ನಲಾದ ವ್ಯಕ್ತಿಗಳಿಗೆ ರೂ. 2.5 ಕೋಟಿ ನೀಡಿದ್ದ ಮಾಜಿ ನ್ಯಾಯಾಧೀಶರಿಗೆ ವಂಚನೆ

- Advertisement -
- Advertisement -

ತಮ್ಮ ಕುಟುಂಬಕ್ಕೆ ಸಹಾಯ ಮಾಡಲು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಸಂಘಟನೆಗೆ ಸೇರಿದವರು ಎನ್ನಲಾದ ಇಬ್ಬರು ವ್ಯಕ್ತಿಗಳಿಗೆ ಕೋಟ್ಯಾಂತರ ರೂಪಾಯಿ ಹಣ ಕೊಟ್ಟ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರು ವಂಚನೆಗೆ ಒಳಗಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಆಂಧ್ರ ಪ್ರದೇಶ ಹೈಕೋರ್ಟ್ ಮತ್ತು ಇನ್ನೊಂದು ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದ ನಿವೃತ್ತ ನ್ಯಾಯಾಧೀಶರು, ಬಿಜೆಪಿಗೆ ಚುನಾವಣಾ ಬಾಂಡ್ ಖರೀದಿಸಲು ಎಂದು ಭಾವಿಸಿ ಇಬ್ಬರು ವ್ಯಕ್ತಿಗಳಿಗೆ 2.5 ಕೋಟಿ ರೂ. ನೀಡಿದ್ದರು. ಇದಕ್ಕೆ ಪ್ರತಿಯಾಗಿ ಆ ವ್ಯಕ್ತಿಗಳು ಯುಎಸ್‌ನಲ್ಲಿ ಅವರ ಮೊಮ್ಮಕ್ಕಳಿಗೆ ಉದ್ಯೋಗ ನೀಡುವ ಭರವಸೆ ಕೊಟ್ಟಿದ್ದರು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಹೈದರಾಬಾದ್‌ನಲ್ಲಿ ನೆಲೆಸಿರುವ ಅನಿಲ್ ಮತ್ತು ಶ್ರೀಧರ್ (ಹೆಸರು ಬದಲಿಸಲಾಗಿದೆ) ಎಂಬ ವ್ಯಕ್ತಿಗಳಿಗೆ ನಾನು ಹಣ ನೀಡಿದ್ದೇನೆ. ಎರಡು ವರ್ಷಗಳಿಂದ ಆ ಹಣವನ್ನು ಮರಳಿ ಪಡೆಯಲು ಪ್ರಯತ್ನಿಸುತ್ತಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ನ್ಯಾಯಾಧೀಶರು ಅಸಹಾಯಕತೆ ತೋಡಿಕೊಂಡಿರುವುದಾಗಿ ನ್ಯೂಸ್ ಮಿನಿಟ್ ಹೇಳಿದೆ. ಇಬ್ಬರು ವ್ಯಕ್ತಿಗಳ ವಿರುದ್ದ ನ್ಯಾಯಾಧೀಶರು ದೂರು ದಾಖಲಿಸಿದ್ದಾರೆ. ಈ ಪೈಕಿ ಒಬ್ಬನಿಗೆ ಜಾಗತಿಕ ಹಿಂದೂ ಕಾಂಗ್ರೆಸ್ ಸಂಘಟನೆಯೊಂದಿಗೆ ಸಂಪರ್ಕವಿದೆ ಎನ್ನಲಾಗಿದೆ.

ಚುನಾವಣಾ ಬಾಂಡ್‌ಗಳು ಬಡ್ಡಿ ರಹಿತ ಬಾಂಡ್‌ಗಳಾಗಿವೆ. ಇದನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ನಾಗರಿಕರು ಅಥವಾ ಕಾರ್ಪೊರೇಟ್ ಸಂಸ್ಥೆಗಳು ಯಾವುದೇ ಮೌಲ್ಯಕ್ಕೆ ಖರೀದಿಸಬಹುದು ಮತ್ತು ನೋಂದಾಯಿತ ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ನೀಡಬಹುದು. ಇತ್ತೀಚಿನ ಐತಿಹಾಸಿಕ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಿದೆ. ಅದು ಅಸಂವಿಧಾನಿಕ ಎಂದಿದೆ. ಇದರಿಂದ ಅಪರಿಚಿತರಿಗೆ ಹಣ ಕೊಟ್ಟಿರುವ ನ್ಯಾಯಾಧೀಶರು ಬಾಂಡ್‌ಗಳನ್ನು ಪಡೆಯಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಣ ಪಡೆದ ಇಬ್ಬರ ವಿರುದ್ದ ವಂಚನೆ ದೂರು ದಾಖಲಿಸಿದ್ದಾರೆ.

ನ್ಯಾಯಾಧೀಶರ ಪ್ರಕಾರ, ತಾವು ದೂರು ನೀಡಿರುವ ಅನಿಲ್ ಎಂಬ ವ್ಯಕ್ತಿಯು ತನ್ನ ಅಳಿಯನಿಗೆ ಪರಿಚಿತನಿದ್ದ. ಅವರು ನಾವು ಆರೆಸ್ಸೆಸ್‌ನ ಪ್ರಮುಖ ನಾಯಕರು ಎಂಬಂತೆ ಬಿಂಬಿಸಿಕೊಂಡಿದ್ದರು. ನಾವು ಹಣದೊಂದಿಗೆ ಚುನಾವಣಾ ಬಾಂಡ್ ಗಳನ್ನು ಖರೀದಿಸಬಲ್ಲೆವು. ಅದಕ್ಕೆ ಪ್ರತಿಯಾಗಿ ಅಮೆರಿಕಾದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿರುವ ನಿಮ್ಮ ಮೊಮ್ಮಕ್ಕಳಿಗೆ ಉದ್ಯೋಗ ದೊರಕಿಸಿಕೊಡಬಲ್ಲೆವು ಎಂದು ಭರವಸೆ ನೀಡಿದ್ದರು ಎಂದು ಹೇಳಲಾಗಿದೆ.

ಈ ಭರವಸೆಯನ್ನು ನಂಬಿದ್ದ 72 ವರ್ಷದ ನ್ಯಾಯಾಧೀಶರು ತಮ್ಮ ಪತ್ನಿ ಹಾಗೂ ತಮ್ಮ ಖಾತೆಯಿಂದ ಹಣವನ್ನು ಡ್ರಾ ಮಾಡಿ, ಆ ಇಬ್ಬರು ವ್ಯಕ್ತಿಗಳಿಗೆ ನೀಡಿದ್ದರು. ನಾನು ನೀಡಿದ ಪ್ರತಿ ಪೈಸೆಯೂ ಬಿಳಿ ಹಣವಾಗಿತ್ತು ಎಂದು ತಮ್ಮ ವಹಿವಾಟಿನ ಕುರಿತು ನ್ಯಾಯಾಧೀಶರು ಉಲ್ಲೇಖಿಸಿದ್ದಾರೆ. ಹಣ ಕೊಟ್ಟ ಬಳಿಕ ಚುನಾವಣಾ ಬಾಂಡ್‌ಗಳನ್ನು ಪಡೆಯಲು ಹಾಗೂ ಆ ಇಬ್ಬರು ವ್ಯಕ್ತಿಗಳು ತಮ್ಮ ಭರವಸೆ ಈಡೇರಿಸುತ್ತಾರೆ ಎಂದು ಕಾದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ನ್ಯಾಯಾಧೀಶರು ಅಳಲು ತೋಡಿಕೊಂಡಿದ್ದಾರೆ.

ಹೈದಾರಾಬಾದ್‌ನ ಫಿಲ್ಮ್ ನಗರ್ ಪೊಲೀಸ್ ಠಾಣೆಗೆ ದೂರು ನೀಡಿರುವ ನ್ಯಾಯಾಧೀಶರು, “ಇಬ್ಬರು ವ್ಯಕ್ತಿಗಳ ಮಾತನ್ನು ನಂಬಿ ನನ್ನ ಪತ್ನಿ ಮತ್ತು ಪುತ್ರಿಯರು ಕಾಲ ಕಾಲಕ್ಕೆ ಅವರ ಖಾತೆಗೆ ಸುಮಾರು 2.5 ಕೋಟಿ ರೂ. ಹಣ ಕಳುಹಿಸಿದ್ದಾರೆ. ಇದಕ್ಕೆ ನನ್ನ ಬಳಿ ವಾಟ್ಸಾಪ್ ಸಂದೇಶ ಸಾಕ್ಷಿಯಿದೆ. ನಾವು ದೊಡ್ಡ ಮೊತ್ತ ನೀಡಿ ಮನವಿ ಮಾಡಿಕೊಂಡರೂ ಅವರು ನಮಗೆ ಯಾವುದೇ ಬಾಂಡ್ ಕೊಟ್ಟಿಲ್ಲ. ಅಲ್ಲದೆ, ನಮ್ಮ ಮೊಮ್ಮಕ್ಕಳಿಗೆ ಯುಎಸ್‌ನಲ್ಲಿ ಉದ್ಯೋಗ ಕೊಡಿಸುವ ಭರವಸೆಯನ್ನೂ ಈಡೇರಿಸಿಲ್ಲ. ಇದು ಚುನಾವಣಾ ಬಾಂಡ್‌ಗಳ ಹೆಸರಿನಲ್ಲಿ ಹಣ ಸಂಗ್ರಹಿಸುವುದನ್ನು ವಿರೋಧಿಸುವ ಸುಪ್ರೀಂ ಕೋರ್ಟ್ ಇತ್ತೀಚಿನ ತೀರ್ಪಿನ ಸ್ಪಷ್ಟ ಉಲ್ಲಂಘನೆಯಾಗಿದೆ. ಯಾವುದೇ ಬಾಂಡ್‌ಗಳನ್ನು ನೀಡದೆ ನನ್ನ ಬಳಿಯಿಂದ ಬರೋಬ್ಬರಿ 2.5 ಕೋಟಿ ರೂ. ಮೊತ್ತ ಸಂಗ್ರಹಿಸಿರುವುದು ಹಣ ದುರುಪಯೋಗಪಡಿಸಿಕೊಂಡಿರುವುದನ್ನು ಸ್ಪಷ್ಟಪಡಿಸುತ್ತದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

“ಬಿಜೆಪಿ ಇಂತಹ ವಂಚನೆ ಮಾಡುತ್ತದೆ ಎಂದು ನಾನು ಭಾವಿಸುವುದಿಲ್ಲ. ಇಬ್ಬರು ವ್ಯಕ್ತಿಗಳು ಆರ್‌ಎಸ್‌ಎಸ್ ಮತ್ತು ಬಿಜೆಪಿ ಹೆಸರು ಬಳಸಿಕೊಂಡು ನಮಗೆ ವಂಚಿಸಿದ್ದಾರೆ. ನಾನು ಯಾವುದೇ ರಾಜಕೀಯ ಪಕ್ಷದ ಬೆಂಬಲಿಗ ಅಲ್ಲ. ನನ್ನ ಮೊಮ್ಮಕ್ಕಳಿಗಾಗಿ ಇದೆಲ್ಲವನ್ನು ಮಾಡಿದ್ದೇನೆ. ಈ 74ನೇ ವಯಸ್ಸಿನಲ್ಲಿ ನಾನು ನನಗಾಗಿ ಏನು ಬಯಸಲು ಸಾಧ್ಯ? ನನ್ನ ಮೊಮ್ಮಕ್ಕಳು ಕೆಲಸ ಪಡೆದು ಅವರ ಫೋಷಕರನ್ನು ಚೆನ್ನಾಗಿ ನೋಡಿಕೊಳ್ಳಲಿ ಎಂಬ ಉದ್ದೇಶದಿಂದ ಇದನ್ನು ಮಾಡಿದೆ ಎಂದಿದ್ದಾರೆ.

ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಿರುವ ಫೆಬ್ರವರಿ 15,2024 ರ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿದ ನ್ಯಾಯಾಧೀಶರು, ನನಗೆ ಬಾಂಡ್‌ಗಳನ್ನು ನೀಡಬೇಕೆಂದು ನಾನು ಒತ್ತಾಯಿಸಿದರೂ, ನೀಡದೆ ಹಣ ಸಂಗ್ರಹಿಸಿರುವುದು ಅಪರಾಧವಾಗಿದೆ. ಇದು ನಂಬಿಕೆಯ ಉಲ್ಲಂಘನೆ, ಕ್ರಿಮಿನಲ್ ದುರ್ಬಳಕೆ, ವಂಚನೆಯಾಗಿದೆ. ಆರೋಪಿಗಳು ಈ ವಿಷಯವನ್ನು ಇತ್ಯರ್ಥಪಡಿಸಿದರೆ, ನಾನು ಪ್ರಕರಣವನ್ನು ಹಿಂಪಡೆಯುತ್ತೇನೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ನ್ಯೂಸ್‌ ಮಿನಿಟ್ ಸುದ್ದಿ ಸಂಸ್ಥೆಯು ನ್ಯಾಯಾಧೀಶರು ಹೆಸರಿಸಿರುವ ಅನಿಲ್ ಅವರನ್ನು ಸಂಪರ್ಕಿಸಿದಾಗ ಅವರು ಆರೋಪಗಳನ್ನು ಅಲ್ಲಗಳೆದಿದ್ದಾರೆ. “ನ್ಯಾಯಾಧೀಶರ ಆರೋಪ ಸುಳ್ಳಾಗಿದೆ. ನಾನೊಬ್ಬ ಸಣ್ಣ ವ್ಯಕ್ತಿ. ನನಗೆ ಆರ್‌ಎಸ್‌ಎಸ್‌ ಅಥವಾ ಬಿಜೆಪಿಯೊಂದಿಗೆ ಯಾವುದೇ ಸಂಪರ್ಕವಿಲ್ಲ. ನಾವು ಎಂದಿಗೂ ಹಣ ಪಡೆದುಕೊಂಡಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ತನಗೆ ಮಾಜಿ ನ್ಯಾಯಾಧೀಶರ ಪರಿಚಯವಿದೆ ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ. ಎಲ್ಲರನ್ನೂ ಬಲ್ಲಂತೆ ನನಗೆ ನ್ಯಾಯಾಧೀಶರ ಪರಿಚಯವಿದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಆದರೆ, ಅನಿಲ್ ಅವರ ಲಿಂಕ್ಡ್ ಇನ್ ವ್ಯಕ್ತಿ ವಿವರದ ಪ್ರಕಾರ, ಅವರು ಆರೆಸ್ಸೆಸ್ ನೊಂದಿಗೆ ನಿಕಟವಾಗಿ ಕಾರ್ಯಾಚರಿಸುವ ವಿಶ್ವ ಹಿಂದೂ ಆರ್ಥಿಕ ವೇದಿಕೆಯ ಭಾಗವಾದ ವಿಶ್ವ ಹಿಂದೂ ಕಾಂಗ್ರೆಸ್ ಸಂಘಟನೆಯ ಸಮನ್ವಯಕಾರರಾಗಿದ್ದಾರೆ ಎಂದು ತಿಳಿದು ಬಂದಿದೆ.

ಫಿಲ್ಮ್ ನಗರ್ ಠಾಣೆ ಪೊಲೀಸರು ಈ ಸಂಬಂಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 406 (ಕ್ರಿಮಿನಲ್ ವಿಶ್ವಾಸಘಾತುಕತನ), ಸೆಕ್ಷನ್420(ವಂಚನೆಯ ಕೆಲಸ)ದೊಂದಿಗೆ ಸೆಕ್ಷನ್ 34 (ಸಾಮಾನ್ಯ ಉದ್ದೇಶದೊಂದಿಗೆ ಹಲವಾರು ವ್ಯಕ್ತಿಗಳಿಗೆ ಎಸಗುವ ವಂಚನೆ) ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಪ್ರಾರಂಭಿಸಿದ್ದಾರೆ.

ಆದರೆ, ನ್ಯೂಸ್ ಮಿನಿಟ್‌ನಲ್ಲಿ ವರದಿ ಪ್ರಕಟವಾಗುತ್ತಿದ್ದಂತೆಯೆ, ನ್ಯಾಯಾಧೀಶರು ಪೊಲೀಸ್ ಠಾಣೆಯಿಂದ ತಮ್ಮ ದೂರನ್ನು ಹಿಂಪಡೆದಿದ್ದಾರೆ. ದೂರನ್ನು ಮುಕ್ತಾಯಗೊಳಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಪೊಲೀಸರಿಗೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದ ವಕೀಲ್‌ ಹಸನ್‌ ನಿವಾಸವನ್ನು ಕೆಡವಿದ ಸ್ಥಳೀಯಾಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...