Homeಮುಖಪುಟಅಸ್ಸಾಂ: ಪ್ಯಾಡ್‌ವುಮೆನ್ ಆಗಿ ಬದಲಾದ ಮಾಜಿ ಬಂಡುಕೋರರು

ಅಸ್ಸಾಂ: ಪ್ಯಾಡ್‌ವುಮೆನ್ ಆಗಿ ಬದಲಾದ ಮಾಜಿ ಬಂಡುಕೋರರು

- Advertisement -
- Advertisement -

ಅಸ್ಸಾಂನ ಉದಲ್‌ಗುರಿ ಜಿಲ್ಲೆಯಲ್ಲಿ ಒಂದು ಕಾಲದಲ್ಲಿ ಬಂದೂಕು ಹಿಡಿಯುತ್ತಿದ್ದ ಕೈಗಳು ಈಗ ಸ್ಯಾನಿಟರಿ ಪ್ಯಾಡ್‌ಗಳನ್ನು ತಯಾರಿಸಲು ಕಲಿಯುತ್ತಿವೆ.

ಹೌದು, ಮಾಜಿ ಮಹಿಳಾ ಬಂಡುಕೋರರಿಗೆ ಬೋಡೋಲ್ಯಾಂಡ್ ಪ್ರಾದೇಶಿಕ ಪ್ರಾಂತ್ಯ (ಬಿಟಿಆರ್) ಆಡಳಿತದಿಂದ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ತಯಾರಿಸಲು ತರಬೇತಿ ನೀಡಲಾಗುತ್ತಿದ್ದು, ಸ್ಯಾನಿಟರಿ ಪ್ಯಾಡ್ ವಾಣಿಜ್ಯ ಉತ್ಪಾದನಾ ಘಟಕ ಶೀಘ್ರದಲ್ಲೇ ಪ್ರಾರಂಭವಾಗುವ ನಿರೀಕ್ಷೆಯಿದೆ.

“ಮಾಜಿ ಬಂಡುಕೋರರಿಗೆ ಪುನರ್ವಸತಿ ಬಹಳ ಮುಖ್ಯವಾಗಿದೆ. ನಾವು ಅವರ ಆಸಕ್ತಿ ಮತ್ತು ಪರಿಣತಿಯ ಕ್ಷೇತ್ರಗಳನ್ನು ಕಂಡು ಹಿಡಿದು, ಅವರಿಗೆ ತರಬೇತಿ ನೀಡಿ ಅದಕ್ಕೆ ಅನುಗುಣವಾಗಿ ಉದ್ಯೋಗ ಕೊಡುತ್ತಿದ್ದೇವೆ” ಎಂದು ಬಿಟಿಆರ್‌ನ ಮುಖ್ಯ ಕಾರ್ಯನಿರ್ವಾಹಕ ಸದಸ್ಯ ಪ್ರಮೋದ್ ಬೊರೊ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಶರಣಾಗುವ ಹೋರಾಟಗಾರರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಆರ್ಥಿಕ ನೆರವು ನೀಡುವುದರ ಜೊತೆಗೆ ಬಿಟಿಆರ್ ಸಂಸ್ಥೆಯು ಉದ್ಯೋಗಾವಕಾಶ ಕಲ್ಪಿಸಲು ಸಹಕಾರಿಯಾಗಿದೆ ಎಂದು ಪ್ರಮೋದ್ ಬೊರೊ ಹೇಳಿದ್ದಾರೆ.

“ಮಾಜಿ ಬಂಡುಕೋರರ ಪುನರ್ವಸತಿಗೆ ಸಂಬಂಧಪಟ್ಟಂತೆ ನಾವು ಹಲವು ಕಾರ್ಯಕ್ರಮಗಳನ್ನು ಪ್ರಾರಂಭಿಸಿದ್ದೇವೆ. ಅವುಗಳಲ್ಲಿ ಮಾಜಿ ಬಂಡುಕೋರರ ಸಹಕಾರ ಸಂಘಗಳನ್ನು ರಚಿಸುವುದು ಮತ್ತು ಅವರಿಗೆ ಜೀವನೋಪಾಯವನ್ನು ಕಂಡುಕೊಳ್ಳಲು ಸಹಾಯ ಮಾಡುವುದು ಪ್ರಮುಖವಾದುದು” ಎಂದು ಬಿಟಿಆರ್ ಮುಖ್ಯಸ್ಥರು ತಿಳಿಸಿದ್ದಾರೆ.

ನಮ್ಮ ಕಾರ್ಯಕ್ರಮಕ್ಕೆ ‘ಮಿಷನ್ ಬ್ಲಾಸಮ್ ಎಗೈನ್’ ಎಂದು ಹೆಸರಿಡಲಾಗಿದೆ. ಅಕ್ಕಿ ಗಿರಣಿಗಳಿಂದ ಹಿಡಿದು ಸ್ಯಾನಿಟರಿ ಪ್ಯಾಡ್ ತಯಾರಿಕೆ ಘಟಕಗಳವರೆಗೆ, ವಿವಿಧ ಸಹಕಾರಿ ಸಂಸ್ಥೆಗಳು ಇದರ ಅಡಿಯಲ್ಲಿ ಬರುತ್ತವೆ ಎಂದು ಬೊರೊ ಮಾಹಿತಿ ನೀಡಿದ್ದಾರೆ.

‘ಮಿಷನ್ ಬ್ಲಾಸಮ್ ಎಗೈನ್’ ವಿವರಗಳನ್ನು ಹಂಚಿಕೊಂಡ ಬಿಟಿಆರ್‌ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಬೈನೌರಲ್ ವರಿ, 30 ಸಹಕಾರಿ ಸಂಘಗಳನ್ನು ಸ್ಥಾಪಿಸುವ ಗುರಿಯನ್ನು ನಿಗದಿಪಡಿಸಲಾಗಿದೆ. ಈ ಪೈಕಿ 21 ಸಹಕಾರಿ ಸಂಘಗಳು ಈಗಾಗಲೇ ರಚನೆಯಾಗಿದ್ದು, ಎಂಟು ಸಹಕಾರಿ ಸಂಘಗಳು ಮಂಜೂರಾಗಿವೆ. ಮಂಜೂರಾದ ಐದು ಯೋಜನೆಗಳು ಅಕ್ಕಿ ಗಿರಣಿಗಳನ್ನು ಸ್ಥಾಪಿಸಲು, ಒಂದು ಡೈರಿ ಸಂಸ್ಕರಣಾ ಘಟಕಕ್ಕೆ ಮತ್ತು ಇನ್ನೊಂದು ಸ್ಟೀವಿಯಾ ಸಂಸ್ಕರಣಾ ಘಟಕಕ್ಕೆ. ಸೇರಿವೆ. ಎಂಟನೇ ಸಹಕಾರಿ ಸಂಘವು ಸಂಪೂರ್ಣ ಮಹಿಳಾ ಸಂಘವಾಗಿದೆ. ಇದು ಸ್ಯಾನಿಟರಿ ಪ್ಯಾಡ್‌ಗಳನ್ನು ಉತ್ಪಾದಿಸಲಿದೆ. ಉದಲ್‌ಗಿರಿಯಲ್ಲಿ ಇದು ಸ್ಥಾಪನೆಯಾಗಲಿದೆ. ನೀತಿ ಆಯೋಗದಿಂದ ಒದಗಿಸಲಾದ ಯಂತ್ರವನ್ನು ಈಗಾಗಲೇ ಅಲ್ಲಿ ಸ್ಥಾಪಿಸಲಾಗಿದೆ. ಮಾಜಿ ಬಂಡುಕೋರರಿಗೆ ಕಸ್ಟಮೈಸ್ ಮಾಡಿದ ತರಬೇತಿಯನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

“ಒಂದೆರಡು ತಿಂಗಳೊಳಗೆ ಸ್ಯಾಟಿನರಿ ಪ್ಯಾಡ್ ಉತ್ಪಾದನೆಯನ್ನು ಪ್ರಾರಂಭಿಸುವ ಉದ್ದೇಶವಿದೆ” ಎಂದು ನ್ಯಾಶನಲ್ ಡೆಮಾಕ್ರಟಿಕ್ ಫ್ರಂಟ್ ಆಫ್ ಬೋಡೋಲ್ಯಾಂಡ್ (ಎನ್‌ಡಿಎಫ್‌ಬಿ) ನ, ಈಗ ವಿಸರ್ಜಿಸಲ್ಪಟ್ಟ ಬಣದ ಮಾಜಿ ಬಂಡುಕೋರ ವಾರಿ ಹೇಳಿದ್ದಾರೆ.

ಈ ಮಿಷನ್ ಅಡಿಯಲ್ಲಿ ಎಲ್ಲಾ ಉತ್ಪನ್ನಗಳನ್ನು ‘Rwdwm’ (ಬಡ್) ಬ್ರ್ಯಾಂಡ್ ಅಡಿಯಲ್ಲಿ ಮಾರಾಟ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

“ಕಳೆದ ಮೂರು ವರ್ಷಗಳಲ್ಲಿ ಬಿಟಿಆರ್‌ನಲ್ಲಿ ಯಾವುದೇ ಪ್ರಮುಖ ಹಿಂಸಾಚಾರ, ಬಂದ್‌ಗಳು ಅಥವಾ ಕೋಮು ಸಂಘರ್ಷಗಳು ನಡೆದಿಲ್ಲ ಎಂದು ಹೇಳಲು ನಮಗೆ ಸಂತೋಷವಾಗ್ತಿದೆ. ಶಾಂತಿ ಪುನಃಸ್ಥಾಪಿಸಲಾಗಿದೆ. ಜನರು ಇನ್ನು ಮುಂದೆ ಭಯದಿಂದ ಬದುಕುವ ಅಗತ್ಯವಿಲ್ಲ. ಬೋಡೋಗಳು ಮತ್ತು ಬೋಡೋಗಳಲ್ಲದವರಲ್ಲಿ ನಡುವಿನ ‘ತಪ್ಪು ತಿಳುವಳಿಕೆ’ ಯನ್ನು ಪರಿಹರಿಸಲಾಗುತ್ತಿದೆ. ಅದಕ್ಕಾಗಿ ಸ್ಥಳೀಯ ಜನರನ್ನು ತೊಡಗಿಸಿಕೊಳ್ಳಲಾಗುತ್ತಿದೆ. ‘ಹ್ಯಾಪಿನೆಸ್ ಮಿಷನ್’ ಆರಂಭಿಸಲಾಗಿದ್ದು, ಇದರ ಮೂಲಕ ವಿವಿಧ ಸಮುದಾಯಗಳ ನಡುವೆ ಯಾವುದೇ ಸಮಸ್ಯೆ ಎದುರಾದರೆ ಮಧ್ಯಪ್ರವೇಶಿಸಲು ಯುವಕರು ಹಾಗೂ ಸಮುದಾಯದ ಮುಖಂಡರಿಗೆ ತರಬೇತಿ ನೀಡಲಾಗುತ್ತಿದೆ. ನಾನು ಬಿಟಿಆರ್‌ನಲ್ಲಿ ವಾಸಿಸುವ ವಿವಿಧ ಸಮುದಾಯಗಳ ಪ್ರತಿನಿಧಿಗಳನ್ನು ಸಹ ಭೇಟಿ ಮಾಡುತ್ತಿದ್ದೇನೆ. ಎಲ್ಲಾ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಕೆಲಸ ಮಾಡುತ್ತಿದ್ದೇನೆ ಎಂದು ಪ್ರಮೋದ್ ಬೊರೊ ಹೇಳಿದ್ದಾರೆ.

ಬೋಡೋಗಳು ಯಾರು, ಇವರು ಬಂದೂಕು ಹಿಡಿದದ್ದು ಯಾಕೆ?

ಹಲವಾರು ಸಮುದಾಯಗಳನ್ನು ಒಳಗೊಂಡ ಅಸ್ಸಾಂನ ಮೂಲ ನಿವಾಸಿಗಳನ್ನು ಒಟ್ಟಾಗಿ ಬೋಡೋಗಳು ಎಂದು ಕರೆಯಲಾಗುತ್ತದೆ. 1970ಕ್ಕೂ ಮುನ್ನ ಇವರೇ ಅಸ್ಸಾಂನಲ್ಲಿ ಬಹು ಸಂಖ್ಯಾತರಾಗಿದ್ದರು. 2011ರ ಜನಗಣತಿಯ ಪ್ರಕಾರ ಇವರ ಜನಸಂಖ್ಯೆ 14 ಲಕ್ಷಗಳಷ್ಟಿತ್ತು. ಇವರು ತಮ್ಮದೇ ಆದ ಸಂಸ್ಕೃತಿ, ಆಚರಣೆ, ನಂಬಿಕೆಗಳನ್ನು ಹೊಂದಿದ್ದಾರೆ. ಇದರ ಜೊತೆಗೆ ಬೋಡೋ ಪ್ರಾಂತ್ಯದಲ್ಲಿ ಸಾಕಷ್ಟು ಬುಡಕಟ್ಟು ನಿವಾಸಿಗಳೂ ಇದ್ದಾರೆ.

1971ರಲ್ಲಿ ನಡೆದ ಭಾರತ- ಪಾಕಿಸ್ತಾನ ಯುದ್ಧ ಹಾಗೂ ಬಾಂಗ್ಲಾದೇಶದ ಸೃಷ್ಟಿಯಿಂದ ಈ ಪ್ರಾಂತ್ಯದಲ್ಲಿಇದ್ದಕ್ಕಿದ್ದಂತೆ ಒತ್ತಡ ಸೃಷ್ಟಿಯಾಯಿತು. ಬಾಂಗ್ಲಾದಲ್ಲಿ ನಡೆದ ಧಾರ್ಮಿ ದೌರ್ಜನ್ಯದ ಪರಿಣಾಮ, ಅಲ್ಲಿಂದ ದೊಡ್ಡ ಸಂಖ್ಯೆಯಲ್ಲಿ ಹಿಂದೂಗಳ ಜೊತೆಗೆ ಮುಸ್ಲಿಮರೂ ಅಸ್ಸಾಂಗೆ ವಲಸೆ ಬಂದರು. ಮ್ಯಾನ್ಮಾರ್‌ನಿಂದ ರೋಹಿಂಗ್ಯಾ ಮುಸ್ಲಿಮರು ಬಂದರು. ಇವರ ಸಂಖ್ಯೆ ಅಧಿಕವಾಗುತ್ತ ಹೋದಂತೆ, ಸ್ಥಳೀಯ ಸಂಸ್ಕೃತಿಯಲ್ಲಿಆತಂಕ ಹೆಚ್ಚತೊಡಗಿತು. ಪ್ರಾದೇಶಿಕ ಅಸ್ಮಿತೆ, ಅಸ್ತಿತ್ವದ ಉಳಿವಿಗಾಗಿ ಬೋಡೋಗಳು, ಬುಡಕಟ್ಟು ನಿವಾಸಿಗಳು ಹೋರಾಟ ಆರಂಭಿಸಿದರು.

ಕೆಲವು ಸಂಘಟನೆಗಳು ಇನ್ನೂ ಮುಂದಕ್ಕೆ ಹೋಗಿ, ಪ್ರತ್ಯೇಕ ಬೋಡೋ ದೇಶವೇ ತಮಗೆ ಬೇಕೆಂದು ಹೋರಾಟ ಆರಂಭಿದ್ದರು. ಇದಕ್ಕಾಗಿ ಅವರು ಬಂದೂಕು ಹಿಡಿದಿದ್ದರು.

ಬೋಡೋ ಧಂಗೆ ತಣ್ಣಗಾಗಿದ್ದು ಹೇಗೆ?

ಗುವಾಹಟಿಯಲ್ಲಿ 1993 ರಲ್ಲಿ ಮೊದಲ ಬಾರಿಗೆ ಬೋಡೋ ಹೋರಾಟಗಾರರು ಮತ್ತು ಕೇಂದ್ರ ಸರ್ಕಾರದ ನಡುವೆ ಒಪ್ಪಂದ ನಡೆಯಿತು. ಈ ಒಪ್ಪಂದ ಪ್ರಕಾರ, ಬೋಡೋಲ್ಯಾಂಡ್‌ ಸ್ವಾಯತ್ತ ಮಂಡಳಿ ರಚನೆಯಾಯಿತು. ಆದರೆ, ಈ ಒಪ್ಪಂದಿಂದ ತಮ್ಮ ಬೇಡಿಕೆಗಳು ಈಡೇರಿಲ್ಲಎಂದು ವಾದಿಸಿದ ಬೋಡೋಗಳು ಮತ್ತೆ ಪ್ರತ್ಯೇಕ ಬೋಡೋ ಲ್ಯಾಂಡ್‌ಗಾಗಿ ಸಶಸ್ತ್ರ ಆಂದೋಲನ ಪ್ರಾರಂಭಿಸಿದ್ದರು. ಫೆಬ್ರವರಿ 10,2003ರಂದು, ಅಸ್ಸಾಂ ಸರ್ಕಾರ, ಕೇಂದ್ರ ಸರ್ಕಾರ ಮತ್ತು ಬೋಡೋ ಲಿಬರೇಶನ್‌ ಟೈಗರ್ಸ್‌ ಬೋಡೋಲ್ಯಾಂಡ್‌ ಪ್ರಾದೇಶಿಕ ಮಂಡಳಿಯನ್ನು ರೂಪಿಸುವ ಒಪ್ಪಂದಕ್ಕೆ ಸಹಿ ಹಾಕಿದರು.

ಇದಾದ ಬಳಿಕ 2020 ಮೂರನೇ ಒಪ್ಪಂದಕ್ಕೆ ಒತ್ತಡ ಹೆಚ್ಚಿತು. ಈ ಬಾರಿ ಶಾಂತಿ ಒಪ್ಪಂದದಲ್ಲಿ ಭಾಗವಹಿಸಲು, ಮ್ಯಾನ್ಮಾರ್‌ನಲ್ಲಿ ತಲೆ ಮರೆಸಿಕೊಂಡಿದ್ದ ಬೋಡೋ ಉಗ್ರ ನಾಯಕರು ಭಾರತಕ್ಕೆ ಬಂದಿದ್ದರು. 2020ರ ಜನವರಿ 28 ರಂದು ಸರ್ಕಾರ ಮತ್ತು ಡೆಮಾಕ್ರಟಿಕ್ ಫ್ರಂಟ್ ಆಫ್ ಬೋಡೋ ಲ್ಯಾಂಡ್(ಎನ್‌ಡಿಎಫ್‌ಬಿ) ನಡುವೆ ಮೂರನೇ ಒಪ್ಪಂದ ನಡೆಯಿತು. ಈ ಒಪ್ಪಂದದಲ್ಲಿ ಸರ್ಕಾರ ಮೇಲುಗೈ ಸಾಧಿಸಿತ್ತು. ಎನ್‌ಡಿಎಫ್‌ಬಿ ಹೋರಾಟಗಾರರು ಶಸ್ತ್ರ ಕೆಳಗಿಟ್ಟು ಶರಣಾಗತಿಗೆ ಒಪ್ಪಿದರು. ಆ ಬಳಿಕ ಬೋಡೋ ಲ್ಯಾಂಡ್ ಪ್ರದೇಶದಲ್ಲಿ ಶಾಂತಿ ಸ್ಥಾಪನೆಯಾಗಿದೆ ಎಂದು ಹೇಳಲಾಗ್ತಿದೆ.

ಇದನ್ನೂ ಓದಿ: ಜಾರ್ಖಂಡ್‌: ಬುಡಕಟ್ಟು ಸಮುದಾಯದ ಗಾಯಕನನ್ನು ಥಳಿಸಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...