Homeಕರ್ನಾಟಕಮಾಜಿ ಸಚಿವ, ಹಿರಿಯ ರಾಜಕಾರಣಿ ಡಿ.ಬಿ. ಚಂದ್ರೇಗೌಡ ನಿಧನ

ಮಾಜಿ ಸಚಿವ, ಹಿರಿಯ ರಾಜಕಾರಣಿ ಡಿ.ಬಿ. ಚಂದ್ರೇಗೌಡ ನಿಧನ

- Advertisement -
- Advertisement -

ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ. ಚಂದ್ರೇಗೌಡ ಅವರು ಮೂಡಿಗೆರೆ ತಾಲೂಕಿನ ದಾಸರಹಳ್ಳಿಯಲ್ಲಿ ನಿಧನರಾಗಿದ್ದಾರೆ.

87ರ ಹರೆಯದ ಡಿ.ಬಿ. ಚಂದ್ರೇಗೌಡ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಕಾರ್ಯನಿರ್ವಹಿಸಿದ್ದ ಚಂದ್ರೇಗೌಡರು ರಾಜ್ಯದ ಹಿರಿಯ ರಾಜಕಾರಣಿಯಾಗಿದ್ದರು. ಚಂದ್ರೇಗೌಡ ಅವರ ಪಾರ್ಥೀವ ಶರೀರವನ್ನು ಇಂದು ಮಧ್ಯಾಹ್ನ 2 ರಿಂದ ಸಂಜೆ 6 ರವರೆಗೆ ಮೂಡಿಗೆರೆ ಅಡ್ಯಂತಾಯ ರಂಗದಮಂದಿರದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಬುಧವಾರ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್‌ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿದೆ.

1936ರಲ್ಲಿ ಜನಿಸಿದ ದಾರದಹಳ್ಳಿ ಬೈರೇಗೌಡ ಚಂದ್ರೇಗೌಡ ಅವರು ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ ಬಿಎಸ್ಸಿ ಶಿಕ್ಷಣವನ್ನು ಮತ್ತು ಬೆಳಗಾವಿಯ ಆರ್.ಎಲ್. ಕಾನೂನು ಕಾಲೇಜಿನಲ್ಲಿ ಎಲ್.ಎಲ್.ಬಿ. ಪದವಿ ಪಡೆದಿದ್ದರು. ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್‌, ಮೂರು ಅವಧಿಗೆ ಶಾಸಕ, ಒಂದು ಅವಧಿಗೆ ವಿಧಾನಪರಿಷತ್‌ ಸದಸ್ಯರಾಗಿ ಮತ್ತು 3 ಬಾರಿ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದರು.

ಡಿ.ಬಿ. ಚಂದ್ರೇಗೌಡ ಅವರು 1967ರವರೆಗೆ ಪ್ರಜಾ ಸೋಷಿಯಲಿಸ್ಟ್ ಪಕ್ಷದಲ್ಲಿದ್ದರು. 1971 ರಲ್ಲಿ ಅವರು  ಕಾಂಗ್ರೆಸ್ ಪಕ್ಷದಿಂದ ಚಿಕ್ಕಮಗಳೂರು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದರು. ಅವರು ಚಿಕ್ಕಮಗಳೂರಿನಿಂದ 6ನೇ ಲೋಕಸಭೆಗೆ ಮರು ಆಯ್ಕೆಯಾಗಿದ್ದರು. ಆದರೆ ಇಂದಿರಾ ಗಾಂಧಿಯವರಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡಲು ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಬಳಿಕ ವಿಧಾನ ಪರಿಷತ್ತಿನ ಸದಸ್ಯರಾಗಿ ಮುಖ್ಯಮಂತ್ರಿ ದೇವರಾಜು ಅರಸು ಅವರ ಸಂಪುಟದಲ್ಲಿ 1979-1980 ಅವಧಿಯಲ್ಲಿ ನೀರಾವರಿ ಸಚಿವರಾಗಿದ್ದರು. 1980-81ರ ಅವಧಿಯಲ್ಲಿ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದ್ದರು.

1983ರಲ್ಲಿ ಜನತಾ ಪಕ್ಷದಿಂದ ತೀರ್ಥಹಳ್ಳಿ ಕ್ಷೇತ್ರದಿಂದ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾದರು. ರಾಮಕೃಷ್ಣ ಹೆಗ್ಡೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 1983-85ರವರೆಗೆ ಚಂದ್ರೇಗೌಡರು ವಿಧಾನಸಭಾ ಸ್ಪೀಕರ್ ಆಗಿಯೂ ಕಾರ್ಯನಿರ್ವಹಿಸಿದ್ದರು. 1986ರಲ್ಲಿ ಇವರು ಜನತಾ ಪಕ್ಷದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು. 1987ರಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ 2ನೇ ಬಾರಿಗೆ ವಿಧಾನಸಭೆಗೆ ಪ್ರವೇಶ ಪಡೆದಿದ್ದರು.

1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶೃಂಗೇರಿ ಕ್ಷೇತ್ರದಿಂದ ಆಯ್ಕೆಯಾಗಿ 1999ರಿಂದ 2004ರವರೆಗೆ ಎಸ್.ಎಂ. ಕೃಷ್ಣಾ ಅವರ ಸಂಪುಟದಲ್ಲಿ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಇದೇ ಅವಧಿಯಲ್ಲಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. 2008ರಲ್ಲಿ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. 2009ರಲ್ಲಿ ಬಿಜೆಪಿಯಿಂದ ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾಗಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...