Homeಮುಖಪುಟಹರ್ಯಾಣ: INLD ರಾಜ್ಯಾಧ್ಯಕ್ಷರ ಹತ್ಯೆಯ ಹಿಂದೆ ಬಿಜೆಪಿ ನಾಯಕ: 12 ಮಂದಿ ವಿರುದ್ಧ ಎಫ್‌ಐಆರ್‌

ಹರ್ಯಾಣ: INLD ರಾಜ್ಯಾಧ್ಯಕ್ಷರ ಹತ್ಯೆಯ ಹಿಂದೆ ಬಿಜೆಪಿ ನಾಯಕ: 12 ಮಂದಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ) ರಾಜ್ಯಾಧ್ಯಕ್ಷ ಮತ್ತು ಮಾಜಿ ಶಾಸಕ ನಫೆ ಸಿಂಗ್ ರಾಥಿ ಅವರನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ಬಹದ್ದೂರ್‌ಗಢದ ಮಾಜಿ ಬಿಜೆಪಿ ಶಾಸಕ ನರೇಶ್ ಕೌಶಿಕ್ ಸೇರಿದಂತೆ 12 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಮಾಜಿ ಬಿಜೆಪಿ ಶಾಸಕ ನರೇಶ್ ಕೌಶಿಕ್, ಬಹದ್ದೂರ್‌ಗಢ ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ಸರೋಜ್ ರಥೀ ಅವರ ಪತಿ ರಮೇಶ್ ರಾಥಿ, ಅವರ ನಿಕಟವರ್ತಿಗಳಾದ ಕರಂಬಿರ್ ರಥಿ ಮತ್ತು ಕಮಲ್ ರಥಿ, ಮಾಜಿ ಸಚಿವ ಮಾಂಗೆ ರಾಮ್ ರಥಿ ಅವರ ಪುತ್ರ ಸತೀಶ್ ನಂಬರ್‌ದಾರ್, ಮೊಮ್ಮಗ ಗೌರವ್, ರಾಹುಲ್ ಮತ್ತು ಐವರು ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಕೊಲೆ ಮತ್ತು ಪಿತೂರಿ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳ ಬಂಧನಕ್ಕೆ ಪಟ್ಟು:

ಆರೋಪಿಗಳನ್ನು ಬಂಧಿಸುವವರೆಗೆ ದಾಳಿಯಲ್ಲಿ ಹತರಾದ ಐಎನ್‌ಎಲ್‌ಡಿ ನಾಯಕ ನಫೆ ಸಿಂಗ್ ರಾಥಿ ಮತ್ತು ಅವರ ಭದ್ರತಾ ತಂಡದ ಸದಸ್ಯ ಜೈ ಕಿಶನ್ ಅವರ ಶವಗಳನ್ನು ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ನಫೆ ಸಿಂಗ್ ಅವರ ಕುಟುಂಬದ ಸದಸ್ಯರು ಮತ್ತು ಬೆಂಬಲಿಗರು ಪಟ್ಟು ಹಿಡಿದಿದ್ದಾರೆ. ಮೃತರ ಶವಗಳನ್ನು ಇರಿಸಲಾಗಿರುವ ಬಹದ್ದೂರ್‌ಗಢ ಸಿವಿಲ್ ಆಸ್ಪತ್ರೆಯ ಮುಂಭಾಗದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಎಫ್‌ಐಆರ್‌:

ಘಟನೆಯ ಬಗ್ಗೆ ನಫೆ ಸಿಂಗ್ ರಾಥಿ ಅವರ ಸೋದರಳಿಯ ಮತ್ತು ಚಾಲಕ ರಾಕೇಶ್ ಅವರ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ. ರಾಕೇಶ್ ಅವರು ಬಿಳಿ ಬಣ್ಣದ ಫಾರ್ಚುನರ್ ಕಾರು ಚಲಾಯಿಸುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ನಫೆ ಸಿಂಗ್ ಮತ್ತು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇತರರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರಿನ ಪ್ರಕಾರ, ಐಎನ್‌ಎಲ್‌ಡಿ ನಾಯಕ ಮುಂಭಾಗದ ಸೀಟಿನಲ್ಲಿ ಕುಳಿತಿದ್ದರೆ, ಅವರ ಇಬ್ಬರು ಭದ್ರತಾ ಸಿಬ್ಬಂದಿಗಳಾದ ಸಂಜೀತ್ ಮತ್ತು ಜೈ ಕಿಶನ್ ಹಿಂದೆ ಇದ್ದರು. ಕಾರು ಹಿಂಬಾಲಿಸುತ್ತಿರುವುದನ್ನು ಗಮನಿಸಿದ ರಾಕೇಶ್ ಅವರು ಕಾರನ್ನು ವೇಗಗೊಳಿಸಲು ಪ್ರಯತ್ನಿಸಿದರು ಆದರೆ ಅವರು ದಾರಿಯಲ್ಲಿದ್ದ ರೈಲ್ವೆ ಕ್ರಾಸಿಂಗ್‌ನ ಗೇಟ್ ಮುಚ್ಚಿದ್ದರಿಂದ ನಿಲ್ಲಿಸಬೇಕಾಯಿತು. ಅವರು ಕಾರನ್ನು ನಿಲ್ಲಿಸಿದಾಗ, ಪಿಸ್ತೂಲುಗಳೊಂದಿಗೆ ಶಸ್ತ್ರಸಜ್ಜಿತವಾದ ಐವರು ದಾಳಿಕೋರರು ಹೊರಬಂದು ಗುಂಡಿನ ದಾಳಿಯನ್ನು ನಡೆಸಿದ್ದಾರೆ.

ದುಷ್ಕರ್ಮಿಗಳು ಈ ವೇಳೆ ಸತೀಶ್, ಕರಂಬಿರ್ ರಥಿ ಮತ್ತು ನರೇಶ್ ಕೌಶಿಕ್ ಜೊತೆ ದ್ವೇಷ ಬೆಳೆಸಿಕೊಂಡಿದ್ದಕ್ಕೆ ಪಾಠ ಕಲಿಸುತ್ತೇವೆಂದು ಗುಂಡಿನ ದಾಳಿ ನಡೆಸುತ್ತೇವೆ ಎಂದು ಹೇಳಿ ಫೈರಿಂಗ್‌ ಮಾಡಿದ್ದಾರೆ. ಅವರಲ್ಲೊಬ್ಬ ನನ್ನ ಕಡೆಗೆ ಬಂದು ನಾನು ನಿನ್ನನ್ನು ಜೀವಂತವಾಗಿ ಬಿಡುತ್ತಿದ್ದೇನೆ. ನರೇಶ್ ಕೌಶಿಕ್, ಕರಂಬಿರ್ ರಾಥಿ, ಸತೀಶ್ ರಾಥಿ, ಗೌರವ್ ರಾಥಿ, ರಾಹುಲ್ ಮತ್ತು ಕಮಲ್ ವಿರುದ್ಧ ನ್ಯಾಯಾಲಯಕ್ಕೆ ಹೋದರೆ ಅವರನ್ನು ಕೂಡ ಕೊಲ್ಲಲಾಗುವುದು ಎಂದು ಅವರ ಕುಟುಂಬಕ್ಕೆ ಹೇಳಿ ಎಂದು ಹೇಳಿರುವುದಾಗಿ ರಾಕೇಶ್‌ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನನ್ನ ಚಿಕ್ಕಪ್ಪ ನಫೆ ಸಿಂಗ್ ಮತ್ತು ಜೈ ಕಿಶನ್ ಆ ವೇಳೆಗೆ ಮೃತಪಟ್ಟಿರುವುದನ್ನು ನಾನು ನೋಡಿದೆ, ಆದರೆ ಸಂಜೀತ್ ಗಂಭೀರ ಸ್ಥಿತಿಯಲ್ಲಿದ್ದರು. ವ್ಯಕ್ತಿಯೊಬ್ಬರು ಅವರನ್ನು ಬಹದ್ದೂರ್‌ಗಢದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ರಾಕೇಶ್ ಹೇಳಿದ್ದಾರೆ. ತನ್ನ ದೂರಿನಲ್ಲಿ ಉಲ್ಲೇಖಿಸಿರುವ ವ್ಯಕ್ತಿಗಳು ಸಂಚು ರೂಪಿಸಿ ಕೊಲೆಯ ಹಿಂದೆ ಇದ್ದಾರೆ ಎಂದು ಅವರು ಪೊಲೀಸರಿಗೆ ತಿಳಿಸಿದ್ದಾರೆ.

ಹರ್ಯಾಣದಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಇಂದು ಬೆಳಿಗ್ಗೆ ಘಟನೆಯ ಬಗ್ಗೆ ಸಂತಾಪ ಸೂಚನೆಗಳ ಸಂದರ್ಭದಲ್ಲಿ ಹರ್ಯಾಣದಲ್ಲಿ ಪ್ರತಿಪಕ್ಷಗಳು ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದೆ. ನಫೆ ಸಿಂಗ್ ಅವರ ಹತ್ಯೆಯನ್ನು ರಾಜಕೀಯ ಹತ್ಯೆ ಎಂದು ಕರೆದ ಪ್ರತಿಪಕ್ಷಗಳು ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯಿಂದ ತನಿಖೆಗೆ ಒತ್ತಾಯಿಸಿದೆ.

ಜನವರಿ 2023ರಲ್ಲಿ ಮಾಜಿ ಸಚಿವ ಮಂಗೇ ರಾಮ್ ಅವರ ಪುತ್ರ, ಸ್ಥಳೀಯ ಬಿಜೆಪಿ ನಾಯಕ ಜಗದೀಶ್ ನಂಬರ್‌ದಾರ್ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ನಫೆ ಸಿಂಗ್ ಮತ್ತು ಇತರ ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಮೃತರ ಮಗ ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆದರೆ, ರಾಜಕೀಯ ಪಿತೂರಿಯ ಭಾಗವಾಗಿ ಅವರ ವಿರುದ್ದ ಎಫ್‌ಐಆರ್ ದಾಖಲಿಸಲಾಗಿತ್ತು ಎಂದು ಐಎನ್‌ಎಲ್‌ಡಿ ಹಿರಿಯ ನಾಯಕ ಅಭಯ್ ಸಿಂಗ್ ಚೌಟಾಲಾ ಆರೋಪಿಸಿದ್ದರು.

ಇದನ್ನು ಓದಿ: ಬಿಜೆಪಿ ಆಡಳಿತದ ಹರ್ಯಾಣದಲ್ಲಿ INLD ಪಕ್ಷದ ರಾಜ್ಯಾಧ್ಯಕ್ಷರನ್ನು ಗುಂಡಿಟ್ಟು ಹತ್ಯೆ: ಸಂಶಯಕ್ಕೆ ಕಾರಣವಾದ INDIA ಒಕ್ಕೂಟದ ಜೊತೆ ಮೈತ್ರಿ ಹಂತದಲ್ಲಿ ನಡೆದ ಘಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...