Homeಮುಖಪುಟಹರ್ಯಾಣ: INLD ರಾಜ್ಯಾಧ್ಯಕ್ಷರ ಹತ್ಯೆಯ ಹಿಂದೆ ಬಿಜೆಪಿ ನಾಯಕ: 12 ಮಂದಿ ವಿರುದ್ಧ ಎಫ್‌ಐಆರ್‌

ಹರ್ಯಾಣ: INLD ರಾಜ್ಯಾಧ್ಯಕ್ಷರ ಹತ್ಯೆಯ ಹಿಂದೆ ಬಿಜೆಪಿ ನಾಯಕ: 12 ಮಂದಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ) ರಾಜ್ಯಾಧ್ಯಕ್ಷ ಮತ್ತು ಮಾಜಿ ಶಾಸಕ ನಫೆ ಸಿಂಗ್ ರಾಥಿ ಅವರನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ಬಹದ್ದೂರ್‌ಗಢದ ಮಾಜಿ ಬಿಜೆಪಿ ಶಾಸಕ ನರೇಶ್ ಕೌಶಿಕ್ ಸೇರಿದಂತೆ 12 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಮಾಜಿ ಬಿಜೆಪಿ ಶಾಸಕ ನರೇಶ್ ಕೌಶಿಕ್, ಬಹದ್ದೂರ್‌ಗಢ ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ಸರೋಜ್ ರಥೀ ಅವರ ಪತಿ ರಮೇಶ್ ರಾಥಿ, ಅವರ ನಿಕಟವರ್ತಿಗಳಾದ ಕರಂಬಿರ್ ರಥಿ ಮತ್ತು ಕಮಲ್ ರಥಿ, ಮಾಜಿ ಸಚಿವ ಮಾಂಗೆ ರಾಮ್ ರಥಿ ಅವರ ಪುತ್ರ ಸತೀಶ್ ನಂಬರ್‌ದಾರ್, ಮೊಮ್ಮಗ ಗೌರವ್, ರಾಹುಲ್ ಮತ್ತು ಐವರು ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಕೊಲೆ ಮತ್ತು ಪಿತೂರಿ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳ ಬಂಧನಕ್ಕೆ ಪಟ್ಟು:

ಆರೋಪಿಗಳನ್ನು ಬಂಧಿಸುವವರೆಗೆ ದಾಳಿಯಲ್ಲಿ ಹತರಾದ ಐಎನ್‌ಎಲ್‌ಡಿ ನಾಯಕ ನಫೆ ಸಿಂಗ್ ರಾಥಿ ಮತ್ತು ಅವರ ಭದ್ರತಾ ತಂಡದ ಸದಸ್ಯ ಜೈ ಕಿಶನ್ ಅವರ ಶವಗಳನ್ನು ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ನಫೆ ಸಿಂಗ್ ಅವರ ಕುಟುಂಬದ ಸದಸ್ಯರು ಮತ್ತು ಬೆಂಬಲಿಗರು ಪಟ್ಟು ಹಿಡಿದಿದ್ದಾರೆ. ಮೃತರ ಶವಗಳನ್ನು ಇರಿಸಲಾಗಿರುವ ಬಹದ್ದೂರ್‌ಗಢ ಸಿವಿಲ್ ಆಸ್ಪತ್ರೆಯ ಮುಂಭಾಗದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಎಫ್‌ಐಆರ್‌:

ಘಟನೆಯ ಬಗ್ಗೆ ನಫೆ ಸಿಂಗ್ ರಾಥಿ ಅವರ ಸೋದರಳಿಯ ಮತ್ತು ಚಾಲಕ ರಾಕೇಶ್ ಅವರ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ. ರಾಕೇಶ್ ಅವರು ಬಿಳಿ ಬಣ್ಣದ ಫಾರ್ಚುನರ್ ಕಾರು ಚಲಾಯಿಸುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ನಫೆ ಸಿಂಗ್ ಮತ್ತು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇತರರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರಿನ ಪ್ರಕಾರ, ಐಎನ್‌ಎಲ್‌ಡಿ ನಾಯಕ ಮುಂಭಾಗದ ಸೀಟಿನಲ್ಲಿ ಕುಳಿತಿದ್ದರೆ, ಅವರ ಇಬ್ಬರು ಭದ್ರತಾ ಸಿಬ್ಬಂದಿಗಳಾದ ಸಂಜೀತ್ ಮತ್ತು ಜೈ ಕಿಶನ್ ಹಿಂದೆ ಇದ್ದರು. ಕಾರು ಹಿಂಬಾಲಿಸುತ್ತಿರುವುದನ್ನು ಗಮನಿಸಿದ ರಾಕೇಶ್ ಅವರು ಕಾರನ್ನು ವೇಗಗೊಳಿಸಲು ಪ್ರಯತ್ನಿಸಿದರು ಆದರೆ ಅವರು ದಾರಿಯಲ್ಲಿದ್ದ ರೈಲ್ವೆ ಕ್ರಾಸಿಂಗ್‌ನ ಗೇಟ್ ಮುಚ್ಚಿದ್ದರಿಂದ ನಿಲ್ಲಿಸಬೇಕಾಯಿತು. ಅವರು ಕಾರನ್ನು ನಿಲ್ಲಿಸಿದಾಗ, ಪಿಸ್ತೂಲುಗಳೊಂದಿಗೆ ಶಸ್ತ್ರಸಜ್ಜಿತವಾದ ಐವರು ದಾಳಿಕೋರರು ಹೊರಬಂದು ಗುಂಡಿನ ದಾಳಿಯನ್ನು ನಡೆಸಿದ್ದಾರೆ.

ದುಷ್ಕರ್ಮಿಗಳು ಈ ವೇಳೆ ಸತೀಶ್, ಕರಂಬಿರ್ ರಥಿ ಮತ್ತು ನರೇಶ್ ಕೌಶಿಕ್ ಜೊತೆ ದ್ವೇಷ ಬೆಳೆಸಿಕೊಂಡಿದ್ದಕ್ಕೆ ಪಾಠ ಕಲಿಸುತ್ತೇವೆಂದು ಗುಂಡಿನ ದಾಳಿ ನಡೆಸುತ್ತೇವೆ ಎಂದು ಹೇಳಿ ಫೈರಿಂಗ್‌ ಮಾಡಿದ್ದಾರೆ. ಅವರಲ್ಲೊಬ್ಬ ನನ್ನ ಕಡೆಗೆ ಬಂದು ನಾನು ನಿನ್ನನ್ನು ಜೀವಂತವಾಗಿ ಬಿಡುತ್ತಿದ್ದೇನೆ. ನರೇಶ್ ಕೌಶಿಕ್, ಕರಂಬಿರ್ ರಾಥಿ, ಸತೀಶ್ ರಾಥಿ, ಗೌರವ್ ರಾಥಿ, ರಾಹುಲ್ ಮತ್ತು ಕಮಲ್ ವಿರುದ್ಧ ನ್ಯಾಯಾಲಯಕ್ಕೆ ಹೋದರೆ ಅವರನ್ನು ಕೂಡ ಕೊಲ್ಲಲಾಗುವುದು ಎಂದು ಅವರ ಕುಟುಂಬಕ್ಕೆ ಹೇಳಿ ಎಂದು ಹೇಳಿರುವುದಾಗಿ ರಾಕೇಶ್‌ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನನ್ನ ಚಿಕ್ಕಪ್ಪ ನಫೆ ಸಿಂಗ್ ಮತ್ತು ಜೈ ಕಿಶನ್ ಆ ವೇಳೆಗೆ ಮೃತಪಟ್ಟಿರುವುದನ್ನು ನಾನು ನೋಡಿದೆ, ಆದರೆ ಸಂಜೀತ್ ಗಂಭೀರ ಸ್ಥಿತಿಯಲ್ಲಿದ್ದರು. ವ್ಯಕ್ತಿಯೊಬ್ಬರು ಅವರನ್ನು ಬಹದ್ದೂರ್‌ಗಢದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ರಾಕೇಶ್ ಹೇಳಿದ್ದಾರೆ. ತನ್ನ ದೂರಿನಲ್ಲಿ ಉಲ್ಲೇಖಿಸಿರುವ ವ್ಯಕ್ತಿಗಳು ಸಂಚು ರೂಪಿಸಿ ಕೊಲೆಯ ಹಿಂದೆ ಇದ್ದಾರೆ ಎಂದು ಅವರು ಪೊಲೀಸರಿಗೆ ತಿಳಿಸಿದ್ದಾರೆ.

ಹರ್ಯಾಣದಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಇಂದು ಬೆಳಿಗ್ಗೆ ಘಟನೆಯ ಬಗ್ಗೆ ಸಂತಾಪ ಸೂಚನೆಗಳ ಸಂದರ್ಭದಲ್ಲಿ ಹರ್ಯಾಣದಲ್ಲಿ ಪ್ರತಿಪಕ್ಷಗಳು ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದೆ. ನಫೆ ಸಿಂಗ್ ಅವರ ಹತ್ಯೆಯನ್ನು ರಾಜಕೀಯ ಹತ್ಯೆ ಎಂದು ಕರೆದ ಪ್ರತಿಪಕ್ಷಗಳು ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯಿಂದ ತನಿಖೆಗೆ ಒತ್ತಾಯಿಸಿದೆ.

ಜನವರಿ 2023ರಲ್ಲಿ ಮಾಜಿ ಸಚಿವ ಮಂಗೇ ರಾಮ್ ಅವರ ಪುತ್ರ, ಸ್ಥಳೀಯ ಬಿಜೆಪಿ ನಾಯಕ ಜಗದೀಶ್ ನಂಬರ್‌ದಾರ್ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ನಫೆ ಸಿಂಗ್ ಮತ್ತು ಇತರ ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಮೃತರ ಮಗ ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆದರೆ, ರಾಜಕೀಯ ಪಿತೂರಿಯ ಭಾಗವಾಗಿ ಅವರ ವಿರುದ್ದ ಎಫ್‌ಐಆರ್ ದಾಖಲಿಸಲಾಗಿತ್ತು ಎಂದು ಐಎನ್‌ಎಲ್‌ಡಿ ಹಿರಿಯ ನಾಯಕ ಅಭಯ್ ಸಿಂಗ್ ಚೌಟಾಲಾ ಆರೋಪಿಸಿದ್ದರು.

ಇದನ್ನು ಓದಿ: ಬಿಜೆಪಿ ಆಡಳಿತದ ಹರ್ಯಾಣದಲ್ಲಿ INLD ಪಕ್ಷದ ರಾಜ್ಯಾಧ್ಯಕ್ಷರನ್ನು ಗುಂಡಿಟ್ಟು ಹತ್ಯೆ: ಸಂಶಯಕ್ಕೆ ಕಾರಣವಾದ INDIA ಒಕ್ಕೂಟದ ಜೊತೆ ಮೈತ್ರಿ ಹಂತದಲ್ಲಿ ನಡೆದ ಘಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...