Homeಮುಖಪುಟಹರ್ಯಾಣ: INLD ರಾಜ್ಯಾಧ್ಯಕ್ಷರ ಹತ್ಯೆಯ ಹಿಂದೆ ಬಿಜೆಪಿ ನಾಯಕ: 12 ಮಂದಿ ವಿರುದ್ಧ ಎಫ್‌ಐಆರ್‌

ಹರ್ಯಾಣ: INLD ರಾಜ್ಯಾಧ್ಯಕ್ಷರ ಹತ್ಯೆಯ ಹಿಂದೆ ಬಿಜೆಪಿ ನಾಯಕ: 12 ಮಂದಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ) ರಾಜ್ಯಾಧ್ಯಕ್ಷ ಮತ್ತು ಮಾಜಿ ಶಾಸಕ ನಫೆ ಸಿಂಗ್ ರಾಥಿ ಅವರನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ಬಹದ್ದೂರ್‌ಗಢದ ಮಾಜಿ ಬಿಜೆಪಿ ಶಾಸಕ ನರೇಶ್ ಕೌಶಿಕ್ ಸೇರಿದಂತೆ 12 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಮಾಜಿ ಬಿಜೆಪಿ ಶಾಸಕ ನರೇಶ್ ಕೌಶಿಕ್, ಬಹದ್ದೂರ್‌ಗಢ ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ಸರೋಜ್ ರಥೀ ಅವರ ಪತಿ ರಮೇಶ್ ರಾಥಿ, ಅವರ ನಿಕಟವರ್ತಿಗಳಾದ ಕರಂಬಿರ್ ರಥಿ ಮತ್ತು ಕಮಲ್ ರಥಿ, ಮಾಜಿ ಸಚಿವ ಮಾಂಗೆ ರಾಮ್ ರಥಿ ಅವರ ಪುತ್ರ ಸತೀಶ್ ನಂಬರ್‌ದಾರ್, ಮೊಮ್ಮಗ ಗೌರವ್, ರಾಹುಲ್ ಮತ್ತು ಐವರು ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಕೊಲೆ ಮತ್ತು ಪಿತೂರಿ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳ ಬಂಧನಕ್ಕೆ ಪಟ್ಟು:

ಆರೋಪಿಗಳನ್ನು ಬಂಧಿಸುವವರೆಗೆ ದಾಳಿಯಲ್ಲಿ ಹತರಾದ ಐಎನ್‌ಎಲ್‌ಡಿ ನಾಯಕ ನಫೆ ಸಿಂಗ್ ರಾಥಿ ಮತ್ತು ಅವರ ಭದ್ರತಾ ತಂಡದ ಸದಸ್ಯ ಜೈ ಕಿಶನ್ ಅವರ ಶವಗಳನ್ನು ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ನಫೆ ಸಿಂಗ್ ಅವರ ಕುಟುಂಬದ ಸದಸ್ಯರು ಮತ್ತು ಬೆಂಬಲಿಗರು ಪಟ್ಟು ಹಿಡಿದಿದ್ದಾರೆ. ಮೃತರ ಶವಗಳನ್ನು ಇರಿಸಲಾಗಿರುವ ಬಹದ್ದೂರ್‌ಗಢ ಸಿವಿಲ್ ಆಸ್ಪತ್ರೆಯ ಮುಂಭಾಗದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಎಫ್‌ಐಆರ್‌:

ಘಟನೆಯ ಬಗ್ಗೆ ನಫೆ ಸಿಂಗ್ ರಾಥಿ ಅವರ ಸೋದರಳಿಯ ಮತ್ತು ಚಾಲಕ ರಾಕೇಶ್ ಅವರ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ. ರಾಕೇಶ್ ಅವರು ಬಿಳಿ ಬಣ್ಣದ ಫಾರ್ಚುನರ್ ಕಾರು ಚಲಾಯಿಸುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ನಫೆ ಸಿಂಗ್ ಮತ್ತು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇತರರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರಿನ ಪ್ರಕಾರ, ಐಎನ್‌ಎಲ್‌ಡಿ ನಾಯಕ ಮುಂಭಾಗದ ಸೀಟಿನಲ್ಲಿ ಕುಳಿತಿದ್ದರೆ, ಅವರ ಇಬ್ಬರು ಭದ್ರತಾ ಸಿಬ್ಬಂದಿಗಳಾದ ಸಂಜೀತ್ ಮತ್ತು ಜೈ ಕಿಶನ್ ಹಿಂದೆ ಇದ್ದರು. ಕಾರು ಹಿಂಬಾಲಿಸುತ್ತಿರುವುದನ್ನು ಗಮನಿಸಿದ ರಾಕೇಶ್ ಅವರು ಕಾರನ್ನು ವೇಗಗೊಳಿಸಲು ಪ್ರಯತ್ನಿಸಿದರು ಆದರೆ ಅವರು ದಾರಿಯಲ್ಲಿದ್ದ ರೈಲ್ವೆ ಕ್ರಾಸಿಂಗ್‌ನ ಗೇಟ್ ಮುಚ್ಚಿದ್ದರಿಂದ ನಿಲ್ಲಿಸಬೇಕಾಯಿತು. ಅವರು ಕಾರನ್ನು ನಿಲ್ಲಿಸಿದಾಗ, ಪಿಸ್ತೂಲುಗಳೊಂದಿಗೆ ಶಸ್ತ್ರಸಜ್ಜಿತವಾದ ಐವರು ದಾಳಿಕೋರರು ಹೊರಬಂದು ಗುಂಡಿನ ದಾಳಿಯನ್ನು ನಡೆಸಿದ್ದಾರೆ.

ದುಷ್ಕರ್ಮಿಗಳು ಈ ವೇಳೆ ಸತೀಶ್, ಕರಂಬಿರ್ ರಥಿ ಮತ್ತು ನರೇಶ್ ಕೌಶಿಕ್ ಜೊತೆ ದ್ವೇಷ ಬೆಳೆಸಿಕೊಂಡಿದ್ದಕ್ಕೆ ಪಾಠ ಕಲಿಸುತ್ತೇವೆಂದು ಗುಂಡಿನ ದಾಳಿ ನಡೆಸುತ್ತೇವೆ ಎಂದು ಹೇಳಿ ಫೈರಿಂಗ್‌ ಮಾಡಿದ್ದಾರೆ. ಅವರಲ್ಲೊಬ್ಬ ನನ್ನ ಕಡೆಗೆ ಬಂದು ನಾನು ನಿನ್ನನ್ನು ಜೀವಂತವಾಗಿ ಬಿಡುತ್ತಿದ್ದೇನೆ. ನರೇಶ್ ಕೌಶಿಕ್, ಕರಂಬಿರ್ ರಾಥಿ, ಸತೀಶ್ ರಾಥಿ, ಗೌರವ್ ರಾಥಿ, ರಾಹುಲ್ ಮತ್ತು ಕಮಲ್ ವಿರುದ್ಧ ನ್ಯಾಯಾಲಯಕ್ಕೆ ಹೋದರೆ ಅವರನ್ನು ಕೂಡ ಕೊಲ್ಲಲಾಗುವುದು ಎಂದು ಅವರ ಕುಟುಂಬಕ್ಕೆ ಹೇಳಿ ಎಂದು ಹೇಳಿರುವುದಾಗಿ ರಾಕೇಶ್‌ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನನ್ನ ಚಿಕ್ಕಪ್ಪ ನಫೆ ಸಿಂಗ್ ಮತ್ತು ಜೈ ಕಿಶನ್ ಆ ವೇಳೆಗೆ ಮೃತಪಟ್ಟಿರುವುದನ್ನು ನಾನು ನೋಡಿದೆ, ಆದರೆ ಸಂಜೀತ್ ಗಂಭೀರ ಸ್ಥಿತಿಯಲ್ಲಿದ್ದರು. ವ್ಯಕ್ತಿಯೊಬ್ಬರು ಅವರನ್ನು ಬಹದ್ದೂರ್‌ಗಢದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ರಾಕೇಶ್ ಹೇಳಿದ್ದಾರೆ. ತನ್ನ ದೂರಿನಲ್ಲಿ ಉಲ್ಲೇಖಿಸಿರುವ ವ್ಯಕ್ತಿಗಳು ಸಂಚು ರೂಪಿಸಿ ಕೊಲೆಯ ಹಿಂದೆ ಇದ್ದಾರೆ ಎಂದು ಅವರು ಪೊಲೀಸರಿಗೆ ತಿಳಿಸಿದ್ದಾರೆ.

ಹರ್ಯಾಣದಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಇಂದು ಬೆಳಿಗ್ಗೆ ಘಟನೆಯ ಬಗ್ಗೆ ಸಂತಾಪ ಸೂಚನೆಗಳ ಸಂದರ್ಭದಲ್ಲಿ ಹರ್ಯಾಣದಲ್ಲಿ ಪ್ರತಿಪಕ್ಷಗಳು ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದೆ. ನಫೆ ಸಿಂಗ್ ಅವರ ಹತ್ಯೆಯನ್ನು ರಾಜಕೀಯ ಹತ್ಯೆ ಎಂದು ಕರೆದ ಪ್ರತಿಪಕ್ಷಗಳು ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯಿಂದ ತನಿಖೆಗೆ ಒತ್ತಾಯಿಸಿದೆ.

ಜನವರಿ 2023ರಲ್ಲಿ ಮಾಜಿ ಸಚಿವ ಮಂಗೇ ರಾಮ್ ಅವರ ಪುತ್ರ, ಸ್ಥಳೀಯ ಬಿಜೆಪಿ ನಾಯಕ ಜಗದೀಶ್ ನಂಬರ್‌ದಾರ್ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ನಫೆ ಸಿಂಗ್ ಮತ್ತು ಇತರ ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಮೃತರ ಮಗ ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆದರೆ, ರಾಜಕೀಯ ಪಿತೂರಿಯ ಭಾಗವಾಗಿ ಅವರ ವಿರುದ್ದ ಎಫ್‌ಐಆರ್ ದಾಖಲಿಸಲಾಗಿತ್ತು ಎಂದು ಐಎನ್‌ಎಲ್‌ಡಿ ಹಿರಿಯ ನಾಯಕ ಅಭಯ್ ಸಿಂಗ್ ಚೌಟಾಲಾ ಆರೋಪಿಸಿದ್ದರು.

ಇದನ್ನು ಓದಿ: ಬಿಜೆಪಿ ಆಡಳಿತದ ಹರ್ಯಾಣದಲ್ಲಿ INLD ಪಕ್ಷದ ರಾಜ್ಯಾಧ್ಯಕ್ಷರನ್ನು ಗುಂಡಿಟ್ಟು ಹತ್ಯೆ: ಸಂಶಯಕ್ಕೆ ಕಾರಣವಾದ INDIA ಒಕ್ಕೂಟದ ಜೊತೆ ಮೈತ್ರಿ ಹಂತದಲ್ಲಿ ನಡೆದ ಘಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...