Homeಮುಖಪುಟಹರ್ಯಾಣ: INLD ರಾಜ್ಯಾಧ್ಯಕ್ಷರ ಹತ್ಯೆಯ ಹಿಂದೆ ಬಿಜೆಪಿ ನಾಯಕ: 12 ಮಂದಿ ವಿರುದ್ಧ ಎಫ್‌ಐಆರ್‌

ಹರ್ಯಾಣ: INLD ರಾಜ್ಯಾಧ್ಯಕ್ಷರ ಹತ್ಯೆಯ ಹಿಂದೆ ಬಿಜೆಪಿ ನಾಯಕ: 12 ಮಂದಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ) ರಾಜ್ಯಾಧ್ಯಕ್ಷ ಮತ್ತು ಮಾಜಿ ಶಾಸಕ ನಫೆ ಸಿಂಗ್ ರಾಥಿ ಅವರನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ಬಹದ್ದೂರ್‌ಗಢದ ಮಾಜಿ ಬಿಜೆಪಿ ಶಾಸಕ ನರೇಶ್ ಕೌಶಿಕ್ ಸೇರಿದಂತೆ 12 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಮಾಜಿ ಬಿಜೆಪಿ ಶಾಸಕ ನರೇಶ್ ಕೌಶಿಕ್, ಬಹದ್ದೂರ್‌ಗಢ ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ಸರೋಜ್ ರಥೀ ಅವರ ಪತಿ ರಮೇಶ್ ರಾಥಿ, ಅವರ ನಿಕಟವರ್ತಿಗಳಾದ ಕರಂಬಿರ್ ರಥಿ ಮತ್ತು ಕಮಲ್ ರಥಿ, ಮಾಜಿ ಸಚಿವ ಮಾಂಗೆ ರಾಮ್ ರಥಿ ಅವರ ಪುತ್ರ ಸತೀಶ್ ನಂಬರ್‌ದಾರ್, ಮೊಮ್ಮಗ ಗೌರವ್, ರಾಹುಲ್ ಮತ್ತು ಐವರು ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಕೊಲೆ ಮತ್ತು ಪಿತೂರಿ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳ ಬಂಧನಕ್ಕೆ ಪಟ್ಟು:

ಆರೋಪಿಗಳನ್ನು ಬಂಧಿಸುವವರೆಗೆ ದಾಳಿಯಲ್ಲಿ ಹತರಾದ ಐಎನ್‌ಎಲ್‌ಡಿ ನಾಯಕ ನಫೆ ಸಿಂಗ್ ರಾಥಿ ಮತ್ತು ಅವರ ಭದ್ರತಾ ತಂಡದ ಸದಸ್ಯ ಜೈ ಕಿಶನ್ ಅವರ ಶವಗಳನ್ನು ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ನಫೆ ಸಿಂಗ್ ಅವರ ಕುಟುಂಬದ ಸದಸ್ಯರು ಮತ್ತು ಬೆಂಬಲಿಗರು ಪಟ್ಟು ಹಿಡಿದಿದ್ದಾರೆ. ಮೃತರ ಶವಗಳನ್ನು ಇರಿಸಲಾಗಿರುವ ಬಹದ್ದೂರ್‌ಗಢ ಸಿವಿಲ್ ಆಸ್ಪತ್ರೆಯ ಮುಂಭಾಗದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಎಫ್‌ಐಆರ್‌:

ಘಟನೆಯ ಬಗ್ಗೆ ನಫೆ ಸಿಂಗ್ ರಾಥಿ ಅವರ ಸೋದರಳಿಯ ಮತ್ತು ಚಾಲಕ ರಾಕೇಶ್ ಅವರ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ. ರಾಕೇಶ್ ಅವರು ಬಿಳಿ ಬಣ್ಣದ ಫಾರ್ಚುನರ್ ಕಾರು ಚಲಾಯಿಸುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ನಫೆ ಸಿಂಗ್ ಮತ್ತು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇತರರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರಿನ ಪ್ರಕಾರ, ಐಎನ್‌ಎಲ್‌ಡಿ ನಾಯಕ ಮುಂಭಾಗದ ಸೀಟಿನಲ್ಲಿ ಕುಳಿತಿದ್ದರೆ, ಅವರ ಇಬ್ಬರು ಭದ್ರತಾ ಸಿಬ್ಬಂದಿಗಳಾದ ಸಂಜೀತ್ ಮತ್ತು ಜೈ ಕಿಶನ್ ಹಿಂದೆ ಇದ್ದರು. ಕಾರು ಹಿಂಬಾಲಿಸುತ್ತಿರುವುದನ್ನು ಗಮನಿಸಿದ ರಾಕೇಶ್ ಅವರು ಕಾರನ್ನು ವೇಗಗೊಳಿಸಲು ಪ್ರಯತ್ನಿಸಿದರು ಆದರೆ ಅವರು ದಾರಿಯಲ್ಲಿದ್ದ ರೈಲ್ವೆ ಕ್ರಾಸಿಂಗ್‌ನ ಗೇಟ್ ಮುಚ್ಚಿದ್ದರಿಂದ ನಿಲ್ಲಿಸಬೇಕಾಯಿತು. ಅವರು ಕಾರನ್ನು ನಿಲ್ಲಿಸಿದಾಗ, ಪಿಸ್ತೂಲುಗಳೊಂದಿಗೆ ಶಸ್ತ್ರಸಜ್ಜಿತವಾದ ಐವರು ದಾಳಿಕೋರರು ಹೊರಬಂದು ಗುಂಡಿನ ದಾಳಿಯನ್ನು ನಡೆಸಿದ್ದಾರೆ.

ದುಷ್ಕರ್ಮಿಗಳು ಈ ವೇಳೆ ಸತೀಶ್, ಕರಂಬಿರ್ ರಥಿ ಮತ್ತು ನರೇಶ್ ಕೌಶಿಕ್ ಜೊತೆ ದ್ವೇಷ ಬೆಳೆಸಿಕೊಂಡಿದ್ದಕ್ಕೆ ಪಾಠ ಕಲಿಸುತ್ತೇವೆಂದು ಗುಂಡಿನ ದಾಳಿ ನಡೆಸುತ್ತೇವೆ ಎಂದು ಹೇಳಿ ಫೈರಿಂಗ್‌ ಮಾಡಿದ್ದಾರೆ. ಅವರಲ್ಲೊಬ್ಬ ನನ್ನ ಕಡೆಗೆ ಬಂದು ನಾನು ನಿನ್ನನ್ನು ಜೀವಂತವಾಗಿ ಬಿಡುತ್ತಿದ್ದೇನೆ. ನರೇಶ್ ಕೌಶಿಕ್, ಕರಂಬಿರ್ ರಾಥಿ, ಸತೀಶ್ ರಾಥಿ, ಗೌರವ್ ರಾಥಿ, ರಾಹುಲ್ ಮತ್ತು ಕಮಲ್ ವಿರುದ್ಧ ನ್ಯಾಯಾಲಯಕ್ಕೆ ಹೋದರೆ ಅವರನ್ನು ಕೂಡ ಕೊಲ್ಲಲಾಗುವುದು ಎಂದು ಅವರ ಕುಟುಂಬಕ್ಕೆ ಹೇಳಿ ಎಂದು ಹೇಳಿರುವುದಾಗಿ ರಾಕೇಶ್‌ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನನ್ನ ಚಿಕ್ಕಪ್ಪ ನಫೆ ಸಿಂಗ್ ಮತ್ತು ಜೈ ಕಿಶನ್ ಆ ವೇಳೆಗೆ ಮೃತಪಟ್ಟಿರುವುದನ್ನು ನಾನು ನೋಡಿದೆ, ಆದರೆ ಸಂಜೀತ್ ಗಂಭೀರ ಸ್ಥಿತಿಯಲ್ಲಿದ್ದರು. ವ್ಯಕ್ತಿಯೊಬ್ಬರು ಅವರನ್ನು ಬಹದ್ದೂರ್‌ಗಢದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ರಾಕೇಶ್ ಹೇಳಿದ್ದಾರೆ. ತನ್ನ ದೂರಿನಲ್ಲಿ ಉಲ್ಲೇಖಿಸಿರುವ ವ್ಯಕ್ತಿಗಳು ಸಂಚು ರೂಪಿಸಿ ಕೊಲೆಯ ಹಿಂದೆ ಇದ್ದಾರೆ ಎಂದು ಅವರು ಪೊಲೀಸರಿಗೆ ತಿಳಿಸಿದ್ದಾರೆ.

ಹರ್ಯಾಣದಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಇಂದು ಬೆಳಿಗ್ಗೆ ಘಟನೆಯ ಬಗ್ಗೆ ಸಂತಾಪ ಸೂಚನೆಗಳ ಸಂದರ್ಭದಲ್ಲಿ ಹರ್ಯಾಣದಲ್ಲಿ ಪ್ರತಿಪಕ್ಷಗಳು ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದೆ. ನಫೆ ಸಿಂಗ್ ಅವರ ಹತ್ಯೆಯನ್ನು ರಾಜಕೀಯ ಹತ್ಯೆ ಎಂದು ಕರೆದ ಪ್ರತಿಪಕ್ಷಗಳು ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯಿಂದ ತನಿಖೆಗೆ ಒತ್ತಾಯಿಸಿದೆ.

ಜನವರಿ 2023ರಲ್ಲಿ ಮಾಜಿ ಸಚಿವ ಮಂಗೇ ರಾಮ್ ಅವರ ಪುತ್ರ, ಸ್ಥಳೀಯ ಬಿಜೆಪಿ ನಾಯಕ ಜಗದೀಶ್ ನಂಬರ್‌ದಾರ್ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ನಫೆ ಸಿಂಗ್ ಮತ್ತು ಇತರ ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಮೃತರ ಮಗ ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆದರೆ, ರಾಜಕೀಯ ಪಿತೂರಿಯ ಭಾಗವಾಗಿ ಅವರ ವಿರುದ್ದ ಎಫ್‌ಐಆರ್ ದಾಖಲಿಸಲಾಗಿತ್ತು ಎಂದು ಐಎನ್‌ಎಲ್‌ಡಿ ಹಿರಿಯ ನಾಯಕ ಅಭಯ್ ಸಿಂಗ್ ಚೌಟಾಲಾ ಆರೋಪಿಸಿದ್ದರು.

ಇದನ್ನು ಓದಿ: ಬಿಜೆಪಿ ಆಡಳಿತದ ಹರ್ಯಾಣದಲ್ಲಿ INLD ಪಕ್ಷದ ರಾಜ್ಯಾಧ್ಯಕ್ಷರನ್ನು ಗುಂಡಿಟ್ಟು ಹತ್ಯೆ: ಸಂಶಯಕ್ಕೆ ಕಾರಣವಾದ INDIA ಒಕ್ಕೂಟದ ಜೊತೆ ಮೈತ್ರಿ ಹಂತದಲ್ಲಿ ನಡೆದ ಘಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...