Homeಕರ್ನಾಟಕಕಾಂಗ್ರೆಸ್‌ಗೆ ಮರಳಿದ ಪರಿಷತ್ ಮಾಜಿ ಸದಸ್ಯೆ ತೇಜಸ್ವಿನಿ ಗೌಡ

ಕಾಂಗ್ರೆಸ್‌ಗೆ ಮರಳಿದ ಪರಿಷತ್ ಮಾಜಿ ಸದಸ್ಯೆ ತೇಜಸ್ವಿನಿ ಗೌಡ

- Advertisement -
- Advertisement -

ಇತ್ತೀಚೆಗೆ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕಿ ಡಾ. ತೇಜಸ್ವಿನಿಗೌಡ ಅವರು ಇಂದು (ಮಾ.30) ಕಾಂಗ್ರೆಸ್‌ಗೆ ಮರಳಿದ್ದಾರೆ.

ದೆಹಲಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ತೇಜಸ್ವಿನಿ ಗೌಡ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ಪವನ್‌ಖೇರಾ ಅವರು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.

ಕಾಂಗ್ರೆಸ್ ಸೇರ್ಪಡೆ ಬಳಿಕ ಮಾತನಾಡಿದ ತೆಜಸ್ವಿನಿಗೌಡ ಅವರು, ‘ಕಾಂಗ್ರೆಸ್ ಮಾತನಾಡಲ್ಲ, ಕೆಲಸ ಮಾಡುತ್ತದೆ’ ಇತಿಹಾಸ ನಮ್ಮ ಮುಂದಿದೆ. ಇದು ಉತ್ತಮ ಸಮಯ. ನಾನು ಪ್ರಾಮಾಣಿಕವಾಗಿ ಪಕ್ಷಕ್ಕಾಗಿ ಕೆಲಸ ಮಾಡಲು ಬಯಸುತ್ತೇನೆ. ಪ್ರಜಾಪ್ರಭುತ್ವದಲ್ಲಿ ರಾಜಕೀಯ ಪಕ್ಷಗಳು ನಿರ್ಭಯವಾಗಿ ಉಳಿಯಬೇಕು.” ಎಂದು ಹೇಳಿದರು.

ನಾನು ಮೈಸೂರು-ಕೊಡಗು ಕ್ಷೇತ್ರದ ಟಿಕೆಟ್ ಕೇಳಿದ್ದೆ. ಪ್ರತಾಪ್ ಸಿಂಹ ನನ್ನ ಸಹೋದರ, ಅವರಿಗೆ ಟಿಕೆಟ್ ಕೊಡದಿದ್ದರೆ ನನಗೆ ಕೊಡಿ ಎಂದಿದ್ದೆ. ಮೈಸೂರು-ಕೊಡಗು ಆಗದಿದ್ದರೆ ಬೆಂಗಳೂರು ಉತ್ತರದ ಟಿಕೆಟ್ ಕೊಡಿ ಎಂದಿದ್ದೆ. ಆದರೆ, ಬಿಜೆಪಿಯವರು ನನಗೆ ಟಿಕೆಟ್ ಕೊಟ್ಟಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.

ಜೆಡಿಎಸ್ ನಮಗೆ ಅವತ್ತೂ ವಿರೋಧಿ, ಇವತ್ತೂ ವಿರೋಧಿ. ಅಂತಹ ಪಕ್ಷದ ಜೊತೆ ಮೈತ್ರಿ ಯಾಕೆ ಬೇಕಿತ್ತು? ಬಿಜೆಪಿ ನಾಯಕರಿಗೆ ಒಕ್ಕಲಿಗರ ಮೇಲೆ ನಂಬಿಕೆ ಇಲ್ವಾ? ಸಿ.ಟಿ ರವಿ, ಪ್ರತಾಪ್ ಸಿಂಹ, ಅಶ್ವತ್ ನಾರಾಯಣ, ಡಿ.ವಿ ಸದಾನಂದ ಗೌಡರಂತ ಫೈರ್ ಬ್ರ್ಯಾಂಡ್‌ಗಳಿಗೆ ಟಿಕೆಟ್ ತಪ್ಪಿಸಿದ್ದೀರಲ್ವಾ, ಅವರ ಮೇಲೆ ನಂಬಿಕೆ ಇಲ್ವಾ? ನಾವು ಹೋಗಿ ಜೆಡಿಎಸ್‌ನವರ ಕಾಲಿಗೆ ಬೀಳಬೇಕಾ? ಎಂದು ಪ್ರಶ್ನಿಸಿದರು.

ಸಿಎಂ ಸಿದ್ದರಾಮಯ್ಯ ಎಲ್ಲರನ್ನು ಒಳಗೊಂಡ ನಾಯಕ. ಡಿ.ಕೆ ಶಿವಕುಮಾರ್ ನಮ್ಮ ಸಮುದಾಯದ ಸರ್ವೋಚ್ಚ ನಾಯಕ. ಅವರು ನಮ್ಮ ಸಮುದಾಯಕ್ಕೆ ಎಲ್ಲವನ್ನೂ ಕೊಟ್ಟಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಪಕ್ಷ ಮುಂದುವರೆಯುತ್ತಿದೆ. ಪಕ್ಷ ಎಲ್ಲಿ ಹೋಗಿ ಪ್ರಚಾರ ಮಾಡಲು ಹೇಳುತ್ತದೋ, ಅಲ್ಲಿ ಪ್ರಚಾರ ಮಾಡಲು ನಾನು ಸಿದ್ದ ಎಂದು ಹೇಳಿದರು.

ತೇಜಸ್ವಿನಿ ಘರ್ ವಾಪ್ಸಿ

ಪತ್ರಕರ್ತೆಯಾಗಿದ್ದ ತೇಜಸ್ವಿನಿ ಗೌಡ ಅವರು 2004ರಲ್ಲಿ ಕಾಂಗ್ರೆಸ್‌ ಸೇರಿದ್ದರು. ಅಲ್ಲದೆ, ಅದೇ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಕನಕಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ವಿರುದ್ಧ ಗೆಲುವು ಸಾಧಿಸಿದ್ದರು.

ಬಳಿಕ, 2014ರಲ್ಲಿ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದರು. ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯೆಯಾಗಿ ಆಯ್ಕೆಯಾಗಿದ್ದರು. ಇದೀಗ, ಅವರು ಕಾಂಗ್ರೆಸ್‌ಗೆ ಮರಳಿ ಬಂದಿದ್ದಾರೆ. ಅವರು ಕಾಂಗ್ರೆಸ್‌ನಿಂದಲೂ ಎಂಎಲ್‌ಸಿ ಆಗುವ ಸಾಧ್ಯತೆಗಳಿವೆ.

ಇದನ್ನೂ ಓದಿ : ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದ ವಿಚಾರಣೆ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಮನವಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಬೆಂಗಳೂರಿನ 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿರುವ ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳನ್ನು ಬೇರೆ ಸೆಷನ್ಸ್‌ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್‌...

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್...

ಪರಿಶಿಷ್ಟ ಜಾತಿ ಪಟ್ಟಿಗೆ ಜಮ್ಮು-ಕಾಶ್ಮೀರದ ವಾಲ್ಮೀಕಿ ಸಮುದಾಯ: ಒಕ್ಕೂಟ ಸರ್ಕಾರ

ಜಮ್ಮು ಮತ್ತು ಕಾಶ್ಮೀರದ ವಾಲ್ಮೀಕಿ ಸಮುದಾಯವನ್ನು ಈಗ ಅಧಿಕೃತವಾಗಿ ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಬುಧವಾರ ಸಂಸತ್ತಿಗೆ ತಿಳಿಸಿದೆ. ಇತ್ತೀಚಿನ ವರ್ಷಗಳಲ್ಲಿ ಪ್ರಕ್ರಿಯೆಗೊಳಿಸಲಾದ...

ತಿರುಪತಿ ದೇಣಿಗೆ ಕಳ್ಳತನ ಪ್ರಕರಣ: ಕಾನೂನು ಕ್ರಮ ತೆಗೆದುಕೊಳ್ಳವಂತೆ ‘ಸಿಐಡಿ-ಎಸಿಬಿ’ಗೆ ಹೈಕೋರ್ಟ್ ನಿರ್ದೇಶನ

ತಿರುಮಲ ತಿರುಪತಿ ದೇವಸ್ಥಾನದ ಪರಕಮಣಿ (ದೇಣಿಗೆ ಪೆಟ್ಟಿಗೆ) ಕಳ್ಳತನ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಂಧ್ರಪ್ರದೇಶ ಹೈಕೋರ್ಟ್ ರಾಜ್ಯದ ಅಪರಾಧ ತನಿಖಾ ಇಲಾಖೆ (ಸಿಐಡಿ) ಮತ್ತು ಭ್ರಷ್ಟಾಚಾರ ನಿಗ್ರಹ ದಳ...

ದಲಿತರ ಮನೆಯಲ್ಲಿ ಊಟ ಮಾಡಿದ ಆರ್‌ಎಸ್‌ಎಸ್‌ ಕಾರ್ಯಕರ್ತನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಗ್ರಾಮೀಣ ಭಾರತದ ಕೆಲವು ಭಾಗಗಳಲ್ಲಿ ಜಾತಿ ಪೂರ್ವಾಗ್ರಹಗಳು ಎಷ್ಟು ಆಳವಾಗಿ ಉಳಿದಿವೆ ಎಂಬುದನ್ನು ನೆನಪಿಸುವ ರೀತಿಯಲ್ಲಿ, ಮಧ್ಯಪ್ರದೇಶದ ರೈಸೇನ್ ಜಿಲ್ಲೆಯ ಹಳ್ಳಿಯೊಂದರಿಂದ ಸಾಮಾಜಿಕ ಬಹಿಷ್ಕಾರ ಮತ್ತು ಅಸ್ಪೃಶ್ಯತೆಯ ಪ್ರಕರಣ ಬೆಳಕಿಗೆ ಬಂದಿದೆ. ಆರ್‌ಎಸ್‌ಎಸ್...

ಅಸ್ಸಾಮಿ ಗಾಯಕನ ಬಂಧನ ಬಗ್ಗೆ ಟೈಮ್ಸ್ ನೌ ನವಭಾರತ್‌ ಪೂರ್ವಾಗ್ರಹ ಪೀಡಿತ ವರದಿ : ವಾರದೊಳಗೆ ತೆಗೆದು ಹಾಕಲು ಎನ್‌ಬಿಡಿಎಸ್‌ಎ ಆದೇಶ

ಸೆಪ್ಟೆಂಬರ್ 2024ರಲ್ಲಿ ಅಸ್ಸಾಮಿ ಗಾಯಕ ಅಲ್ತಾಫ್ ಹುಸೇನ್ ಬಂಧನದ ಬಗ್ಗೆ ಪ್ರಸಾರವಾದ ಕಾರ್ಯಕ್ರಮದ ಭಾಗಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಟೈಮ್ಸ್ ನೌ ನವಭಾರತ್‌ಗೆ ನಿರ್ದೇಶನ ನೀಡಿದೆ. ಡಿಸೆಂಬರ್...

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...