Homeಕರ್ನಾಟಕಕಾಂಗ್ರೆಸ್‌ಗೆ ಮರಳಿದ ಪರಿಷತ್ ಮಾಜಿ ಸದಸ್ಯೆ ತೇಜಸ್ವಿನಿ ಗೌಡ

ಕಾಂಗ್ರೆಸ್‌ಗೆ ಮರಳಿದ ಪರಿಷತ್ ಮಾಜಿ ಸದಸ್ಯೆ ತೇಜಸ್ವಿನಿ ಗೌಡ

- Advertisement -
- Advertisement -

ಇತ್ತೀಚೆಗೆ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕಿ ಡಾ. ತೇಜಸ್ವಿನಿಗೌಡ ಅವರು ಇಂದು (ಮಾ.30) ಕಾಂಗ್ರೆಸ್‌ಗೆ ಮರಳಿದ್ದಾರೆ.

ದೆಹಲಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ತೇಜಸ್ವಿನಿ ಗೌಡ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ಪವನ್‌ಖೇರಾ ಅವರು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.

ಕಾಂಗ್ರೆಸ್ ಸೇರ್ಪಡೆ ಬಳಿಕ ಮಾತನಾಡಿದ ತೆಜಸ್ವಿನಿಗೌಡ ಅವರು, ‘ಕಾಂಗ್ರೆಸ್ ಮಾತನಾಡಲ್ಲ, ಕೆಲಸ ಮಾಡುತ್ತದೆ’ ಇತಿಹಾಸ ನಮ್ಮ ಮುಂದಿದೆ. ಇದು ಉತ್ತಮ ಸಮಯ. ನಾನು ಪ್ರಾಮಾಣಿಕವಾಗಿ ಪಕ್ಷಕ್ಕಾಗಿ ಕೆಲಸ ಮಾಡಲು ಬಯಸುತ್ತೇನೆ. ಪ್ರಜಾಪ್ರಭುತ್ವದಲ್ಲಿ ರಾಜಕೀಯ ಪಕ್ಷಗಳು ನಿರ್ಭಯವಾಗಿ ಉಳಿಯಬೇಕು.” ಎಂದು ಹೇಳಿದರು.

ನಾನು ಮೈಸೂರು-ಕೊಡಗು ಕ್ಷೇತ್ರದ ಟಿಕೆಟ್ ಕೇಳಿದ್ದೆ. ಪ್ರತಾಪ್ ಸಿಂಹ ನನ್ನ ಸಹೋದರ, ಅವರಿಗೆ ಟಿಕೆಟ್ ಕೊಡದಿದ್ದರೆ ನನಗೆ ಕೊಡಿ ಎಂದಿದ್ದೆ. ಮೈಸೂರು-ಕೊಡಗು ಆಗದಿದ್ದರೆ ಬೆಂಗಳೂರು ಉತ್ತರದ ಟಿಕೆಟ್ ಕೊಡಿ ಎಂದಿದ್ದೆ. ಆದರೆ, ಬಿಜೆಪಿಯವರು ನನಗೆ ಟಿಕೆಟ್ ಕೊಟ್ಟಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.

ಜೆಡಿಎಸ್ ನಮಗೆ ಅವತ್ತೂ ವಿರೋಧಿ, ಇವತ್ತೂ ವಿರೋಧಿ. ಅಂತಹ ಪಕ್ಷದ ಜೊತೆ ಮೈತ್ರಿ ಯಾಕೆ ಬೇಕಿತ್ತು? ಬಿಜೆಪಿ ನಾಯಕರಿಗೆ ಒಕ್ಕಲಿಗರ ಮೇಲೆ ನಂಬಿಕೆ ಇಲ್ವಾ? ಸಿ.ಟಿ ರವಿ, ಪ್ರತಾಪ್ ಸಿಂಹ, ಅಶ್ವತ್ ನಾರಾಯಣ, ಡಿ.ವಿ ಸದಾನಂದ ಗೌಡರಂತ ಫೈರ್ ಬ್ರ್ಯಾಂಡ್‌ಗಳಿಗೆ ಟಿಕೆಟ್ ತಪ್ಪಿಸಿದ್ದೀರಲ್ವಾ, ಅವರ ಮೇಲೆ ನಂಬಿಕೆ ಇಲ್ವಾ? ನಾವು ಹೋಗಿ ಜೆಡಿಎಸ್‌ನವರ ಕಾಲಿಗೆ ಬೀಳಬೇಕಾ? ಎಂದು ಪ್ರಶ್ನಿಸಿದರು.

ಸಿಎಂ ಸಿದ್ದರಾಮಯ್ಯ ಎಲ್ಲರನ್ನು ಒಳಗೊಂಡ ನಾಯಕ. ಡಿ.ಕೆ ಶಿವಕುಮಾರ್ ನಮ್ಮ ಸಮುದಾಯದ ಸರ್ವೋಚ್ಚ ನಾಯಕ. ಅವರು ನಮ್ಮ ಸಮುದಾಯಕ್ಕೆ ಎಲ್ಲವನ್ನೂ ಕೊಟ್ಟಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಪಕ್ಷ ಮುಂದುವರೆಯುತ್ತಿದೆ. ಪಕ್ಷ ಎಲ್ಲಿ ಹೋಗಿ ಪ್ರಚಾರ ಮಾಡಲು ಹೇಳುತ್ತದೋ, ಅಲ್ಲಿ ಪ್ರಚಾರ ಮಾಡಲು ನಾನು ಸಿದ್ದ ಎಂದು ಹೇಳಿದರು.

ತೇಜಸ್ವಿನಿ ಘರ್ ವಾಪ್ಸಿ

ಪತ್ರಕರ್ತೆಯಾಗಿದ್ದ ತೇಜಸ್ವಿನಿ ಗೌಡ ಅವರು 2004ರಲ್ಲಿ ಕಾಂಗ್ರೆಸ್‌ ಸೇರಿದ್ದರು. ಅಲ್ಲದೆ, ಅದೇ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಕನಕಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ವಿರುದ್ಧ ಗೆಲುವು ಸಾಧಿಸಿದ್ದರು.

ಬಳಿಕ, 2014ರಲ್ಲಿ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದರು. ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯೆಯಾಗಿ ಆಯ್ಕೆಯಾಗಿದ್ದರು. ಇದೀಗ, ಅವರು ಕಾಂಗ್ರೆಸ್‌ಗೆ ಮರಳಿ ಬಂದಿದ್ದಾರೆ. ಅವರು ಕಾಂಗ್ರೆಸ್‌ನಿಂದಲೂ ಎಂಎಲ್‌ಸಿ ಆಗುವ ಸಾಧ್ಯತೆಗಳಿವೆ.

ಇದನ್ನೂ ಓದಿ : ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...