Homeಮುಖಪುಟಹರ್ಯಾಣ: ಕಾಲುವೆಯಲ್ಲಿ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಮೃತದೇಹ ಪತ್ತೆ

ಹರ್ಯಾಣ: ಕಾಲುವೆಯಲ್ಲಿ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಮೃತದೇಹ ಪತ್ತೆ

- Advertisement -
- Advertisement -

ಕೊಲೆಯಾದ 12 ದಿನಗಳ ಬಳಿಕ ಪಂಜಾಬ್‌ನ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಅವರ ಮೃತದೇಹ ಹರ್ಯಾಣದ ಗುರುಗ್ರಾಮದ ಕಾಲುವೆಯೊಂದರಲ್ಲಿ ಇಂದು (ಜ.13) ಪತ್ತೆಯಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಹರ್ಯಾಣದ ಫತೇಹಾಬಾದ್ ಜಿಲ್ಲೆಯ ತೊಹಾನಾದಲ್ಲಿ ಭಾಕ್ರಾ ಕಾಲುವೆಯ ಉಪ ಕಾಲುವೆಯಿಂದ ದಿವ್ಯಾ ಪಹುಜಾ ಅವರ ಮೃತದೇಹ ಮೇಲೆತ್ತಲಾಗಿದೆ ಎಂದು ಗುರುಗ್ರಾಮ ಸಹಾಯಕ ಕಮಿಷನರ್ (ಅಪರಾಧ) ವರುಣ್ ಕುಮಾರ್ ದಹಿಯಾ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಪಹುಜಾ ಅವರ ಕುಟುಂಬ ಸದಸ್ಯರು ಆಕೆಯ ದೇಹವನ್ನು ಗುರುತಿಸಿದ್ದಾರೆ. ಗುರುಗ್ರಾಮ ಪೋಲೀಸರ ಆರು ತಂಡಗಳು ಪಹುಜಾ ಅವರ ಮೃತದೇಹದ ಪತ್ತೆಗೆ ಕಾರ್ಯಾಚರಣೆ ನಡೆಸಿತ್ತು.

ಏನಿದು ಪ್ರಕರಣ?

ಹರ್ಯಾಣದ ಮೋಸ್ಟ್‌ ವಾಟೆಂಡ್ ಗ್ಯಾಂಗ್‌ಸ್ಟರ್‌ ಸಂದೀಪ್ ಗಡೋಲಿ ಎಂಬಾತನನ್ನು 2016ರ ಫೆ. 7ರಂದು ನಕಲಿ ಎನ್‌ಕೌಂಟರ್ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ರೂಪದರ್ಶಿ ದಿವ್ಯಾ ಅವರನ್ನು ಪೊಲೀಸರು ಬಂಧಿಸಿದ್ದರು. ಏಳು ವರ್ಷಗಳ ಜೈಲು ಶಿಕ್ಷೆಯ ಬಳಿಕ, ಕಳೆದ ಜೂನ್‌ನಲ್ಲಿ ಇವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ದಿವ್ಯಾ ಅವರೊಂದಿಗೆ ಅವರ ತಾಯಿ, ಐದು ಜನ ಪೊಲೀಸರೂ ಬಂಧನಕ್ಕೊಳಗಾಗಿದ್ದರು.

ಜಾಮೀನಿನ ಮೇಲೆ ಹೊರಬಂದಿದ್ದ ದಿವ್ಯಾ ಅವರನ್ನು ಐದು ಜನರ ಗುಂಪು ಜನವರಿ 2,2024ರಂದು ಹರ್ಯಾಣದ ಗುರುಗ್ರಾಮದ ಹೋಟೆಲ್ ಸಿಟಿ ಪಾಯಿಂಟ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿತ್ತು. ಕೃತ್ಯದ ನಂತರ ಆರೋಪಿಗಳು ಮೃತದೇಹವನ್ನು ಐಷಾರಾಮಿ ಕಾರಿನಲ್ಲಿರಿಸಿ ನಾಶಪಡಿಸುವ ಪ್ರಯತ್ನ ಮಾಡಿದ್ದರು.

ದಿವ್ಯಾ ಪಹುಜಾ ಕೊಲೆಯಾದ ಹೋಟೆಲ್ ಸಿಟಿ ಪಾಯಿಂಟ್‌ನ ಮಾಲೀಕ ಅಭಿಜಿತ್ ಆಕೆಯನ್ನು ಕೊಲೆ ಮಾಡಿದ್ದ. ಬಳಿಕ ಶವ ಸಾಗಿಸಲು ಪ್ರಕಾಶ್ ಮತ್ತು ಇಂದ್ರಜ್ ಎಂಬವರು ಆತನಿಗೆ ನೆರವಾಗಿದ್ದರು. ಅಭಿಜಿತ್‌ನ ಇನ್ನಿಬ್ಬರು ಸಹಚರರಾದ ರವಿ ಬಾಂದ್ರಾ ಮತ್ತು ಬಾಲ್‌ರಾಜ್‌ ಗಿಲ್ ಶವ ವಿಲೇವಾರಿ ಮಾಡಿದ್ದರು ಎಂದು ಆರೋಪಿಸಲಾಗಿದೆ. ಪ್ರಕಾಶ್ ಮತ್ತು ಇಂದ್ರಜ್ ಅಭಿಜಿತ್‌ನ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ದಿವ್ಯಾ ಹೋಟೆಲ್ ಮಾಲೀಕ ಅಭಿಜಿತ್‌ನ ‘ಅಶ್ಲೀಲ ಚಿತ್ರಗಳನ್ನು ಚಿತ್ರೀಕರಿಸಿ’ ಬ್ಲ್ಯಾಕ್‌ಮೇಲ್ ಮಾಡುವ ಮೂಲಕ ಹಣ ವಸೂಲಿ ಮಾಡುತ್ತಿದ್ದರು.ಈ ಕಾರಣಕ್ಕೆ ಆಕೆಯನ್ನು ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದರು.

ದಿವ್ಯಾಳ ಹತ್ಯೆ ಸುದ್ದಿ ಬೆನ್ನಲ್ಲೇ ಪೊಲೀಸರು ಹೋಟೆಲ್‌ನ ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದ್ದರು. ಈ ವೇಳೆ ಆರೋಪಿಗಳು ಹೋಟೆಲ್ ಕೊಠಡಿಯಿಂದ ದಿವ್ಯಾಳ ಮೃತದೇಹವನ್ನು ಹೊರಗೆ ಸಾಗಿಸಿದ್ದ ದೃಶ್ಯ ಅದರಲ್ಲಿ ದೊರೆತಿತ್ತು. ಈ ವಿಡಿಯೋ ವೈರಲ್ ಆಗುವ ಮೂಲಕ ಪ್ರಕರಣ ದೇಶದಾದ್ಯಂತ ಸಂಚಲನ ಸೃಷ್ಟಿಸಿತ್ತು.

ಆರೋಪಿಗಳ ಬಂಧನ:

ಹೋಟೆಲ್ ಮಾಲೀಕ ಅಭಿಜಿತ್ ಸೇರಿದಂತೆ ದಿವ್ಯಾಳ ಕೊಲೆ ಮತ್ತು ಶವ ಸಾಗಾಟದಲ್ಲಿ ಪಾಲ್ಗೊಂಡ ಐವರು ಆರೋಪಿಗಳ ಪೈಕಿ ಹೋಟೆಲ್ ಸಿಬ್ಬಂದಿಗಳಾದ ಪ್ರಕಾಶ್ ಮತ್ತು ಇಂದ್ರಜ್ ಅನ್ನು ಪೊಲೀಸರು ಆರಂಭದಲ್ಲಿ ಬಂಧಿಸಿದ್ದರು. ಗುರುವಾರ (ಜ.11) ಸಂಜೆ ಪಶ್ಚಿಮ ಬಂಗಾಳದಲ್ಲಿ ಆರೋಪಿ ಬಾಲ್‌ರಾಜ್‌ ಗಿಲ್‌ ಅನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಒಟ್ಟು ಮೂವರ ಬಂಧನವಾಗಿದೆ. ಇನ್ನಿಬ್ಬರಾದ ಪ್ರಮುಖ ಆರೋಪಿ ಅಭಿಜಿತ್ ಮತ್ತು ರವಿ ಬಾಂದ್ರಾ ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ನಕಲಿ ಎನ್‌ಕೌಂಟರ್ ಪ್ರಕರಣ:

2016ರ ಗ್ಯಾಂಗ್‌ಸ್ಟರ್‌ ಸಂದೀಪ್ ಗಡೋಲಿ ನಕಲಿ ಎನ್‌ಕೌಂಟರ್ ಪ್ರಕರಣಲ್ಲಿ ದಿವ್ಯಾ ಪಹುಜಾಳನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಈ ದಿವ್ಯಾ ಪಹುಜಾ ಸಂದೀಪ್‌ನ ಗೆಳತಿಯಾಗಿದ್ದಳು. ಸಂದೀಪ್‌ನ ವಿರೋಧಿ ಬಣದ ಗ್ಯಾಂಗ್‌ಸ್ಟರ್, ಹರ್ಯಾಣ ಮುನ್ಸಿಪಲ್ ಕೌನ್ಸಿಲರ್ ವೀರೇಂದ್ರ ಕುಮಾರ್ ಅಲಿಯಾಸ್ ಬಿಂದರ್ ಗುಜ್ಜರ್ ಗಡೋಲಿಯನ್ನು ಹತ್ಯೆ ಮಾಡಲು ಹರ್ಯಾಣ ಪೊಲೀಸ್ ಅಧಿಕಾರಿಗಳೊಂದಿಗೆ ಸಂಚು ರೂಪಿಸಿದ್ದ. ಇದಕ್ಕೆ ದಿವ್ಯಾಳನ್ನೇ ಬಳಸಿಕೊಂಡಿದ್ದ. ಆಕೆಯನ್ನು ಹನಿ ಟ್ರ್ಯಾಪ್‌ನಂತೆ ಬಳಸಿಕೊಂಡು ಗಡೋಲಿಯನ್ನು ನಕಲಿ ಎನ್‌ಕೌಂಟರ್ ಮಾಡಿಸಿದ್ದ.

ಸಂದೀಪ್ ಗಡೋಲಿಯ ಯಾರು?

ಆರಂಭದಲ್ಲೇ ಹೇಳಿದಂತೆ ಸಂದೀಪ್ ಹರ್ಯಾಣದ ಮೋಸ್ಟ್‌ ವಾಟೆಂಡ್ ಗ್ಯಾಂಗ್‌ಸ್ಟರ್ ಆಗಿದ್ದ. ಈತನ ಹಲವು ಕೊಲೆ ಪ್ರಕರಣಗಳು ಇತ್ತು. ಈತ 2015 ರ ಅಕ್ಟೋಬರ್‌ನಲ್ಲಿ ಮುನ್ಸಿಪಲ್ ಕೌನ್ಸಿಲರ್ ಬಿಂದರ್ ಗುಜ್ಜರ್‌ನ ಕಾರು ಚಾಲಕನ ಹತ್ಯೆ ಸೇರಿದಂತೆ ಹಲವಾರು ಕೊಲೆಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿದ್ದ. ಗಡೋಲಿ ವಿರುದ್ಧ 36 ಪ್ರಕರಣಗಳು ದಾಖಲಾಗಿದ್ದವು. 2015ರಲ್ಲಿ ಬಾಂದ್ರಾದಲ್ಲಿ ರೂಪದರ್ಶಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಈತನ ಸಹಾಯಕ ಸೋನು ಎಂಬಾತನನ್ನು ಮುಂಬೈನಲ್ಲಿ ಬಂಧಿಸಲಾಗಿತ್ತು.

ಇದನ್ನೂ ಓದಿ : ಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆ POCSO ಕಾಯ್ದೆಯಡಿಯಲ್ಲಿ ಅಪರಾಧವಲ್ಲ: ಮದ್ರಾಸ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...