Homeಮುಖಪುಟಹರ್ಯಾಣ: ಕಾಲುವೆಯಲ್ಲಿ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಮೃತದೇಹ ಪತ್ತೆ

ಹರ್ಯಾಣ: ಕಾಲುವೆಯಲ್ಲಿ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಮೃತದೇಹ ಪತ್ತೆ

- Advertisement -
- Advertisement -

ಕೊಲೆಯಾದ 12 ದಿನಗಳ ಬಳಿಕ ಪಂಜಾಬ್‌ನ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಅವರ ಮೃತದೇಹ ಹರ್ಯಾಣದ ಗುರುಗ್ರಾಮದ ಕಾಲುವೆಯೊಂದರಲ್ಲಿ ಇಂದು (ಜ.13) ಪತ್ತೆಯಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಹರ್ಯಾಣದ ಫತೇಹಾಬಾದ್ ಜಿಲ್ಲೆಯ ತೊಹಾನಾದಲ್ಲಿ ಭಾಕ್ರಾ ಕಾಲುವೆಯ ಉಪ ಕಾಲುವೆಯಿಂದ ದಿವ್ಯಾ ಪಹುಜಾ ಅವರ ಮೃತದೇಹ ಮೇಲೆತ್ತಲಾಗಿದೆ ಎಂದು ಗುರುಗ್ರಾಮ ಸಹಾಯಕ ಕಮಿಷನರ್ (ಅಪರಾಧ) ವರುಣ್ ಕುಮಾರ್ ದಹಿಯಾ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಪಹುಜಾ ಅವರ ಕುಟುಂಬ ಸದಸ್ಯರು ಆಕೆಯ ದೇಹವನ್ನು ಗುರುತಿಸಿದ್ದಾರೆ. ಗುರುಗ್ರಾಮ ಪೋಲೀಸರ ಆರು ತಂಡಗಳು ಪಹುಜಾ ಅವರ ಮೃತದೇಹದ ಪತ್ತೆಗೆ ಕಾರ್ಯಾಚರಣೆ ನಡೆಸಿತ್ತು.

ಏನಿದು ಪ್ರಕರಣ?

ಹರ್ಯಾಣದ ಮೋಸ್ಟ್‌ ವಾಟೆಂಡ್ ಗ್ಯಾಂಗ್‌ಸ್ಟರ್‌ ಸಂದೀಪ್ ಗಡೋಲಿ ಎಂಬಾತನನ್ನು 2016ರ ಫೆ. 7ರಂದು ನಕಲಿ ಎನ್‌ಕೌಂಟರ್ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ರೂಪದರ್ಶಿ ದಿವ್ಯಾ ಅವರನ್ನು ಪೊಲೀಸರು ಬಂಧಿಸಿದ್ದರು. ಏಳು ವರ್ಷಗಳ ಜೈಲು ಶಿಕ್ಷೆಯ ಬಳಿಕ, ಕಳೆದ ಜೂನ್‌ನಲ್ಲಿ ಇವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ದಿವ್ಯಾ ಅವರೊಂದಿಗೆ ಅವರ ತಾಯಿ, ಐದು ಜನ ಪೊಲೀಸರೂ ಬಂಧನಕ್ಕೊಳಗಾಗಿದ್ದರು.

ಜಾಮೀನಿನ ಮೇಲೆ ಹೊರಬಂದಿದ್ದ ದಿವ್ಯಾ ಅವರನ್ನು ಐದು ಜನರ ಗುಂಪು ಜನವರಿ 2,2024ರಂದು ಹರ್ಯಾಣದ ಗುರುಗ್ರಾಮದ ಹೋಟೆಲ್ ಸಿಟಿ ಪಾಯಿಂಟ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿತ್ತು. ಕೃತ್ಯದ ನಂತರ ಆರೋಪಿಗಳು ಮೃತದೇಹವನ್ನು ಐಷಾರಾಮಿ ಕಾರಿನಲ್ಲಿರಿಸಿ ನಾಶಪಡಿಸುವ ಪ್ರಯತ್ನ ಮಾಡಿದ್ದರು.

ದಿವ್ಯಾ ಪಹುಜಾ ಕೊಲೆಯಾದ ಹೋಟೆಲ್ ಸಿಟಿ ಪಾಯಿಂಟ್‌ನ ಮಾಲೀಕ ಅಭಿಜಿತ್ ಆಕೆಯನ್ನು ಕೊಲೆ ಮಾಡಿದ್ದ. ಬಳಿಕ ಶವ ಸಾಗಿಸಲು ಪ್ರಕಾಶ್ ಮತ್ತು ಇಂದ್ರಜ್ ಎಂಬವರು ಆತನಿಗೆ ನೆರವಾಗಿದ್ದರು. ಅಭಿಜಿತ್‌ನ ಇನ್ನಿಬ್ಬರು ಸಹಚರರಾದ ರವಿ ಬಾಂದ್ರಾ ಮತ್ತು ಬಾಲ್‌ರಾಜ್‌ ಗಿಲ್ ಶವ ವಿಲೇವಾರಿ ಮಾಡಿದ್ದರು ಎಂದು ಆರೋಪಿಸಲಾಗಿದೆ. ಪ್ರಕಾಶ್ ಮತ್ತು ಇಂದ್ರಜ್ ಅಭಿಜಿತ್‌ನ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ದಿವ್ಯಾ ಹೋಟೆಲ್ ಮಾಲೀಕ ಅಭಿಜಿತ್‌ನ ‘ಅಶ್ಲೀಲ ಚಿತ್ರಗಳನ್ನು ಚಿತ್ರೀಕರಿಸಿ’ ಬ್ಲ್ಯಾಕ್‌ಮೇಲ್ ಮಾಡುವ ಮೂಲಕ ಹಣ ವಸೂಲಿ ಮಾಡುತ್ತಿದ್ದರು.ಈ ಕಾರಣಕ್ಕೆ ಆಕೆಯನ್ನು ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದರು.

ದಿವ್ಯಾಳ ಹತ್ಯೆ ಸುದ್ದಿ ಬೆನ್ನಲ್ಲೇ ಪೊಲೀಸರು ಹೋಟೆಲ್‌ನ ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದ್ದರು. ಈ ವೇಳೆ ಆರೋಪಿಗಳು ಹೋಟೆಲ್ ಕೊಠಡಿಯಿಂದ ದಿವ್ಯಾಳ ಮೃತದೇಹವನ್ನು ಹೊರಗೆ ಸಾಗಿಸಿದ್ದ ದೃಶ್ಯ ಅದರಲ್ಲಿ ದೊರೆತಿತ್ತು. ಈ ವಿಡಿಯೋ ವೈರಲ್ ಆಗುವ ಮೂಲಕ ಪ್ರಕರಣ ದೇಶದಾದ್ಯಂತ ಸಂಚಲನ ಸೃಷ್ಟಿಸಿತ್ತು.

ಆರೋಪಿಗಳ ಬಂಧನ:

ಹೋಟೆಲ್ ಮಾಲೀಕ ಅಭಿಜಿತ್ ಸೇರಿದಂತೆ ದಿವ್ಯಾಳ ಕೊಲೆ ಮತ್ತು ಶವ ಸಾಗಾಟದಲ್ಲಿ ಪಾಲ್ಗೊಂಡ ಐವರು ಆರೋಪಿಗಳ ಪೈಕಿ ಹೋಟೆಲ್ ಸಿಬ್ಬಂದಿಗಳಾದ ಪ್ರಕಾಶ್ ಮತ್ತು ಇಂದ್ರಜ್ ಅನ್ನು ಪೊಲೀಸರು ಆರಂಭದಲ್ಲಿ ಬಂಧಿಸಿದ್ದರು. ಗುರುವಾರ (ಜ.11) ಸಂಜೆ ಪಶ್ಚಿಮ ಬಂಗಾಳದಲ್ಲಿ ಆರೋಪಿ ಬಾಲ್‌ರಾಜ್‌ ಗಿಲ್‌ ಅನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಒಟ್ಟು ಮೂವರ ಬಂಧನವಾಗಿದೆ. ಇನ್ನಿಬ್ಬರಾದ ಪ್ರಮುಖ ಆರೋಪಿ ಅಭಿಜಿತ್ ಮತ್ತು ರವಿ ಬಾಂದ್ರಾ ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ನಕಲಿ ಎನ್‌ಕೌಂಟರ್ ಪ್ರಕರಣ:

2016ರ ಗ್ಯಾಂಗ್‌ಸ್ಟರ್‌ ಸಂದೀಪ್ ಗಡೋಲಿ ನಕಲಿ ಎನ್‌ಕೌಂಟರ್ ಪ್ರಕರಣಲ್ಲಿ ದಿವ್ಯಾ ಪಹುಜಾಳನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಈ ದಿವ್ಯಾ ಪಹುಜಾ ಸಂದೀಪ್‌ನ ಗೆಳತಿಯಾಗಿದ್ದಳು. ಸಂದೀಪ್‌ನ ವಿರೋಧಿ ಬಣದ ಗ್ಯಾಂಗ್‌ಸ್ಟರ್, ಹರ್ಯಾಣ ಮುನ್ಸಿಪಲ್ ಕೌನ್ಸಿಲರ್ ವೀರೇಂದ್ರ ಕುಮಾರ್ ಅಲಿಯಾಸ್ ಬಿಂದರ್ ಗುಜ್ಜರ್ ಗಡೋಲಿಯನ್ನು ಹತ್ಯೆ ಮಾಡಲು ಹರ್ಯಾಣ ಪೊಲೀಸ್ ಅಧಿಕಾರಿಗಳೊಂದಿಗೆ ಸಂಚು ರೂಪಿಸಿದ್ದ. ಇದಕ್ಕೆ ದಿವ್ಯಾಳನ್ನೇ ಬಳಸಿಕೊಂಡಿದ್ದ. ಆಕೆಯನ್ನು ಹನಿ ಟ್ರ್ಯಾಪ್‌ನಂತೆ ಬಳಸಿಕೊಂಡು ಗಡೋಲಿಯನ್ನು ನಕಲಿ ಎನ್‌ಕೌಂಟರ್ ಮಾಡಿಸಿದ್ದ.

ಸಂದೀಪ್ ಗಡೋಲಿಯ ಯಾರು?

ಆರಂಭದಲ್ಲೇ ಹೇಳಿದಂತೆ ಸಂದೀಪ್ ಹರ್ಯಾಣದ ಮೋಸ್ಟ್‌ ವಾಟೆಂಡ್ ಗ್ಯಾಂಗ್‌ಸ್ಟರ್ ಆಗಿದ್ದ. ಈತನ ಹಲವು ಕೊಲೆ ಪ್ರಕರಣಗಳು ಇತ್ತು. ಈತ 2015 ರ ಅಕ್ಟೋಬರ್‌ನಲ್ಲಿ ಮುನ್ಸಿಪಲ್ ಕೌನ್ಸಿಲರ್ ಬಿಂದರ್ ಗುಜ್ಜರ್‌ನ ಕಾರು ಚಾಲಕನ ಹತ್ಯೆ ಸೇರಿದಂತೆ ಹಲವಾರು ಕೊಲೆಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿದ್ದ. ಗಡೋಲಿ ವಿರುದ್ಧ 36 ಪ್ರಕರಣಗಳು ದಾಖಲಾಗಿದ್ದವು. 2015ರಲ್ಲಿ ಬಾಂದ್ರಾದಲ್ಲಿ ರೂಪದರ್ಶಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಈತನ ಸಹಾಯಕ ಸೋನು ಎಂಬಾತನನ್ನು ಮುಂಬೈನಲ್ಲಿ ಬಂಧಿಸಲಾಗಿತ್ತು.

ಇದನ್ನೂ ಓದಿ : ಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆ POCSO ಕಾಯ್ದೆಯಡಿಯಲ್ಲಿ ಅಪರಾಧವಲ್ಲ: ಮದ್ರಾಸ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...