Homeಮುಖಪುಟಹರ್ಯಾಣ: ಕಾಲುವೆಯಲ್ಲಿ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಮೃತದೇಹ ಪತ್ತೆ

ಹರ್ಯಾಣ: ಕಾಲುವೆಯಲ್ಲಿ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಮೃತದೇಹ ಪತ್ತೆ

- Advertisement -
- Advertisement -

ಕೊಲೆಯಾದ 12 ದಿನಗಳ ಬಳಿಕ ಪಂಜಾಬ್‌ನ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಅವರ ಮೃತದೇಹ ಹರ್ಯಾಣದ ಗುರುಗ್ರಾಮದ ಕಾಲುವೆಯೊಂದರಲ್ಲಿ ಇಂದು (ಜ.13) ಪತ್ತೆಯಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಹರ್ಯಾಣದ ಫತೇಹಾಬಾದ್ ಜಿಲ್ಲೆಯ ತೊಹಾನಾದಲ್ಲಿ ಭಾಕ್ರಾ ಕಾಲುವೆಯ ಉಪ ಕಾಲುವೆಯಿಂದ ದಿವ್ಯಾ ಪಹುಜಾ ಅವರ ಮೃತದೇಹ ಮೇಲೆತ್ತಲಾಗಿದೆ ಎಂದು ಗುರುಗ್ರಾಮ ಸಹಾಯಕ ಕಮಿಷನರ್ (ಅಪರಾಧ) ವರುಣ್ ಕುಮಾರ್ ದಹಿಯಾ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಪಹುಜಾ ಅವರ ಕುಟುಂಬ ಸದಸ್ಯರು ಆಕೆಯ ದೇಹವನ್ನು ಗುರುತಿಸಿದ್ದಾರೆ. ಗುರುಗ್ರಾಮ ಪೋಲೀಸರ ಆರು ತಂಡಗಳು ಪಹುಜಾ ಅವರ ಮೃತದೇಹದ ಪತ್ತೆಗೆ ಕಾರ್ಯಾಚರಣೆ ನಡೆಸಿತ್ತು.

ಏನಿದು ಪ್ರಕರಣ?

ಹರ್ಯಾಣದ ಮೋಸ್ಟ್‌ ವಾಟೆಂಡ್ ಗ್ಯಾಂಗ್‌ಸ್ಟರ್‌ ಸಂದೀಪ್ ಗಡೋಲಿ ಎಂಬಾತನನ್ನು 2016ರ ಫೆ. 7ರಂದು ನಕಲಿ ಎನ್‌ಕೌಂಟರ್ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ರೂಪದರ್ಶಿ ದಿವ್ಯಾ ಅವರನ್ನು ಪೊಲೀಸರು ಬಂಧಿಸಿದ್ದರು. ಏಳು ವರ್ಷಗಳ ಜೈಲು ಶಿಕ್ಷೆಯ ಬಳಿಕ, ಕಳೆದ ಜೂನ್‌ನಲ್ಲಿ ಇವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ದಿವ್ಯಾ ಅವರೊಂದಿಗೆ ಅವರ ತಾಯಿ, ಐದು ಜನ ಪೊಲೀಸರೂ ಬಂಧನಕ್ಕೊಳಗಾಗಿದ್ದರು.

ಜಾಮೀನಿನ ಮೇಲೆ ಹೊರಬಂದಿದ್ದ ದಿವ್ಯಾ ಅವರನ್ನು ಐದು ಜನರ ಗುಂಪು ಜನವರಿ 2,2024ರಂದು ಹರ್ಯಾಣದ ಗುರುಗ್ರಾಮದ ಹೋಟೆಲ್ ಸಿಟಿ ಪಾಯಿಂಟ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿತ್ತು. ಕೃತ್ಯದ ನಂತರ ಆರೋಪಿಗಳು ಮೃತದೇಹವನ್ನು ಐಷಾರಾಮಿ ಕಾರಿನಲ್ಲಿರಿಸಿ ನಾಶಪಡಿಸುವ ಪ್ರಯತ್ನ ಮಾಡಿದ್ದರು.

ದಿವ್ಯಾ ಪಹುಜಾ ಕೊಲೆಯಾದ ಹೋಟೆಲ್ ಸಿಟಿ ಪಾಯಿಂಟ್‌ನ ಮಾಲೀಕ ಅಭಿಜಿತ್ ಆಕೆಯನ್ನು ಕೊಲೆ ಮಾಡಿದ್ದ. ಬಳಿಕ ಶವ ಸಾಗಿಸಲು ಪ್ರಕಾಶ್ ಮತ್ತು ಇಂದ್ರಜ್ ಎಂಬವರು ಆತನಿಗೆ ನೆರವಾಗಿದ್ದರು. ಅಭಿಜಿತ್‌ನ ಇನ್ನಿಬ್ಬರು ಸಹಚರರಾದ ರವಿ ಬಾಂದ್ರಾ ಮತ್ತು ಬಾಲ್‌ರಾಜ್‌ ಗಿಲ್ ಶವ ವಿಲೇವಾರಿ ಮಾಡಿದ್ದರು ಎಂದು ಆರೋಪಿಸಲಾಗಿದೆ. ಪ್ರಕಾಶ್ ಮತ್ತು ಇಂದ್ರಜ್ ಅಭಿಜಿತ್‌ನ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ದಿವ್ಯಾ ಹೋಟೆಲ್ ಮಾಲೀಕ ಅಭಿಜಿತ್‌ನ ‘ಅಶ್ಲೀಲ ಚಿತ್ರಗಳನ್ನು ಚಿತ್ರೀಕರಿಸಿ’ ಬ್ಲ್ಯಾಕ್‌ಮೇಲ್ ಮಾಡುವ ಮೂಲಕ ಹಣ ವಸೂಲಿ ಮಾಡುತ್ತಿದ್ದರು.ಈ ಕಾರಣಕ್ಕೆ ಆಕೆಯನ್ನು ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದರು.

ದಿವ್ಯಾಳ ಹತ್ಯೆ ಸುದ್ದಿ ಬೆನ್ನಲ್ಲೇ ಪೊಲೀಸರು ಹೋಟೆಲ್‌ನ ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದ್ದರು. ಈ ವೇಳೆ ಆರೋಪಿಗಳು ಹೋಟೆಲ್ ಕೊಠಡಿಯಿಂದ ದಿವ್ಯಾಳ ಮೃತದೇಹವನ್ನು ಹೊರಗೆ ಸಾಗಿಸಿದ್ದ ದೃಶ್ಯ ಅದರಲ್ಲಿ ದೊರೆತಿತ್ತು. ಈ ವಿಡಿಯೋ ವೈರಲ್ ಆಗುವ ಮೂಲಕ ಪ್ರಕರಣ ದೇಶದಾದ್ಯಂತ ಸಂಚಲನ ಸೃಷ್ಟಿಸಿತ್ತು.

ಆರೋಪಿಗಳ ಬಂಧನ:

ಹೋಟೆಲ್ ಮಾಲೀಕ ಅಭಿಜಿತ್ ಸೇರಿದಂತೆ ದಿವ್ಯಾಳ ಕೊಲೆ ಮತ್ತು ಶವ ಸಾಗಾಟದಲ್ಲಿ ಪಾಲ್ಗೊಂಡ ಐವರು ಆರೋಪಿಗಳ ಪೈಕಿ ಹೋಟೆಲ್ ಸಿಬ್ಬಂದಿಗಳಾದ ಪ್ರಕಾಶ್ ಮತ್ತು ಇಂದ್ರಜ್ ಅನ್ನು ಪೊಲೀಸರು ಆರಂಭದಲ್ಲಿ ಬಂಧಿಸಿದ್ದರು. ಗುರುವಾರ (ಜ.11) ಸಂಜೆ ಪಶ್ಚಿಮ ಬಂಗಾಳದಲ್ಲಿ ಆರೋಪಿ ಬಾಲ್‌ರಾಜ್‌ ಗಿಲ್‌ ಅನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಒಟ್ಟು ಮೂವರ ಬಂಧನವಾಗಿದೆ. ಇನ್ನಿಬ್ಬರಾದ ಪ್ರಮುಖ ಆರೋಪಿ ಅಭಿಜಿತ್ ಮತ್ತು ರವಿ ಬಾಂದ್ರಾ ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ನಕಲಿ ಎನ್‌ಕೌಂಟರ್ ಪ್ರಕರಣ:

2016ರ ಗ್ಯಾಂಗ್‌ಸ್ಟರ್‌ ಸಂದೀಪ್ ಗಡೋಲಿ ನಕಲಿ ಎನ್‌ಕೌಂಟರ್ ಪ್ರಕರಣಲ್ಲಿ ದಿವ್ಯಾ ಪಹುಜಾಳನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಈ ದಿವ್ಯಾ ಪಹುಜಾ ಸಂದೀಪ್‌ನ ಗೆಳತಿಯಾಗಿದ್ದಳು. ಸಂದೀಪ್‌ನ ವಿರೋಧಿ ಬಣದ ಗ್ಯಾಂಗ್‌ಸ್ಟರ್, ಹರ್ಯಾಣ ಮುನ್ಸಿಪಲ್ ಕೌನ್ಸಿಲರ್ ವೀರೇಂದ್ರ ಕುಮಾರ್ ಅಲಿಯಾಸ್ ಬಿಂದರ್ ಗುಜ್ಜರ್ ಗಡೋಲಿಯನ್ನು ಹತ್ಯೆ ಮಾಡಲು ಹರ್ಯಾಣ ಪೊಲೀಸ್ ಅಧಿಕಾರಿಗಳೊಂದಿಗೆ ಸಂಚು ರೂಪಿಸಿದ್ದ. ಇದಕ್ಕೆ ದಿವ್ಯಾಳನ್ನೇ ಬಳಸಿಕೊಂಡಿದ್ದ. ಆಕೆಯನ್ನು ಹನಿ ಟ್ರ್ಯಾಪ್‌ನಂತೆ ಬಳಸಿಕೊಂಡು ಗಡೋಲಿಯನ್ನು ನಕಲಿ ಎನ್‌ಕೌಂಟರ್ ಮಾಡಿಸಿದ್ದ.

ಸಂದೀಪ್ ಗಡೋಲಿಯ ಯಾರು?

ಆರಂಭದಲ್ಲೇ ಹೇಳಿದಂತೆ ಸಂದೀಪ್ ಹರ್ಯಾಣದ ಮೋಸ್ಟ್‌ ವಾಟೆಂಡ್ ಗ್ಯಾಂಗ್‌ಸ್ಟರ್ ಆಗಿದ್ದ. ಈತನ ಹಲವು ಕೊಲೆ ಪ್ರಕರಣಗಳು ಇತ್ತು. ಈತ 2015 ರ ಅಕ್ಟೋಬರ್‌ನಲ್ಲಿ ಮುನ್ಸಿಪಲ್ ಕೌನ್ಸಿಲರ್ ಬಿಂದರ್ ಗುಜ್ಜರ್‌ನ ಕಾರು ಚಾಲಕನ ಹತ್ಯೆ ಸೇರಿದಂತೆ ಹಲವಾರು ಕೊಲೆಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿದ್ದ. ಗಡೋಲಿ ವಿರುದ್ಧ 36 ಪ್ರಕರಣಗಳು ದಾಖಲಾಗಿದ್ದವು. 2015ರಲ್ಲಿ ಬಾಂದ್ರಾದಲ್ಲಿ ರೂಪದರ್ಶಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಈತನ ಸಹಾಯಕ ಸೋನು ಎಂಬಾತನನ್ನು ಮುಂಬೈನಲ್ಲಿ ಬಂಧಿಸಲಾಗಿತ್ತು.

ಇದನ್ನೂ ಓದಿ : ಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆ POCSO ಕಾಯ್ದೆಯಡಿಯಲ್ಲಿ ಅಪರಾಧವಲ್ಲ: ಮದ್ರಾಸ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...