Homeಮುಖಪುಟಹರ್ಯಾಣ: ಕಾಲುವೆಯಲ್ಲಿ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಮೃತದೇಹ ಪತ್ತೆ

ಹರ್ಯಾಣ: ಕಾಲುವೆಯಲ್ಲಿ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಮೃತದೇಹ ಪತ್ತೆ

- Advertisement -
- Advertisement -

ಕೊಲೆಯಾದ 12 ದಿನಗಳ ಬಳಿಕ ಪಂಜಾಬ್‌ನ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಅವರ ಮೃತದೇಹ ಹರ್ಯಾಣದ ಗುರುಗ್ರಾಮದ ಕಾಲುವೆಯೊಂದರಲ್ಲಿ ಇಂದು (ಜ.13) ಪತ್ತೆಯಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಹರ್ಯಾಣದ ಫತೇಹಾಬಾದ್ ಜಿಲ್ಲೆಯ ತೊಹಾನಾದಲ್ಲಿ ಭಾಕ್ರಾ ಕಾಲುವೆಯ ಉಪ ಕಾಲುವೆಯಿಂದ ದಿವ್ಯಾ ಪಹುಜಾ ಅವರ ಮೃತದೇಹ ಮೇಲೆತ್ತಲಾಗಿದೆ ಎಂದು ಗುರುಗ್ರಾಮ ಸಹಾಯಕ ಕಮಿಷನರ್ (ಅಪರಾಧ) ವರುಣ್ ಕುಮಾರ್ ದಹಿಯಾ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಪಹುಜಾ ಅವರ ಕುಟುಂಬ ಸದಸ್ಯರು ಆಕೆಯ ದೇಹವನ್ನು ಗುರುತಿಸಿದ್ದಾರೆ. ಗುರುಗ್ರಾಮ ಪೋಲೀಸರ ಆರು ತಂಡಗಳು ಪಹುಜಾ ಅವರ ಮೃತದೇಹದ ಪತ್ತೆಗೆ ಕಾರ್ಯಾಚರಣೆ ನಡೆಸಿತ್ತು.

ಏನಿದು ಪ್ರಕರಣ?

ಹರ್ಯಾಣದ ಮೋಸ್ಟ್‌ ವಾಟೆಂಡ್ ಗ್ಯಾಂಗ್‌ಸ್ಟರ್‌ ಸಂದೀಪ್ ಗಡೋಲಿ ಎಂಬಾತನನ್ನು 2016ರ ಫೆ. 7ರಂದು ನಕಲಿ ಎನ್‌ಕೌಂಟರ್ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ರೂಪದರ್ಶಿ ದಿವ್ಯಾ ಅವರನ್ನು ಪೊಲೀಸರು ಬಂಧಿಸಿದ್ದರು. ಏಳು ವರ್ಷಗಳ ಜೈಲು ಶಿಕ್ಷೆಯ ಬಳಿಕ, ಕಳೆದ ಜೂನ್‌ನಲ್ಲಿ ಇವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ದಿವ್ಯಾ ಅವರೊಂದಿಗೆ ಅವರ ತಾಯಿ, ಐದು ಜನ ಪೊಲೀಸರೂ ಬಂಧನಕ್ಕೊಳಗಾಗಿದ್ದರು.

ಜಾಮೀನಿನ ಮೇಲೆ ಹೊರಬಂದಿದ್ದ ದಿವ್ಯಾ ಅವರನ್ನು ಐದು ಜನರ ಗುಂಪು ಜನವರಿ 2,2024ರಂದು ಹರ್ಯಾಣದ ಗುರುಗ್ರಾಮದ ಹೋಟೆಲ್ ಸಿಟಿ ಪಾಯಿಂಟ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿತ್ತು. ಕೃತ್ಯದ ನಂತರ ಆರೋಪಿಗಳು ಮೃತದೇಹವನ್ನು ಐಷಾರಾಮಿ ಕಾರಿನಲ್ಲಿರಿಸಿ ನಾಶಪಡಿಸುವ ಪ್ರಯತ್ನ ಮಾಡಿದ್ದರು.

ದಿವ್ಯಾ ಪಹುಜಾ ಕೊಲೆಯಾದ ಹೋಟೆಲ್ ಸಿಟಿ ಪಾಯಿಂಟ್‌ನ ಮಾಲೀಕ ಅಭಿಜಿತ್ ಆಕೆಯನ್ನು ಕೊಲೆ ಮಾಡಿದ್ದ. ಬಳಿಕ ಶವ ಸಾಗಿಸಲು ಪ್ರಕಾಶ್ ಮತ್ತು ಇಂದ್ರಜ್ ಎಂಬವರು ಆತನಿಗೆ ನೆರವಾಗಿದ್ದರು. ಅಭಿಜಿತ್‌ನ ಇನ್ನಿಬ್ಬರು ಸಹಚರರಾದ ರವಿ ಬಾಂದ್ರಾ ಮತ್ತು ಬಾಲ್‌ರಾಜ್‌ ಗಿಲ್ ಶವ ವಿಲೇವಾರಿ ಮಾಡಿದ್ದರು ಎಂದು ಆರೋಪಿಸಲಾಗಿದೆ. ಪ್ರಕಾಶ್ ಮತ್ತು ಇಂದ್ರಜ್ ಅಭಿಜಿತ್‌ನ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ದಿವ್ಯಾ ಹೋಟೆಲ್ ಮಾಲೀಕ ಅಭಿಜಿತ್‌ನ ‘ಅಶ್ಲೀಲ ಚಿತ್ರಗಳನ್ನು ಚಿತ್ರೀಕರಿಸಿ’ ಬ್ಲ್ಯಾಕ್‌ಮೇಲ್ ಮಾಡುವ ಮೂಲಕ ಹಣ ವಸೂಲಿ ಮಾಡುತ್ತಿದ್ದರು.ಈ ಕಾರಣಕ್ಕೆ ಆಕೆಯನ್ನು ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದರು.

ದಿವ್ಯಾಳ ಹತ್ಯೆ ಸುದ್ದಿ ಬೆನ್ನಲ್ಲೇ ಪೊಲೀಸರು ಹೋಟೆಲ್‌ನ ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದ್ದರು. ಈ ವೇಳೆ ಆರೋಪಿಗಳು ಹೋಟೆಲ್ ಕೊಠಡಿಯಿಂದ ದಿವ್ಯಾಳ ಮೃತದೇಹವನ್ನು ಹೊರಗೆ ಸಾಗಿಸಿದ್ದ ದೃಶ್ಯ ಅದರಲ್ಲಿ ದೊರೆತಿತ್ತು. ಈ ವಿಡಿಯೋ ವೈರಲ್ ಆಗುವ ಮೂಲಕ ಪ್ರಕರಣ ದೇಶದಾದ್ಯಂತ ಸಂಚಲನ ಸೃಷ್ಟಿಸಿತ್ತು.

ಆರೋಪಿಗಳ ಬಂಧನ:

ಹೋಟೆಲ್ ಮಾಲೀಕ ಅಭಿಜಿತ್ ಸೇರಿದಂತೆ ದಿವ್ಯಾಳ ಕೊಲೆ ಮತ್ತು ಶವ ಸಾಗಾಟದಲ್ಲಿ ಪಾಲ್ಗೊಂಡ ಐವರು ಆರೋಪಿಗಳ ಪೈಕಿ ಹೋಟೆಲ್ ಸಿಬ್ಬಂದಿಗಳಾದ ಪ್ರಕಾಶ್ ಮತ್ತು ಇಂದ್ರಜ್ ಅನ್ನು ಪೊಲೀಸರು ಆರಂಭದಲ್ಲಿ ಬಂಧಿಸಿದ್ದರು. ಗುರುವಾರ (ಜ.11) ಸಂಜೆ ಪಶ್ಚಿಮ ಬಂಗಾಳದಲ್ಲಿ ಆರೋಪಿ ಬಾಲ್‌ರಾಜ್‌ ಗಿಲ್‌ ಅನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಒಟ್ಟು ಮೂವರ ಬಂಧನವಾಗಿದೆ. ಇನ್ನಿಬ್ಬರಾದ ಪ್ರಮುಖ ಆರೋಪಿ ಅಭಿಜಿತ್ ಮತ್ತು ರವಿ ಬಾಂದ್ರಾ ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ನಕಲಿ ಎನ್‌ಕೌಂಟರ್ ಪ್ರಕರಣ:

2016ರ ಗ್ಯಾಂಗ್‌ಸ್ಟರ್‌ ಸಂದೀಪ್ ಗಡೋಲಿ ನಕಲಿ ಎನ್‌ಕೌಂಟರ್ ಪ್ರಕರಣಲ್ಲಿ ದಿವ್ಯಾ ಪಹುಜಾಳನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಈ ದಿವ್ಯಾ ಪಹುಜಾ ಸಂದೀಪ್‌ನ ಗೆಳತಿಯಾಗಿದ್ದಳು. ಸಂದೀಪ್‌ನ ವಿರೋಧಿ ಬಣದ ಗ್ಯಾಂಗ್‌ಸ್ಟರ್, ಹರ್ಯಾಣ ಮುನ್ಸಿಪಲ್ ಕೌನ್ಸಿಲರ್ ವೀರೇಂದ್ರ ಕುಮಾರ್ ಅಲಿಯಾಸ್ ಬಿಂದರ್ ಗುಜ್ಜರ್ ಗಡೋಲಿಯನ್ನು ಹತ್ಯೆ ಮಾಡಲು ಹರ್ಯಾಣ ಪೊಲೀಸ್ ಅಧಿಕಾರಿಗಳೊಂದಿಗೆ ಸಂಚು ರೂಪಿಸಿದ್ದ. ಇದಕ್ಕೆ ದಿವ್ಯಾಳನ್ನೇ ಬಳಸಿಕೊಂಡಿದ್ದ. ಆಕೆಯನ್ನು ಹನಿ ಟ್ರ್ಯಾಪ್‌ನಂತೆ ಬಳಸಿಕೊಂಡು ಗಡೋಲಿಯನ್ನು ನಕಲಿ ಎನ್‌ಕೌಂಟರ್ ಮಾಡಿಸಿದ್ದ.

ಸಂದೀಪ್ ಗಡೋಲಿಯ ಯಾರು?

ಆರಂಭದಲ್ಲೇ ಹೇಳಿದಂತೆ ಸಂದೀಪ್ ಹರ್ಯಾಣದ ಮೋಸ್ಟ್‌ ವಾಟೆಂಡ್ ಗ್ಯಾಂಗ್‌ಸ್ಟರ್ ಆಗಿದ್ದ. ಈತನ ಹಲವು ಕೊಲೆ ಪ್ರಕರಣಗಳು ಇತ್ತು. ಈತ 2015 ರ ಅಕ್ಟೋಬರ್‌ನಲ್ಲಿ ಮುನ್ಸಿಪಲ್ ಕೌನ್ಸಿಲರ್ ಬಿಂದರ್ ಗುಜ್ಜರ್‌ನ ಕಾರು ಚಾಲಕನ ಹತ್ಯೆ ಸೇರಿದಂತೆ ಹಲವಾರು ಕೊಲೆಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿದ್ದ. ಗಡೋಲಿ ವಿರುದ್ಧ 36 ಪ್ರಕರಣಗಳು ದಾಖಲಾಗಿದ್ದವು. 2015ರಲ್ಲಿ ಬಾಂದ್ರಾದಲ್ಲಿ ರೂಪದರ್ಶಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಈತನ ಸಹಾಯಕ ಸೋನು ಎಂಬಾತನನ್ನು ಮುಂಬೈನಲ್ಲಿ ಬಂಧಿಸಲಾಗಿತ್ತು.

ಇದನ್ನೂ ಓದಿ : ಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆ POCSO ಕಾಯ್ದೆಯಡಿಯಲ್ಲಿ ಅಪರಾಧವಲ್ಲ: ಮದ್ರಾಸ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...