Homeಮುಖಪುಟಹರ್ಯಾಣ: ಕಾಲುವೆಯಲ್ಲಿ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಮೃತದೇಹ ಪತ್ತೆ

ಹರ್ಯಾಣ: ಕಾಲುವೆಯಲ್ಲಿ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಮೃತದೇಹ ಪತ್ತೆ

- Advertisement -
- Advertisement -

ಕೊಲೆಯಾದ 12 ದಿನಗಳ ಬಳಿಕ ಪಂಜಾಬ್‌ನ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಅವರ ಮೃತದೇಹ ಹರ್ಯಾಣದ ಗುರುಗ್ರಾಮದ ಕಾಲುವೆಯೊಂದರಲ್ಲಿ ಇಂದು (ಜ.13) ಪತ್ತೆಯಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಹರ್ಯಾಣದ ಫತೇಹಾಬಾದ್ ಜಿಲ್ಲೆಯ ತೊಹಾನಾದಲ್ಲಿ ಭಾಕ್ರಾ ಕಾಲುವೆಯ ಉಪ ಕಾಲುವೆಯಿಂದ ದಿವ್ಯಾ ಪಹುಜಾ ಅವರ ಮೃತದೇಹ ಮೇಲೆತ್ತಲಾಗಿದೆ ಎಂದು ಗುರುಗ್ರಾಮ ಸಹಾಯಕ ಕಮಿಷನರ್ (ಅಪರಾಧ) ವರುಣ್ ಕುಮಾರ್ ದಹಿಯಾ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಪಹುಜಾ ಅವರ ಕುಟುಂಬ ಸದಸ್ಯರು ಆಕೆಯ ದೇಹವನ್ನು ಗುರುತಿಸಿದ್ದಾರೆ. ಗುರುಗ್ರಾಮ ಪೋಲೀಸರ ಆರು ತಂಡಗಳು ಪಹುಜಾ ಅವರ ಮೃತದೇಹದ ಪತ್ತೆಗೆ ಕಾರ್ಯಾಚರಣೆ ನಡೆಸಿತ್ತು.

ಏನಿದು ಪ್ರಕರಣ?

ಹರ್ಯಾಣದ ಮೋಸ್ಟ್‌ ವಾಟೆಂಡ್ ಗ್ಯಾಂಗ್‌ಸ್ಟರ್‌ ಸಂದೀಪ್ ಗಡೋಲಿ ಎಂಬಾತನನ್ನು 2016ರ ಫೆ. 7ರಂದು ನಕಲಿ ಎನ್‌ಕೌಂಟರ್ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ರೂಪದರ್ಶಿ ದಿವ್ಯಾ ಅವರನ್ನು ಪೊಲೀಸರು ಬಂಧಿಸಿದ್ದರು. ಏಳು ವರ್ಷಗಳ ಜೈಲು ಶಿಕ್ಷೆಯ ಬಳಿಕ, ಕಳೆದ ಜೂನ್‌ನಲ್ಲಿ ಇವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ದಿವ್ಯಾ ಅವರೊಂದಿಗೆ ಅವರ ತಾಯಿ, ಐದು ಜನ ಪೊಲೀಸರೂ ಬಂಧನಕ್ಕೊಳಗಾಗಿದ್ದರು.

ಜಾಮೀನಿನ ಮೇಲೆ ಹೊರಬಂದಿದ್ದ ದಿವ್ಯಾ ಅವರನ್ನು ಐದು ಜನರ ಗುಂಪು ಜನವರಿ 2,2024ರಂದು ಹರ್ಯಾಣದ ಗುರುಗ್ರಾಮದ ಹೋಟೆಲ್ ಸಿಟಿ ಪಾಯಿಂಟ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿತ್ತು. ಕೃತ್ಯದ ನಂತರ ಆರೋಪಿಗಳು ಮೃತದೇಹವನ್ನು ಐಷಾರಾಮಿ ಕಾರಿನಲ್ಲಿರಿಸಿ ನಾಶಪಡಿಸುವ ಪ್ರಯತ್ನ ಮಾಡಿದ್ದರು.

ದಿವ್ಯಾ ಪಹುಜಾ ಕೊಲೆಯಾದ ಹೋಟೆಲ್ ಸಿಟಿ ಪಾಯಿಂಟ್‌ನ ಮಾಲೀಕ ಅಭಿಜಿತ್ ಆಕೆಯನ್ನು ಕೊಲೆ ಮಾಡಿದ್ದ. ಬಳಿಕ ಶವ ಸಾಗಿಸಲು ಪ್ರಕಾಶ್ ಮತ್ತು ಇಂದ್ರಜ್ ಎಂಬವರು ಆತನಿಗೆ ನೆರವಾಗಿದ್ದರು. ಅಭಿಜಿತ್‌ನ ಇನ್ನಿಬ್ಬರು ಸಹಚರರಾದ ರವಿ ಬಾಂದ್ರಾ ಮತ್ತು ಬಾಲ್‌ರಾಜ್‌ ಗಿಲ್ ಶವ ವಿಲೇವಾರಿ ಮಾಡಿದ್ದರು ಎಂದು ಆರೋಪಿಸಲಾಗಿದೆ. ಪ್ರಕಾಶ್ ಮತ್ತು ಇಂದ್ರಜ್ ಅಭಿಜಿತ್‌ನ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ದಿವ್ಯಾ ಹೋಟೆಲ್ ಮಾಲೀಕ ಅಭಿಜಿತ್‌ನ ‘ಅಶ್ಲೀಲ ಚಿತ್ರಗಳನ್ನು ಚಿತ್ರೀಕರಿಸಿ’ ಬ್ಲ್ಯಾಕ್‌ಮೇಲ್ ಮಾಡುವ ಮೂಲಕ ಹಣ ವಸೂಲಿ ಮಾಡುತ್ತಿದ್ದರು.ಈ ಕಾರಣಕ್ಕೆ ಆಕೆಯನ್ನು ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದರು.

ದಿವ್ಯಾಳ ಹತ್ಯೆ ಸುದ್ದಿ ಬೆನ್ನಲ್ಲೇ ಪೊಲೀಸರು ಹೋಟೆಲ್‌ನ ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದ್ದರು. ಈ ವೇಳೆ ಆರೋಪಿಗಳು ಹೋಟೆಲ್ ಕೊಠಡಿಯಿಂದ ದಿವ್ಯಾಳ ಮೃತದೇಹವನ್ನು ಹೊರಗೆ ಸಾಗಿಸಿದ್ದ ದೃಶ್ಯ ಅದರಲ್ಲಿ ದೊರೆತಿತ್ತು. ಈ ವಿಡಿಯೋ ವೈರಲ್ ಆಗುವ ಮೂಲಕ ಪ್ರಕರಣ ದೇಶದಾದ್ಯಂತ ಸಂಚಲನ ಸೃಷ್ಟಿಸಿತ್ತು.

ಆರೋಪಿಗಳ ಬಂಧನ:

ಹೋಟೆಲ್ ಮಾಲೀಕ ಅಭಿಜಿತ್ ಸೇರಿದಂತೆ ದಿವ್ಯಾಳ ಕೊಲೆ ಮತ್ತು ಶವ ಸಾಗಾಟದಲ್ಲಿ ಪಾಲ್ಗೊಂಡ ಐವರು ಆರೋಪಿಗಳ ಪೈಕಿ ಹೋಟೆಲ್ ಸಿಬ್ಬಂದಿಗಳಾದ ಪ್ರಕಾಶ್ ಮತ್ತು ಇಂದ್ರಜ್ ಅನ್ನು ಪೊಲೀಸರು ಆರಂಭದಲ್ಲಿ ಬಂಧಿಸಿದ್ದರು. ಗುರುವಾರ (ಜ.11) ಸಂಜೆ ಪಶ್ಚಿಮ ಬಂಗಾಳದಲ್ಲಿ ಆರೋಪಿ ಬಾಲ್‌ರಾಜ್‌ ಗಿಲ್‌ ಅನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಒಟ್ಟು ಮೂವರ ಬಂಧನವಾಗಿದೆ. ಇನ್ನಿಬ್ಬರಾದ ಪ್ರಮುಖ ಆರೋಪಿ ಅಭಿಜಿತ್ ಮತ್ತು ರವಿ ಬಾಂದ್ರಾ ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ನಕಲಿ ಎನ್‌ಕೌಂಟರ್ ಪ್ರಕರಣ:

2016ರ ಗ್ಯಾಂಗ್‌ಸ್ಟರ್‌ ಸಂದೀಪ್ ಗಡೋಲಿ ನಕಲಿ ಎನ್‌ಕೌಂಟರ್ ಪ್ರಕರಣಲ್ಲಿ ದಿವ್ಯಾ ಪಹುಜಾಳನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಈ ದಿವ್ಯಾ ಪಹುಜಾ ಸಂದೀಪ್‌ನ ಗೆಳತಿಯಾಗಿದ್ದಳು. ಸಂದೀಪ್‌ನ ವಿರೋಧಿ ಬಣದ ಗ್ಯಾಂಗ್‌ಸ್ಟರ್, ಹರ್ಯಾಣ ಮುನ್ಸಿಪಲ್ ಕೌನ್ಸಿಲರ್ ವೀರೇಂದ್ರ ಕುಮಾರ್ ಅಲಿಯಾಸ್ ಬಿಂದರ್ ಗುಜ್ಜರ್ ಗಡೋಲಿಯನ್ನು ಹತ್ಯೆ ಮಾಡಲು ಹರ್ಯಾಣ ಪೊಲೀಸ್ ಅಧಿಕಾರಿಗಳೊಂದಿಗೆ ಸಂಚು ರೂಪಿಸಿದ್ದ. ಇದಕ್ಕೆ ದಿವ್ಯಾಳನ್ನೇ ಬಳಸಿಕೊಂಡಿದ್ದ. ಆಕೆಯನ್ನು ಹನಿ ಟ್ರ್ಯಾಪ್‌ನಂತೆ ಬಳಸಿಕೊಂಡು ಗಡೋಲಿಯನ್ನು ನಕಲಿ ಎನ್‌ಕೌಂಟರ್ ಮಾಡಿಸಿದ್ದ.

ಸಂದೀಪ್ ಗಡೋಲಿಯ ಯಾರು?

ಆರಂಭದಲ್ಲೇ ಹೇಳಿದಂತೆ ಸಂದೀಪ್ ಹರ್ಯಾಣದ ಮೋಸ್ಟ್‌ ವಾಟೆಂಡ್ ಗ್ಯಾಂಗ್‌ಸ್ಟರ್ ಆಗಿದ್ದ. ಈತನ ಹಲವು ಕೊಲೆ ಪ್ರಕರಣಗಳು ಇತ್ತು. ಈತ 2015 ರ ಅಕ್ಟೋಬರ್‌ನಲ್ಲಿ ಮುನ್ಸಿಪಲ್ ಕೌನ್ಸಿಲರ್ ಬಿಂದರ್ ಗುಜ್ಜರ್‌ನ ಕಾರು ಚಾಲಕನ ಹತ್ಯೆ ಸೇರಿದಂತೆ ಹಲವಾರು ಕೊಲೆಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿದ್ದ. ಗಡೋಲಿ ವಿರುದ್ಧ 36 ಪ್ರಕರಣಗಳು ದಾಖಲಾಗಿದ್ದವು. 2015ರಲ್ಲಿ ಬಾಂದ್ರಾದಲ್ಲಿ ರೂಪದರ್ಶಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಈತನ ಸಹಾಯಕ ಸೋನು ಎಂಬಾತನನ್ನು ಮುಂಬೈನಲ್ಲಿ ಬಂಧಿಸಲಾಗಿತ್ತು.

ಇದನ್ನೂ ಓದಿ : ಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆ POCSO ಕಾಯ್ದೆಯಡಿಯಲ್ಲಿ ಅಪರಾಧವಲ್ಲ: ಮದ್ರಾಸ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...