Homeಮುಖಪುಟಹರ್ಯಾಣ: ಕಾಲುವೆಯಲ್ಲಿ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಮೃತದೇಹ ಪತ್ತೆ

ಹರ್ಯಾಣ: ಕಾಲುವೆಯಲ್ಲಿ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಮೃತದೇಹ ಪತ್ತೆ

- Advertisement -
- Advertisement -

ಕೊಲೆಯಾದ 12 ದಿನಗಳ ಬಳಿಕ ಪಂಜಾಬ್‌ನ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಅವರ ಮೃತದೇಹ ಹರ್ಯಾಣದ ಗುರುಗ್ರಾಮದ ಕಾಲುವೆಯೊಂದರಲ್ಲಿ ಇಂದು (ಜ.13) ಪತ್ತೆಯಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಹರ್ಯಾಣದ ಫತೇಹಾಬಾದ್ ಜಿಲ್ಲೆಯ ತೊಹಾನಾದಲ್ಲಿ ಭಾಕ್ರಾ ಕಾಲುವೆಯ ಉಪ ಕಾಲುವೆಯಿಂದ ದಿವ್ಯಾ ಪಹುಜಾ ಅವರ ಮೃತದೇಹ ಮೇಲೆತ್ತಲಾಗಿದೆ ಎಂದು ಗುರುಗ್ರಾಮ ಸಹಾಯಕ ಕಮಿಷನರ್ (ಅಪರಾಧ) ವರುಣ್ ಕುಮಾರ್ ದಹಿಯಾ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಪಹುಜಾ ಅವರ ಕುಟುಂಬ ಸದಸ್ಯರು ಆಕೆಯ ದೇಹವನ್ನು ಗುರುತಿಸಿದ್ದಾರೆ. ಗುರುಗ್ರಾಮ ಪೋಲೀಸರ ಆರು ತಂಡಗಳು ಪಹುಜಾ ಅವರ ಮೃತದೇಹದ ಪತ್ತೆಗೆ ಕಾರ್ಯಾಚರಣೆ ನಡೆಸಿತ್ತು.

ಏನಿದು ಪ್ರಕರಣ?

ಹರ್ಯಾಣದ ಮೋಸ್ಟ್‌ ವಾಟೆಂಡ್ ಗ್ಯಾಂಗ್‌ಸ್ಟರ್‌ ಸಂದೀಪ್ ಗಡೋಲಿ ಎಂಬಾತನನ್ನು 2016ರ ಫೆ. 7ರಂದು ನಕಲಿ ಎನ್‌ಕೌಂಟರ್ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ರೂಪದರ್ಶಿ ದಿವ್ಯಾ ಅವರನ್ನು ಪೊಲೀಸರು ಬಂಧಿಸಿದ್ದರು. ಏಳು ವರ್ಷಗಳ ಜೈಲು ಶಿಕ್ಷೆಯ ಬಳಿಕ, ಕಳೆದ ಜೂನ್‌ನಲ್ಲಿ ಇವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ದಿವ್ಯಾ ಅವರೊಂದಿಗೆ ಅವರ ತಾಯಿ, ಐದು ಜನ ಪೊಲೀಸರೂ ಬಂಧನಕ್ಕೊಳಗಾಗಿದ್ದರು.

ಜಾಮೀನಿನ ಮೇಲೆ ಹೊರಬಂದಿದ್ದ ದಿವ್ಯಾ ಅವರನ್ನು ಐದು ಜನರ ಗುಂಪು ಜನವರಿ 2,2024ರಂದು ಹರ್ಯಾಣದ ಗುರುಗ್ರಾಮದ ಹೋಟೆಲ್ ಸಿಟಿ ಪಾಯಿಂಟ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿತ್ತು. ಕೃತ್ಯದ ನಂತರ ಆರೋಪಿಗಳು ಮೃತದೇಹವನ್ನು ಐಷಾರಾಮಿ ಕಾರಿನಲ್ಲಿರಿಸಿ ನಾಶಪಡಿಸುವ ಪ್ರಯತ್ನ ಮಾಡಿದ್ದರು.

ದಿವ್ಯಾ ಪಹುಜಾ ಕೊಲೆಯಾದ ಹೋಟೆಲ್ ಸಿಟಿ ಪಾಯಿಂಟ್‌ನ ಮಾಲೀಕ ಅಭಿಜಿತ್ ಆಕೆಯನ್ನು ಕೊಲೆ ಮಾಡಿದ್ದ. ಬಳಿಕ ಶವ ಸಾಗಿಸಲು ಪ್ರಕಾಶ್ ಮತ್ತು ಇಂದ್ರಜ್ ಎಂಬವರು ಆತನಿಗೆ ನೆರವಾಗಿದ್ದರು. ಅಭಿಜಿತ್‌ನ ಇನ್ನಿಬ್ಬರು ಸಹಚರರಾದ ರವಿ ಬಾಂದ್ರಾ ಮತ್ತು ಬಾಲ್‌ರಾಜ್‌ ಗಿಲ್ ಶವ ವಿಲೇವಾರಿ ಮಾಡಿದ್ದರು ಎಂದು ಆರೋಪಿಸಲಾಗಿದೆ. ಪ್ರಕಾಶ್ ಮತ್ತು ಇಂದ್ರಜ್ ಅಭಿಜಿತ್‌ನ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ದಿವ್ಯಾ ಹೋಟೆಲ್ ಮಾಲೀಕ ಅಭಿಜಿತ್‌ನ ‘ಅಶ್ಲೀಲ ಚಿತ್ರಗಳನ್ನು ಚಿತ್ರೀಕರಿಸಿ’ ಬ್ಲ್ಯಾಕ್‌ಮೇಲ್ ಮಾಡುವ ಮೂಲಕ ಹಣ ವಸೂಲಿ ಮಾಡುತ್ತಿದ್ದರು.ಈ ಕಾರಣಕ್ಕೆ ಆಕೆಯನ್ನು ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದರು.

ದಿವ್ಯಾಳ ಹತ್ಯೆ ಸುದ್ದಿ ಬೆನ್ನಲ್ಲೇ ಪೊಲೀಸರು ಹೋಟೆಲ್‌ನ ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದ್ದರು. ಈ ವೇಳೆ ಆರೋಪಿಗಳು ಹೋಟೆಲ್ ಕೊಠಡಿಯಿಂದ ದಿವ್ಯಾಳ ಮೃತದೇಹವನ್ನು ಹೊರಗೆ ಸಾಗಿಸಿದ್ದ ದೃಶ್ಯ ಅದರಲ್ಲಿ ದೊರೆತಿತ್ತು. ಈ ವಿಡಿಯೋ ವೈರಲ್ ಆಗುವ ಮೂಲಕ ಪ್ರಕರಣ ದೇಶದಾದ್ಯಂತ ಸಂಚಲನ ಸೃಷ್ಟಿಸಿತ್ತು.

ಆರೋಪಿಗಳ ಬಂಧನ:

ಹೋಟೆಲ್ ಮಾಲೀಕ ಅಭಿಜಿತ್ ಸೇರಿದಂತೆ ದಿವ್ಯಾಳ ಕೊಲೆ ಮತ್ತು ಶವ ಸಾಗಾಟದಲ್ಲಿ ಪಾಲ್ಗೊಂಡ ಐವರು ಆರೋಪಿಗಳ ಪೈಕಿ ಹೋಟೆಲ್ ಸಿಬ್ಬಂದಿಗಳಾದ ಪ್ರಕಾಶ್ ಮತ್ತು ಇಂದ್ರಜ್ ಅನ್ನು ಪೊಲೀಸರು ಆರಂಭದಲ್ಲಿ ಬಂಧಿಸಿದ್ದರು. ಗುರುವಾರ (ಜ.11) ಸಂಜೆ ಪಶ್ಚಿಮ ಬಂಗಾಳದಲ್ಲಿ ಆರೋಪಿ ಬಾಲ್‌ರಾಜ್‌ ಗಿಲ್‌ ಅನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಒಟ್ಟು ಮೂವರ ಬಂಧನವಾಗಿದೆ. ಇನ್ನಿಬ್ಬರಾದ ಪ್ರಮುಖ ಆರೋಪಿ ಅಭಿಜಿತ್ ಮತ್ತು ರವಿ ಬಾಂದ್ರಾ ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ನಕಲಿ ಎನ್‌ಕೌಂಟರ್ ಪ್ರಕರಣ:

2016ರ ಗ್ಯಾಂಗ್‌ಸ್ಟರ್‌ ಸಂದೀಪ್ ಗಡೋಲಿ ನಕಲಿ ಎನ್‌ಕೌಂಟರ್ ಪ್ರಕರಣಲ್ಲಿ ದಿವ್ಯಾ ಪಹುಜಾಳನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಈ ದಿವ್ಯಾ ಪಹುಜಾ ಸಂದೀಪ್‌ನ ಗೆಳತಿಯಾಗಿದ್ದಳು. ಸಂದೀಪ್‌ನ ವಿರೋಧಿ ಬಣದ ಗ್ಯಾಂಗ್‌ಸ್ಟರ್, ಹರ್ಯಾಣ ಮುನ್ಸಿಪಲ್ ಕೌನ್ಸಿಲರ್ ವೀರೇಂದ್ರ ಕುಮಾರ್ ಅಲಿಯಾಸ್ ಬಿಂದರ್ ಗುಜ್ಜರ್ ಗಡೋಲಿಯನ್ನು ಹತ್ಯೆ ಮಾಡಲು ಹರ್ಯಾಣ ಪೊಲೀಸ್ ಅಧಿಕಾರಿಗಳೊಂದಿಗೆ ಸಂಚು ರೂಪಿಸಿದ್ದ. ಇದಕ್ಕೆ ದಿವ್ಯಾಳನ್ನೇ ಬಳಸಿಕೊಂಡಿದ್ದ. ಆಕೆಯನ್ನು ಹನಿ ಟ್ರ್ಯಾಪ್‌ನಂತೆ ಬಳಸಿಕೊಂಡು ಗಡೋಲಿಯನ್ನು ನಕಲಿ ಎನ್‌ಕೌಂಟರ್ ಮಾಡಿಸಿದ್ದ.

ಸಂದೀಪ್ ಗಡೋಲಿಯ ಯಾರು?

ಆರಂಭದಲ್ಲೇ ಹೇಳಿದಂತೆ ಸಂದೀಪ್ ಹರ್ಯಾಣದ ಮೋಸ್ಟ್‌ ವಾಟೆಂಡ್ ಗ್ಯಾಂಗ್‌ಸ್ಟರ್ ಆಗಿದ್ದ. ಈತನ ಹಲವು ಕೊಲೆ ಪ್ರಕರಣಗಳು ಇತ್ತು. ಈತ 2015 ರ ಅಕ್ಟೋಬರ್‌ನಲ್ಲಿ ಮುನ್ಸಿಪಲ್ ಕೌನ್ಸಿಲರ್ ಬಿಂದರ್ ಗುಜ್ಜರ್‌ನ ಕಾರು ಚಾಲಕನ ಹತ್ಯೆ ಸೇರಿದಂತೆ ಹಲವಾರು ಕೊಲೆಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿದ್ದ. ಗಡೋಲಿ ವಿರುದ್ಧ 36 ಪ್ರಕರಣಗಳು ದಾಖಲಾಗಿದ್ದವು. 2015ರಲ್ಲಿ ಬಾಂದ್ರಾದಲ್ಲಿ ರೂಪದರ್ಶಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಈತನ ಸಹಾಯಕ ಸೋನು ಎಂಬಾತನನ್ನು ಮುಂಬೈನಲ್ಲಿ ಬಂಧಿಸಲಾಗಿತ್ತು.

ಇದನ್ನೂ ಓದಿ : ಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆ POCSO ಕಾಯ್ದೆಯಡಿಯಲ್ಲಿ ಅಪರಾಧವಲ್ಲ: ಮದ್ರಾಸ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...