Homeಮುಖಪುಟಹರ್ಯಾಣ: ಕಾಲುವೆಯಲ್ಲಿ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಮೃತದೇಹ ಪತ್ತೆ

ಹರ್ಯಾಣ: ಕಾಲುವೆಯಲ್ಲಿ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಮೃತದೇಹ ಪತ್ತೆ

- Advertisement -
- Advertisement -

ಕೊಲೆಯಾದ 12 ದಿನಗಳ ಬಳಿಕ ಪಂಜಾಬ್‌ನ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಅವರ ಮೃತದೇಹ ಹರ್ಯಾಣದ ಗುರುಗ್ರಾಮದ ಕಾಲುವೆಯೊಂದರಲ್ಲಿ ಇಂದು (ಜ.13) ಪತ್ತೆಯಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಹರ್ಯಾಣದ ಫತೇಹಾಬಾದ್ ಜಿಲ್ಲೆಯ ತೊಹಾನಾದಲ್ಲಿ ಭಾಕ್ರಾ ಕಾಲುವೆಯ ಉಪ ಕಾಲುವೆಯಿಂದ ದಿವ್ಯಾ ಪಹುಜಾ ಅವರ ಮೃತದೇಹ ಮೇಲೆತ್ತಲಾಗಿದೆ ಎಂದು ಗುರುಗ್ರಾಮ ಸಹಾಯಕ ಕಮಿಷನರ್ (ಅಪರಾಧ) ವರುಣ್ ಕುಮಾರ್ ದಹಿಯಾ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಪಹುಜಾ ಅವರ ಕುಟುಂಬ ಸದಸ್ಯರು ಆಕೆಯ ದೇಹವನ್ನು ಗುರುತಿಸಿದ್ದಾರೆ. ಗುರುಗ್ರಾಮ ಪೋಲೀಸರ ಆರು ತಂಡಗಳು ಪಹುಜಾ ಅವರ ಮೃತದೇಹದ ಪತ್ತೆಗೆ ಕಾರ್ಯಾಚರಣೆ ನಡೆಸಿತ್ತು.

ಏನಿದು ಪ್ರಕರಣ?

ಹರ್ಯಾಣದ ಮೋಸ್ಟ್‌ ವಾಟೆಂಡ್ ಗ್ಯಾಂಗ್‌ಸ್ಟರ್‌ ಸಂದೀಪ್ ಗಡೋಲಿ ಎಂಬಾತನನ್ನು 2016ರ ಫೆ. 7ರಂದು ನಕಲಿ ಎನ್‌ಕೌಂಟರ್ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ರೂಪದರ್ಶಿ ದಿವ್ಯಾ ಅವರನ್ನು ಪೊಲೀಸರು ಬಂಧಿಸಿದ್ದರು. ಏಳು ವರ್ಷಗಳ ಜೈಲು ಶಿಕ್ಷೆಯ ಬಳಿಕ, ಕಳೆದ ಜೂನ್‌ನಲ್ಲಿ ಇವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ದಿವ್ಯಾ ಅವರೊಂದಿಗೆ ಅವರ ತಾಯಿ, ಐದು ಜನ ಪೊಲೀಸರೂ ಬಂಧನಕ್ಕೊಳಗಾಗಿದ್ದರು.

ಜಾಮೀನಿನ ಮೇಲೆ ಹೊರಬಂದಿದ್ದ ದಿವ್ಯಾ ಅವರನ್ನು ಐದು ಜನರ ಗುಂಪು ಜನವರಿ 2,2024ರಂದು ಹರ್ಯಾಣದ ಗುರುಗ್ರಾಮದ ಹೋಟೆಲ್ ಸಿಟಿ ಪಾಯಿಂಟ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿತ್ತು. ಕೃತ್ಯದ ನಂತರ ಆರೋಪಿಗಳು ಮೃತದೇಹವನ್ನು ಐಷಾರಾಮಿ ಕಾರಿನಲ್ಲಿರಿಸಿ ನಾಶಪಡಿಸುವ ಪ್ರಯತ್ನ ಮಾಡಿದ್ದರು.

ದಿವ್ಯಾ ಪಹುಜಾ ಕೊಲೆಯಾದ ಹೋಟೆಲ್ ಸಿಟಿ ಪಾಯಿಂಟ್‌ನ ಮಾಲೀಕ ಅಭಿಜಿತ್ ಆಕೆಯನ್ನು ಕೊಲೆ ಮಾಡಿದ್ದ. ಬಳಿಕ ಶವ ಸಾಗಿಸಲು ಪ್ರಕಾಶ್ ಮತ್ತು ಇಂದ್ರಜ್ ಎಂಬವರು ಆತನಿಗೆ ನೆರವಾಗಿದ್ದರು. ಅಭಿಜಿತ್‌ನ ಇನ್ನಿಬ್ಬರು ಸಹಚರರಾದ ರವಿ ಬಾಂದ್ರಾ ಮತ್ತು ಬಾಲ್‌ರಾಜ್‌ ಗಿಲ್ ಶವ ವಿಲೇವಾರಿ ಮಾಡಿದ್ದರು ಎಂದು ಆರೋಪಿಸಲಾಗಿದೆ. ಪ್ರಕಾಶ್ ಮತ್ತು ಇಂದ್ರಜ್ ಅಭಿಜಿತ್‌ನ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ದಿವ್ಯಾ ಹೋಟೆಲ್ ಮಾಲೀಕ ಅಭಿಜಿತ್‌ನ ‘ಅಶ್ಲೀಲ ಚಿತ್ರಗಳನ್ನು ಚಿತ್ರೀಕರಿಸಿ’ ಬ್ಲ್ಯಾಕ್‌ಮೇಲ್ ಮಾಡುವ ಮೂಲಕ ಹಣ ವಸೂಲಿ ಮಾಡುತ್ತಿದ್ದರು.ಈ ಕಾರಣಕ್ಕೆ ಆಕೆಯನ್ನು ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದರು.

ದಿವ್ಯಾಳ ಹತ್ಯೆ ಸುದ್ದಿ ಬೆನ್ನಲ್ಲೇ ಪೊಲೀಸರು ಹೋಟೆಲ್‌ನ ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದ್ದರು. ಈ ವೇಳೆ ಆರೋಪಿಗಳು ಹೋಟೆಲ್ ಕೊಠಡಿಯಿಂದ ದಿವ್ಯಾಳ ಮೃತದೇಹವನ್ನು ಹೊರಗೆ ಸಾಗಿಸಿದ್ದ ದೃಶ್ಯ ಅದರಲ್ಲಿ ದೊರೆತಿತ್ತು. ಈ ವಿಡಿಯೋ ವೈರಲ್ ಆಗುವ ಮೂಲಕ ಪ್ರಕರಣ ದೇಶದಾದ್ಯಂತ ಸಂಚಲನ ಸೃಷ್ಟಿಸಿತ್ತು.

ಆರೋಪಿಗಳ ಬಂಧನ:

ಹೋಟೆಲ್ ಮಾಲೀಕ ಅಭಿಜಿತ್ ಸೇರಿದಂತೆ ದಿವ್ಯಾಳ ಕೊಲೆ ಮತ್ತು ಶವ ಸಾಗಾಟದಲ್ಲಿ ಪಾಲ್ಗೊಂಡ ಐವರು ಆರೋಪಿಗಳ ಪೈಕಿ ಹೋಟೆಲ್ ಸಿಬ್ಬಂದಿಗಳಾದ ಪ್ರಕಾಶ್ ಮತ್ತು ಇಂದ್ರಜ್ ಅನ್ನು ಪೊಲೀಸರು ಆರಂಭದಲ್ಲಿ ಬಂಧಿಸಿದ್ದರು. ಗುರುವಾರ (ಜ.11) ಸಂಜೆ ಪಶ್ಚಿಮ ಬಂಗಾಳದಲ್ಲಿ ಆರೋಪಿ ಬಾಲ್‌ರಾಜ್‌ ಗಿಲ್‌ ಅನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಒಟ್ಟು ಮೂವರ ಬಂಧನವಾಗಿದೆ. ಇನ್ನಿಬ್ಬರಾದ ಪ್ರಮುಖ ಆರೋಪಿ ಅಭಿಜಿತ್ ಮತ್ತು ರವಿ ಬಾಂದ್ರಾ ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ನಕಲಿ ಎನ್‌ಕೌಂಟರ್ ಪ್ರಕರಣ:

2016ರ ಗ್ಯಾಂಗ್‌ಸ್ಟರ್‌ ಸಂದೀಪ್ ಗಡೋಲಿ ನಕಲಿ ಎನ್‌ಕೌಂಟರ್ ಪ್ರಕರಣಲ್ಲಿ ದಿವ್ಯಾ ಪಹುಜಾಳನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಈ ದಿವ್ಯಾ ಪಹುಜಾ ಸಂದೀಪ್‌ನ ಗೆಳತಿಯಾಗಿದ್ದಳು. ಸಂದೀಪ್‌ನ ವಿರೋಧಿ ಬಣದ ಗ್ಯಾಂಗ್‌ಸ್ಟರ್, ಹರ್ಯಾಣ ಮುನ್ಸಿಪಲ್ ಕೌನ್ಸಿಲರ್ ವೀರೇಂದ್ರ ಕುಮಾರ್ ಅಲಿಯಾಸ್ ಬಿಂದರ್ ಗುಜ್ಜರ್ ಗಡೋಲಿಯನ್ನು ಹತ್ಯೆ ಮಾಡಲು ಹರ್ಯಾಣ ಪೊಲೀಸ್ ಅಧಿಕಾರಿಗಳೊಂದಿಗೆ ಸಂಚು ರೂಪಿಸಿದ್ದ. ಇದಕ್ಕೆ ದಿವ್ಯಾಳನ್ನೇ ಬಳಸಿಕೊಂಡಿದ್ದ. ಆಕೆಯನ್ನು ಹನಿ ಟ್ರ್ಯಾಪ್‌ನಂತೆ ಬಳಸಿಕೊಂಡು ಗಡೋಲಿಯನ್ನು ನಕಲಿ ಎನ್‌ಕೌಂಟರ್ ಮಾಡಿಸಿದ್ದ.

ಸಂದೀಪ್ ಗಡೋಲಿಯ ಯಾರು?

ಆರಂಭದಲ್ಲೇ ಹೇಳಿದಂತೆ ಸಂದೀಪ್ ಹರ್ಯಾಣದ ಮೋಸ್ಟ್‌ ವಾಟೆಂಡ್ ಗ್ಯಾಂಗ್‌ಸ್ಟರ್ ಆಗಿದ್ದ. ಈತನ ಹಲವು ಕೊಲೆ ಪ್ರಕರಣಗಳು ಇತ್ತು. ಈತ 2015 ರ ಅಕ್ಟೋಬರ್‌ನಲ್ಲಿ ಮುನ್ಸಿಪಲ್ ಕೌನ್ಸಿಲರ್ ಬಿಂದರ್ ಗುಜ್ಜರ್‌ನ ಕಾರು ಚಾಲಕನ ಹತ್ಯೆ ಸೇರಿದಂತೆ ಹಲವಾರು ಕೊಲೆಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿದ್ದ. ಗಡೋಲಿ ವಿರುದ್ಧ 36 ಪ್ರಕರಣಗಳು ದಾಖಲಾಗಿದ್ದವು. 2015ರಲ್ಲಿ ಬಾಂದ್ರಾದಲ್ಲಿ ರೂಪದರ್ಶಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಈತನ ಸಹಾಯಕ ಸೋನು ಎಂಬಾತನನ್ನು ಮುಂಬೈನಲ್ಲಿ ಬಂಧಿಸಲಾಗಿತ್ತು.

ಇದನ್ನೂ ಓದಿ : ಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆ POCSO ಕಾಯ್ದೆಯಡಿಯಲ್ಲಿ ಅಪರಾಧವಲ್ಲ: ಮದ್ರಾಸ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...