Homeಎಕಾನಮಿಜಿಡಿಪಿ 5 ಟ್ರಿಲಿಯನ್ ಆಗಲು ಇನ್ನು 22 ವರ್ಷಗಳು ಬೇಕು: ಮಾಜಿ RBI ಗವರ್ನರ್‌ ಸಿ.ರಂಗರಾಜನ್

ಜಿಡಿಪಿ 5 ಟ್ರಿಲಿಯನ್ ಆಗಲು ಇನ್ನು 22 ವರ್ಷಗಳು ಬೇಕು: ಮಾಜಿ RBI ಗವರ್ನರ್‌ ಸಿ.ರಂಗರಾಜನ್

- Advertisement -
- Advertisement -

ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಕೆಟ್ಟ ಸ್ಥಿತಿಯಲ್ಲಿದೆ. ಹೀಗಾಗಿ 2025ಕ್ಕೆ 5 ಟ್ರಿಲಿಯನ್ ಗುರಿ ಸಾಧಿಸುತ್ತೇವೆ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಸಿ.ರಂಗರಾಜನ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದ ಮೇಲೆ ಮುಂದಿನ ಐದು ವರ್ಷಗಳಲ್ಲಿ 5 ಟ್ರಿಲಿಯನ್ ಆರ್ಥಿಕ ಬೆಳವಣಿಗೆಯ ಗುರಿ ಹೊಂದಿದೆ. ಆದರೆ ದೇಶದ ಆರ್ಥಿಕತೆಯ ಮೇಲೆ ಕಾರ್ಮೋಡಗಳು ಕವಿದಿದ್ದು ಗುರಿ ನಿರ್ವಹಣೆಯ ಬಗ್ಗೆ ಹಲವು ಪ್ರಶ್ನೆಗಳು ಉದ್ಭವಿಸಿವೆ ಎಂದು ಆರ್ಥಿಕತೆಯ ಕುರಿತು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ.

ಆರ್ಥಿಕ ಬೆಳವಣಿಗೆಯ ದರ ಕುಸಿದಿದೆ. 2016ರಲ್ಲಿ 8.2ರಷ್ಟಿದ್ದುದು 2019 ಭೌತಿಕ ವರ್ಷಕ್ಕೆ 6.8ಕ್ಕೆ ಕುಸಿದು ನಿಂತಿದೆ. ಈ ನಡುವೆ ಮೊದಲ ಕ್ವಾರ್ಟರ್ ನಲ್ಲಿ ಜಿಡಿಪಿ 5ಕ್ಕೆ ಕುಸಿದು ಆರು ವರ್ಷ ಹಿಂದಕ್ಕೆ ಹೋಗಿದೆ. ಎರಡನೇ ಕ್ವಾರ್ಟರ್ ನಲ್ಲಿ ಅಂದರೆ ಈಗ ಅದು 4.3ರಷ್ಟಿದೆ. ಆರ್.ಬಿ.ಐ ಅಕ್ಟೋಬರ್ ನಲ್ಲಿ ನೀತಿ ಪರಿಷ್ಕರಣೆ ಮಾಡಿದ ಬಳಿಕ ಎರಡು ತಿಂಗಳಲ್ಲಿ 90ಬಿಪಿಎಸ್ ಪಾಯಿಂಟ್ ಗೆ ಏರಿ 6.1ಕ್ಕೆ ನಿಂತಿದೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ಟ್ರಿಲಿಯನ್‌ಗೆ ಎಷ್ಟು ಸೊನ್ನೆ ಎಂದು ಕೇಳಿ ಗಮನಸೆಳೆದಿದ್ದ ಗೌರವ್‌ ವಲ್ಲಭ್‌ ಈಗ ಜಾರ್ಖಂಡ್‌ ಸಿಎಂ ಎದುರು ಕಣಕ್ಕೆ…

ಪ್ರಸ್ತುತ ನಮ್ಮ ಆರ್ಥಿಕತೆ 2.7 ಮಿಲಿಯನ್ ಮೇಲಿದೆ ಮತ್ತು ನಾವು ಇದನ್ನು ಮುಂದಿನ ಐದು ವರ್ಷದಲ್ಲಿ ದ್ವಿಗುಣಗೊಳಿಸುವ ಮಾತನಾಡುತ್ತಿದ್ದೇವೆ. 2025ರ ವೇಳೆಗೆ ನಾವು ಆ ಗುರಿ ಮುಟ್ಟಲು ವಾರ್ಷಿಕ 9ರಷ್ಟು ಹೆಚ್ಚುವರಿ ಗುರಿ ತಲುಪಬೇಕು. ಹೀಗಾಗಿ 5 ಟ್ರಿಲಿಯನ್ ಗುರಿ ಸಾಧಿಸುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಖಚಿತಪಡಿಸಿದ್ದಾರೆ.

ನೀವು (ಸರ್ಕಾರ) ಇನ್ನು ಎರಡು ವರ್ಷಗಳನ್ನು ಮಾತ್ರ ಹೊಂದಿದ್ದೀರಿ. ಈ ವರ್ಷ ಜಿಡಿಪಿ 6ರರೊಳಗೆ ಇದೆ. ಮುಂದಿನ ವರ್ಷ ಅದು 7ರ ಗುರಿ ಮುಟ್ಟಬಹುದು. ಆನಂತರ ಆರ್ಥಿಕತೆ ವೃದ್ದಿಯಾಗಬಹುದು ಎಂದು ಅಹಮದಾಬಾದ್ ನಲ್ಲಿ ಜೆಬಿಎಸ್-ಐಸಿಎಫ್ಐ ಬ್ಯುಸಿನೆಸ್ ಶಾಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಜಿಡಿಪಿ 5 ಟ್ರಿಲಿಯನ್ ಆದರೆ ಕೆಳಮಧ್ಯಮ ವರ್ಗದ ಪ್ರತಿಯೊಬ್ಬರ ಈಗಿನ ತಲಾ ಆದಾಯ 1800 ಡಾಲರ್ ನಿಂದ 3600 ಡಾಲರ್ ಆಗಬಹುದು. ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ಪ್ರತಿಯೊಬ್ಬರ ತಲಾ ಆದಾಯ 12,000 ಡಾಲರ್ ಇದೆ.  ಈ ಗುರಿ ಮುಟ್ಟಲು ನಮಗೆ 22 ವರ್ಷಗಳು ಬೇಕಾಗುತ್ತದೆ. ಅಷ್ಟೇ ಅಲ್ಲ ಜಿಡಿಪಿ ದರ ವಾರ್ಷಿಕ 9ರಷ್ಟು ಬೆಳವಣಿಯಾಗಬೇಕಾಗುತ್ತದೆ ಎಂದು ಹೇಳುವ ಮೂಲಕ ಮೋದಿ ಸರ್ಕಾರ ಮುಂದಿನ ಐದು ವರ್ಷಗಳಲ್ಲಿ 5 ಟ್ರಿಲಿಯನ್ ಡಾಲರ್ ಗುರಿ ಸಾಧಿಸಲು ಆಗುವುದಿಲ್ಲ ಎಂಬುದನ್ನು ಅಂಕಿಅಂಶಗಳ ಮೂಲಕ ದೃಢಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...