Homeಎಕಾನಮಿಜಿಡಿಪಿ 5 ಟ್ರಿಲಿಯನ್ ಆಗಲು ಇನ್ನು 22 ವರ್ಷಗಳು ಬೇಕು: ಮಾಜಿ RBI ಗವರ್ನರ್‌ ಸಿ.ರಂಗರಾಜನ್

ಜಿಡಿಪಿ 5 ಟ್ರಿಲಿಯನ್ ಆಗಲು ಇನ್ನು 22 ವರ್ಷಗಳು ಬೇಕು: ಮಾಜಿ RBI ಗವರ್ನರ್‌ ಸಿ.ರಂಗರಾಜನ್

- Advertisement -
- Advertisement -

ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಕೆಟ್ಟ ಸ್ಥಿತಿಯಲ್ಲಿದೆ. ಹೀಗಾಗಿ 2025ಕ್ಕೆ 5 ಟ್ರಿಲಿಯನ್ ಗುರಿ ಸಾಧಿಸುತ್ತೇವೆ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಸಿ.ರಂಗರಾಜನ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದ ಮೇಲೆ ಮುಂದಿನ ಐದು ವರ್ಷಗಳಲ್ಲಿ 5 ಟ್ರಿಲಿಯನ್ ಆರ್ಥಿಕ ಬೆಳವಣಿಗೆಯ ಗುರಿ ಹೊಂದಿದೆ. ಆದರೆ ದೇಶದ ಆರ್ಥಿಕತೆಯ ಮೇಲೆ ಕಾರ್ಮೋಡಗಳು ಕವಿದಿದ್ದು ಗುರಿ ನಿರ್ವಹಣೆಯ ಬಗ್ಗೆ ಹಲವು ಪ್ರಶ್ನೆಗಳು ಉದ್ಭವಿಸಿವೆ ಎಂದು ಆರ್ಥಿಕತೆಯ ಕುರಿತು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ.

ಆರ್ಥಿಕ ಬೆಳವಣಿಗೆಯ ದರ ಕುಸಿದಿದೆ. 2016ರಲ್ಲಿ 8.2ರಷ್ಟಿದ್ದುದು 2019 ಭೌತಿಕ ವರ್ಷಕ್ಕೆ 6.8ಕ್ಕೆ ಕುಸಿದು ನಿಂತಿದೆ. ಈ ನಡುವೆ ಮೊದಲ ಕ್ವಾರ್ಟರ್ ನಲ್ಲಿ ಜಿಡಿಪಿ 5ಕ್ಕೆ ಕುಸಿದು ಆರು ವರ್ಷ ಹಿಂದಕ್ಕೆ ಹೋಗಿದೆ. ಎರಡನೇ ಕ್ವಾರ್ಟರ್ ನಲ್ಲಿ ಅಂದರೆ ಈಗ ಅದು 4.3ರಷ್ಟಿದೆ. ಆರ್.ಬಿ.ಐ ಅಕ್ಟೋಬರ್ ನಲ್ಲಿ ನೀತಿ ಪರಿಷ್ಕರಣೆ ಮಾಡಿದ ಬಳಿಕ ಎರಡು ತಿಂಗಳಲ್ಲಿ 90ಬಿಪಿಎಸ್ ಪಾಯಿಂಟ್ ಗೆ ಏರಿ 6.1ಕ್ಕೆ ನಿಂತಿದೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ಟ್ರಿಲಿಯನ್‌ಗೆ ಎಷ್ಟು ಸೊನ್ನೆ ಎಂದು ಕೇಳಿ ಗಮನಸೆಳೆದಿದ್ದ ಗೌರವ್‌ ವಲ್ಲಭ್‌ ಈಗ ಜಾರ್ಖಂಡ್‌ ಸಿಎಂ ಎದುರು ಕಣಕ್ಕೆ…

ಪ್ರಸ್ತುತ ನಮ್ಮ ಆರ್ಥಿಕತೆ 2.7 ಮಿಲಿಯನ್ ಮೇಲಿದೆ ಮತ್ತು ನಾವು ಇದನ್ನು ಮುಂದಿನ ಐದು ವರ್ಷದಲ್ಲಿ ದ್ವಿಗುಣಗೊಳಿಸುವ ಮಾತನಾಡುತ್ತಿದ್ದೇವೆ. 2025ರ ವೇಳೆಗೆ ನಾವು ಆ ಗುರಿ ಮುಟ್ಟಲು ವಾರ್ಷಿಕ 9ರಷ್ಟು ಹೆಚ್ಚುವರಿ ಗುರಿ ತಲುಪಬೇಕು. ಹೀಗಾಗಿ 5 ಟ್ರಿಲಿಯನ್ ಗುರಿ ಸಾಧಿಸುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಖಚಿತಪಡಿಸಿದ್ದಾರೆ.

ನೀವು (ಸರ್ಕಾರ) ಇನ್ನು ಎರಡು ವರ್ಷಗಳನ್ನು ಮಾತ್ರ ಹೊಂದಿದ್ದೀರಿ. ಈ ವರ್ಷ ಜಿಡಿಪಿ 6ರರೊಳಗೆ ಇದೆ. ಮುಂದಿನ ವರ್ಷ ಅದು 7ರ ಗುರಿ ಮುಟ್ಟಬಹುದು. ಆನಂತರ ಆರ್ಥಿಕತೆ ವೃದ್ದಿಯಾಗಬಹುದು ಎಂದು ಅಹಮದಾಬಾದ್ ನಲ್ಲಿ ಜೆಬಿಎಸ್-ಐಸಿಎಫ್ಐ ಬ್ಯುಸಿನೆಸ್ ಶಾಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಜಿಡಿಪಿ 5 ಟ್ರಿಲಿಯನ್ ಆದರೆ ಕೆಳಮಧ್ಯಮ ವರ್ಗದ ಪ್ರತಿಯೊಬ್ಬರ ಈಗಿನ ತಲಾ ಆದಾಯ 1800 ಡಾಲರ್ ನಿಂದ 3600 ಡಾಲರ್ ಆಗಬಹುದು. ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ಪ್ರತಿಯೊಬ್ಬರ ತಲಾ ಆದಾಯ 12,000 ಡಾಲರ್ ಇದೆ.  ಈ ಗುರಿ ಮುಟ್ಟಲು ನಮಗೆ 22 ವರ್ಷಗಳು ಬೇಕಾಗುತ್ತದೆ. ಅಷ್ಟೇ ಅಲ್ಲ ಜಿಡಿಪಿ ದರ ವಾರ್ಷಿಕ 9ರಷ್ಟು ಬೆಳವಣಿಯಾಗಬೇಕಾಗುತ್ತದೆ ಎಂದು ಹೇಳುವ ಮೂಲಕ ಮೋದಿ ಸರ್ಕಾರ ಮುಂದಿನ ಐದು ವರ್ಷಗಳಲ್ಲಿ 5 ಟ್ರಿಲಿಯನ್ ಡಾಲರ್ ಗುರಿ ಸಾಧಿಸಲು ಆಗುವುದಿಲ್ಲ ಎಂಬುದನ್ನು ಅಂಕಿಅಂಶಗಳ ಮೂಲಕ ದೃಢಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...