Homeಚಳವಳಿಪಠ್ಯದ ಮೂಲಕ ಮಕ್ಕಳಿಗೆ ವಿಷಪ್ರಾಸನ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿಡಿ

ಪಠ್ಯದ ಮೂಲಕ ಮಕ್ಕಳಿಗೆ ವಿಷಪ್ರಾಸನ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿಡಿ

ನಮ್ಮ ಹೆಮ್ಮೆಯ ಸಾಕ್ಷಿಪ್ರಜ್ಞೆಗಳಾದ ದೇವನೂರ ಮಹಾದೇವ ಮತ್ತು ಬರಗೂರು ರಾಮಚಂದ್ರಪ್ಪನವರ ಅಭಿಪ್ರಾಯಗಳನ್ನೂ ಧಿಕ್ಕರಿಸಿ ಅವರ ಬಗ್ಗೆಯೂ ಹಗುರವಾಗಿ ಮಾತನಾಡುವುದು ಅಕ್ಷಮ್ಯ, ಅಪರಾಧ.

- Advertisement -
- Advertisement -

ಬಿಜೆಪಿ ಸರ್ಕಾರದ ಪಠ್ಯ ಪರಿಷ್ಕರಣೆ ವಿವಾದ ದಿನದಿಂದ ದಿನಕ್ಕೆ ಬೆಳೆಯುತ್ತಲೆ ಇದೆ. ಹೆಚ್ಚುತ್ತಿರುವ ಜನಾಕ್ರೋಶದ ನಡುವೆಯೇ ಪಠ್ಯ ಬೋಧನೆ ಮಾಡಲು ಸರ್ಕಾರ ಪಟ್ಟು ಹಿಡಿದಿದೆ. ಸರ್ಕಾರದ ಈ ಕ್ರಮಕ್ಕೆ ಮಾಜಿ ಸ್ಪೀಕರ್, ಹಾಲಿ ಶಾಸಕರಾದ ಕೆ.ಆರ್ ರಮೇಶ್ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾವು ವಿಷ ಉಂಡು ಅದರ ನಂಜು ಮುಂದಿನ ಜನಾಂಗಕ್ಕೂ ಉಣಿಸಬೇಕೆಂದು ಪ್ರಾಥಮಿಕ ಹಂತದ ಪಠ್ಯಪುಸ್ತಕದಲ್ಲಿಯೇ ವಿಷಪ್ರಾಸನ ಮಾಡಲು ಹೊರಟಿದ್ದಾರೆ. ಚಕ್ರತೀರ್ಥರಿಗೆ, ಚಕ್ರವರ್ತಿಗಳಿಗೆ ಪ್ರತಾಪಸಿಂಹರುಗಳಿಗೆ ಜಗತ್ತಿನ ಇತಿಹಾಸದ ಅರಿವು ಇದೆಯೋ ಇಲ್ಲವೋ ಗೊತ್ತಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಪಠ್ಯ ವಿವಾದದ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕರ್ನಾಟಕ ರಾಜ್ಯ ಸರ್ಕಾರವು ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಪಠ್ಯಪುಸ್ತಕಗಳ ಮರು ಪರಿಷ್ಕರಣೆಗಾಗಿ ರೋಹಿತ್ ಚಕ್ರತೀರ್ಥ ಎಂಬ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ತರಾತುರಿಯಲ್ಲಿ ತೆಗೆದುಕೊಂಡಿರುವ ನಿರ್ಣಯಗಳು ರಾಜ್ಯದ ನಾಗರೀಕರ ಪ್ರಜ್ಞೆಯನ್ನು ತೀವ್ರವಾಗಿ ನೋಯಿಸಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಕಾಲೀನ ಸಮಾಜದ ಅನೇಕ ಜ್ವಲಂತ ಸಮಸ್ಯೆಗಳ ವಿಷಯದಲ್ಲಿ ಅತ್ಯಂತ ಜವಾಬ್ದಾರಿ ಹಾಗೂ ಸಂವೈಧಾನಿಕ ಪ್ರಜ್ಞೆವುಳ್ಳವರಾಗಿ ಇಡೀ ನಾಡು ಹೆಮ್ಮೆಪಡತಕ್ಕಂಥ ನಮ್ಮ ಹೆಮ್ಮೆಯ ಸಾಕ್ಷಿಪ್ರಜ್ಞೆಗಳಾದ ದೇವನೂರ ಮಹಾದೇವ ಮತ್ತು ಬರಗೂರು ರಾಮಚಂದ್ರಪ್ಪ ಇವರ ಅಭಿಪ್ರಾಯಗಳನ್ನೂ ಧಿಕ್ಕರಿಸಿ ಅವರ ಬಗ್ಗೆಯೂ ಹಗುರವಾಗಿ ಮಾತನಾಡುವುದು ಅಕ್ಷಮ್ಯ, ಅಪರಾಧ ಎಂದು ರಮೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

“ಬೌದ್ಧ ಧರ್ಮದ ಉದಯ ಜಡ್ಡುಗಟ್ಟಿದ ವೈದಿಕ ಸಂಪ್ರದಾಯಗಳ ವಿರುದ್ಧ ಸಹಜವಾಗಿಯೇ ಜನ್ಮತಾಳಿತು. ವಿಶ್ವದ ಅತಿದೊಡ್ಡ ಮಾನವತಾವಾದಿ ಡಾ: ಬಿ.ಆರ್. ಅಂಬೇಡ್ಕರ್‌ರವರು ಇದರ ಇಡೀ ಇತಿಹಾಸವನ್ನು ತಮ್ಮ Triumph of Brahmanism ಎಂಬ ಪುಸ್ತಕದಲ್ಲಿ ವಿವರಿಸಿದ್ದಾರೆ. ಬರಗೂರು ರಾಮಚಂದ್ರಪ್ಪರವರಂಥ ಒಬ್ಬ ಸಂವೇದನಾಶೀಲ, ಸಂವಿಧಾನಾತ್ಮಕ ಬದ್ಧತೆಯುಳ್ಳ ಮನಸ್ಸಿನ ಮತ್ತು ಧಮನಿತರ ನೋವನ್ನು ಪರಿಣಾಮಕಾರಿಯಾಗಿ ಸಮಾಜಕ್ಕೆ ಪರಿಚಯಿಸುವ ಭೌದ್ಧಿಕ ಮತ್ತು ನೈತಿಕ ಸಾಮರ್ಥ್ಯ ಇದ್ದವರು. ಇಂಥವರ ಅಧ್ಯಕ್ಷತೆಯಲ್ಲಿ ರಚಿತವಾದ ಪಠ್ಯಪುಸ್ತಕಗಳ ಪುನರ್‌ಪರಿಷ್ಕರಣೆ ಮಾಡಬೇಕಾಗಿದ್ದಲ್ಲಿ ಒಂದು ಜವಾಬ್ದಾರಿಯುತ ಸರ್ಕಾರ ತನ್ನ ಕನಿಷ್ಟ ವಿವೇಚನೆಯನ್ನಾದರೂ ತೋರಿಸಬೇಕಾಗಿತ್ತು” ಎಂದು ಅವರು ತಿಳಿಸಿದ್ದಾರೆ.

ಪುನರ್‌ರಚಿತ ಸಮಿತಿಯಲ್ಲಿ ಇರುವ ಎಲ್ಲ ಸದಸ್ಯರು ಉದ್ದೇಶಪೂರ್ವಕವಾಗಿಯೋ ಅಥವಾ ಆಕಸ್ಮಿಕವಾಗಿಯೋ ಬ್ರಾಹ್ಮಣರೇ ಆಗಿರುತ್ತಾರೆ. ಬುದ್ಧ, ಬಸವ, ಅಂಬೇಡ್ಕರ್‌ರವರ ಆಲೋಚನೆಗಳನ್ನು ವಿರೋಧಿಸುವವರೇ ಆಗಿರುತ್ತಾರೆ. ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿರುವ ರೋಹಿತ್ ಚಕ್ರತೀರ್ಥರವರ ಶೈಕ್ಷಣಿಕ
ಹಿನ್ನೆಲೆಯಾಗಲಿ ಅಥವಾ ಸಾಮಾಜಿಕ ಮತ್ತು ಸಾಂಸ್ಕೃತಿಕ ಹಾಗೂ ಸಾರಸ್ವತ ಲೋಕಗಳಲ್ಲಿ ಇವರ ಸ್ಥಾನಮಾನದ ಬಗ್ಗೆ ಎಲ್ಲವೂ ನಿಗೂಢವಾಗಿದೆ. ಮನುಕುಲದ ಪ್ರವಾದಿ, ಶೂದ್ರ ಪ್ರಪಂಚದ ಮೌಡ್ಯಕ್ಕೆ ತನ್ನ ಜ್ಞಾನ ಕಿರಣಗಳನ್ನು ಹರಿಸಿ ಮಲಗಿದ್ದವರನ್ನು ಎಬ್ಬಿಸಿದ ಮಹಾನ್‌ಚೇತನ ಕುವೆಂಪುರವರ ಬಗ್ಗೆಯೂ ಸಹ ಅಗೌರವ ತೋರಿಸುವ ಕುತ್ಸಿತ ಕ್ರಿಮಿಗಳು ವಿರಾಜಮಾನರಾಗುತ್ತಿದ್ದಾರೆ. ಇದು ಅತ್ಯಂತ ನೋವಿನ ಸಂಗತಿ ಎಂದು ರಮೇಶ್ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಹುಶಃ ಇವರ ಪ್ರಯತ್ನಗಳು ಇತಿಹಾಸವನ್ನು ತಿರುಚಲು ಎಳೆ ಪ್ರಾಯದ ಮಕ್ಕಳೇ ಸೂಕ್ತ ವೇದಿಕೆ ಎಂದು ಮುಂದೆ ಹೊರಟಂತೆ ಕಾಣುತ್ತದೆ. ಗಾಂಧಿಯನ್ನು ಬಲಿತೆಗೆದುಕೊಂಡ ದೇಶ ಭಕ್ತರಿಗೆ ಸಹಜವಾಗಿಯೇ ಕೇಶವ್ ಬಲಿರಾಂ ಹಡವಾರ್‌ರವರು ಸ್ವಾತಂತ್ರ್ಯ ಹೋರಾಟಗಾರರಾಗಿ ಕಾಣುವುದು ಸಮಂಜಸವಾಗಿಯೇ ಇದೆ. ಆದ್ದರಿಂದಲೇ ತಾವು ಉಂಡ ನಂಜು ಮುಂದಿನ ಜನಾಂಗಕ್ಕೂ ಉಣಿಸಬೇಕೆಂದು ಪ್ರಾಥಮಿಕ ಹಂತದ ಪಠ್ಯಪುಸ್ತಕದಲ್ಲಿಯೇ ವಿಷಪ್ರಾಸನ ಮಾಡಲು ಹೊರಟಿದ್ದಾರೆ. ಚಕ್ರತೀರ್ಥರಿಗೆ, ಚಕ್ರವರ್ತಿಗಳಿಗೆ ಪ್ರತಾಪಸಿಂಹರುಗಳಿಗೆ ಜಗತ್ತಿನ ಇತಿಹಾಸದ ಅರಿವು ಇದೆಯೋ ಇಲ್ಲವೋ ಗೊತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಕಳೆದ 45 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಇಂಥ ಯಾವುದೇ ಸಂದಿಗ್ಧತೆ ಬಂದಾಗ ನಾನು ಯಾವುದೇ ಸ್ಥಾನದಲ್ಲಿದ್ದರೂ ಮುಕ್ತ ಮನಸ್ಸಿನಿಂದ ನಿರ್ಭಯವಾಗಿ ವಿಧಾನಸಭೆಯಲ್ಲಿ ನನ್ನ ನಿಲುವನ್ನು ವ್ಯಕ್ತಪಡಿಸುತ್ತಿದ್ದೆ. ಪ್ರಸ್ತುತ ಸನ್ನಿವೇಶದಲ್ಲಿ ವಿಧಾನಸಭೆಯ ಅಧಿವೇಶನ ಇಲ್ಲದ ಕಾರಣ ಈ ಪತ್ರಿಕಾ ಹೇಳಿಕೆ ನನ್ನ ನಿಲುವನ್ನು ಬಹಿರಂಗಪಡಿಸಲು ಅನಿವಾರ್ಯವಾಗಿದೆ. ಪುಜಾತಂತ್ರದ ಹಿತದೃಷ್ಟಿಯಿಂದ ಸಂವಿಧಾನದ ಆಶಯಗಳನ್ನು ಗೌರವಿಸುವ ದೃಷ್ಟಿಯಿಂದ ಮಾನ್ಯ ಮುಖ್ಯಮಂತ್ರಿಗಳು ಈ ಗೊಂದಲಕ್ಕೆ ಇತಿಶ್ರೀ ಹಾಡಬೇಕೆಂದು ಆಗ್ರಹಪೂರ್ವಕವಾಗಿ ವಿನಂತಿಸುತ್ತೇನೆ ಎಂದು ರಮೇಶ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಪಠ್ಯದಲ್ಲಿ ಜಾತಿ, ಪಕ್ಷ ರಾಜಕಾರಣ ಹೆಡೆಯಾಡಬಾರದು: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...