Homeಚಳವಳಿಪಠ್ಯದ ಮೂಲಕ ಮಕ್ಕಳಿಗೆ ವಿಷಪ್ರಾಸನ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿಡಿ

ಪಠ್ಯದ ಮೂಲಕ ಮಕ್ಕಳಿಗೆ ವಿಷಪ್ರಾಸನ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿಡಿ

ನಮ್ಮ ಹೆಮ್ಮೆಯ ಸಾಕ್ಷಿಪ್ರಜ್ಞೆಗಳಾದ ದೇವನೂರ ಮಹಾದೇವ ಮತ್ತು ಬರಗೂರು ರಾಮಚಂದ್ರಪ್ಪನವರ ಅಭಿಪ್ರಾಯಗಳನ್ನೂ ಧಿಕ್ಕರಿಸಿ ಅವರ ಬಗ್ಗೆಯೂ ಹಗುರವಾಗಿ ಮಾತನಾಡುವುದು ಅಕ್ಷಮ್ಯ, ಅಪರಾಧ.

- Advertisement -
- Advertisement -

ಬಿಜೆಪಿ ಸರ್ಕಾರದ ಪಠ್ಯ ಪರಿಷ್ಕರಣೆ ವಿವಾದ ದಿನದಿಂದ ದಿನಕ್ಕೆ ಬೆಳೆಯುತ್ತಲೆ ಇದೆ. ಹೆಚ್ಚುತ್ತಿರುವ ಜನಾಕ್ರೋಶದ ನಡುವೆಯೇ ಪಠ್ಯ ಬೋಧನೆ ಮಾಡಲು ಸರ್ಕಾರ ಪಟ್ಟು ಹಿಡಿದಿದೆ. ಸರ್ಕಾರದ ಈ ಕ್ರಮಕ್ಕೆ ಮಾಜಿ ಸ್ಪೀಕರ್, ಹಾಲಿ ಶಾಸಕರಾದ ಕೆ.ಆರ್ ರಮೇಶ್ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾವು ವಿಷ ಉಂಡು ಅದರ ನಂಜು ಮುಂದಿನ ಜನಾಂಗಕ್ಕೂ ಉಣಿಸಬೇಕೆಂದು ಪ್ರಾಥಮಿಕ ಹಂತದ ಪಠ್ಯಪುಸ್ತಕದಲ್ಲಿಯೇ ವಿಷಪ್ರಾಸನ ಮಾಡಲು ಹೊರಟಿದ್ದಾರೆ. ಚಕ್ರತೀರ್ಥರಿಗೆ, ಚಕ್ರವರ್ತಿಗಳಿಗೆ ಪ್ರತಾಪಸಿಂಹರುಗಳಿಗೆ ಜಗತ್ತಿನ ಇತಿಹಾಸದ ಅರಿವು ಇದೆಯೋ ಇಲ್ಲವೋ ಗೊತ್ತಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಪಠ್ಯ ವಿವಾದದ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕರ್ನಾಟಕ ರಾಜ್ಯ ಸರ್ಕಾರವು ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಪಠ್ಯಪುಸ್ತಕಗಳ ಮರು ಪರಿಷ್ಕರಣೆಗಾಗಿ ರೋಹಿತ್ ಚಕ್ರತೀರ್ಥ ಎಂಬ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ತರಾತುರಿಯಲ್ಲಿ ತೆಗೆದುಕೊಂಡಿರುವ ನಿರ್ಣಯಗಳು ರಾಜ್ಯದ ನಾಗರೀಕರ ಪ್ರಜ್ಞೆಯನ್ನು ತೀವ್ರವಾಗಿ ನೋಯಿಸಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಕಾಲೀನ ಸಮಾಜದ ಅನೇಕ ಜ್ವಲಂತ ಸಮಸ್ಯೆಗಳ ವಿಷಯದಲ್ಲಿ ಅತ್ಯಂತ ಜವಾಬ್ದಾರಿ ಹಾಗೂ ಸಂವೈಧಾನಿಕ ಪ್ರಜ್ಞೆವುಳ್ಳವರಾಗಿ ಇಡೀ ನಾಡು ಹೆಮ್ಮೆಪಡತಕ್ಕಂಥ ನಮ್ಮ ಹೆಮ್ಮೆಯ ಸಾಕ್ಷಿಪ್ರಜ್ಞೆಗಳಾದ ದೇವನೂರ ಮಹಾದೇವ ಮತ್ತು ಬರಗೂರು ರಾಮಚಂದ್ರಪ್ಪ ಇವರ ಅಭಿಪ್ರಾಯಗಳನ್ನೂ ಧಿಕ್ಕರಿಸಿ ಅವರ ಬಗ್ಗೆಯೂ ಹಗುರವಾಗಿ ಮಾತನಾಡುವುದು ಅಕ್ಷಮ್ಯ, ಅಪರಾಧ ಎಂದು ರಮೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

“ಬೌದ್ಧ ಧರ್ಮದ ಉದಯ ಜಡ್ಡುಗಟ್ಟಿದ ವೈದಿಕ ಸಂಪ್ರದಾಯಗಳ ವಿರುದ್ಧ ಸಹಜವಾಗಿಯೇ ಜನ್ಮತಾಳಿತು. ವಿಶ್ವದ ಅತಿದೊಡ್ಡ ಮಾನವತಾವಾದಿ ಡಾ: ಬಿ.ಆರ್. ಅಂಬೇಡ್ಕರ್‌ರವರು ಇದರ ಇಡೀ ಇತಿಹಾಸವನ್ನು ತಮ್ಮ Triumph of Brahmanism ಎಂಬ ಪುಸ್ತಕದಲ್ಲಿ ವಿವರಿಸಿದ್ದಾರೆ. ಬರಗೂರು ರಾಮಚಂದ್ರಪ್ಪರವರಂಥ ಒಬ್ಬ ಸಂವೇದನಾಶೀಲ, ಸಂವಿಧಾನಾತ್ಮಕ ಬದ್ಧತೆಯುಳ್ಳ ಮನಸ್ಸಿನ ಮತ್ತು ಧಮನಿತರ ನೋವನ್ನು ಪರಿಣಾಮಕಾರಿಯಾಗಿ ಸಮಾಜಕ್ಕೆ ಪರಿಚಯಿಸುವ ಭೌದ್ಧಿಕ ಮತ್ತು ನೈತಿಕ ಸಾಮರ್ಥ್ಯ ಇದ್ದವರು. ಇಂಥವರ ಅಧ್ಯಕ್ಷತೆಯಲ್ಲಿ ರಚಿತವಾದ ಪಠ್ಯಪುಸ್ತಕಗಳ ಪುನರ್‌ಪರಿಷ್ಕರಣೆ ಮಾಡಬೇಕಾಗಿದ್ದಲ್ಲಿ ಒಂದು ಜವಾಬ್ದಾರಿಯುತ ಸರ್ಕಾರ ತನ್ನ ಕನಿಷ್ಟ ವಿವೇಚನೆಯನ್ನಾದರೂ ತೋರಿಸಬೇಕಾಗಿತ್ತು” ಎಂದು ಅವರು ತಿಳಿಸಿದ್ದಾರೆ.

ಪುನರ್‌ರಚಿತ ಸಮಿತಿಯಲ್ಲಿ ಇರುವ ಎಲ್ಲ ಸದಸ್ಯರು ಉದ್ದೇಶಪೂರ್ವಕವಾಗಿಯೋ ಅಥವಾ ಆಕಸ್ಮಿಕವಾಗಿಯೋ ಬ್ರಾಹ್ಮಣರೇ ಆಗಿರುತ್ತಾರೆ. ಬುದ್ಧ, ಬಸವ, ಅಂಬೇಡ್ಕರ್‌ರವರ ಆಲೋಚನೆಗಳನ್ನು ವಿರೋಧಿಸುವವರೇ ಆಗಿರುತ್ತಾರೆ. ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿರುವ ರೋಹಿತ್ ಚಕ್ರತೀರ್ಥರವರ ಶೈಕ್ಷಣಿಕ
ಹಿನ್ನೆಲೆಯಾಗಲಿ ಅಥವಾ ಸಾಮಾಜಿಕ ಮತ್ತು ಸಾಂಸ್ಕೃತಿಕ ಹಾಗೂ ಸಾರಸ್ವತ ಲೋಕಗಳಲ್ಲಿ ಇವರ ಸ್ಥಾನಮಾನದ ಬಗ್ಗೆ ಎಲ್ಲವೂ ನಿಗೂಢವಾಗಿದೆ. ಮನುಕುಲದ ಪ್ರವಾದಿ, ಶೂದ್ರ ಪ್ರಪಂಚದ ಮೌಡ್ಯಕ್ಕೆ ತನ್ನ ಜ್ಞಾನ ಕಿರಣಗಳನ್ನು ಹರಿಸಿ ಮಲಗಿದ್ದವರನ್ನು ಎಬ್ಬಿಸಿದ ಮಹಾನ್‌ಚೇತನ ಕುವೆಂಪುರವರ ಬಗ್ಗೆಯೂ ಸಹ ಅಗೌರವ ತೋರಿಸುವ ಕುತ್ಸಿತ ಕ್ರಿಮಿಗಳು ವಿರಾಜಮಾನರಾಗುತ್ತಿದ್ದಾರೆ. ಇದು ಅತ್ಯಂತ ನೋವಿನ ಸಂಗತಿ ಎಂದು ರಮೇಶ್ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಹುಶಃ ಇವರ ಪ್ರಯತ್ನಗಳು ಇತಿಹಾಸವನ್ನು ತಿರುಚಲು ಎಳೆ ಪ್ರಾಯದ ಮಕ್ಕಳೇ ಸೂಕ್ತ ವೇದಿಕೆ ಎಂದು ಮುಂದೆ ಹೊರಟಂತೆ ಕಾಣುತ್ತದೆ. ಗಾಂಧಿಯನ್ನು ಬಲಿತೆಗೆದುಕೊಂಡ ದೇಶ ಭಕ್ತರಿಗೆ ಸಹಜವಾಗಿಯೇ ಕೇಶವ್ ಬಲಿರಾಂ ಹಡವಾರ್‌ರವರು ಸ್ವಾತಂತ್ರ್ಯ ಹೋರಾಟಗಾರರಾಗಿ ಕಾಣುವುದು ಸಮಂಜಸವಾಗಿಯೇ ಇದೆ. ಆದ್ದರಿಂದಲೇ ತಾವು ಉಂಡ ನಂಜು ಮುಂದಿನ ಜನಾಂಗಕ್ಕೂ ಉಣಿಸಬೇಕೆಂದು ಪ್ರಾಥಮಿಕ ಹಂತದ ಪಠ್ಯಪುಸ್ತಕದಲ್ಲಿಯೇ ವಿಷಪ್ರಾಸನ ಮಾಡಲು ಹೊರಟಿದ್ದಾರೆ. ಚಕ್ರತೀರ್ಥರಿಗೆ, ಚಕ್ರವರ್ತಿಗಳಿಗೆ ಪ್ರತಾಪಸಿಂಹರುಗಳಿಗೆ ಜಗತ್ತಿನ ಇತಿಹಾಸದ ಅರಿವು ಇದೆಯೋ ಇಲ್ಲವೋ ಗೊತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಕಳೆದ 45 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಇಂಥ ಯಾವುದೇ ಸಂದಿಗ್ಧತೆ ಬಂದಾಗ ನಾನು ಯಾವುದೇ ಸ್ಥಾನದಲ್ಲಿದ್ದರೂ ಮುಕ್ತ ಮನಸ್ಸಿನಿಂದ ನಿರ್ಭಯವಾಗಿ ವಿಧಾನಸಭೆಯಲ್ಲಿ ನನ್ನ ನಿಲುವನ್ನು ವ್ಯಕ್ತಪಡಿಸುತ್ತಿದ್ದೆ. ಪ್ರಸ್ತುತ ಸನ್ನಿವೇಶದಲ್ಲಿ ವಿಧಾನಸಭೆಯ ಅಧಿವೇಶನ ಇಲ್ಲದ ಕಾರಣ ಈ ಪತ್ರಿಕಾ ಹೇಳಿಕೆ ನನ್ನ ನಿಲುವನ್ನು ಬಹಿರಂಗಪಡಿಸಲು ಅನಿವಾರ್ಯವಾಗಿದೆ. ಪುಜಾತಂತ್ರದ ಹಿತದೃಷ್ಟಿಯಿಂದ ಸಂವಿಧಾನದ ಆಶಯಗಳನ್ನು ಗೌರವಿಸುವ ದೃಷ್ಟಿಯಿಂದ ಮಾನ್ಯ ಮುಖ್ಯಮಂತ್ರಿಗಳು ಈ ಗೊಂದಲಕ್ಕೆ ಇತಿಶ್ರೀ ಹಾಡಬೇಕೆಂದು ಆಗ್ರಹಪೂರ್ವಕವಾಗಿ ವಿನಂತಿಸುತ್ತೇನೆ ಎಂದು ರಮೇಶ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಪಠ್ಯದಲ್ಲಿ ಜಾತಿ, ಪಕ್ಷ ರಾಜಕಾರಣ ಹೆಡೆಯಾಡಬಾರದು: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...