Homeಚಳವಳಿಪಠ್ಯದ ಮೂಲಕ ಮಕ್ಕಳಿಗೆ ವಿಷಪ್ರಾಸನ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿಡಿ

ಪಠ್ಯದ ಮೂಲಕ ಮಕ್ಕಳಿಗೆ ವಿಷಪ್ರಾಸನ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿಡಿ

ನಮ್ಮ ಹೆಮ್ಮೆಯ ಸಾಕ್ಷಿಪ್ರಜ್ಞೆಗಳಾದ ದೇವನೂರ ಮಹಾದೇವ ಮತ್ತು ಬರಗೂರು ರಾಮಚಂದ್ರಪ್ಪನವರ ಅಭಿಪ್ರಾಯಗಳನ್ನೂ ಧಿಕ್ಕರಿಸಿ ಅವರ ಬಗ್ಗೆಯೂ ಹಗುರವಾಗಿ ಮಾತನಾಡುವುದು ಅಕ್ಷಮ್ಯ, ಅಪರಾಧ.

- Advertisement -
- Advertisement -

ಬಿಜೆಪಿ ಸರ್ಕಾರದ ಪಠ್ಯ ಪರಿಷ್ಕರಣೆ ವಿವಾದ ದಿನದಿಂದ ದಿನಕ್ಕೆ ಬೆಳೆಯುತ್ತಲೆ ಇದೆ. ಹೆಚ್ಚುತ್ತಿರುವ ಜನಾಕ್ರೋಶದ ನಡುವೆಯೇ ಪಠ್ಯ ಬೋಧನೆ ಮಾಡಲು ಸರ್ಕಾರ ಪಟ್ಟು ಹಿಡಿದಿದೆ. ಸರ್ಕಾರದ ಈ ಕ್ರಮಕ್ಕೆ ಮಾಜಿ ಸ್ಪೀಕರ್, ಹಾಲಿ ಶಾಸಕರಾದ ಕೆ.ಆರ್ ರಮೇಶ್ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾವು ವಿಷ ಉಂಡು ಅದರ ನಂಜು ಮುಂದಿನ ಜನಾಂಗಕ್ಕೂ ಉಣಿಸಬೇಕೆಂದು ಪ್ರಾಥಮಿಕ ಹಂತದ ಪಠ್ಯಪುಸ್ತಕದಲ್ಲಿಯೇ ವಿಷಪ್ರಾಸನ ಮಾಡಲು ಹೊರಟಿದ್ದಾರೆ. ಚಕ್ರತೀರ್ಥರಿಗೆ, ಚಕ್ರವರ್ತಿಗಳಿಗೆ ಪ್ರತಾಪಸಿಂಹರುಗಳಿಗೆ ಜಗತ್ತಿನ ಇತಿಹಾಸದ ಅರಿವು ಇದೆಯೋ ಇಲ್ಲವೋ ಗೊತ್ತಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಪಠ್ಯ ವಿವಾದದ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕರ್ನಾಟಕ ರಾಜ್ಯ ಸರ್ಕಾರವು ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಪಠ್ಯಪುಸ್ತಕಗಳ ಮರು ಪರಿಷ್ಕರಣೆಗಾಗಿ ರೋಹಿತ್ ಚಕ್ರತೀರ್ಥ ಎಂಬ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ತರಾತುರಿಯಲ್ಲಿ ತೆಗೆದುಕೊಂಡಿರುವ ನಿರ್ಣಯಗಳು ರಾಜ್ಯದ ನಾಗರೀಕರ ಪ್ರಜ್ಞೆಯನ್ನು ತೀವ್ರವಾಗಿ ನೋಯಿಸಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಕಾಲೀನ ಸಮಾಜದ ಅನೇಕ ಜ್ವಲಂತ ಸಮಸ್ಯೆಗಳ ವಿಷಯದಲ್ಲಿ ಅತ್ಯಂತ ಜವಾಬ್ದಾರಿ ಹಾಗೂ ಸಂವೈಧಾನಿಕ ಪ್ರಜ್ಞೆವುಳ್ಳವರಾಗಿ ಇಡೀ ನಾಡು ಹೆಮ್ಮೆಪಡತಕ್ಕಂಥ ನಮ್ಮ ಹೆಮ್ಮೆಯ ಸಾಕ್ಷಿಪ್ರಜ್ಞೆಗಳಾದ ದೇವನೂರ ಮಹಾದೇವ ಮತ್ತು ಬರಗೂರು ರಾಮಚಂದ್ರಪ್ಪ ಇವರ ಅಭಿಪ್ರಾಯಗಳನ್ನೂ ಧಿಕ್ಕರಿಸಿ ಅವರ ಬಗ್ಗೆಯೂ ಹಗುರವಾಗಿ ಮಾತನಾಡುವುದು ಅಕ್ಷಮ್ಯ, ಅಪರಾಧ ಎಂದು ರಮೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

“ಬೌದ್ಧ ಧರ್ಮದ ಉದಯ ಜಡ್ಡುಗಟ್ಟಿದ ವೈದಿಕ ಸಂಪ್ರದಾಯಗಳ ವಿರುದ್ಧ ಸಹಜವಾಗಿಯೇ ಜನ್ಮತಾಳಿತು. ವಿಶ್ವದ ಅತಿದೊಡ್ಡ ಮಾನವತಾವಾದಿ ಡಾ: ಬಿ.ಆರ್. ಅಂಬೇಡ್ಕರ್‌ರವರು ಇದರ ಇಡೀ ಇತಿಹಾಸವನ್ನು ತಮ್ಮ Triumph of Brahmanism ಎಂಬ ಪುಸ್ತಕದಲ್ಲಿ ವಿವರಿಸಿದ್ದಾರೆ. ಬರಗೂರು ರಾಮಚಂದ್ರಪ್ಪರವರಂಥ ಒಬ್ಬ ಸಂವೇದನಾಶೀಲ, ಸಂವಿಧಾನಾತ್ಮಕ ಬದ್ಧತೆಯುಳ್ಳ ಮನಸ್ಸಿನ ಮತ್ತು ಧಮನಿತರ ನೋವನ್ನು ಪರಿಣಾಮಕಾರಿಯಾಗಿ ಸಮಾಜಕ್ಕೆ ಪರಿಚಯಿಸುವ ಭೌದ್ಧಿಕ ಮತ್ತು ನೈತಿಕ ಸಾಮರ್ಥ್ಯ ಇದ್ದವರು. ಇಂಥವರ ಅಧ್ಯಕ್ಷತೆಯಲ್ಲಿ ರಚಿತವಾದ ಪಠ್ಯಪುಸ್ತಕಗಳ ಪುನರ್‌ಪರಿಷ್ಕರಣೆ ಮಾಡಬೇಕಾಗಿದ್ದಲ್ಲಿ ಒಂದು ಜವಾಬ್ದಾರಿಯುತ ಸರ್ಕಾರ ತನ್ನ ಕನಿಷ್ಟ ವಿವೇಚನೆಯನ್ನಾದರೂ ತೋರಿಸಬೇಕಾಗಿತ್ತು” ಎಂದು ಅವರು ತಿಳಿಸಿದ್ದಾರೆ.

ಪುನರ್‌ರಚಿತ ಸಮಿತಿಯಲ್ಲಿ ಇರುವ ಎಲ್ಲ ಸದಸ್ಯರು ಉದ್ದೇಶಪೂರ್ವಕವಾಗಿಯೋ ಅಥವಾ ಆಕಸ್ಮಿಕವಾಗಿಯೋ ಬ್ರಾಹ್ಮಣರೇ ಆಗಿರುತ್ತಾರೆ. ಬುದ್ಧ, ಬಸವ, ಅಂಬೇಡ್ಕರ್‌ರವರ ಆಲೋಚನೆಗಳನ್ನು ವಿರೋಧಿಸುವವರೇ ಆಗಿರುತ್ತಾರೆ. ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿರುವ ರೋಹಿತ್ ಚಕ್ರತೀರ್ಥರವರ ಶೈಕ್ಷಣಿಕ
ಹಿನ್ನೆಲೆಯಾಗಲಿ ಅಥವಾ ಸಾಮಾಜಿಕ ಮತ್ತು ಸಾಂಸ್ಕೃತಿಕ ಹಾಗೂ ಸಾರಸ್ವತ ಲೋಕಗಳಲ್ಲಿ ಇವರ ಸ್ಥಾನಮಾನದ ಬಗ್ಗೆ ಎಲ್ಲವೂ ನಿಗೂಢವಾಗಿದೆ. ಮನುಕುಲದ ಪ್ರವಾದಿ, ಶೂದ್ರ ಪ್ರಪಂಚದ ಮೌಡ್ಯಕ್ಕೆ ತನ್ನ ಜ್ಞಾನ ಕಿರಣಗಳನ್ನು ಹರಿಸಿ ಮಲಗಿದ್ದವರನ್ನು ಎಬ್ಬಿಸಿದ ಮಹಾನ್‌ಚೇತನ ಕುವೆಂಪುರವರ ಬಗ್ಗೆಯೂ ಸಹ ಅಗೌರವ ತೋರಿಸುವ ಕುತ್ಸಿತ ಕ್ರಿಮಿಗಳು ವಿರಾಜಮಾನರಾಗುತ್ತಿದ್ದಾರೆ. ಇದು ಅತ್ಯಂತ ನೋವಿನ ಸಂಗತಿ ಎಂದು ರಮೇಶ್ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಹುಶಃ ಇವರ ಪ್ರಯತ್ನಗಳು ಇತಿಹಾಸವನ್ನು ತಿರುಚಲು ಎಳೆ ಪ್ರಾಯದ ಮಕ್ಕಳೇ ಸೂಕ್ತ ವೇದಿಕೆ ಎಂದು ಮುಂದೆ ಹೊರಟಂತೆ ಕಾಣುತ್ತದೆ. ಗಾಂಧಿಯನ್ನು ಬಲಿತೆಗೆದುಕೊಂಡ ದೇಶ ಭಕ್ತರಿಗೆ ಸಹಜವಾಗಿಯೇ ಕೇಶವ್ ಬಲಿರಾಂ ಹಡವಾರ್‌ರವರು ಸ್ವಾತಂತ್ರ್ಯ ಹೋರಾಟಗಾರರಾಗಿ ಕಾಣುವುದು ಸಮಂಜಸವಾಗಿಯೇ ಇದೆ. ಆದ್ದರಿಂದಲೇ ತಾವು ಉಂಡ ನಂಜು ಮುಂದಿನ ಜನಾಂಗಕ್ಕೂ ಉಣಿಸಬೇಕೆಂದು ಪ್ರಾಥಮಿಕ ಹಂತದ ಪಠ್ಯಪುಸ್ತಕದಲ್ಲಿಯೇ ವಿಷಪ್ರಾಸನ ಮಾಡಲು ಹೊರಟಿದ್ದಾರೆ. ಚಕ್ರತೀರ್ಥರಿಗೆ, ಚಕ್ರವರ್ತಿಗಳಿಗೆ ಪ್ರತಾಪಸಿಂಹರುಗಳಿಗೆ ಜಗತ್ತಿನ ಇತಿಹಾಸದ ಅರಿವು ಇದೆಯೋ ಇಲ್ಲವೋ ಗೊತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಕಳೆದ 45 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಇಂಥ ಯಾವುದೇ ಸಂದಿಗ್ಧತೆ ಬಂದಾಗ ನಾನು ಯಾವುದೇ ಸ್ಥಾನದಲ್ಲಿದ್ದರೂ ಮುಕ್ತ ಮನಸ್ಸಿನಿಂದ ನಿರ್ಭಯವಾಗಿ ವಿಧಾನಸಭೆಯಲ್ಲಿ ನನ್ನ ನಿಲುವನ್ನು ವ್ಯಕ್ತಪಡಿಸುತ್ತಿದ್ದೆ. ಪ್ರಸ್ತುತ ಸನ್ನಿವೇಶದಲ್ಲಿ ವಿಧಾನಸಭೆಯ ಅಧಿವೇಶನ ಇಲ್ಲದ ಕಾರಣ ಈ ಪತ್ರಿಕಾ ಹೇಳಿಕೆ ನನ್ನ ನಿಲುವನ್ನು ಬಹಿರಂಗಪಡಿಸಲು ಅನಿವಾರ್ಯವಾಗಿದೆ. ಪುಜಾತಂತ್ರದ ಹಿತದೃಷ್ಟಿಯಿಂದ ಸಂವಿಧಾನದ ಆಶಯಗಳನ್ನು ಗೌರವಿಸುವ ದೃಷ್ಟಿಯಿಂದ ಮಾನ್ಯ ಮುಖ್ಯಮಂತ್ರಿಗಳು ಈ ಗೊಂದಲಕ್ಕೆ ಇತಿಶ್ರೀ ಹಾಡಬೇಕೆಂದು ಆಗ್ರಹಪೂರ್ವಕವಾಗಿ ವಿನಂತಿಸುತ್ತೇನೆ ಎಂದು ರಮೇಶ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಪಠ್ಯದಲ್ಲಿ ಜಾತಿ, ಪಕ್ಷ ರಾಜಕಾರಣ ಹೆಡೆಯಾಡಬಾರದು: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...