Homeಚಳವಳಿಪಠ್ಯದ ಮೂಲಕ ಮಕ್ಕಳಿಗೆ ವಿಷಪ್ರಾಸನ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿಡಿ

ಪಠ್ಯದ ಮೂಲಕ ಮಕ್ಕಳಿಗೆ ವಿಷಪ್ರಾಸನ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿಡಿ

ನಮ್ಮ ಹೆಮ್ಮೆಯ ಸಾಕ್ಷಿಪ್ರಜ್ಞೆಗಳಾದ ದೇವನೂರ ಮಹಾದೇವ ಮತ್ತು ಬರಗೂರು ರಾಮಚಂದ್ರಪ್ಪನವರ ಅಭಿಪ್ರಾಯಗಳನ್ನೂ ಧಿಕ್ಕರಿಸಿ ಅವರ ಬಗ್ಗೆಯೂ ಹಗುರವಾಗಿ ಮಾತನಾಡುವುದು ಅಕ್ಷಮ್ಯ, ಅಪರಾಧ.

- Advertisement -
- Advertisement -

ಬಿಜೆಪಿ ಸರ್ಕಾರದ ಪಠ್ಯ ಪರಿಷ್ಕರಣೆ ವಿವಾದ ದಿನದಿಂದ ದಿನಕ್ಕೆ ಬೆಳೆಯುತ್ತಲೆ ಇದೆ. ಹೆಚ್ಚುತ್ತಿರುವ ಜನಾಕ್ರೋಶದ ನಡುವೆಯೇ ಪಠ್ಯ ಬೋಧನೆ ಮಾಡಲು ಸರ್ಕಾರ ಪಟ್ಟು ಹಿಡಿದಿದೆ. ಸರ್ಕಾರದ ಈ ಕ್ರಮಕ್ಕೆ ಮಾಜಿ ಸ್ಪೀಕರ್, ಹಾಲಿ ಶಾಸಕರಾದ ಕೆ.ಆರ್ ರಮೇಶ್ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾವು ವಿಷ ಉಂಡು ಅದರ ನಂಜು ಮುಂದಿನ ಜನಾಂಗಕ್ಕೂ ಉಣಿಸಬೇಕೆಂದು ಪ್ರಾಥಮಿಕ ಹಂತದ ಪಠ್ಯಪುಸ್ತಕದಲ್ಲಿಯೇ ವಿಷಪ್ರಾಸನ ಮಾಡಲು ಹೊರಟಿದ್ದಾರೆ. ಚಕ್ರತೀರ್ಥರಿಗೆ, ಚಕ್ರವರ್ತಿಗಳಿಗೆ ಪ್ರತಾಪಸಿಂಹರುಗಳಿಗೆ ಜಗತ್ತಿನ ಇತಿಹಾಸದ ಅರಿವು ಇದೆಯೋ ಇಲ್ಲವೋ ಗೊತ್ತಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಪಠ್ಯ ವಿವಾದದ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕರ್ನಾಟಕ ರಾಜ್ಯ ಸರ್ಕಾರವು ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಪಠ್ಯಪುಸ್ತಕಗಳ ಮರು ಪರಿಷ್ಕರಣೆಗಾಗಿ ರೋಹಿತ್ ಚಕ್ರತೀರ್ಥ ಎಂಬ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ತರಾತುರಿಯಲ್ಲಿ ತೆಗೆದುಕೊಂಡಿರುವ ನಿರ್ಣಯಗಳು ರಾಜ್ಯದ ನಾಗರೀಕರ ಪ್ರಜ್ಞೆಯನ್ನು ತೀವ್ರವಾಗಿ ನೋಯಿಸಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಕಾಲೀನ ಸಮಾಜದ ಅನೇಕ ಜ್ವಲಂತ ಸಮಸ್ಯೆಗಳ ವಿಷಯದಲ್ಲಿ ಅತ್ಯಂತ ಜವಾಬ್ದಾರಿ ಹಾಗೂ ಸಂವೈಧಾನಿಕ ಪ್ರಜ್ಞೆವುಳ್ಳವರಾಗಿ ಇಡೀ ನಾಡು ಹೆಮ್ಮೆಪಡತಕ್ಕಂಥ ನಮ್ಮ ಹೆಮ್ಮೆಯ ಸಾಕ್ಷಿಪ್ರಜ್ಞೆಗಳಾದ ದೇವನೂರ ಮಹಾದೇವ ಮತ್ತು ಬರಗೂರು ರಾಮಚಂದ್ರಪ್ಪ ಇವರ ಅಭಿಪ್ರಾಯಗಳನ್ನೂ ಧಿಕ್ಕರಿಸಿ ಅವರ ಬಗ್ಗೆಯೂ ಹಗುರವಾಗಿ ಮಾತನಾಡುವುದು ಅಕ್ಷಮ್ಯ, ಅಪರಾಧ ಎಂದು ರಮೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

“ಬೌದ್ಧ ಧರ್ಮದ ಉದಯ ಜಡ್ಡುಗಟ್ಟಿದ ವೈದಿಕ ಸಂಪ್ರದಾಯಗಳ ವಿರುದ್ಧ ಸಹಜವಾಗಿಯೇ ಜನ್ಮತಾಳಿತು. ವಿಶ್ವದ ಅತಿದೊಡ್ಡ ಮಾನವತಾವಾದಿ ಡಾ: ಬಿ.ಆರ್. ಅಂಬೇಡ್ಕರ್‌ರವರು ಇದರ ಇಡೀ ಇತಿಹಾಸವನ್ನು ತಮ್ಮ Triumph of Brahmanism ಎಂಬ ಪುಸ್ತಕದಲ್ಲಿ ವಿವರಿಸಿದ್ದಾರೆ. ಬರಗೂರು ರಾಮಚಂದ್ರಪ್ಪರವರಂಥ ಒಬ್ಬ ಸಂವೇದನಾಶೀಲ, ಸಂವಿಧಾನಾತ್ಮಕ ಬದ್ಧತೆಯುಳ್ಳ ಮನಸ್ಸಿನ ಮತ್ತು ಧಮನಿತರ ನೋವನ್ನು ಪರಿಣಾಮಕಾರಿಯಾಗಿ ಸಮಾಜಕ್ಕೆ ಪರಿಚಯಿಸುವ ಭೌದ್ಧಿಕ ಮತ್ತು ನೈತಿಕ ಸಾಮರ್ಥ್ಯ ಇದ್ದವರು. ಇಂಥವರ ಅಧ್ಯಕ್ಷತೆಯಲ್ಲಿ ರಚಿತವಾದ ಪಠ್ಯಪುಸ್ತಕಗಳ ಪುನರ್‌ಪರಿಷ್ಕರಣೆ ಮಾಡಬೇಕಾಗಿದ್ದಲ್ಲಿ ಒಂದು ಜವಾಬ್ದಾರಿಯುತ ಸರ್ಕಾರ ತನ್ನ ಕನಿಷ್ಟ ವಿವೇಚನೆಯನ್ನಾದರೂ ತೋರಿಸಬೇಕಾಗಿತ್ತು” ಎಂದು ಅವರು ತಿಳಿಸಿದ್ದಾರೆ.

ಪುನರ್‌ರಚಿತ ಸಮಿತಿಯಲ್ಲಿ ಇರುವ ಎಲ್ಲ ಸದಸ್ಯರು ಉದ್ದೇಶಪೂರ್ವಕವಾಗಿಯೋ ಅಥವಾ ಆಕಸ್ಮಿಕವಾಗಿಯೋ ಬ್ರಾಹ್ಮಣರೇ ಆಗಿರುತ್ತಾರೆ. ಬುದ್ಧ, ಬಸವ, ಅಂಬೇಡ್ಕರ್‌ರವರ ಆಲೋಚನೆಗಳನ್ನು ವಿರೋಧಿಸುವವರೇ ಆಗಿರುತ್ತಾರೆ. ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿರುವ ರೋಹಿತ್ ಚಕ್ರತೀರ್ಥರವರ ಶೈಕ್ಷಣಿಕ
ಹಿನ್ನೆಲೆಯಾಗಲಿ ಅಥವಾ ಸಾಮಾಜಿಕ ಮತ್ತು ಸಾಂಸ್ಕೃತಿಕ ಹಾಗೂ ಸಾರಸ್ವತ ಲೋಕಗಳಲ್ಲಿ ಇವರ ಸ್ಥಾನಮಾನದ ಬಗ್ಗೆ ಎಲ್ಲವೂ ನಿಗೂಢವಾಗಿದೆ. ಮನುಕುಲದ ಪ್ರವಾದಿ, ಶೂದ್ರ ಪ್ರಪಂಚದ ಮೌಡ್ಯಕ್ಕೆ ತನ್ನ ಜ್ಞಾನ ಕಿರಣಗಳನ್ನು ಹರಿಸಿ ಮಲಗಿದ್ದವರನ್ನು ಎಬ್ಬಿಸಿದ ಮಹಾನ್‌ಚೇತನ ಕುವೆಂಪುರವರ ಬಗ್ಗೆಯೂ ಸಹ ಅಗೌರವ ತೋರಿಸುವ ಕುತ್ಸಿತ ಕ್ರಿಮಿಗಳು ವಿರಾಜಮಾನರಾಗುತ್ತಿದ್ದಾರೆ. ಇದು ಅತ್ಯಂತ ನೋವಿನ ಸಂಗತಿ ಎಂದು ರಮೇಶ್ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಹುಶಃ ಇವರ ಪ್ರಯತ್ನಗಳು ಇತಿಹಾಸವನ್ನು ತಿರುಚಲು ಎಳೆ ಪ್ರಾಯದ ಮಕ್ಕಳೇ ಸೂಕ್ತ ವೇದಿಕೆ ಎಂದು ಮುಂದೆ ಹೊರಟಂತೆ ಕಾಣುತ್ತದೆ. ಗಾಂಧಿಯನ್ನು ಬಲಿತೆಗೆದುಕೊಂಡ ದೇಶ ಭಕ್ತರಿಗೆ ಸಹಜವಾಗಿಯೇ ಕೇಶವ್ ಬಲಿರಾಂ ಹಡವಾರ್‌ರವರು ಸ್ವಾತಂತ್ರ್ಯ ಹೋರಾಟಗಾರರಾಗಿ ಕಾಣುವುದು ಸಮಂಜಸವಾಗಿಯೇ ಇದೆ. ಆದ್ದರಿಂದಲೇ ತಾವು ಉಂಡ ನಂಜು ಮುಂದಿನ ಜನಾಂಗಕ್ಕೂ ಉಣಿಸಬೇಕೆಂದು ಪ್ರಾಥಮಿಕ ಹಂತದ ಪಠ್ಯಪುಸ್ತಕದಲ್ಲಿಯೇ ವಿಷಪ್ರಾಸನ ಮಾಡಲು ಹೊರಟಿದ್ದಾರೆ. ಚಕ್ರತೀರ್ಥರಿಗೆ, ಚಕ್ರವರ್ತಿಗಳಿಗೆ ಪ್ರತಾಪಸಿಂಹರುಗಳಿಗೆ ಜಗತ್ತಿನ ಇತಿಹಾಸದ ಅರಿವು ಇದೆಯೋ ಇಲ್ಲವೋ ಗೊತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಕಳೆದ 45 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಇಂಥ ಯಾವುದೇ ಸಂದಿಗ್ಧತೆ ಬಂದಾಗ ನಾನು ಯಾವುದೇ ಸ್ಥಾನದಲ್ಲಿದ್ದರೂ ಮುಕ್ತ ಮನಸ್ಸಿನಿಂದ ನಿರ್ಭಯವಾಗಿ ವಿಧಾನಸಭೆಯಲ್ಲಿ ನನ್ನ ನಿಲುವನ್ನು ವ್ಯಕ್ತಪಡಿಸುತ್ತಿದ್ದೆ. ಪ್ರಸ್ತುತ ಸನ್ನಿವೇಶದಲ್ಲಿ ವಿಧಾನಸಭೆಯ ಅಧಿವೇಶನ ಇಲ್ಲದ ಕಾರಣ ಈ ಪತ್ರಿಕಾ ಹೇಳಿಕೆ ನನ್ನ ನಿಲುವನ್ನು ಬಹಿರಂಗಪಡಿಸಲು ಅನಿವಾರ್ಯವಾಗಿದೆ. ಪುಜಾತಂತ್ರದ ಹಿತದೃಷ್ಟಿಯಿಂದ ಸಂವಿಧಾನದ ಆಶಯಗಳನ್ನು ಗೌರವಿಸುವ ದೃಷ್ಟಿಯಿಂದ ಮಾನ್ಯ ಮುಖ್ಯಮಂತ್ರಿಗಳು ಈ ಗೊಂದಲಕ್ಕೆ ಇತಿಶ್ರೀ ಹಾಡಬೇಕೆಂದು ಆಗ್ರಹಪೂರ್ವಕವಾಗಿ ವಿನಂತಿಸುತ್ತೇನೆ ಎಂದು ರಮೇಶ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಪಠ್ಯದಲ್ಲಿ ಜಾತಿ, ಪಕ್ಷ ರಾಜಕಾರಣ ಹೆಡೆಯಾಡಬಾರದು: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....