Homeಚಳವಳಿಪಠ್ಯದ ಮೂಲಕ ಮಕ್ಕಳಿಗೆ ವಿಷಪ್ರಾಸನ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿಡಿ

ಪಠ್ಯದ ಮೂಲಕ ಮಕ್ಕಳಿಗೆ ವಿಷಪ್ರಾಸನ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿಡಿ

ನಮ್ಮ ಹೆಮ್ಮೆಯ ಸಾಕ್ಷಿಪ್ರಜ್ಞೆಗಳಾದ ದೇವನೂರ ಮಹಾದೇವ ಮತ್ತು ಬರಗೂರು ರಾಮಚಂದ್ರಪ್ಪನವರ ಅಭಿಪ್ರಾಯಗಳನ್ನೂ ಧಿಕ್ಕರಿಸಿ ಅವರ ಬಗ್ಗೆಯೂ ಹಗುರವಾಗಿ ಮಾತನಾಡುವುದು ಅಕ್ಷಮ್ಯ, ಅಪರಾಧ.

- Advertisement -
- Advertisement -

ಬಿಜೆಪಿ ಸರ್ಕಾರದ ಪಠ್ಯ ಪರಿಷ್ಕರಣೆ ವಿವಾದ ದಿನದಿಂದ ದಿನಕ್ಕೆ ಬೆಳೆಯುತ್ತಲೆ ಇದೆ. ಹೆಚ್ಚುತ್ತಿರುವ ಜನಾಕ್ರೋಶದ ನಡುವೆಯೇ ಪಠ್ಯ ಬೋಧನೆ ಮಾಡಲು ಸರ್ಕಾರ ಪಟ್ಟು ಹಿಡಿದಿದೆ. ಸರ್ಕಾರದ ಈ ಕ್ರಮಕ್ಕೆ ಮಾಜಿ ಸ್ಪೀಕರ್, ಹಾಲಿ ಶಾಸಕರಾದ ಕೆ.ಆರ್ ರಮೇಶ್ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾವು ವಿಷ ಉಂಡು ಅದರ ನಂಜು ಮುಂದಿನ ಜನಾಂಗಕ್ಕೂ ಉಣಿಸಬೇಕೆಂದು ಪ್ರಾಥಮಿಕ ಹಂತದ ಪಠ್ಯಪುಸ್ತಕದಲ್ಲಿಯೇ ವಿಷಪ್ರಾಸನ ಮಾಡಲು ಹೊರಟಿದ್ದಾರೆ. ಚಕ್ರತೀರ್ಥರಿಗೆ, ಚಕ್ರವರ್ತಿಗಳಿಗೆ ಪ್ರತಾಪಸಿಂಹರುಗಳಿಗೆ ಜಗತ್ತಿನ ಇತಿಹಾಸದ ಅರಿವು ಇದೆಯೋ ಇಲ್ಲವೋ ಗೊತ್ತಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಪಠ್ಯ ವಿವಾದದ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕರ್ನಾಟಕ ರಾಜ್ಯ ಸರ್ಕಾರವು ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಪಠ್ಯಪುಸ್ತಕಗಳ ಮರು ಪರಿಷ್ಕರಣೆಗಾಗಿ ರೋಹಿತ್ ಚಕ್ರತೀರ್ಥ ಎಂಬ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ತರಾತುರಿಯಲ್ಲಿ ತೆಗೆದುಕೊಂಡಿರುವ ನಿರ್ಣಯಗಳು ರಾಜ್ಯದ ನಾಗರೀಕರ ಪ್ರಜ್ಞೆಯನ್ನು ತೀವ್ರವಾಗಿ ನೋಯಿಸಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಕಾಲೀನ ಸಮಾಜದ ಅನೇಕ ಜ್ವಲಂತ ಸಮಸ್ಯೆಗಳ ವಿಷಯದಲ್ಲಿ ಅತ್ಯಂತ ಜವಾಬ್ದಾರಿ ಹಾಗೂ ಸಂವೈಧಾನಿಕ ಪ್ರಜ್ಞೆವುಳ್ಳವರಾಗಿ ಇಡೀ ನಾಡು ಹೆಮ್ಮೆಪಡತಕ್ಕಂಥ ನಮ್ಮ ಹೆಮ್ಮೆಯ ಸಾಕ್ಷಿಪ್ರಜ್ಞೆಗಳಾದ ದೇವನೂರ ಮಹಾದೇವ ಮತ್ತು ಬರಗೂರು ರಾಮಚಂದ್ರಪ್ಪ ಇವರ ಅಭಿಪ್ರಾಯಗಳನ್ನೂ ಧಿಕ್ಕರಿಸಿ ಅವರ ಬಗ್ಗೆಯೂ ಹಗುರವಾಗಿ ಮಾತನಾಡುವುದು ಅಕ್ಷಮ್ಯ, ಅಪರಾಧ ಎಂದು ರಮೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

“ಬೌದ್ಧ ಧರ್ಮದ ಉದಯ ಜಡ್ಡುಗಟ್ಟಿದ ವೈದಿಕ ಸಂಪ್ರದಾಯಗಳ ವಿರುದ್ಧ ಸಹಜವಾಗಿಯೇ ಜನ್ಮತಾಳಿತು. ವಿಶ್ವದ ಅತಿದೊಡ್ಡ ಮಾನವತಾವಾದಿ ಡಾ: ಬಿ.ಆರ್. ಅಂಬೇಡ್ಕರ್‌ರವರು ಇದರ ಇಡೀ ಇತಿಹಾಸವನ್ನು ತಮ್ಮ Triumph of Brahmanism ಎಂಬ ಪುಸ್ತಕದಲ್ಲಿ ವಿವರಿಸಿದ್ದಾರೆ. ಬರಗೂರು ರಾಮಚಂದ್ರಪ್ಪರವರಂಥ ಒಬ್ಬ ಸಂವೇದನಾಶೀಲ, ಸಂವಿಧಾನಾತ್ಮಕ ಬದ್ಧತೆಯುಳ್ಳ ಮನಸ್ಸಿನ ಮತ್ತು ಧಮನಿತರ ನೋವನ್ನು ಪರಿಣಾಮಕಾರಿಯಾಗಿ ಸಮಾಜಕ್ಕೆ ಪರಿಚಯಿಸುವ ಭೌದ್ಧಿಕ ಮತ್ತು ನೈತಿಕ ಸಾಮರ್ಥ್ಯ ಇದ್ದವರು. ಇಂಥವರ ಅಧ್ಯಕ್ಷತೆಯಲ್ಲಿ ರಚಿತವಾದ ಪಠ್ಯಪುಸ್ತಕಗಳ ಪುನರ್‌ಪರಿಷ್ಕರಣೆ ಮಾಡಬೇಕಾಗಿದ್ದಲ್ಲಿ ಒಂದು ಜವಾಬ್ದಾರಿಯುತ ಸರ್ಕಾರ ತನ್ನ ಕನಿಷ್ಟ ವಿವೇಚನೆಯನ್ನಾದರೂ ತೋರಿಸಬೇಕಾಗಿತ್ತು” ಎಂದು ಅವರು ತಿಳಿಸಿದ್ದಾರೆ.

ಪುನರ್‌ರಚಿತ ಸಮಿತಿಯಲ್ಲಿ ಇರುವ ಎಲ್ಲ ಸದಸ್ಯರು ಉದ್ದೇಶಪೂರ್ವಕವಾಗಿಯೋ ಅಥವಾ ಆಕಸ್ಮಿಕವಾಗಿಯೋ ಬ್ರಾಹ್ಮಣರೇ ಆಗಿರುತ್ತಾರೆ. ಬುದ್ಧ, ಬಸವ, ಅಂಬೇಡ್ಕರ್‌ರವರ ಆಲೋಚನೆಗಳನ್ನು ವಿರೋಧಿಸುವವರೇ ಆಗಿರುತ್ತಾರೆ. ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿರುವ ರೋಹಿತ್ ಚಕ್ರತೀರ್ಥರವರ ಶೈಕ್ಷಣಿಕ
ಹಿನ್ನೆಲೆಯಾಗಲಿ ಅಥವಾ ಸಾಮಾಜಿಕ ಮತ್ತು ಸಾಂಸ್ಕೃತಿಕ ಹಾಗೂ ಸಾರಸ್ವತ ಲೋಕಗಳಲ್ಲಿ ಇವರ ಸ್ಥಾನಮಾನದ ಬಗ್ಗೆ ಎಲ್ಲವೂ ನಿಗೂಢವಾಗಿದೆ. ಮನುಕುಲದ ಪ್ರವಾದಿ, ಶೂದ್ರ ಪ್ರಪಂಚದ ಮೌಡ್ಯಕ್ಕೆ ತನ್ನ ಜ್ಞಾನ ಕಿರಣಗಳನ್ನು ಹರಿಸಿ ಮಲಗಿದ್ದವರನ್ನು ಎಬ್ಬಿಸಿದ ಮಹಾನ್‌ಚೇತನ ಕುವೆಂಪುರವರ ಬಗ್ಗೆಯೂ ಸಹ ಅಗೌರವ ತೋರಿಸುವ ಕುತ್ಸಿತ ಕ್ರಿಮಿಗಳು ವಿರಾಜಮಾನರಾಗುತ್ತಿದ್ದಾರೆ. ಇದು ಅತ್ಯಂತ ನೋವಿನ ಸಂಗತಿ ಎಂದು ರಮೇಶ್ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಹುಶಃ ಇವರ ಪ್ರಯತ್ನಗಳು ಇತಿಹಾಸವನ್ನು ತಿರುಚಲು ಎಳೆ ಪ್ರಾಯದ ಮಕ್ಕಳೇ ಸೂಕ್ತ ವೇದಿಕೆ ಎಂದು ಮುಂದೆ ಹೊರಟಂತೆ ಕಾಣುತ್ತದೆ. ಗಾಂಧಿಯನ್ನು ಬಲಿತೆಗೆದುಕೊಂಡ ದೇಶ ಭಕ್ತರಿಗೆ ಸಹಜವಾಗಿಯೇ ಕೇಶವ್ ಬಲಿರಾಂ ಹಡವಾರ್‌ರವರು ಸ್ವಾತಂತ್ರ್ಯ ಹೋರಾಟಗಾರರಾಗಿ ಕಾಣುವುದು ಸಮಂಜಸವಾಗಿಯೇ ಇದೆ. ಆದ್ದರಿಂದಲೇ ತಾವು ಉಂಡ ನಂಜು ಮುಂದಿನ ಜನಾಂಗಕ್ಕೂ ಉಣಿಸಬೇಕೆಂದು ಪ್ರಾಥಮಿಕ ಹಂತದ ಪಠ್ಯಪುಸ್ತಕದಲ್ಲಿಯೇ ವಿಷಪ್ರಾಸನ ಮಾಡಲು ಹೊರಟಿದ್ದಾರೆ. ಚಕ್ರತೀರ್ಥರಿಗೆ, ಚಕ್ರವರ್ತಿಗಳಿಗೆ ಪ್ರತಾಪಸಿಂಹರುಗಳಿಗೆ ಜಗತ್ತಿನ ಇತಿಹಾಸದ ಅರಿವು ಇದೆಯೋ ಇಲ್ಲವೋ ಗೊತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಕಳೆದ 45 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಇಂಥ ಯಾವುದೇ ಸಂದಿಗ್ಧತೆ ಬಂದಾಗ ನಾನು ಯಾವುದೇ ಸ್ಥಾನದಲ್ಲಿದ್ದರೂ ಮುಕ್ತ ಮನಸ್ಸಿನಿಂದ ನಿರ್ಭಯವಾಗಿ ವಿಧಾನಸಭೆಯಲ್ಲಿ ನನ್ನ ನಿಲುವನ್ನು ವ್ಯಕ್ತಪಡಿಸುತ್ತಿದ್ದೆ. ಪ್ರಸ್ತುತ ಸನ್ನಿವೇಶದಲ್ಲಿ ವಿಧಾನಸಭೆಯ ಅಧಿವೇಶನ ಇಲ್ಲದ ಕಾರಣ ಈ ಪತ್ರಿಕಾ ಹೇಳಿಕೆ ನನ್ನ ನಿಲುವನ್ನು ಬಹಿರಂಗಪಡಿಸಲು ಅನಿವಾರ್ಯವಾಗಿದೆ. ಪುಜಾತಂತ್ರದ ಹಿತದೃಷ್ಟಿಯಿಂದ ಸಂವಿಧಾನದ ಆಶಯಗಳನ್ನು ಗೌರವಿಸುವ ದೃಷ್ಟಿಯಿಂದ ಮಾನ್ಯ ಮುಖ್ಯಮಂತ್ರಿಗಳು ಈ ಗೊಂದಲಕ್ಕೆ ಇತಿಶ್ರೀ ಹಾಡಬೇಕೆಂದು ಆಗ್ರಹಪೂರ್ವಕವಾಗಿ ವಿನಂತಿಸುತ್ತೇನೆ ಎಂದು ರಮೇಶ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಪಠ್ಯದಲ್ಲಿ ಜಾತಿ, ಪಕ್ಷ ರಾಜಕಾರಣ ಹೆಡೆಯಾಡಬಾರದು: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...