Homeಅಂತರಾಷ್ಟ್ರೀಯಕೊರೊನಾ ಲಸಿಕೆ ಪೇಟೆಂಟ್‌ ಬಿಟ್ಟುಬಿಡಲು ನೊಬೆಲ್ ಪ್ರಶಸ್ತಿ ವಿಜೇತರು, ವಿಶ್ವದ ಮಾಜಿ ನಾಯಕರಿಂದ ಜೋ ಬೈಡನ್‌ಗೆ...

ಕೊರೊನಾ ಲಸಿಕೆ ಪೇಟೆಂಟ್‌ ಬಿಟ್ಟುಬಿಡಲು ನೊಬೆಲ್ ಪ್ರಶಸ್ತಿ ವಿಜೇತರು, ವಿಶ್ವದ ಮಾಜಿ ನಾಯಕರಿಂದ ಜೋ ಬೈಡನ್‌ಗೆ ಪತ್ರ

- Advertisement -
- Advertisement -

ಯುಎಸ್ ಇಂಟಲೆಕ್ಚುಯಲ್ ಪ್ರಾಪರ್ಟಿ ನಿಯಮಗಳನ್ನು ಬಿಡುವ ಮೂಲಕ ಕೊರೊನಾ ಲಸಿಕೆಗಳನ್ನು ಹೆಚ್ಚು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಕೋರಿ ಅಮೆರಿಕಾ ಅಧ್ಯಕ್ಷ ಜೋ ಬೈಡನ್‌ಗೆ 170 ಕ್ಕೂ ಹೆಚ್ಚು ಮಾಜಿ ವಿಶ್ವ ನಾಯಕರು ಮತ್ತು ನೊಬೆಲ್ ಪ್ರಶಸ್ತಿ ವಿಜೇತರು ಪತ್ರ ಬರೆದಿದ್ದಾರೆ.

ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿಒ) ಕೋವಿಡ್ -19 ಲಸಿಕೆ ಪೇಟೆಂಟ್‌ಗಳನ್ನು ತಾತ್ಕಾಲಿಕವಾಗಿ ಬಿಟ್ಟುಬಿಡುವಂತೆ ಮಾಡುವಂತೆ ಒತ್ತಾಯಿಸಿ ದಕ್ಷಿಣ ಆಫ್ರಿಕಾ ಮತ್ತು ಭಾರತ ಮುಂದಾಳತ್ವ ವಹಿಸಿರುವ ಪ್ರಸ್ತಾವನೆಗೆ 170 ಕ್ಕೂ ಪ್ರಸಿದ್ಧರು ಸಹಿ ಹಾಕಿದ್ದಾರೆ. ಈ ಬಹಿರಂಗ ಪತ್ರವನ್ನು ಬುಧವಾರ ಆಕ್ಸ್‌ಫ್ಯಾಮ್ ಹಂಚಿಕೊಂಡಿದೆ.

ಬಹಿರಂಗ ಪತ್ರಕ್ಕೆ ಸಹಿ ಮಾಡಿದವರಲ್ಲಿ ಬ್ರಿಟನ್ ಮಾಜಿ ಪ್ರಧಾನಿ ಗಾರ್ಡನ್ ಬ್ರೌನ್, ಮಾಜಿ ಫ್ರೆಂಚ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡ್ ಮತ್ತು ಶಾಂತಿ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ಕೂಡ ಸೇರಿದ್ದಾರೆ.

ಇದನ್ನೂ ಓದಿ: ‘ಬಿಜೆಪಿಯು ಟಿಎಂಸಿ ಮುಕ್ತ ಭಾರತಕ್ಕೆ ಕರೆ ನೀಡುವುದಿಲ್ಲ ಏಕೆ’: ರಾಹುಲ್ ಗಾಂಧಿ ಪ್ರಶ್ನೆ

“ಸುರಕ್ಷಿತ ಮತ್ತು ಪರಿಣಾಮಕಾರಿ ಲಸಿಕೆಗಳ ಅಭೂತಪೂರ್ವ ಬೆಳವಣಿಗೆಯನ್ನು ಜಗತ್ತು ಕಂಡಿತು. ಇದಕ್ಕೆ ಅಮೆರಿಕದ ಸಾರ್ವಜನಿಕ ಹೂಡಿಕೆಗಾಗಿ ಧನ್ಯವಾದಗಳು. ಅಮೆರಿಕ ಮತ್ತು ಅನೇಕ ಶ್ರೀಮಂತ ದೇಶಗಳಲ್ಲಿ ಲಸಿಕೆ ಹಂಚಿಕೆ ಮತ್ತು ಉತ್ಪಾದನೆ ತಮ್ಮ ನಾಗರಿಕರಿಗೆ ಭರವಸೆಯನ್ನು ನೀಡುತ್ತಿದೆ. ಆದರೆ ವಿಶ್ವದ ಬಹುಪಾಲು ಜನರಿಗೆ ಅದೇ ಭರವಸೆ ಇನ್ನೂ ಸಿಕ್ಕಿಲ್ಲ. ಈಗ ಪ್ರಪಂಚದಾದ್ಯಂತ ಹೊಸ ಕೊರೊನಾ ಅಲೆಗಳು ಹೆಚ್ಚಾಗುತ್ತಿವೆ. ನಮ್ಮ ಜಾಗತಿಕ ಆರ್ಥಿಕತೆಯು ಈ ವೈರಸ್‌ಗೆ ಗುರಿಯಾದರೆ ಅದನ್ನು ಮತ್ತೆ ಪುನರ್ನಿರ್ಮಿಸಲು ಸಾಧ್ಯವಿಲ್ಲ”ಎಂದು  ಪತ್ರದಲ್ಲಿ ಬರೆದಿದ್ದಾರೆ.

“ಡಬ್ಲ್ಯುಟಿಒ ಕೋವಿಡ್ -19 ಲಸಿಕೆ ಪೇಟೆಂಟ್‌ಗಳನ್ನು ತಾತ್ಕಾಲಿಕವಾಗಿ ಮನ್ನಾ ಮಾಡುವುದು, ಈ ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸಲು ಒಂದು ಪ್ರಮುಖ ಮತ್ತು ಅಗತ್ಯವಾದ ಹೆಜ್ಜೆಯಾಗಿದೆ. ಲಸಿಕೆ ಜ್ಞಾನ ಮತ್ತು ತಂತ್ರಜ್ಞಾನವನ್ನು ಬಹಿರಂಗವಾಗಿ ಹಂಚಿಕೊಳ್ಳುವುದನ್ನು ಖಾತ್ರಿಪಡಿಸಿಕೊಳ್ಳುವುದರೊಂದಿಗೆ ಇದನ್ನು ಸಂಯೋಜಿಸಬೇಕು. ಇದು ಮತ್ತಷ್ಟು ಜೀವಗಳನ್ನು ಉಳಿಸುತ್ತದೆ”ಎಂದು ಬರೆಯಲಾಗಿದೆ.

ಫೆಬ್ರವರಿಯಲ್ಲಿ, ಯುಎಸ್‌ನಲ್ಲಿ ನೂರಾರು ನಾಗರಿಕ ಸಮಾಜ ಗುಂಪುಗಳು, ಹಲವಾರು ಪ್ರಗತಿಪರ ಶಾಸಕರು, ಕೋವಿಡ್ -19 ಲಸಿಕೆಗಳ ಮೇಲಿನ ಪೇಟೆಂಟ್ ಮನ್ನಾವನ್ನು ಬೆಂಬಲಿಸುವಂತೆ ಜೋ ಬೈಡನ್ ಆಡಳಿತದ ಮೇಲೆ ಒತ್ತಡ ಹೇರಿದ್ದರು.

ಕೋವಿಡ್ -19 ಸಂಬಂಧಿತ ಬೌದ್ಧಿಕ ಆಸ್ತಿ ನಿಯಮಗಳ (intellectual property rules) ತುರ್ತು ಮನ್ನಾವನ್ನು ಬೆಂಬಲಿಸುವುದರಿಂದ ಜಗತ್ತಿನಾದ್ಯಂತದ ಜನರು ಈ ಸಾಂಕ್ರಾಮಿಕ ವೈರಸ್‌ನಿಂದ ಮುಕ್ತರಾಗುವ ಅವಕಾಶ ಸಿಗುತ್ತದೆ ಎಂದು ವಿಶ್ವ ನಾಯಕರು ಹೇಳಿದ್ದಾರೆ.

ಕೋವಿಡ್ -19 ಲಸಿಕೆ ಪೇಟೆಂಟ್‌ಗಳಿಗೆ ಬೌದ್ಧಿಕ ಆಸ್ತಿ ಹಕ್ಕುಗಳನ್ನು ಮನ್ನಾ ಮಾಡುವ ಭಾರತ ಮತ್ತು ದಕ್ಷಿಣ ಆಫ್ರಿಕಾದ ಜಂಟಿ ಪ್ರಸ್ತಾಪವನ್ನು ಯುರೋಪಿಯನ್ ಪಾರ್ಲಿಮೆಂಟ್ ಸದಸ್ಯರು ಬೆಂಬಲಿಸಿದ್ದಾರೆ. ಯುರೋಪಿಯನ್ ಪಾರ್ಲಿಮೆಂಟ್ (ಎಂಇಪಿ) ಯ 14 ಸದಸ್ಯರು ಕೋವಿಡ್ -19 ಲಸಿಕೆ ಪೇಟೆಂಟ್‌ಗಳನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮಸ್ಕಿಯಲ್ಲಿ ಮಟಮಟ ಮಧ್ಯಾಹ್ನವೇ ಕಾಂಚಾಣ ಝಣಝಣ: ಬಿಜೆಪಿ ಪರ ಪ್ರಚಾರಕ್ಕಿಳಿದ ಗಾಯಕಿ ಮಂಗ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...