Homeಅಂತರಾಷ್ಟ್ರೀಯಕೊರೊನಾ ಲಸಿಕೆ ಪೇಟೆಂಟ್‌ ಬಿಟ್ಟುಬಿಡಲು ನೊಬೆಲ್ ಪ್ರಶಸ್ತಿ ವಿಜೇತರು, ವಿಶ್ವದ ಮಾಜಿ ನಾಯಕರಿಂದ ಜೋ ಬೈಡನ್‌ಗೆ...

ಕೊರೊನಾ ಲಸಿಕೆ ಪೇಟೆಂಟ್‌ ಬಿಟ್ಟುಬಿಡಲು ನೊಬೆಲ್ ಪ್ರಶಸ್ತಿ ವಿಜೇತರು, ವಿಶ್ವದ ಮಾಜಿ ನಾಯಕರಿಂದ ಜೋ ಬೈಡನ್‌ಗೆ ಪತ್ರ

- Advertisement -
- Advertisement -

ಯುಎಸ್ ಇಂಟಲೆಕ್ಚುಯಲ್ ಪ್ರಾಪರ್ಟಿ ನಿಯಮಗಳನ್ನು ಬಿಡುವ ಮೂಲಕ ಕೊರೊನಾ ಲಸಿಕೆಗಳನ್ನು ಹೆಚ್ಚು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಕೋರಿ ಅಮೆರಿಕಾ ಅಧ್ಯಕ್ಷ ಜೋ ಬೈಡನ್‌ಗೆ 170 ಕ್ಕೂ ಹೆಚ್ಚು ಮಾಜಿ ವಿಶ್ವ ನಾಯಕರು ಮತ್ತು ನೊಬೆಲ್ ಪ್ರಶಸ್ತಿ ವಿಜೇತರು ಪತ್ರ ಬರೆದಿದ್ದಾರೆ.

ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿಒ) ಕೋವಿಡ್ -19 ಲಸಿಕೆ ಪೇಟೆಂಟ್‌ಗಳನ್ನು ತಾತ್ಕಾಲಿಕವಾಗಿ ಬಿಟ್ಟುಬಿಡುವಂತೆ ಮಾಡುವಂತೆ ಒತ್ತಾಯಿಸಿ ದಕ್ಷಿಣ ಆಫ್ರಿಕಾ ಮತ್ತು ಭಾರತ ಮುಂದಾಳತ್ವ ವಹಿಸಿರುವ ಪ್ರಸ್ತಾವನೆಗೆ 170 ಕ್ಕೂ ಪ್ರಸಿದ್ಧರು ಸಹಿ ಹಾಕಿದ್ದಾರೆ. ಈ ಬಹಿರಂಗ ಪತ್ರವನ್ನು ಬುಧವಾರ ಆಕ್ಸ್‌ಫ್ಯಾಮ್ ಹಂಚಿಕೊಂಡಿದೆ.

ಬಹಿರಂಗ ಪತ್ರಕ್ಕೆ ಸಹಿ ಮಾಡಿದವರಲ್ಲಿ ಬ್ರಿಟನ್ ಮಾಜಿ ಪ್ರಧಾನಿ ಗಾರ್ಡನ್ ಬ್ರೌನ್, ಮಾಜಿ ಫ್ರೆಂಚ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡ್ ಮತ್ತು ಶಾಂತಿ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ಕೂಡ ಸೇರಿದ್ದಾರೆ.

ಇದನ್ನೂ ಓದಿ: ‘ಬಿಜೆಪಿಯು ಟಿಎಂಸಿ ಮುಕ್ತ ಭಾರತಕ್ಕೆ ಕರೆ ನೀಡುವುದಿಲ್ಲ ಏಕೆ’: ರಾಹುಲ್ ಗಾಂಧಿ ಪ್ರಶ್ನೆ

“ಸುರಕ್ಷಿತ ಮತ್ತು ಪರಿಣಾಮಕಾರಿ ಲಸಿಕೆಗಳ ಅಭೂತಪೂರ್ವ ಬೆಳವಣಿಗೆಯನ್ನು ಜಗತ್ತು ಕಂಡಿತು. ಇದಕ್ಕೆ ಅಮೆರಿಕದ ಸಾರ್ವಜನಿಕ ಹೂಡಿಕೆಗಾಗಿ ಧನ್ಯವಾದಗಳು. ಅಮೆರಿಕ ಮತ್ತು ಅನೇಕ ಶ್ರೀಮಂತ ದೇಶಗಳಲ್ಲಿ ಲಸಿಕೆ ಹಂಚಿಕೆ ಮತ್ತು ಉತ್ಪಾದನೆ ತಮ್ಮ ನಾಗರಿಕರಿಗೆ ಭರವಸೆಯನ್ನು ನೀಡುತ್ತಿದೆ. ಆದರೆ ವಿಶ್ವದ ಬಹುಪಾಲು ಜನರಿಗೆ ಅದೇ ಭರವಸೆ ಇನ್ನೂ ಸಿಕ್ಕಿಲ್ಲ. ಈಗ ಪ್ರಪಂಚದಾದ್ಯಂತ ಹೊಸ ಕೊರೊನಾ ಅಲೆಗಳು ಹೆಚ್ಚಾಗುತ್ತಿವೆ. ನಮ್ಮ ಜಾಗತಿಕ ಆರ್ಥಿಕತೆಯು ಈ ವೈರಸ್‌ಗೆ ಗುರಿಯಾದರೆ ಅದನ್ನು ಮತ್ತೆ ಪುನರ್ನಿರ್ಮಿಸಲು ಸಾಧ್ಯವಿಲ್ಲ”ಎಂದು  ಪತ್ರದಲ್ಲಿ ಬರೆದಿದ್ದಾರೆ.

“ಡಬ್ಲ್ಯುಟಿಒ ಕೋವಿಡ್ -19 ಲಸಿಕೆ ಪೇಟೆಂಟ್‌ಗಳನ್ನು ತಾತ್ಕಾಲಿಕವಾಗಿ ಮನ್ನಾ ಮಾಡುವುದು, ಈ ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸಲು ಒಂದು ಪ್ರಮುಖ ಮತ್ತು ಅಗತ್ಯವಾದ ಹೆಜ್ಜೆಯಾಗಿದೆ. ಲಸಿಕೆ ಜ್ಞಾನ ಮತ್ತು ತಂತ್ರಜ್ಞಾನವನ್ನು ಬಹಿರಂಗವಾಗಿ ಹಂಚಿಕೊಳ್ಳುವುದನ್ನು ಖಾತ್ರಿಪಡಿಸಿಕೊಳ್ಳುವುದರೊಂದಿಗೆ ಇದನ್ನು ಸಂಯೋಜಿಸಬೇಕು. ಇದು ಮತ್ತಷ್ಟು ಜೀವಗಳನ್ನು ಉಳಿಸುತ್ತದೆ”ಎಂದು ಬರೆಯಲಾಗಿದೆ.

ಫೆಬ್ರವರಿಯಲ್ಲಿ, ಯುಎಸ್‌ನಲ್ಲಿ ನೂರಾರು ನಾಗರಿಕ ಸಮಾಜ ಗುಂಪುಗಳು, ಹಲವಾರು ಪ್ರಗತಿಪರ ಶಾಸಕರು, ಕೋವಿಡ್ -19 ಲಸಿಕೆಗಳ ಮೇಲಿನ ಪೇಟೆಂಟ್ ಮನ್ನಾವನ್ನು ಬೆಂಬಲಿಸುವಂತೆ ಜೋ ಬೈಡನ್ ಆಡಳಿತದ ಮೇಲೆ ಒತ್ತಡ ಹೇರಿದ್ದರು.

ಕೋವಿಡ್ -19 ಸಂಬಂಧಿತ ಬೌದ್ಧಿಕ ಆಸ್ತಿ ನಿಯಮಗಳ (intellectual property rules) ತುರ್ತು ಮನ್ನಾವನ್ನು ಬೆಂಬಲಿಸುವುದರಿಂದ ಜಗತ್ತಿನಾದ್ಯಂತದ ಜನರು ಈ ಸಾಂಕ್ರಾಮಿಕ ವೈರಸ್‌ನಿಂದ ಮುಕ್ತರಾಗುವ ಅವಕಾಶ ಸಿಗುತ್ತದೆ ಎಂದು ವಿಶ್ವ ನಾಯಕರು ಹೇಳಿದ್ದಾರೆ.

ಕೋವಿಡ್ -19 ಲಸಿಕೆ ಪೇಟೆಂಟ್‌ಗಳಿಗೆ ಬೌದ್ಧಿಕ ಆಸ್ತಿ ಹಕ್ಕುಗಳನ್ನು ಮನ್ನಾ ಮಾಡುವ ಭಾರತ ಮತ್ತು ದಕ್ಷಿಣ ಆಫ್ರಿಕಾದ ಜಂಟಿ ಪ್ರಸ್ತಾಪವನ್ನು ಯುರೋಪಿಯನ್ ಪಾರ್ಲಿಮೆಂಟ್ ಸದಸ್ಯರು ಬೆಂಬಲಿಸಿದ್ದಾರೆ. ಯುರೋಪಿಯನ್ ಪಾರ್ಲಿಮೆಂಟ್ (ಎಂಇಪಿ) ಯ 14 ಸದಸ್ಯರು ಕೋವಿಡ್ -19 ಲಸಿಕೆ ಪೇಟೆಂಟ್‌ಗಳನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮಸ್ಕಿಯಲ್ಲಿ ಮಟಮಟ ಮಧ್ಯಾಹ್ನವೇ ಕಾಂಚಾಣ ಝಣಝಣ: ಬಿಜೆಪಿ ಪರ ಪ್ರಚಾರಕ್ಕಿಳಿದ ಗಾಯಕಿ ಮಂಗ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...