Homeಕರ್ನಾಟಕಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

- Advertisement -
- Advertisement -

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.

ಈ ನಡುವೆ ಮತ್ತೊಬ್ಬರು 44 ವರ್ಷದ ಮಹಿಳೆ ಪ್ರಜ್ವಲ್ ಗನ್ ಪಾಯಿಂಟ್ ಇಟ್ಟು ಬೆದರಿಸಿ ಹಲವು ಬಾರಿ ತನ್ನ ಮೇಲೆ ಅತ್ಯಾಚಾರವೆಸಗಿರುವುದಾಗಿ ದೂರು ನೀಡಿದ್ದಾರೆ. ಮಹಿಳೆಯ ದೂರು ಆಧರಿಸಿ ಸಿಐಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ದೂರು ನೀಡಿದ ಮಹಿಳೆ ಹಾಸನ ಜಿಲ್ಲಾ ಪಂಚಾಯತ್‌ನ ಮಾಜಿ ಸದಸ್ಯೆ ಹಾಗೂ ಜೆಡಿಎಸ್ ನಾಯಕಿ ಎಂದು ಹೇಳಲಾಗ್ತಿದೆ. ಜನವರಿ 1, 2021ರಿಂದ 25 ಏಪ್ರಿಲ್ 2024ರ ನಡುವೆ ಪ್ರಜ್ವಲ್ ತನ್ನ ಮೇಲೆ ಅತ್ಯಾಚಾರವೆಸಗಿ, ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾಗಿ ತಿಳಿದು ಬಂದಿದೆ.

ಮಹಿಳೆಯ ದೂರಿನಲ್ಲಿ ಏನಿದೆ?

“ಜನ ಸೇವೆ ಮಾಡುವ ನಾನು ಆಗಾಗ ಶಾಸಕ, ಸಂಸದರನ್ನು ಭೇಟಿಯಾಗುತ್ತಿದ್ದೆ. ಒಂದು ಬಾರಿ ಸರ್ಕಾರಿ ಬಿಸಿಎಂ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರಿಗೆ ಸೀಟು ಕೊಡಿಸಲು ಸಂಸದ ಪ್ರಜ್ವಲ್ ರೇವಣ್ಣ ಅವರ ಕಚೇರಿ ಮತ್ತು ಕ್ವಾಟ್ರಸ್‌ಗೆ ಹೋಗಿದ್ದೆ. ಆಗ ಸಂಸದರು ಕೆಲಸದ ನಿಮಿತ್ತ ಸ್ಥಳದಿಂದ ಹೊರಟು ಹೋಗಿದ್ದರು. ಮರುದಿನ ಬರುವಂತೆ ಹೇಳಿದ್ದರು.”

“ಮರುದಿನ ಪುನಃ ನಾನು ಪ್ರಜ್ವಲ್ ರೇವಣ್ಣ ಅವರ ಕ್ವಾಟ್ರಸ್‌ಗೆ ಹೋಗಿದ್ದೆ. ಆಲ್ಲಿ ಪ್ರಜ್ವಲ್ ಕಡೆಯವರು ನನ್ನನ್ನು ಮೊದಲ ಮಹಡಿಗೆ ಕಳುಹಿಸಿದ್ದರು. ಅಲ್ಲಿಯೂ ಕೆಲ ಮಹಿಳೆಯರು ಇದ್ದರು. ಸ್ಥಳಕ್ಕೆ ಬಂದಿದ್ದ ಪ್ರಜ್ವಲ್ ಇತರ ಮಹಿಳೆಯರನ್ನು ಮಾತನಾಡಿಸಿ ವಾಪಸ್ ಕಳುಹಿಸಿದ್ದರು. ನಾನು ಒಬ್ಬಳೇ ಉಳಿದುಕೊಂಡಿದ್ದೆ. ಎಲ್ಲರೂ ಹೋದ ಬಳಿಕ ಪ್ರಜ್ವಲ್ ನನ್ನ ಕೈ ಹಿಡಿದು ಕೊಠಡಿಯೊಂದಕ್ಕೆ ಎಳೆದೊಯ್ದರು. ಕೊಠಡಿ ಬಾಗಿಲು ಹಾಕಿ ಒಳಗಿನಿಂದ ಲಾಕ್ ಮಾಡಿದ್ದರು. ನಾನು ಲಾಕ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಏನು ಆಗಲ್ಲ ಎಂದಿದ್ದರು.”

“ನನ್ನ ಪತಿ ಬಗ್ಗೆಯೂ ಮಾತನಾಡಿದ್ದ ಪ್ರಜ್ವಲ್ ಅವರಿಂದಾಗಿ ತನ್ನ ತಾಯಿಗೆ ಎಂಎಲ್‌ಎ ಟಿಕೆಟ್ ತಪ್ಪಿತೆಂದು ಹೇಳಿದ್ದರು. ನಂತರ ನನಗೆ ಬಟ್ಟೆ ಬಿಚ್ಚುವಂತೆ ಹಾಗೂ ಮಂಚದ ಮೇಲೆ ಮಲಗುವಂತೆ ಒತ್ತಾಯಪಡಿಸಿದ್ದರು. ನಾನು ಅದಕ್ಕೆ ಒಪ್ಪದಿದ್ದಾಗ ‘ನನ್ನ ಬಳಿ ಗನ್ ಇದೆ’, ನಾನು ಹೇಳಿದಂತೆ ಕೇಳದಿದ್ದರೆ ನಿನ್ನನ್ನು ಹಾಗೂ ನಿನ್ನ ಪತಿಯನ್ನು ಮುಗಿಸುತ್ತೇನೆ ಎಂದು ಬೆದರಿಸಿದ್ದರು. ನಾನು ಆತನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದೆ. ಆದರೆ, ಆತ ಕೈಗಳನ್ನು ಬಿಗಿಯಾಗಿ ಹಿಡಿದಿದ್ದರು. ನನ್ನ ಬಟ್ಟೆಗಳನ್ನು ಒತ್ತಾಯದಿಂದ ಬಿಚ್ಚಿಸಿದ್ದರು. ನಾನು ಕೂಗುತ್ತೇನೆ ಎಂದಾಗ ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಂಡು ನನಗೆ ತೋರಿಸಿದ್ದರು. ಹೇಳಿದಂತೆ ಕೇಳದಿದ್ದರೆ ವಿಡಿಯೋವನ್ನು ಎಲ್ಲರಿಗೂ ತೋರಿಸಿ ಮರ್ಯಾದೆ ಕಳೆಯುವುದಾಗಿ ಬ್ಲ್ಯಾಕ್ ಮೇಲ್ ಮಾಡಿದ್ದರು.”

“ಬಳಿಕ ತನ್ನ ಮೇಲೆ ಅತ್ಯಾಚಾರವೆಸಗಿ ಕಿರುಕುಳ ನೀಡಿದ್ದರು. ವಿಡಿಯೋ ಮುಂದಿಟ್ಟುಕೊಂಡು ಪ್ರಜ್ವಲ್ ಹಲವು ಬಾರಿ ನನ್ನನ್ನು ಒತ್ತಾಯದಿಂದ ತಮ್ಮ ಕ್ವಾಟ್ರಸ್‌ಗೆ ಕರೆಸಿ ಅತ್ಯಾಚಾರವೆಸಗಿದ್ದಾರೆ. ಆಗಾಗ ವಿಡಿಯೋ ಕಾಲ್ ಮಾಡಿ ಬಟ್ಟೆ ಬಿಚ್ಚುವಂತೆಯೂ ಪೀಡಿಸಿದ್ದಾರೆ. ಪತಿಯನ್ನು ಕೊಲ್ಲುವ ಬೆದರಿಗೆ ಹಾಕಿದ್ದಾರೆ” ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾಗಿ ವರದಿಗಳು ಹೇಳಿವೆ

ಇದುವರೆಗೆ ಭಯದಿಂದ ದೂರು ನೀಡಿಲ್ಲ. ಆದರೆ, ಈಗ ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪಗಳ ತನಿಖೆಗೆ ಎಸ್‌ಐಟಿ ರಚನೆಯಾಗಿರುವ ಕಾರಣ ದೂರು ನೀಡಲು ನಿರ್ಧರಿಸಿದೆ ಎಂದು ಮಹಿಳೆ ಹೇಳಿದ್ದಾರೆ ಎಂದು ವರದಿಗಳು ತಿಳಿಸಿವೆ.

ಹೆಚ್‌ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಇದು ಮೂರನೇ ಎಫ್‌ಐಆರ್‌ ಆಗಿದೆ ದಾಖಲಾಗಿರುವುದು. ಮೊದಲು ಹೊಳೆನರಸೀಪುರ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ನೀಡಿದ್ದರು. ಬಳಿಕ ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯಾಗಿರುವ ಮನೆ ಕೆಲಸದ ಮಹಿಳೆಯನ್ನು ಅಪಹರಿಸಿದ ಆರೋಪದ ಮೇಲೆ ಹೆಚ್‌ಡಿ ರೇವಣ್ಣ ವಿರುದ್ದ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ : ಮಹಿಳೆಯ ಅಪಹರಣ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಹೆಚ್‌.ಡಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...