Homeಕರ್ನಾಟಕಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

- Advertisement -
- Advertisement -

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.

ಈ ನಡುವೆ ಮತ್ತೊಬ್ಬರು 44 ವರ್ಷದ ಮಹಿಳೆ ಪ್ರಜ್ವಲ್ ಗನ್ ಪಾಯಿಂಟ್ ಇಟ್ಟು ಬೆದರಿಸಿ ಹಲವು ಬಾರಿ ತನ್ನ ಮೇಲೆ ಅತ್ಯಾಚಾರವೆಸಗಿರುವುದಾಗಿ ದೂರು ನೀಡಿದ್ದಾರೆ. ಮಹಿಳೆಯ ದೂರು ಆಧರಿಸಿ ಸಿಐಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ದೂರು ನೀಡಿದ ಮಹಿಳೆ ಹಾಸನ ಜಿಲ್ಲಾ ಪಂಚಾಯತ್‌ನ ಮಾಜಿ ಸದಸ್ಯೆ ಹಾಗೂ ಜೆಡಿಎಸ್ ನಾಯಕಿ ಎಂದು ಹೇಳಲಾಗ್ತಿದೆ. ಜನವರಿ 1, 2021ರಿಂದ 25 ಏಪ್ರಿಲ್ 2024ರ ನಡುವೆ ಪ್ರಜ್ವಲ್ ತನ್ನ ಮೇಲೆ ಅತ್ಯಾಚಾರವೆಸಗಿ, ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾಗಿ ತಿಳಿದು ಬಂದಿದೆ.

ಮಹಿಳೆಯ ದೂರಿನಲ್ಲಿ ಏನಿದೆ?

“ಜನ ಸೇವೆ ಮಾಡುವ ನಾನು ಆಗಾಗ ಶಾಸಕ, ಸಂಸದರನ್ನು ಭೇಟಿಯಾಗುತ್ತಿದ್ದೆ. ಒಂದು ಬಾರಿ ಸರ್ಕಾರಿ ಬಿಸಿಎಂ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರಿಗೆ ಸೀಟು ಕೊಡಿಸಲು ಸಂಸದ ಪ್ರಜ್ವಲ್ ರೇವಣ್ಣ ಅವರ ಕಚೇರಿ ಮತ್ತು ಕ್ವಾಟ್ರಸ್‌ಗೆ ಹೋಗಿದ್ದೆ. ಆಗ ಸಂಸದರು ಕೆಲಸದ ನಿಮಿತ್ತ ಸ್ಥಳದಿಂದ ಹೊರಟು ಹೋಗಿದ್ದರು. ಮರುದಿನ ಬರುವಂತೆ ಹೇಳಿದ್ದರು.”

“ಮರುದಿನ ಪುನಃ ನಾನು ಪ್ರಜ್ವಲ್ ರೇವಣ್ಣ ಅವರ ಕ್ವಾಟ್ರಸ್‌ಗೆ ಹೋಗಿದ್ದೆ. ಆಲ್ಲಿ ಪ್ರಜ್ವಲ್ ಕಡೆಯವರು ನನ್ನನ್ನು ಮೊದಲ ಮಹಡಿಗೆ ಕಳುಹಿಸಿದ್ದರು. ಅಲ್ಲಿಯೂ ಕೆಲ ಮಹಿಳೆಯರು ಇದ್ದರು. ಸ್ಥಳಕ್ಕೆ ಬಂದಿದ್ದ ಪ್ರಜ್ವಲ್ ಇತರ ಮಹಿಳೆಯರನ್ನು ಮಾತನಾಡಿಸಿ ವಾಪಸ್ ಕಳುಹಿಸಿದ್ದರು. ನಾನು ಒಬ್ಬಳೇ ಉಳಿದುಕೊಂಡಿದ್ದೆ. ಎಲ್ಲರೂ ಹೋದ ಬಳಿಕ ಪ್ರಜ್ವಲ್ ನನ್ನ ಕೈ ಹಿಡಿದು ಕೊಠಡಿಯೊಂದಕ್ಕೆ ಎಳೆದೊಯ್ದರು. ಕೊಠಡಿ ಬಾಗಿಲು ಹಾಕಿ ಒಳಗಿನಿಂದ ಲಾಕ್ ಮಾಡಿದ್ದರು. ನಾನು ಲಾಕ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಏನು ಆಗಲ್ಲ ಎಂದಿದ್ದರು.”

“ನನ್ನ ಪತಿ ಬಗ್ಗೆಯೂ ಮಾತನಾಡಿದ್ದ ಪ್ರಜ್ವಲ್ ಅವರಿಂದಾಗಿ ತನ್ನ ತಾಯಿಗೆ ಎಂಎಲ್‌ಎ ಟಿಕೆಟ್ ತಪ್ಪಿತೆಂದು ಹೇಳಿದ್ದರು. ನಂತರ ನನಗೆ ಬಟ್ಟೆ ಬಿಚ್ಚುವಂತೆ ಹಾಗೂ ಮಂಚದ ಮೇಲೆ ಮಲಗುವಂತೆ ಒತ್ತಾಯಪಡಿಸಿದ್ದರು. ನಾನು ಅದಕ್ಕೆ ಒಪ್ಪದಿದ್ದಾಗ ‘ನನ್ನ ಬಳಿ ಗನ್ ಇದೆ’, ನಾನು ಹೇಳಿದಂತೆ ಕೇಳದಿದ್ದರೆ ನಿನ್ನನ್ನು ಹಾಗೂ ನಿನ್ನ ಪತಿಯನ್ನು ಮುಗಿಸುತ್ತೇನೆ ಎಂದು ಬೆದರಿಸಿದ್ದರು. ನಾನು ಆತನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದೆ. ಆದರೆ, ಆತ ಕೈಗಳನ್ನು ಬಿಗಿಯಾಗಿ ಹಿಡಿದಿದ್ದರು. ನನ್ನ ಬಟ್ಟೆಗಳನ್ನು ಒತ್ತಾಯದಿಂದ ಬಿಚ್ಚಿಸಿದ್ದರು. ನಾನು ಕೂಗುತ್ತೇನೆ ಎಂದಾಗ ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಂಡು ನನಗೆ ತೋರಿಸಿದ್ದರು. ಹೇಳಿದಂತೆ ಕೇಳದಿದ್ದರೆ ವಿಡಿಯೋವನ್ನು ಎಲ್ಲರಿಗೂ ತೋರಿಸಿ ಮರ್ಯಾದೆ ಕಳೆಯುವುದಾಗಿ ಬ್ಲ್ಯಾಕ್ ಮೇಲ್ ಮಾಡಿದ್ದರು.”

“ಬಳಿಕ ತನ್ನ ಮೇಲೆ ಅತ್ಯಾಚಾರವೆಸಗಿ ಕಿರುಕುಳ ನೀಡಿದ್ದರು. ವಿಡಿಯೋ ಮುಂದಿಟ್ಟುಕೊಂಡು ಪ್ರಜ್ವಲ್ ಹಲವು ಬಾರಿ ನನ್ನನ್ನು ಒತ್ತಾಯದಿಂದ ತಮ್ಮ ಕ್ವಾಟ್ರಸ್‌ಗೆ ಕರೆಸಿ ಅತ್ಯಾಚಾರವೆಸಗಿದ್ದಾರೆ. ಆಗಾಗ ವಿಡಿಯೋ ಕಾಲ್ ಮಾಡಿ ಬಟ್ಟೆ ಬಿಚ್ಚುವಂತೆಯೂ ಪೀಡಿಸಿದ್ದಾರೆ. ಪತಿಯನ್ನು ಕೊಲ್ಲುವ ಬೆದರಿಗೆ ಹಾಕಿದ್ದಾರೆ” ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾಗಿ ವರದಿಗಳು ಹೇಳಿವೆ

ಇದುವರೆಗೆ ಭಯದಿಂದ ದೂರು ನೀಡಿಲ್ಲ. ಆದರೆ, ಈಗ ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪಗಳ ತನಿಖೆಗೆ ಎಸ್‌ಐಟಿ ರಚನೆಯಾಗಿರುವ ಕಾರಣ ದೂರು ನೀಡಲು ನಿರ್ಧರಿಸಿದೆ ಎಂದು ಮಹಿಳೆ ಹೇಳಿದ್ದಾರೆ ಎಂದು ವರದಿಗಳು ತಿಳಿಸಿವೆ.

ಹೆಚ್‌ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಇದು ಮೂರನೇ ಎಫ್‌ಐಆರ್‌ ಆಗಿದೆ ದಾಖಲಾಗಿರುವುದು. ಮೊದಲು ಹೊಳೆನರಸೀಪುರ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ನೀಡಿದ್ದರು. ಬಳಿಕ ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯಾಗಿರುವ ಮನೆ ಕೆಲಸದ ಮಹಿಳೆಯನ್ನು ಅಪಹರಿಸಿದ ಆರೋಪದ ಮೇಲೆ ಹೆಚ್‌ಡಿ ರೇವಣ್ಣ ವಿರುದ್ದ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ : ಮಹಿಳೆಯ ಅಪಹರಣ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಹೆಚ್‌.ಡಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...