Homeಮುಖಪುಟಪ್ರಧಾನ ಮಂತ್ರಿ ನಿಖರವಾಗಿ ಯಾವುದರ ಜೊತೆ ನಿಲ್ಲುತ್ತಾರೆ: ರಾಹುಲ್ ಗಾಂಧಿ ಪ್ರಶ್ನೆ

ಪ್ರಧಾನ ಮಂತ್ರಿ ನಿಖರವಾಗಿ ಯಾವುದರ ಜೊತೆ ನಿಲ್ಲುತ್ತಾರೆ: ರಾಹುಲ್ ಗಾಂಧಿ ಪ್ರಶ್ನೆ

- Advertisement -
- Advertisement -

ಇಡೀ ದೇಶದ ಜನರಿಗೆ ಕೊರೊನಾ ಲಸಿಕೆ ಹಾಕುವ ಬಗ್ಗೆ ಸರ್ಕಾರ ಎಂದಿಗೂ ಹೇಳಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಂಗಳವಾರ ಸ್ಪಷ್ಟನೆ ನೀಡಿದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನ ಮಂತ್ರಿ ನಿಖರವಾಗಿ ಯಾವುದರ ಜೊತೆ ನಿಲ್ಲುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, “ಇಡೀ ದೇಶಕ್ಕೆ ಲಸಿಕೆ ಹಾಕುವ ಬಗ್ಗೆ ಸರ್ಕಾರ ಎಂದಿಗೂ ಮಾತನಾಡಲಿಲ್ಲ ಎಂಬುದನ್ನು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಅಂತಹ ವೈಜ್ಞಾನಿಕ ವಿಚಾರಗಳನ್ನು ವಾಸ್ತವ ಮಾಹಿತಿಗಳನ್ನಾಧರಿಸಿ ಚರ್ಚಿಸಬೇಕು, ಒಟ್ಟಾರೆ ಮಾತನಾಡಬಾರದು” ಎಂದು ಹೇಳಿದ್ದರು.

ಇದನ್ನೂ ಓದಿ: ಕೊರೊನಾ ಲಸಿಕೆಯ ಬಳಕೆಗೆ ಅನುಮತಿ ನೀಡಿದ ಬ್ರಿಟನ್!

ಈ ಹಿನ್ನಲೆಯಲ್ಲಿ ಇಂದು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಪ್ರಧಾನ ಮಂತ್ರಿ ಎಲ್ಲರಿಗೂ ಲಸಿಕೆ ಸಿಗುತ್ತದೆ ಎಂದಿದ್ದರು. ಬಿಹಾರ ಚುನಾವಣೆಯಲ್ಲಿ ಬಿಜೆಪಿ ಎಲ್ಲರಿಗೂ ಉಚಿತ ಲಸಿಕೆ ನೀಡುವುದಾಗಿ ಹೇಳಿತ್ತು. ಇದೀಗ ಭಾರತ ಸರ್ಕಾರ ನಾವು ಎಲ್ಲರಿಗೂ ಲಸಿಕೆ ನೀಡುವುದಾಗಿ ಹೇಳಿಯೇ ಇಲ್ಲ ಎನ್ನುತ್ತಿದೆ. ನಿಜಕ್ಕೂ ಪ್ರಧಾನಿ ಯಾವುದರ ಜೊತೆ ನಿಲ್ಲುತ್ತಾರೆ” ಎಂದು ಪ್ರಶ್ನಿಸಿದ್ದಾರೆ.

ನವೆಂಬರ್ 24 ರಂದು ರಾಜ್ಯಗಳನ್ನುದ್ದೇಶಿಸಿ ಮಾತನಾಡಿದ ದೇಶದ ಪ್ರಧಾನಿ, ದೇಶದ ಪ್ರತಿಯೊಬ್ಬ ಪ್ರಜೆಗೆ ವ್ಯಾಕ್ಸೀನ್ ತಲುಪಲಿದೆ. ಅದಕ್ಕಾಗಿ ಎಲ್ಲಾ ವ್ಯವಸ್ಥೆ ನಡೆದಿದೆ ಎಂದು ಭರವಸೆ ನೀಡಿದ್ದರು. ಸ್ವತಃ ಪ್ರಧಾನಮಂತ್ರಿಗಳ ಕಚೇರಿಯಿಂದ ಬಂದ ಸರ್ಕಾರಿ PIB ಪತ್ರಿಕಾ ಪ್ರಕಟಣೆ ಇದನ್ನು ಹೇಳಿತ್ತು. ಅಷ್ಟೇ ಅಲ್ಲದೆ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ರಾಜ್ಯದ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡುವ ಭರವಸೆ ನೀಡಿತ್ತು.

ಇದನ್ನೂ ಓದಿ: ಇಡೀ ದೇಶದ ಜನರಿಗೆ ಲಸಿಕೆ ಹಾಕುವುದಾಗಿ ಸರ್ಕಾರ ಎಂದೂ ಹೇಳಿಲ್ಲ: ಉಲ್ಟಾ ಹೊಡೆದ ಆರೋಗ್ಯ ಸಚಿವಾಲಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...