Homeಮುಖಪುಟಗಡ್ಡಧಾರಿ ಮುಸ್ಲಿಂ ವಿದ್ಯಾರ್ಥಿಗೆ ನರ್ಸಿಂಗ್ ಪರೀಕ್ಷೆ ನಿಷೇಧಿಸಿದ ಪರೀಕ್ಷಕಿ

ಗಡ್ಡಧಾರಿ ಮುಸ್ಲಿಂ ವಿದ್ಯಾರ್ಥಿಗೆ ನರ್ಸಿಂಗ್ ಪರೀಕ್ಷೆ ನಿಷೇಧಿಸಿದ ಪರೀಕ್ಷಕಿ

- Advertisement -
- Advertisement -

ಅಹಮದಾಬಾದ್: ಇಲ್ಲಿನ ಎಲ್‌ಜಿ ಆಸ್ಪತ್ರೆಯಲ್ಲಿ ಗಡ್ಡಧಾರಿ ಮುಸ್ಲಿಂ ವಿದ್ಯಾರ್ಥಿಗೆ ಗುಜರಾತ್ ನರ್ಸಿಂಗ್ ಕೌನ್ಸಿಲ್ (ಜಿಎನ್‌ಸಿ) ಪರೀಕ್ಷೆ ಬರೆಯುವುದನ್ನು ನಿಷೇಧಿಸಲಾಗಿರುವ ಘಟನೆ ವರದಿಯಾಗಿದೆ.

ಪರೀಕ್ಷಕಿ ಸರಯು ರಾಜ್ ಪುರೋಹಿತ್ ಅವರು ಪರೀಕ್ಷಾರ್ಥಿ ಹಫೀಜ್ ಅಬು ಬಕರ್ ಅವರಿಗೆ ಗಡ್ಡದ ಕಾರಣ ಪರೀಕ್ಷೆಯನ್ನು ತೆಗೆದುಕೊಳ್ಳಲು ಅನುಮತಿಸದಿರುವ ವೀಡಿಯೊವೊಂದು ಎಲ್ಲೆಡೆ ವೈರಲ್ ಆಗಿದೆ. ಪರೀಕ್ಷೆಗೆ ಹಾಜರಾಗುವ ಮೊದಲು ಗಡ್ಡವನ್ನು ಬೋಳಿಸಲು ಪರೀಕ್ಷಕರು ಅಬು ಬಕರ್ ಅವರಿಗೆ ಸೂಚಿಸುತ್ತಿರುವುದು ಈ ವೀಡಿಯೊ ತೋರಿಸುತ್ತದೆ.

ಪರೀಕ್ಷೆಗೆ ಹಾಜರಾಗುವ ಮೊದಲು ಗಡ್ಡವನ್ನು ಕ್ಷೌರ ಮಾಡುವಂತೆ ಹೇಳಿ  ತನ್ನನ್ನು ಪರೀಕ್ಷಾ ಹಾಲ್‌ನ ಹೊರಗೆ ನಿಲ್ಲಿಸಲಾಯಿತು ಎಂದು ಅಬು ಬಕರ್ ಹೇಳಿದ್ದಾರೆ.

ತರಗತಿಯಲ್ಲಿ ಗಡ್ಡವನ್ನು ಬೋಳಿಸಲು ಯಾರನ್ನಾದರೂ ಕೇಳಲು ಯಾವುದೇ ನಿಯಮಗಳಿಲ್ಲ. ನೀವು ಉದ್ಯೋಗವನ್ನು ಪಡೆಯುವ ಸ್ಥಿತಿಯಲ್ಲಿ ಅಥವಾ ಉದ್ಯೋಗ ಸಂದರ್ಶನದಲ್ಲಿ ಮಾತ್ರ ಇದನ್ನು ಕೇಳಲು ಅನುಮತಿ ಇದೆ ಎಂದು ಹೇಳುವುತ್ತಿರುವುದನ್ನು ವೀಡಿಯೊದಲ್ಲಿ ಚಿತ್ರೀಕರಿಸಲಾಗಿದೆ.

ನೀವು ಹಜ್ ಯಾತ್ರೆಯನ್ನು ಪೂರ್ಣಗೊಳಿಸಿದ್ದೀರಾ ಎಂದು ಪರೀಕ್ಷಕಿಯು ಕೇಳಿದಾಗ, ಮಾರ್ಚ್‌ನಲ್ಲಿ ಉಮ್ರಾ (ಸಣ್ಣ ಯಾತ್ರೆ) ಮಾಡಿದ್ದೇನೆ ಎಂದು ಪ್ರತಿಕ್ರಿಯಿಸಿದೆ ಎಂದು ಅಬು ಬಕರ್ ಹೇಳಿದ್ದಾರೆ.

ನಾನು ಸುಳ್ಳು ಹೇಳುತ್ತಿದ್ದೇನೆ ಎಂದು ಪರೀಕ್ಷಕಿಯು ಭಾವಿಸಿದರು. ಆದ್ದರಿಂದ ಅವರು ನನ್ನನ್ನು ಸಂಪೂರ್ಣ ವೃತ್ತಿಪರನಾಗಿ ಕಾಣಿಸಿಕೊಳ್ಳಲು ನನ್ನ ಗಡ್ಡವನ್ನು ಶೂನ್ಯಕ್ಕೆ ಟ್ರಿಮ್ ಮಾಡಲು ಅಥವಾ ಅದನ್ನು ಸಂಪೂರ್ಣವಾಗಿ ಕ್ಷೌರ ಮಾಡುವುದು ಉತ್ತಮ ಎಂದು ಅವರು ಹೇಳಿದರೆಂದು ಬಕರ್ ಆರೋಪಿಸಿದ್ದಾರೆ.

ಈ ವಿಷಯದಲ್ಲಿ ಧರ್ಮದ ಆಧಾರದ ಮೇಲೆ ಯಾವುದೇ ತಾರತಮ್ಯವಿಲ್ಲ ಎಂದು ಪರೀಕ್ಷಕಿಯು ತನ್ನ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ.

ನಾನು ಘಟನೆಯ ಬಗ್ಗೆ ಮಾಧ್ಯಮಗಳಿಂದ ತಿಳಿದುಕೊಂಡೆ. ಗಡ್ಡ ಬಿಟ್ಟಿದ್ದರಿಂದ ಮುಸ್ಲಿಂ ವಿದ್ಯಾರ್ಥಿಗೆ ಪರೀಕ್ಷೆಯನ್ನು ನಿರಾಕರಿಸಲಾಗಿತ್ತು. ಈ ರಾಷ್ಟ್ರದಲ್ಲಿ ಮತಾಂಧತೆಯು ಉನ್ನತ ಮಟ್ಟವನ್ನು ತಲುಪಿದೆ. ವಿದ್ಯಾರ್ಥಿಗಳು ಅದನ್ನು ಎದುರಿಸಬೇಕಾಗಿದೆ. ಇದು ಸಾಕಷ್ಟು ಮುಜುಗರದ ಪರಿಸ್ಥಿತಿ ಎಂದು ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಪ್ರತಿಪಕ್ಷದ ನಾಯಕ ಶಾಜಾದ್ ಖಾನ್ ಪಟಾನ್ ಹೇಳಿದ್ದಾರೆ.

ಗುಜರಾತ್ ಭಾರತದಲ್ಲಿ ಮತಾಂಧತೆಯ ಪ್ರಮುಖ ಕೇಂದ್ರವಾಗಿದೆ ಎಂದು ನಾನು ಭಾವಿಸುತ್ತೇನೆ. ಧಾರ್ಮಿಕ ಮತ್ತು ಆರೆಸ್ಸೆಸ್ ಮನಸ್ಥಿತಿಗಳು ಕಾಲೇಜು ಶಿಕ್ಷಣವನ್ನು ವ್ಯಾಪಿಸಿವೆ. ಯಾರಾದರೂ ತಿಲಕ, ಹಿಜಾಬ್ ಮತ್ತು ಗಡ್ಡವನ್ನು ಧರಿಸಿ ತರಗತಿಗೆ ಬಂದರೆ ಯಾವುದೇ ಸಮಸ್ಯೆ ಇಲ್ಲ. ನಮ್ಮ ದೇಶದ ಸಂವಿಧಾನವು ಇದನ್ನು ಅನುಮತಿಸುತ್ತದೆ.  ಹಲವಾರು ಹುಡುಗಿಯರು ಈ ಪರೀಕ್ಷೆಯನ್ನು ತೆಗೆದುಕೊಳ್ಳುವ ಮೊದಲು ತಮ್ಮ ತಲೆಯ ಸ್ಕಾರ್ಫ್ ಅನ್ನು ತೆಗೆಯುವಂತೆ ಒತ್ತಾಯಿಸಲಾಯಿತೆಂದು ನಾನು ಕೇಳಲ್ಪಟ್ಟೆ ಎಂದು ಪಟಾನ್ ತಿಳಿಸಿದ್ದಾರೆ.

ಯಾರಾದರೂ ತಮ್ಮ ಧರ್ಮ ಅಥವಾ ಸಂಸ್ಕೃತಿಯನ್ನು ಅನುಸರಿಸುವುದು ಸರಿ ಎಂದು ನಾನು ಭಾವಿಸುತ್ತೇನೆ. ಸಂವಿಧಾನವು ಆ ಹಕ್ಕನ್ನು ನೀಡುತ್ತದೆ ಮತ್ತು ನಮ್ಮ ರಾಷ್ಟ್ರವು ಜಾತ್ಯತೀತವಾಗಿದೆ. ಆದ್ದರಿಂದ ಇದು ಸ್ವೀಕಾರಾರ್ಹವಾಗಿದೆ ಮತ್ತು ನಿರ್ದಿಷ್ಟ ಸಮುದಾಯಗಳ ಮೇಲೆ ಆಕ್ರಮಣ ಮಾಡುವುದು ಅವಮಾನಕರವಾಗಿದೆ ಎಂದು ಪಟಾನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...